ಮನೆಗೆ ಫೋನ್ ಮಾಡಲು ಬಿಡಲಿಲ್ಲ ಎಂದು ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಮನೆಗೆ ಫೋನ್ ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಖಾಸಗಿಯ ಶಾಲೆಯ ಹಾಸ್ಟೆಲ್‌ವೊಂದರಲ್ಲಿ ಘಟನೆ ನಡೆದಿದೆ. 9ನೇ ತರಗತಿ ವಿದ್ಯಾರ್ಥಿ ಪೂರ್ವಾಜ್(14) ಹಾಸ್ಟೆಲ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಅಡ್ಡ ಮತದಾನ: ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ದೂರಿಗೆ JDS ನಿರ್ಧಾರ

ಪೂರ್ವಾಜ್ ಬೆಂಗಳೂರಿನ ಹೊಸಕೋಟೆ ಮೂಲದವನು. ಮನೆಗೆ ಫೋನ್ ಮಾಡಲು ಹಾಸ್ಟೆಲ್ ಸಿಬ್ಬಂದಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪೂರ್ವಜ್ ಹಾಸ್ಟೆಲ್‌ನಲ್ಲಿಯೇ ನೇಣು ಬಿಗಿದುಕೊಂಡು ಆತ್ಯಹತ್ಯೆಗೆ ಶರಣಾಗಿದ್ದಾನೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments

Leave a Reply

Your email address will not be published. Required fields are marked *