ಅಪಘಾತದಲ್ಲಿ ಸುದೀಪ್ ಅಭಿಮಾನಿ ಸಾವು

ತುಮಕೂರು: ನಟ ಕಿಚ್ಚ ಸುದೀಪ್ ಅಭಿಮಾನಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ತುಮಕೂರಿನ ಹನುಮಂತಪುರದ ಪಂಜಾಬಿ ಡಾಬಾ ಬಳಿ ನಡೆದಿದೆ.

ಪುನೀತ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸುದೀಪ್ ಅಭಿಮಾನಿ. ಮೃತ ಪುನೀತ್ ಕಿಚ್ಚ ಸುದೀಪ್ ಅಭಿಮಾನಿ ಸಂಘದ ತುಮಕೂರು ಜಿಲ್ಲಾ ಮಾಜಿ ಉಪಾಧ್ಯಕ್ಷರಾಗಿದ್ದರು. ಶನಿವಾರ ರಾತ್ರಿ ತುಮಕೂರಿನ ಹನುಮಂತಪುರದ ಪಂಜಾಬಿ ಡಾಬಾ ಬಳಿ ಪುನೀತ್ ಬೈಕ್ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

ಅಪಘಾತ ಬಳಿಕ ಪುನೀತ್ ಇಬ್ಬರು ಸ್ನೇಹಿತರಿಗೆ ಫೋನ್ ಮಾಡಿದ್ದಾರೆ. ಆದರೆ ತಡರಾತ್ರಿಯಾಗಿದ್ದರಿಂದ ಇಬ್ಬರು ಸ್ನೇಹಿತರು ಫೋನ್ ರಿಸೀವ್ ಮಾಡಿಲ್ಲ. ಕೊನೆಗೆ ಅಪಘಾತದಲ್ಲಿ ತೀವ್ರ ರಕ್ತ ಸ್ರಾವದಿಂದ ನಿತ್ರಾಣಗೊಂಡು ಸ್ಥಳದಲ್ಲೇ ಪುನೀತ್ ಮೃತಪಟ್ಟಿದ್ದಾರೆ.

ಈ ಬಗ್ಗೆ ಮಾಹಿತಿ ಸ್ಥಳಕ್ಕೆ ಪೊಲೀಸರು ಹೋಗಿ ಜಿಲ್ಲಾ ಆಸ್ಪತ್ರೆಗೆ ಪುನೀತ್ ಶವವನ್ನು ರವಾನೆ ಮಾಡಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *