ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ಸೇವಿಸಿ ಮೃತಪಟ್ಟವರಿಗೆ ಗಿಡ ನೆಡುವ ಮೂಲಕ ವಿಶೇಷವಾಗಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ ಗುತ್ ಮಾರಮ್ಮನ ದೇವಾಲಯದ ಪ್ರಸಾದ ಸೇವಿಸಿ ಸಾವನ್ನಪ್ಪಿದವರಿಗೆ ವಿಶೇಷ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಪಕ್ಕದಲ್ಲಿ ಅರಳಿ ಹಾಗೂ ಬೇವಿನ ಗಿಡ ನೆಟ್ಟು ವಿಷ ದುರಂತದಲ್ಲಿ ಮಡಿದವರಿಗಾಗಿ ಹಾಲು ತುಪ್ಪ ಎರೆದು ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು.

ಡಿಸೆಂಬರ್ 14, 2018 ರಲ್ಲಿ ಸುಳ್ವಾಡಿ ಮಾರಮ್ಮನ ವಿಷ ದುರಂತದಲ್ಲಿ 17 ಜನ ವಿಷ ಪ್ರಾಶನ ಮಾಡಿ ಸಾವನ್ನಪ್ಪಿದ್ದರು. 120 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದರು. ಸಾವನ್ನಪ್ಪಿದ ಎಲ್ಲರಿಗೂ ಮೃತರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

Leave a Reply