ರೇಷ್ಮೆ ಗೂಡು ಮಾರಿ ತಿಂಗಳಾದ್ರೂ ಹಣವಿಲ್ಲ- ಎಚ್‍ಡಿಕೆ ಕ್ಷೇತ್ರದ ರೈತರ ಗೋಳು

ರಾಮನಗರ: ನಿರ್ಗಮಿತ ಮುಖ್ಯಮಂತ್ರಿಗಳ ತವರು ಕ್ಷೇತ್ರದ ರೇಷ್ಮೆ ಮಾರುಕಟ್ಟೆಯಲ್ಲಿ ರೈತರ ಗೋಳನ್ನು ಕೇಳುವವರೆ ಇಲ್ಲದಂತಾಗಿದೆ. ರೇಷ್ಮೆ ಗೂಡು ಮಾರಿ ತಿಂಗಳು ಕಳೆದರೂ ಇನ್ನೂ ಹಣ ಪಾವತಿಯಾಗದೆ, ರೈತರು ಪರದಾಡುವಂತಾಗಿದೆ.

ರೈತರಿಗೆ ವರವಾಗಬೇಕಿದ್ದ ಆನ್‍ಲೈನ್‍ನಲ್ಲಿ ಹಣ ಪಾವತಿ ವ್ಯವಸ್ಥೆ, ಅವರ ಜೀವ ಹಿಂಡುತ್ತಿದೆ. ಪ್ರಾಯೋಗಿಕವಾಗಿ ಅಳವಡಿಸಿಕೊಂಡಿರುವ ಆನ್‍ಲೈನ್ ಹಣ ಪಾವತಿ ವ್ಯವಸ್ಥೆ ಎಡವಟ್ಟಿಗೆ ಕಾರಣವಾಗಿದ್ದು, ಅದೇ ಈಗ ರೈತರ ಕಷ್ಟಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ತಿಂಗಳ ಪೂರ್ತಿ ಶ್ರಮವಹಿಸಿ ರೇಷ್ಮೆ ಸಾಕಾಣಿಕೆ ಮಾಡಿದ ರೈತರು ದಿನನಿತ್ಯ ಹಣಕ್ಕಾಗಿ ಮಾರುಕಟ್ಟೆಗೆ ಅಲೆದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ರೇಷ್ಮೆ ಗೂಡು ಖರೀದಿಸುವಾಗ ಆನ್‍ಲೈನ್ ಪೇಮೆಂಟ್ ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ಎರಡು ದಿನಗಳಲ್ಲಿ ಹಣ ಹಾಕುವುದಾಗಿ ಅಧಿಕಾರಿಗಳು ಹಾಗೂ ಡೀಲರ್ಸ್‍ಗಳು ರೈತರಿಗೆ ಸಬೂಬು ಹೇಳಿ ಸಾಗಹಾಕುತ್ತಿದ್ದಾರೆ. ಸಾವಿರಾರು ರೂ.ಗಳನ್ನು ಖರ್ಚು ಮಾಡಿಕೊಂಡು ತಿಂಗಳುಗಟ್ಟೆಲೆ ರೈತರು ಕಚೇರಿಗೆ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರಿಗಳ ವಿರುದ್ಧ ರೈತರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *