ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿಲ್ಲ, ಕಮಿಷನ್ ಏಜೆಂಟ್ ಆಗಿದ್ದಾರೆ: ಬಿಎಸ್‍ವೈ

ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಕೆಲಸ ಮಾಡದೆ ಪ್ರತಿ ಕಾಮಗಾರಿಯಲ್ಲೂ ಕಮಿಷನ್ ಪಡೆದು ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆರೋಪಿಸಿದರು.

ಮೈಸೂರಿನಲ್ಲಿಂದು ನಡೆದ ಬಿಜೆಪಿ ಬೃಹತ್ ರೈತ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು ದೇವರು ಕ್ಷಮಿಸಿದರೂ ಜನತೆ ಪಾಠ ಕಲಿಸುವುದನ್ನು ಮರೆಯಬಾರದು. ಸಿಎಂ ರಾಜ್ಯವನ್ನು ಹಗಲು ದರೋಡೆ ಮಾಡ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಕೆಲಸ ಮಾಡದೆ ಪ್ರತಿ ಕಾಮಗಾರಿಯಲ್ಲೂ ಶೇಕಡಾ 20 ರಷ್ಟು ಕಮಿಷನ್ ಪಡೆದು ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಯಡಿಯೂರಪ್ಪ ಅಂದ ತಕ್ಷಣ ಅಭಿವೃದ್ಧಿ ಕಾರ್ಯ ನೆನಪಾಗುತ್ತೆ. ಆದರೆ ಸಿದ್ದರಾಮಯ್ಯ ಅಂದ ಕೂಡಲೇ ನಿದ್ದೆ ನೆನಪಾಗುತ್ತದೆ. ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಅನ್ನೋ ಹಾಗೇ, ಕೇಂದ್ರದ ಹಣ ಸಿದ್ದರಾಮಯ್ಯನ ಜಾತ್ರೆ ಅನ್ನೋ ರೀತಿ ಆಡಳಿತ ನಡೆಯುತ್ತಿದೆ ಎಂದು ಸಿಎಂ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ನಾನೇ ದಸರಾ ಉದ್ಘಾಟಿಸುತ್ತೇನೆ, ನಾನೇ ಎಲ್ಲಾ ಶಂಕುಸ್ಥಾಪನೆ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ. ಆದರೆ ಜನ ಅವರಿಗೆ ಈ ಬಾರಿ ಬುದ್ಧಿ ಕಲಿಸುತ್ತಾರೆ ಅನ್ನೋದು ಗೊತ್ತಿಲ್ಲ. ಎಲ್ಲದಕ್ಕೂ ನಾನು ನಾನು ಅಂತಾ ಸಿದ್ದರಾಮಯ್ಯ ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ ಮಂದಿನ ಬಾರಿ ನಾನೇ ಅಂಬಾರಿ ಹೊರುತ್ತೇನೆ ಅಂತಾ ಮಾತ್ರ ಸಿದ್ದರಾಮಯ್ಯನವರು ಹೇಳುತ್ತಿಲ್ಲ ಎಂದು ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ವ್ಯಂಗ್ಯವಾಡಿದರು.

Comments

Leave a Reply

Your email address will not be published. Required fields are marked *