ಸೆಟ್‍ನಲ್ಲಿ ಕಿಚ್ಚನನ್ನು ಭೇಟಿ ಮಾಡಿದ ಶ್ರೀಮುರಳಿ

ಹೈದರಾಬಾದ್: ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಹೈದರಾಬಾದ್‍ನ ರಾಮೋಜಿ ಸಿಟಿಯಲ್ಲಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದರು. ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ ನಂತರ ಮುರಳಿ ಅವರು ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದ್ದಾರೆ.

ಶ್ರೀಮುರಳಿ ಅವರು ತಮ್ಮ ಮುಂದಿನ ಚೇತನ್ ಕುಮಾರ್ ನಿರ್ದೇಶನದ ‘ಭರಾಟೆ’ ಚಿತ್ರದ ಚಿತ್ರೀಕರಣಕ್ಕಾಗಿ ಹೈದರಾಬಾದ್‍ನ ರಾಮೋಜಿ ಫಿಲ್ಮ್ ಸೆಂಟರ್ ಗೆ ಹೋಗಿದ್ದಾರೆ. ಕಿಚ್ಚ ಸುದೀಪ್ ಅವರು ಕೂಡ ತಮ್ಮ ‘ಪೈಲ್ವಾನ್’ ಚಿತ್ರದ ಚಿತ್ರೀಕರಣವನ್ನು ರಾಮೋಜಿ ಸಿಟಿಯಲ್ಲಿ ನಡೆಸುತ್ತಿದ್ದಾರೆ. ಈ ವೇಳೆ ಇಬ್ಬರು ನಟರು ಭೇಟಿ ಆಗಿದ್ದಾರೆ. ಇದನ್ನೂ ಓದಿ: ಟಾಲಿವುಡ್ ಪ್ರಿನ್ಸ್ ಮಹೇಶ್ ಜೊತೆ ರೋರಿಂಗ್ ಸ್ಟಾರ್ ಮುರಳಿ

ಶ್ರೀಮುರಳಿ ಅವರು ಕಿಚ್ಚ ಸುದೀಪ್ ಹಾಗೂ ನಟಿ ತಾರಾ ಅವರನ್ನು ಭೇಟಿ ಮಾಡಿರುವ ಫೋಟೋಗಳನ್ನು ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ. “ಭರಾಟೆ ಸಿನಿಮಾದ ಚಿತ್ರೀಕರಣದ ವೇಳೆ ನನ್ನ ಆತ್ಮೀಯ ಗೆಳೆಯ ಕಿಚ್ಚ ಸುದೀಪ್ ಅವರನ್ನು ‘ಪೈಲ್ವಾನ್’ ಸೆಟ್‍ನಲ್ಲಿ ಭೇಟಿ ಮಾಡಿದೆ. ತುಂಬಾ ದಿನಗಳ ನಂತರ ಅವರನ್ನು ಭೇಟಿ ಮಾಡಿ ಖುಷಿಯಾಯಿತು. ನಾವಿಬ್ಬರು ಖುಷಿಯ ಕ್ಷಣಗಳನ್ನು ಕಳೆದವು. ಇಂದು ಸುದೀಪ್ ಅವರು ಭರಾಟೆ ಸೆಟ್‍ಗೆ ಭೇಟಿ ನೀಡಿದ್ದಾರೆ” ಎಂದು ಶ್ರೀಮುರಳಿ ಟ್ವೀಟ್ ಮಾಡಿದ್ದಾರೆ.

ಶ್ರೀಮುರಳಿ ಅವರ ಟ್ವೀಟ್‍ಗೆ ಕಿಚ್ಚ ಸುದೀಪ್ ಅವರು, “ನನಗೂ ಯಾವಾಗಲೂ ಖುಷಿ ಆಗುತ್ತದೆ. ಭರಾಟೆ ಚಿತ್ರದ ಟೀಸರ್ ಅದ್ಭುತವಾಗಿ ಕಾಣಿಸುತ್ತದೆ. ಭರಾಟೆ ಚಿತ್ರತಂಡಕ್ಕೆ ಶುಭಾಶಯಗಳು” ಎಂದು ರೀ-ಟ್ವೀಟ್ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *