ರಾಜ್ಯ ಪ್ರವಾಸದಲ್ಲಿದ್ರೂ ಯಾವ ನಾಯಕರಿಗೂ ಭೇಟಿಗೆ ಅವಕಾಶ ಕೊಡದ ಸೋನಿಯಾ ಗಾಂಧಿ!

ಬೆಂಗಳೂರು: ಕಾಂಗ್ರೆಸ್ (Congress) ಅಧಿನಾಯಕಿ ಸೋನಿಯಾ ಗಾಂಧಿ ಮೂರು ದಿನ ರಾಜ್ಯ ಪ್ರವಾಸದಲ್ಲಿದ್ರೂ ಯಾವ ನಾಯಕರಿಗೂ ತಮ್ಮ ಭೇಟಿಗೆ ಅವಕಾಶ ಕೊಟ್ಟಿಲ್ಲ ಎಂಬ ಮಾಹಿತಿ ಲಭಿಸಿದೆ.

ಹೌದು ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಜ್ಯಕ್ಕೆ ಬಂದ ಸೋನಿಯಾ ಗಾಂಧಿ ರಾಜ್ಯದ ಯಾವ ಪ್ರಮುಖ ನಾಯಕರಿಗೂ ವೈಯಕ್ತಿಕ ಭೇಟಿಗೆ ಅವಕಾಶ ನೀಡಿಲ್ಲ. ಆ ಮೂಲಕ ಭಾರತ್ ಜೋಡೋ ಯಾತ್ರೆ ಬಿಟ್ಟರೆ ರಾಜ್ಯ ಕಾಂಗ್ರೆಸ್ ನಲ್ಲಿ ಬೇರೆ ಯಾವುದಕ್ಕೂ ಅವಕಾಶ ಇಲ್ಲಾ ಎಂಬ ಸಂದೇಶ ರವಾನಿಸಿದ್ದಾರೆ ಎನ್ನಲಾಗುತ್ತಿದೆ.

ಸದ್ಯಕ್ಕೆ ಏನಿದ್ದರೂ ಮೊದಲ ಆಧ್ಯತೆ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ (Bharat Jodo Yatre) ಯ ಯಶಸ್ಸು. ಆನಂತರ ಚುನಾವಣೆಯಲ್ಲಿ ಗೆಲುವಿಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡುವುದು. ಈ ಜವಾಬ್ದಾರಿಯನ್ನು ಕಾಂಗ್ರೆಸ್ (Congress) ನ ಎಲ್ಲಾ ನಾಯಕರು ಸಾಮೂಹಿಕವಾಗಿ ನಿರ್ವಹಿಸಬೇಕು. ಅದನ್ನ ಮೀರಿ ಏನಾದರು ಮಾತನಾಡುವುದು ಇದ್ದರೆ ಅದು ದೆಹಲಿಯಲ್ಲಿ ಅಷ್ಟೆ. ಇಂತದೊಂದು ಸ್ಪಷ್ಟ ಸಂದೇಶವನ್ನ ಸೋನಿಯಾ ಗಾಂಧಿ (Sonia Gandhi) ರವಾನಿಸಿದ್ದಾರೆ ಎನ್ನಲಾಗುತ್ತಿದೆ.

ಸ್ವತಃ ಎಐಸಿಸಿ ಹೈಕಮಾಂಡ್ ರಾಜ್ಯದಲ್ಲಿ 3 ದಿನ ಉಳಿದುಕೊಂಡರೂ ರಾಜ್ಯದ ಯಾವ ನಾಯಕರಿಗೂ ಭೇಟಿಗೆ ಅವಕಾಶ ನೀಡದೆ ಅಂತರ ಕಾಯ್ದುಕೊಂಡಿರುವುದು ವಿಶೇಷವಾಗಿದೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *