ಮಾಜಿ ಸಚಿವ ಎ.ಮಂಜು ಮನವೊಲಿಕೆಗೆ ಮುಂದಾದ ಸಿದ್ದರಾಮಯ್ಯ..!

ಬೆಂಗಳೂರು: ಬಿಜೆಪಿ ಸೇರುವ ನಿರ್ಧಾರವನ್ನು ತೆಗೆದುಕೊಳ್ಳಬೇಡ ಎಂದು ಮಾಜಿ ಸಚಿವ ಎ. ಮಂಜು ಮನವೊಲಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಸಿದ್ದರಾಮಯ್ಯ ತನ್ನ ಶಿಷ್ಯ ಎ.ಮಂಜು ಅವರಿಗೆ ದೂರವಾಣಿ ಕರೆ ಮಾಡಿ, “ಬಿಜೆಪಿ ಸೇರುವ ನಿರ್ಧಾರ ತಗೋಬೇಡ. ಅಲ್ಲಿ ಹೋದರೆ ನಿನ್ನ ರಾಜಕೀಯ ಭವಿಷ್ಯ ಹಾಳಾಗುತ್ತೆ. ಬಿಜೆಪಿಗೆ ಹೋಗದೇ ಕಾಂಗ್ರೆಸ್ ನಲ್ಲೇ ಇರು. ಬಿಜೆಪಿಗೆ ಹೋದರೆ ಅಲ್ಲಿ ಕಡೆಗಣನೆಗೆ ಒಳಗಾಗ್ತೀಯ. ಅಲ್ಲೂ ಇಲ್ಲ, ಇಲ್ಲೂ ಇಲ್ಲ ಅನ್ನುವ ಸ್ಥಿತಿ ತಂದುಕೊಳ್ಳಬೇಡ ಎಂದು ಬುದ್ಧಿ ಮಾತು ಹೇಳಿದ್ದಾರೆ” ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಎ. ಮಂಜು ಬಿಜೆಪಿ ಸೇರುವ ನಿರ್ಧಾರ ಕೈಗೊಂಡಿರುವ ಬಗ್ಗೆ ಸಿದ್ದರಾಮಯ್ಯಗೆ ಖಚಿತ ಪಡಿಸಿದ್ದಾರೆ. ಹಾಸನದಲ್ಲಿ ನೀವ್ಯಾರೂ ಜೆಡಿಎಸ್ ನವರ ಕಾಟ ತಡೆಯಲಿಲ್ಲ. ಪ್ರಜ್ವಲ್ ನಂಥವರ ಪರ ಕಾಂಗ್ರೆಸ್ ನವರು ಹೇಗೆ ಮತ ಕೇಳೋದು?. ಮೊಮ್ಮಗನನ್ನು ನಿಲ್ಲಿಸುವ ದೇವೇಗೌಡರ ನಿರ್ಧಾರ ಸರಿಯಲ್ಲ. ನಾವು ಆಗಿನಿಂದಲೂ ಜೆಡಿಎಸ್ ವಿರುದ್ಧವೇ ಹೋರಾಡಿಕೊಂಡು ಬಂದಿದ್ದೇವೆ. ಈಗ ಪ್ರಜ್ವಲ್ ಪರ ಮತ ಕೇಳಲು ಹೋದರೆ ಜನ ಏನನ್ನಲ್ಲ?. ಜೆಡಿಎಸ್ ನವರಿಗೆ ಬುದ್ಧಿ ಕಲಿಸೋದಿಕ್ಕೆ ಇದೇ ಒಳ್ಳೆಯ ಅವಕಾಶ ಎಂದು ಮಂಜು, ಸಿದ್ದರಾಮಯ್ಯ ಬುದ್ಧಿ ಮಾತಿಗೊಪ್ಪದೆ ತಮ್ಮ ನಿಲುವಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ಹಾಸನದ ಅರಸೀಕೆರೆ ಯಲ್ಲಿ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಈ ಬಗ್ಗೆ ಕಾಂಗ್ರೆಸ್ ತೊರೆಯುವ ಬಗ್ಗೆ ಎ.ಮಂಜು ಅವರು ಘೋಷಿಸಿದ್ದರು. ಮಂಜು ಜೊತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್ ಕೂಡ ಕಾಂಗ್ರೆಸ್ಸಿಗೆ ಗುಡ್‍ಬೈ ಹೇಳುವ ಸಾಧ್ಯತೆಯಿದೆ. ಹಾಗೆಯೇ ಕಾಂಗ್ರೆಸ್‍ನಿಂದ ಬಿಜೆಪಿಗೆ ಎ. ಮಂಜು ಜಿಗಿಯಲಿದ್ದಾರೆ. ಮಂಜು ಜೊತೆಗೆ ಕಾಂಗ್ರೆಸ್‍ನ ಬಹುತೇಕ ಜನಪ್ರತಿನಿಧಿಗಳು ಸಹ ಕಾಂಗ್ರೆಸ್ ಬಿಡಲು ಪ್ಲಾನ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *