ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಮುಖ್ಯಮಂತ್ರಿಯವರು ಕೊರೊನಾ ಸೋಂಕಿಗೆ ಒಳಗಾಗಿರುವ ಹಿನ್ನೆಲೆಯಲ್ಲಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ ಅವರು, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಮುಖ್ಯಮಂತ್ರಿಯವರು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ಧನ್ಯವಾದ ತಿಳಿಸಿದರು.
ಇದನ್ನೂ ಓದಿ: ಕೊರೊನಾ ಅಂಟಿಸಿ ಪಾದಯಾತ್ರೆ ನಿಲ್ಲಿಸಲು ಯತ್ನಿಸುತ್ತಿದ್ದೀರಾ, ನಿಮ್ಗೆ ಒಳ್ಳೆಯದಾಗಲ್ಲ: ಡಿಕೆಶಿ ಕಣ್ಣೀರು

ಸೋಮವಾರ ರಾತ್ರಿ 7:47ಕ್ಕೆ ಟ್ವೀಟ್‌ ಮಾಡಿದ ಬೊಮ್ಮಾಯಿ, ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದರು. ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಪುತ್ರನಿಗೂ ಕೋವಿಡ್

Comments

Leave a Reply

Your email address will not be published. Required fields are marked *