ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದ ಫ್ಲೆಕ್ಸ್ ತೆರವು

ತುಮಕೂರು: ಚುನಾವಣಾ ನೀತಿ ಸಂಹಿತೆ ಜಾರಿ ಆದ ಹಿನ್ನೆಲೆಯಲ್ಲಿ ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ರಾಜಕೀಯ ನಾಯಕರು ಶುಭಾಶಯ ಕೋರಿದ್ದ ಫ್ಲೆಕ್ಸ್‍ಗಳನ್ನು ತೆರವುಗೊಳಿಸಲಾಗುತ್ತಿದೆ.

ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ರಾಜಕೀಯ ಮುಖಂಡರು ಶುಭಾಶಯ ಕೋರಿ ಫ್ಲೆಕ್ಸ್ ಹಾಕಿದ್ದರು. ಆದರೆ ಈಗ ತುಮಕೂರು ಪಾಲಿಕೆಯಿಂದ ಫ್ಲೆಕ್ಸ್ ಗಳನ್ನು ತೆರವು ಮಾಡಿಸಲಾಗಿದೆ. ಏಪ್ರಿಲ್ 1 ರಂದು ಸಿದ್ದಗಂಗಾ ಶ್ರೀಗಳ 111ನೇ ಜನ್ಮದಿನೋತ್ಸವ ಆಚರಿಸಲಾಗುತ್ತಿದೆ.

ಮೂರು ಪಕ್ಷದ ರಾಜಕೀಯ ಮುಖಂಡರು ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಫ್ಲೆಕ್ಸ್ ಗಳನ್ನು ಹಾಕಿಸಿದ್ದು, ನಗರದ ಬಿ.ಎಚ್. ರಸ್ತೆ ಸೇರಿದಂತೆ ನಗರದ ಹಲವೆಡೆ ಫ್ಲೆಕ್ಸ್ ಹಾಕಲಾಗಿತ್ತು. ಆದರೆ ಈಗ ಚುನಾವಣಾ ನೀತಿ ಸಂಹಿತೆ ಜಾರಿ ಆದ ಹಿನ್ನೆಲೆಯಲ್ಲಿ ತೆರವುಗೊಳಿಸಲಾಗುತ್ತಿದೆ.

Comments

Leave a Reply

Your email address will not be published. Required fields are marked *