ಶಾಲೆಯಲ್ಲೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಮಂಡ್ಯ: ಶಿಕ್ಷಕರ ಕಿರುಕುಳವನ್ನು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕೋಡಿಮರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚೈತನ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ವಿದ್ಯಾನಿಕೇತನ್ ಶಾಲೆಯಲ್ಲಿ ಓದುತ್ತಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಶಿಕ್ಷಕರು ಆಕೆಗೆ ಕಿರುಕುಳವನ್ನು ನೀಡಿದ್ದಾರೆ. ಹಾಗಾಗಿ ಅವರ ಕಿರುಕುಳವನ್ನು ಸಹಿಸಿಕೊಳ್ಳಲಾರದೇ ಚೈತನ್ಯ ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಿಕ್ಕೆರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *