ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಾ. ಪರಮೇಶ್ ನೇತೃತ್ವದಲ್ಲಿ ಸಿದ್ದಗಂಗಾ ಮಠದಲ್ಲಿಯೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
ಡಾ. ಪರಮೇಶ್ ನೇತೃತ್ವದಲ್ಲಿ ಸಿದ್ದಗಂಗಾ ಹಳೇ ಮಠದ ಶ್ರೀಗಳ ಕೊಠಡಿಯಲ್ಲಿಯೇ ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯ ಸಿದ್ದಗಂಗಾ ಮಠಕ್ಕೆ ಬಿಜಿಎಸ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ಅವರು ಆಗಮಿಸುವ ಸಾಧ್ಯತೆ ಇದೆ. ಶ್ರೀಗಳ ಆರೋಗ್ಯ ವಿಚಾರಿಸಲು ಮಧ್ಯಾಹ್ನದ ವೇಳೆ ಡಾ. ರವೀಂದ್ರ ಮಠಕ್ಕೆ ಬರಲಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

ಮಂಗಳವಾರದಂದು ಶ್ರೀಗಳ ರಕ್ತ ಪರೀಕ್ಷೆಗಾಗಿ ರಕ್ತ ಮಾದರಿಯನ್ನು ವೈದ್ಯರು ಪಡೆದುಕೊಂಡು ಹೋಗಿದ್ದರು. ಇಂದು ಮಧ್ಯಾಹ್ನದ ಬಳಿಕ ಶ್ರೀಗಳ ಆರೋಗ್ಯ ಸಂಬಂಧ ಸಂಪೂರ್ಣ ಮಾಹಿತಿ ಸಿಗಲಿದೆ. ಸದ್ಯ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಇನ್ನಷ್ಟು ಚೇತರಿಕೆ ಕಂಡುಬರುತ್ತಿದೆ. ಭಕ್ತರು ಚಿಂತಿಸುವ ಅಗತ್ಯವಿಲ್ಲ ಎಂದು ಮಠದ ಸದಸ್ಯರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply