ಅತೃಪ್ತ ಶಾಸಕರ ರಾಜೀನಾಮೆ ತುರ್ತು ಅಂಗೀಕಾರ ಇಲ್ಲ: ಸ್ಪೀಕರ್ ಸ್ಪಷ್ಟನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆಯನ್ನು ತುರ್ತು ಅಂಗೀಕಾರ ಮಾಡುವುದಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಶನಿವಾರ ಮಧ್ಯಾಹ್ನದವರೆಗೂ ನಾನು ಕಚೇರಿಯಲ್ಲಿ ಇದ್ದೆ. ನಾನಿಲ್ಲದ ಸಂದರ್ಭದಲ್ಲಿ ರಾಜೀನಾಮೆ ಕೊಟ್ಟಿದ್ದಾರೆ. ಹೀಗಾಗಿ ತುರ್ತಾಗಿ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಎರಡು ದಿನಗಳ ನಂತರ ನಾನು ಕಚೇರಿಗೆ ಬಂದಿದ್ದೇನೆ. ಈಗ ಹೋಗಿ ನೋಡಿ ರಾಜೀನಾಮೆ ಪರಿಶೀಲನೆ ನಡೆಸುತ್ತೇನೆ ಎಂದರು.

ಜನರ ಭಾವನೆಗಳಿಗೆ ನಾನು ಸ್ಪಂದಿಸಬೇಕಿದೆ. ರೂಲ್ ಬುಕ್ ನೋಡಿ ಮುಂದಿನ ತೀರ್ಮಾನ ಮಾಡುತ್ತೇನೆ. ಹೀಗಾಗಿ ತಕ್ಷಣವೇ ಅತೃಪ್ತ ಶಾಸಕರ ರಾಜೀನಾಮೆಯನ್ನು ತುರ್ತಾಗಿ ಅಂಗೀಕಾರ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರನ್ನು ಪ್ರತ್ಯೇಕವಾಗಿ ಕರೆಸಿ ಮಾತುಕತೆ ನಡೆಸುತ್ತೇನೆ ಎಂದು ಸ್ಪೀಕರ್ ಸ್ಪಷ್ಟನೆ ಕೊಟ್ಟಿದ್ದಾರೆ.

ರಾಜೀನಾಮೆ ಬಳಿಕ ಅತೃಪ್ತ ಶಾಸಕರು ಮುಂಬೈನಲ್ಲಿನ ರೆಸಾರ್ಟಿನಲ್ಲಿ ಇದ್ದಾರೆ. ಈ ಹಿಂದೆಯೇ ಸ್ಪೀಕರ್ ಕರೆದರೆ ನಾವು ಬೆಂಗಳೂರಿಗೆ ಬರುತ್ತೇವೆ ಎಂದು ಅತೃಪ್ತ ಶಾಸಕರು ಹೇಳಿದ್ದರು.

Comments

Leave a Reply

Your email address will not be published. Required fields are marked *