ಯಾದಗಿರಿ: ಪಿಯುಸಿ ಪೂರಕ ಪರೀಕ್ಷೆಯಲ್ಲಿ ಸಾಮೂಹಿಕ ನಕಲು

ಯಾದಗಿರಿ: ರಾಜ್ಯಾದ್ಯಂತ ಇಂದು ಪಿಯುಸಿ ಪೂರಕ ಪರೀಕ್ಷೆ ನಡೆಯುತ್ತಿದ್ದು ಮೊದಲ ದಿನವೇ ಯಾದಗಿರಿಯ ಜಿಲ್ಲೆಯ ಸುರಪುರ ಪಟ್ಟಣದ ಪರೀಕ್ಷಾ ಕೆಂದ್ರದಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ನಕಲು ಮಾಡಿರುವುದು ಬಯಲಾಗಿದೆ.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇಂದು ನಡೆಯುತ್ತಿದ್ದ ಸಮಾಜಶಾಸ್ತ್ರ ಮತ್ತು ಲೆಕ್ಕಶಾಸ್ತ್ರ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡಿದ್ದು, ಇದಕ್ಕೆ ಪರೀಕ್ಷಾ ಮೇಲ್ವಿಚಾರಕರೇ ಸಾಥ್ ನೀಡಿದ್ದಾರೆ ಅಂತ ಆರೋಪ ಕೇಳಿಬಂದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರೋ ಪಿಯು ಪ್ರಭಾರಿ ಉಪ-ನಿರ್ದೇಶಕರಾದ ಗುರಲಿಂಗಪ್ಪ, ನಕಲು ನಡೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಅಂತ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *