ಆರೋಗ್ಯ ಸಚಿವರ ಕ್ಷೇತ್ರದಲ್ಲೇ ವೈದ್ಯರ ಕೊರತೆ – ಅನಸ್ತೇಶಿಯಾ ವೈದ್ಯರಿಲ್ಲದೇ ಗರ್ಭಿಣಿ ಸಾವು

ಚಿತ್ರದುರ್ಗ: ಆರೋಗ್ಯ ಸಚಿವ ಶ್ರೀರಾಮುಲು ಅವರ ಸ್ವಕ್ಷೇತ್ರದಲ್ಲೇ ವೈದ್ಯರ ಕೊರತೆಯಿಂದ ಆಸ್ಪತ್ರೆಗಳು ನರಳುತ್ತಿದ್ದು, ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಅನಸ್ತೇಶಿಯಾ ವೈದ್ಯರಿಲ್ಲದೇ ಗರ್ಭಿಣಿ ಸಾವನ್ನಪ್ಪಿ ಸಾವನ್ನಪ್ಪಿದ್ದಾರೆ.

ಮೊಳಕಾಲ್ಮೂರು ತಾಲೂಕಿನ ಮುಸ್ಟಲದುಮ್ಮಿ ಗ್ರಾಮದ ಕವಿತಾ(30) ಮೃತಪಟ್ಟ ಗರ್ಭಿಣಿ. ಹೆರಿಗಾಗಿ ನಿನ್ನೆ ಸಂಜೆ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ನಿರ್ಲಕ್ಷ್ಯ ವಹಿಸಿದ್ದು, ಇಂದು ಬೆಳಗ್ಗೆ ಕೊನೆ ಗಳಿಗೆಯಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಹೀಗಾಗಿ ಮೊಳಕಾಲ್ಮೂರು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ವಿರುದ್ಧ ನಿರ್ಲಕ್ಷ ಆರೋಪ ಕೇಳಿ ಬಂದಿದೆ.

ಇಂದು ಶ್ರೀರಾಮಲು ಕೆಲಸ ಸಂಬಂಧ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು ಜನರು ಈ ಗರ್ಭಿಣಿ ಸಾವನ್ನಪ್ಪಿದ ವಿಚಾರವನ್ನು ಪ್ರಸ್ತಾಪ ಮಾಡಿ ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಲಿದ್ದಾರೆ.

Comments

Leave a Reply

Your email address will not be published. Required fields are marked *