ವಿಷಾಹಾರ ಸೇವಿಸಿ ಯೋಧನ ಇಬ್ಬರು ಮಕ್ಕಳು ಸಾವು, ಪತ್ನಿ ಅಸ್ವಸ್ಥ

ಬೆಳಗಾವಿ(ಚಿಕ್ಕೋಡಿ): ವಿಷಾಹಾರ ಸೇವಿಸಿ ಭಾರತೀಯ ಸೇನೆಯ ಯೋಧರೊಬ್ಬರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಪತ್ನಿ ತೀವ್ರ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ರಾಯಭಾಗದ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.

ಚಿಂಚಲಿ ಪಟ್ಟಣದ ಯೋಧ ಹನುಮಂತ ಕುಂಬಾರ ಅವರ ಮಕ್ಕಳಾದ ಐಶ್ವರ್ಯ(4) ಮತ್ತು ಜಯಶ್ರೀ(6) ವಿಷಾಹಾರ ಸೇವಿಸಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಪತ್ನಿ ಕವಿತಾ ಅಸ್ವಸ್ಥಗೊಂಡಿದ್ದಾರೆ. ಗುವಾಹಟಿಯಲ್ಲಿ ಹನುಮಂತ ಕುಂಬಾರ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದು, ಊರಿನಲ್ಲಿ ಪತ್ನಿ ಕವಿತ ಹಾಗೂ ಇಬ್ಬರು ಮಕ್ಕಳು ವಾಸವಾಗಿದ್ದರು. ಆದಾಯಕ್ಕಾಗಿ ಕಾಳಿನ ವ್ಯಾಪಾರ ಮಾಡುತ್ತಿದ್ದರು. ಆದರೆ ಮಂಗಳವಾರ ರಾತ್ರಿ ವ್ಯಾಪಾರಕ್ಕೆ ತಂದಿಟ್ಟಿದ್ದ ಕಾಳಿಗೆ ಕ್ರಿಮಿಕೀಟಗಳು ಬರಬಾರದೆಂದು ಅದರ ಸುತ್ತ ಕ್ರೀಮಿನಾಶಕ ಹೊಡೆಯುತ್ತಿದ್ದ ವೇಳೆ ಅದರ ಅಂಶ ಗಾಳಿಗೆ ಮಕ್ಕಳು ಹಾಗೂ ತಾಯಿ ಬಾಯಿಗೆ ಸೇರಿತ್ತು ಎನ್ನಲಾಗಿದೆ.

ಆದರೆ ಈ ಬಗ್ಗೆ ಅರಿವಿಲ್ಲದೆ ರಾತ್ರಿ ತಾಯಿ ಹಾಗೂ ಮಕ್ಕಳಿಬ್ಬರೂ ಊಟ ಮಾಡಿ, ಕೇಕ್ ತಿಂದು ಮಲಗಿದ್ದಾರೆ. ಬೆಳಗಾಗುವಷ್ಟರಲ್ಲಿ ಮಕ್ಕಳಿಬ್ಬರು ಸಾವನ್ನಪ್ಪಿದ್ದು, ತಾಯಿ ಅಸ್ವಸ್ಥಗೊಂಡಿದ್ದಾರೆ. ಈ ಬಗ್ಗೆ ತಿಳಿದು ಅಕ್ಕಪಕ್ಕದ ಮನೆಯವರು ತಕ್ಷಣ ತಾಯಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಆದರೆ ಈ ಸಾವಿನ ಸುತ್ತ ಹಲವು ಶಂಕೆಗಳು ವ್ಯಕ್ತವಾಗುತ್ತಿದೆ.

Comments

Leave a Reply

Your email address will not be published. Required fields are marked *