ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿವಾಸಕ್ಕೆ ವಿಶೇಷ ಭದ್ರತೆ

– ಸಂಜೆ ಮತ್ತೊಂದು ಹೆಲ್ತ್ ಬುಲೆಟಿನ್

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ವಿಶೇಷ ಭದ್ರತಾ ತಂಡ ನಿಯೋಜನೆ ಮಾಡಲಾಗಿದೆ.

ವಾಜಪೇಯಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಬುಧವಾರ ಅವರ ಸ್ಥಿತಿ ಹೇಗಿತ್ತೋ ಹಾಗಿಯೇ ಇಂದು ಕೂಡ ಮುಂದುವರಿದಿದೆ ಅಂತ ಏಮ್ಸ್ ಆಸ್ಪತ್ರೆ ಈಗಾಗಲೇ ತಿಳಿಸಿದ್ದು, ಇಂದು ಸಂಜೆ ಮತ್ತೊಂದು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ನಡೆಯುವ ಬಿಜೆಪಿಯ ಎಲ್ಲಾ ಚುನಾವಣಾ ಯಾತ್ರೆಗಳನ್ನು ರದ್ದು ಮಾಡಲಾಗಿದೆ. ಅಲ್ಲದೇ ಇಂದಿನ ಎಲ್ಲಾ ಬಿಜೆಪಿ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ಪ್ರಧಾನಿ ಕಾರ್ಯಾಲಯ ಈಗಾಗಲೇ ಪ್ರಕರಟಣೆ ಹೊರಡಿಸಿದೆ.

ಗ್ವಾಲಿಯರ್ ಮತ್ತು ಆಗ್ರಾದಲ್ಲಿರುವ ವಾಜಪೇಯಿ ಸಂಬಂಧಿಕರು ಶೀಘ್ರವೇ ಆಸ್ಪತ್ರೆಗೆ ಬರುವಂತೆ ಏಮ್ಸ್ ಸೂಚನೆ ನೀಡಿದೆ. ಈಗಾಗಲೇ ಆಸ್ಪತ್ರೆಗೆ ಆರೋಗ್ಯ ಸಚಿವ ಜೆ.ಪಿ ನಡ್ವಾ, ಎಲ್ ಕೆ ಅಡ್ವಾಣಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಮಿತ್ ಶಾ, ರಾಹುಲ್ ಗಾಂಧಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಲ್ಲಿ ವಾಜಪೇಯಿ ಕುಟುಂಬಸ್ಥರು ಈಗಾಗಲೇ ಜಮಾಯಿಸಿದ್ದು, ಕಣ್ಣೀರು ಹಾಕುತ್ತಿದ್ದಾರೆ.

ಆಸ್ಪತ್ರೆ ಬಳಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗಿದ್ದು, ಬಿಜೆಪಿ ನಾಯಕರ ದಂಡೇ ಆಸ್ಪತ್ರೆಗೆ ಹರಿದುಬರುತ್ತಿದೆ. ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು. ವಾಜಪೇಯಿ ಆರೋಗ್ಯ ಇನ್ನಷ್ಟು ಕ್ಷೀಣಿಸಿದ್ದು, ಆಮ್ಲಜನಕದ ಬೆಂಬಲ ನೀಡಲಾಗುತ್ತಿದೆ ಎಂದು ಬುಧವಾರ ಏಮ್ಸ್ ಆಸ್ಪತ್ರೆ ತಿಳಿಸಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

 

Comments

Leave a Reply

Your email address will not be published. Required fields are marked *