ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯನೇ ನೇರ ಕಾರಣ, ಪಕ್ಷದ ಪ್ರತಿಯೊಬ್ಬರಿಗೂ ಗೊತ್ತು: ಕೋಳಿವಾಡ

ಹಾವೇರಿ: ಸಿದ್ದರಾಮಯ್ಯ ನನಗಿಂತ 13 ವರ್ಷದ ಬಚ್ಚಾ, ಅವನಿಂದ ಕಾಂಗ್ರೆಸ್‍ಗೆ ಏನು ಅನುಕೂಲವಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

ನಾನು ಸೋತಿದ್ದೇನೆ. ಆದರೆ, ಪಕ್ಷವನ್ನು ಬಿಟ್ಟು ಹೋಗುವುದಿಲ್ಲ. 1996 ರಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯನೇ ನೇರ ಕಾರಣ. ಇದು ಪಕ್ಷದ ಪ್ರತಿಯೊಬ್ಬರಿಗೂ ಗೊತ್ತು ಎಂದು ಅವರು ದೂರಿದ್ದಾರೆ.

ನನ್ನ ಸೋಲಿಗೆ ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡದಿರುವುದೇ ಕಾರಣ. ಅವರ ಮೇಲೆ ಯಾವ ಒತ್ತಡ ಇತ್ತೋ ನನಗೆ ಗೊತ್ತಿಲ್ಲ. ನಾನು ಹರಕೆಯೆ ಕುರಿ ಆಗಿಲ್ಲ, ಬಲಿಪಶು ಆಗಿಲ್ಲ. ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು ಅಂತ ತಮ್ಮ ಪರ ಪ್ರಚಾರಕ್ಕೆ ಬಾರದ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡ ಪರೋಕ್ಷ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.

Comments

Leave a Reply

Your email address will not be published. Required fields are marked *