ಇಂದು ಸಿದ್ದಗಂಗಾ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್- ನಡೆದಾಡೋ ದೇವರ ದರ್ಶನಕ್ಕೆ ಕಾದು ಕುಳಿತ ಭಕ್ತರು

ಬೆಂಗಳೂರು/ತುಮಕೂರು: ಸಿದ್ದಗಂಗಾ ಶ್ರೀಗಳು ಬಿಜಿಎಸ್ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದು ಇಂದು ಡಿಸ್ಚಾರ್ಜ್ ಆಗಲಿದ್ದಾರೆ.

ಇತ್ತ ಸಿದ್ದಗಂಗಾ ಮಠದಲ್ಲಿ ಭಕ್ತ ಸಮೂಹ ಶ್ರೀಗಳ ದರ್ಶನಕ್ಕಾಗಿ ಕಾದು ಕುಳಿತಿದೆ. ಬೇರೆ ಬೇರೆ ಜಿಲ್ಲೆಗಳಿಂದ ಗುರುವಾರ ರಾತ್ರಿಯೇ ಬಂದು ತಂಗಿದ ಭಕ್ತರು ನಡೆದಾಡುವ ದೇವರ ಬರುವಿಕೆಗಾಗಿ ಕಾದು ಕುಳಿತಿದ್ದಾರೆ. ಅಲ್ಲದೆ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಆಗಲಿ ಎಂದು ಹೇಳಿ ಗದ್ದುಗೆಗೆ ನಮಸ್ಕರಿಸಿ ಬೇಡಿಕೊಳ್ಳುತ್ತಿದ್ದಾರೆ.

ಶ್ರೀಗಳ ಆರೋಗ್ಯದಲ್ಲಿ ಕೊಂಚ ಏರುಪೇರಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಬುಧವಾರ ಸಂಜೆ ವೇಳೆಗೆ ಶ್ರೀಗಳಿಗೆ ಜ್ವರ ಹಾಗೂ ಕಫ ಕಾಣಿಸಿಕೊಂಡಿತ್ತು. ತಕ್ಷಣ ಸಿದ್ದಗಂಗಾ ಡಯಾಗ್ನಾಸ್ಟಿಕ್‍ನಲ್ಲಿ ಶ್ರೀಗಳಿಗೆ ರಕ್ತ ಪರೀಕ್ಷೆ ನಡೆಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಇದೀಗ ಶ್ರೀಗಳು ಚೇತರಿಸಿಕೊಂಡಿದ್ದು, ಇಂದು ಡಿಸ್ಚಾರ್ಜ್ ಆಗಿ ಮಠಕ್ಕೆ ಹಿಂದಿರುಗಲಿದ್ದಾರೆ.

Comments

Leave a Reply

Your email address will not be published. Required fields are marked *