ರಾಜಮೌಳಿ ಚಿತ್ರದಲ್ಲಿ ಕಿಚ್ಚನಿಗೆ ಮತ್ತೊಂದು ಆಫರ್

ಬೆಂಗಳೂರು: ಟಾಲಿವುಡ್‍ನ ಖ್ಯಾತ ನಿರ್ದೇಶಕ ರಾಜಮೌಳಿ ಅವರು ತಮ್ಮ ನಿರ್ದೇಶನದ ಸಿನಿಮಾದಲ್ಲಿ ಮತ್ತೊಮ್ಮೆ ಸುದೀಪ್ ಅವರಿಗೆ ಆಫರ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ನಟ ಕಿಚ್ಚ ಸುದೀಪ್ ಈ ಹಿಂದೆ ತೆಲುಗಿನ ಬ್ಲಾಕ್ ಮಾಸ್ಟರ್ ಹಿಟ್ ಸಿನಿಮಾ ‘ಬಾಹುಬಲಿ’ ಸಿನಿಮಾದಲ್ಲಿ ಅಸ್ಲಾಂ ಖಾನ್ ಎಂಬ ಶಸ್ತ್ರಾಸ್ತ್ರ ವ್ಯಾಪಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ಇವರ ಪಾತ್ರ ಕೆಲವೇ ನಿಮಿಷ ಇದ್ದರೂ, ಬಹಳ ಉತ್ತಮವಾಗಿ ಮೂಡಿ ಬಂದಿತ್ತು.

ಇದೀಗ ರಾಜಮೌಳಿ ನಿರ್ದೇಶನದ ಸಿನಿಮಾದಲ್ಲಿ ಮತ್ತೆ ಸುದೀಪ್ ಅಭಿನಯಿಸುವ ಸಾಧ್ಯತೆ ಇದೆ. ಸದ್ಯಕ್ಕೆ ರಾಜಮೌಳಿ ಅವರು ‘ಆರ್‌ಆರ್‌ಆರ್’ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಜೂನಿಯರ್ ಎನ್‍ಟಿಆರ್ ಮತ್ತು ರಾಮ್ ಚರಣ್ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದೇ ಸಿನಿಮಾದಲ್ಲಿ ಸುದೀಪ್ ಅಭಿನಯಿಸಲು ರಾಜಮೌಳಿ ಆಫರ್ ಕೊಟ್ಟಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ಆರ್‌ಆರ್‌ಆರ್ ಸಿನಿಮಾದಲ್ಲಿ ಸುದೀಪ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿನಯಿಸುವ ಸಾಧ್ಯತೆಗಳಿವೆ. ಯಾಕೆಂದರೆ ಈ ಸಿನಿಮಾದಲ್ಲಿ ಇದು ತುಂಬಾ ಮುಖ್ಯವಾದ ಪಾತ್ರವಾಗಿದೆ. ಹೀಗಾಗಿ ಈ ಪಾತ್ರವನ್ನು ಸುದೀಪ್ ಅವರಿಂದಲೇ ಮಾಡಿಸಬೇಕೆಂದು ಚಿತ್ರತಂಡ ಪ್ಲಾನ್ ಮಾಡಿಯಂತೆ. ಆದರೆ ಚಿತ್ರತಂಡದಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.

ಸದ್ಯಕ್ಕೆ ಸುದೀಪ್ ‘ಕೋಟಿಗೊಬ್ಬ 3’ ಸಿನಿಮಾದ ಶೂಟಿಂಗ್‍ನಲ್ಲಿ ಬ್ಯುಸಿಯಿದ್ದಾರೆ. ಇತ್ತೀಚೆಗಷ್ಟೆ ಈ ಸಿನಿಮಾ ಮೊದಲ ಮೋಷನ್ ಪೋಸ್ಟರ್ ಬಿಡುಗಡೆಯಾಗಿತ್ತು.

Comments

Leave a Reply

Your email address will not be published. Required fields are marked *