ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ವಿಐಪಿಗಳ ಭೇಟಿ ನಿಲ್ಲಿಸಬೇಕು: ವೈದ್ಯರ ಮನವಿ

ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಆಗುತ್ತಿದ್ದು, ಆದರೆ ಪದೇ ಪದೇ ವಿಐಪಿಗಳು ಭೇಟಿ ನೀಡುವುದನ್ನು ನಿಲ್ಲಿಸಬೇಕು ಎಂದು ಬಿಜಿಎಸ್ ಆಸ್ಪತ್ರೆಯ ಡಾ.ರವೀಂದ್ರ ಮನವಿ ಮಾಡಿಕೊಂಡಿದ್ದಾರೆ.

ಮಾಧ್ಯಮಗಳಿಗೆ ಶ್ರೀ ಗಳ ಆರೊಗ್ಯದ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಅವರು, ಶ್ರೀಗಳ ಆರೋಗ್ಯ ದಿನದಿಂದ ದಿನಕ್ಕೆ ಹೆಚ್ಚು ಉತ್ತಮವಾಗುತ್ತಿದ್ದು, ನಿನ್ನೆಗಿಂತ ಇಂದು ಸುಧಾರಣೆ ಆಗಿದೆ. ಆದರೆ ಶ್ರೀಗಳ ದರ್ಶನ ಪಡೆಯಲು ವಿಐಪಿಗಳು ಪದೇ ಪದೇ ಮಠಕ್ಕೆ ಭೇಟಿ ನೀಡುವುದನ್ನು ನಿಲ್ಲಿಸಬೇಕು. ಆ ಮೂಲಕ ಶ್ರೀಗಳ ಚಿಕಿತ್ಸೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಚೆನ್ನೈ ಮೂಲದ ಸೋಂಕು ತಜ್ಞ ಡಾ.ಸುಬ್ರಾ ಅವರು ಮಾತನಾಡಿ, ಶ್ರೀಗಳು ನಿಧಾನವಾಗಿ ಚೇತರಿಸಿಕೊಳ್ಳುತ್ತಿದು, ಅವರಿಗೆ ವಯಸ್ಸಾಗಿರುವುದರಿಂದ ಚೇತರಿಕೆ ನಿಧಾನವಾಗುತ್ತಿದೆ. ಶ್ವಾಸಕೋಶ ಸೋಂಕು ಕೂಡ ಕಡಿಮೆಯಾಗುತ್ತಿದ್ದು, ಆಹಾರ ಸ್ವೀಕರಿಸಿಸುವುದು ನಿಧಾನವಾಗಿ ಹೆಚ್ಚುತ್ತಿದೆ. ಮಠದಲ್ಲೇ ಚಿಕಿತ್ಸೆಗೆ ಬೇಕಾದ ಎಲ್ಲಾ ಸೌಲಭ್ಯ ಇರುವುದರಿಂದ ಅತ್ಯಂತ ಕಾಳಜಿಯಿಂದ ನೋಡಿಕೊಳ್ಳಲಾಗುತ್ತಿದೆ. ಜನರ ಪ್ರಾರ್ಥನೆ ಹಾಗೂ ಶ್ರೀಗಳ ವಿಲ್ ಪವರ್ ನಿಂದ ಬಹುಬೇಗ ಚೇತರಿಸಿಕೊಳ್ಳಲಿದ್ದಾರೆ. ಮಠದಲ್ಲೇ ಎಲ್ಲಾ ವೈದ್ಯಕೀಯ ವ್ಯವಸ್ಥೆ ಇರುವುದರಿಂದ, ಅವರನ್ನು ಬೇರೆ ಎಲ್ಲೂ ಶಿಫ್ಟ್ ಮಾಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟ ಪಡಿಸಿದರು.

ಶ್ರೀಗಳನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ನೀಡುತ್ತಿಲ್ಲ, ಇದರಲ್ಲೇ ಅವರ ಆರೋಗ್ಯ ಪ್ರಗತಿಯ ಬಗ್ಗೆ ತಿಳಿಯುತ್ತದೆ. ಜನರ ಪ್ರಾರ್ಥನೆಯೇ ಅವರ ಚೇತರಿಕೆ ಪ್ರಮುಖ ಕಾರಣವೂ ಆಗಲಿದೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *