ಮೈತ್ರಿ ಮಾಡ್ಕೊಂಡ ಕಾಂಗ್ರೆಸ್‍ಗೆ ಮೊದಲ ಬಿಗ್ ಶಾಕ್ ಕೊಟ್ಟ ಶಾಸಕ ರವೀಂದ್ರ ಶೀಕಂಠಯ್ಯ

ಮಂಡ್ಯ: ಜೆಡಿಎಸ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಏರಿ ಒಂದು ವಾರ ಆಗುವುದರ ಒಳಗಡೆ ಮೈತ್ರಿ ಮುರಿದುಕೊಳ್ಳುವ ಮುನ್ಸೂಚನೆಯನ್ನು ಶ್ರೀರಂಗಪಟ್ಟಣದ ಕ್ಷೇತ್ರದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಸೋಮವಾರ ತೆರೆದಿಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನಿಂದಲೂ ಮುಖ್ಯಮಂತ್ರಿಗಳೇ ಹಣಕಾಸು ಖಾತೆಯನ್ನು ನೋಡಿಕೊಳ್ಳುವುದು ವಾಡಿಕೆಯಾಗಿದೆ. ಆದರೆ ಕಾಂಗ್ರೆಸ್ ನಾಯಕರು ಹಣಕಾಸು ಖಾತೆ ವಿಚಾರದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅಲ್ಲದೇ ನಮ್ಮ ನಾಯಕ ಕುಮಾರಸ್ವಾಮಿ ಅವರನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಮಗೆ ಬೆಂಬಲ ನೀಡಲು ಕಾಂಗ್ರೆಸ್‍ನವರು ಮುಂದಾಗಿದ್ದರು. ಆದರೆ ಈಗ ಅನೇಕ ನಿಯಮಗಳನ್ನು ಹಾಕಿ ಕುಮಾರಸ್ವಾಮಿ ಅವರನ್ನು ಮುಜುಗರಕ್ಕೆ ಗುರಿ ಪಡೆಸಿದ್ದಾರೆ. ಅನೇಕ ಆಲೋಚನೆಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳೇ ಹಣಕಾಸು ಖಾತೆ ನಿಭಾಯಿಸುತ್ತಾರೆ. ಇದಕ್ಕೆ ಕಾಂಗ್ರೆಸ್‍ನವರು ಅವಕಾಶ ಮಾಡಿಕೊಡುತ್ತಿಲ್ಲ. ಹಣಕಾಸು ಖಾತೆ ಹಂಚಿಕೆಯಲ್ಲಿ ಸಮಸ್ಯೆಯಾಗಿ ಮೈತ್ರಿ ಮುರಿದುಕೊಂಡು ಜೆಡಿಎಸ್ ಹೊರಗೆ ಬಂದರೂ ನಾವು ನಮ್ಮ ನಾಯಕರ ಜೊತೆ ಇರುತ್ತೇವೆ ಎಂದು ತಿಳಿಸಿದರು.

ಸಾಲ ಮನ್ನಾ ಅಥವಾ ಸರ್ಕಾರ ಅಂತ ಬಂದರೆ ನಮ್ಮ ನಾಯಕರು ಅಧಿಕಾರಕ್ಕೆ ಅಂಟಿ ಕೂರುವುದಿಲ್ಲ. ಸಾಲ ಮನ್ನಾ ಮಾಡಬೇಕೆಂಬುದು ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರ ಒತ್ತಾಯವಾಗಿದೆ. ಈ ವಿಚಾರದಲ್ಲಿ ಕುಮಾರಸ್ವಾಮಿ ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಜೆಡಿಎಸ್‍ನ ಎಲ್ಲಾ ಶಾಸಕರು ಅವರ ಜೊತೆ ಇರುತ್ತಾರೆ ಎಂದು ಪ್ರತಿಕ್ರಿಯಿಸಿದರು.

Comments

Leave a Reply

Your email address will not be published. Required fields are marked *