ಇಂದು ಸೌಮ್ಯಾ ರೆಡ್ಡಿ, ಅಂಜಲಿ ನಿಂಬಾಳ್ಕರ್ ರಾಜೀನಾಮೆ ಇಲ್ಲ

– ಸಚಿವರೊಬ್ಬರಿಂದ ರಾಜೀನಾಮೆ?

ಬೆಂಗಳೂರು: ಈಗಾಗಲೇ ಸಮ್ಮಿಶ್ರ ಸರ್ಕಾರದ ಕೆಲ ಶಾಸಕರು ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದಾರೆ. ಆದರೆ ಇಂದು ರಾಜೀನಾಮೆ ನೀಡುತ್ತಾರೆ ಎಂದು ಹೇಳಲಾಗುತ್ತಿದ್ದ ಇಬ್ಬರು ಶಾಸಕಿಯರು ರಾಜೀನಾಮೆ ನೀಡಲ್ಲ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಹೌದು. ಜಯನಗರ ಶಾಸಕಿ ಸೌಮ್ಯ ರೆಡ್ಡಿ ಹಾಗೂ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಇಂದು ರಾಜೀನಾಮೆ ನೀಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಈ ಇಬ್ಬರು ಶಾಸಕಿಯರ ರಾಜೀನಾಮೆಯನ್ನು ನಾಳೆಗೆ ಮುಂದೂಡುವ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇಂದು ಅಚ್ಚರಿಯೆಂಬತೆ ಇಬ್ಬರು ಶಾಸಕರು ರಾಜೀನಾಮೆ ನೀಡಲಿದ್ದಾರೆ. ಹೆಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಅವರು ಇಂದು ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಈ ಇಬ್ಬರು ಶಾಸಕರು ಇಂದು ವಿಧಾನಸೌಧದಲ್ಲಿ ಸ್ಪೀಕರ್ ಕಾರ್ಯದರ್ಶಿ ಭೇಟಿ ಮಾಡಿ ರಾಜೀನಾಮೆ ಕೊಡುವ ಸಾಧ್ಯತೆಗಳಿವೆ.

ರಾಜೀನಾಮೆ ಬಳಿಕ ರಾಜ್ಯಪಾಲರ ಭೇಟಿ ಮಾಡಿ ರಕ್ಷಣೆ ನೀಡುವಂತೆ ಮನವಿ ಮಾಡಲಿದ್ದಾರೆ. ಅದಾದ ಬಳಿಕ ಈ ಇಬ್ಬರು ಶಾಸಕರು ಮುಂಬೈಗೆ ಶಿಫ್ಟ್ ಆಗಲು ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತ ಶಾಸಕರ ರಾಜೀನಾಮೆ ನೀಡುತ್ತಿದ್ದಂತೆಯೇ ಇತ್ತ ಸಚಿವರೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಶಾಕ್ ನೀಡಲಿದ್ದಾರೆ. ಸಚಿವ ಎಂ.ಟಿ.ಬಿ.ನಾಗರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ.

Comments

Leave a Reply

Your email address will not be published. Required fields are marked *