ಟ್ರಯಲ್ ಬ್ಲಾಸ್ಟ್ ಆಧರಿಸಿ ಗಣಿಗಾರಿಕೆಗೆ ಅವಕಾಶ ಕೊಡಬಾರದು: ಸಿಎಂಗೆ ಸುಮಲತಾ ಪತ್ರ

ಮಂಡ್ಯ: ಕೆಆರ್‌ಎಸ್ ಸುತ್ತಮುತ್ತಲು ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗಣಿ ಸಚಿವರಿಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಪತ್ರ ಬರೆದಿದ್ದಾರೆ.

ಕೆಆರ್‌ಎಸ್ ವ್ಯಾಪ್ತಿಯ 20 ಕಿ.ಮೀ ಗಣಿನಿಷೇಧ ಪ್ರದೇಶವಾಗಿ ಯಥಾಸ್ಥಿತಿ ಕಾಪಾಡುವಂತೆ ಸಿಎಂ, ಗಣಿ ಸಚಿವರಿಗೆ ಸುಮಲತಾ ಅಂಬರೀಶ್ ಮನವಿ ಮಾಡಿದ್ದಾರೆ. ಜಾರ್ಖಂಡ್‍ನಿಂದ ಆಗಮಿಸಿರುವ ಸಿಎಸ್‍ಐಆರ್ ಮತ್ತು ಸಿಐಎಂಎಫ್‍ಆರ್ ವಿಜ್ಞಾನಿಗಳು ಕಂಟ್ರೋಲ್ ಬಳಸಿ ಟ್ರಯಲ್ ಬ್ಲಾಸ್ಟ್ ಮಾಡುತ್ತಾರೆ. ಆ ಸಂಶೋಧನೆ ಕೇವಲ 200 ಮೀಟರ್ ವ್ಯಾಪ್ತಿಗಷ್ಟೇ ಪರಿಣಾಮ ಬೀರುತ್ತದೆ ಎಂದು ವರದಿಯಲ್ಲಿ ತಿಳಿದು ಬಂದಿದೆ. ಇದನ್ನೂ ಓದಿ: KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಆಕ್ಷೇಪಿಸಿ ರಾಜಮನೆತನ ಪತ್ರ

ವರದಿ ಆಧರಿಸಿ ಕೆಆರ್‌ಎಸ್ ಸುತ್ತಮುತ್ತ ಗಣಿಗಾರಿಕೆಗೆ ಅವಕಾಶಕೊಟ್ಟರೆ ರಿಗ್, ಬೋರ್, ಸೈಲೆಂಟ್ ಬ್ಲಾಸ್ಟ್ ಮಾಡುತ್ತಾರೆ. ಈ ಹಿಂದೆಯೇ ಇಂತಹ ಗಣಿಗಾರಿಕೆಯಿಂದ 2.4 ರಿಕ್ಟರ್ ಮಾಪನದಷ್ಟು ಭೂಕಂಪನವಾಗಿತ್ತು. ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸಂಶೋಧನಾ ಸಂಸ್ಥೆಗಳು ಕೆಆರ್‌ಎಸ್ ಸುತ್ತಮುತ್ತಲ ಗಣಿಗಾರಿಕೆಯಿಂದ ಡ್ಯಾಂಗೆ ಆಗುತ್ತಿರುವ ಅಪಾಯದ ಬಗ್ಗೆ ವರದಿ ನೀಡಿವೆ. ಟ್ರಯಲ್ ಬ್ಲಾಸ್ಟ್ ಆಧರಿಸಿ ಗಣಿಗಾರಿಕೆಗೆ ಅವಕಾಶ ಕೊಡಬಾರದು ಎಂದು ಒತ್ತಾಯಿಸಿದ್ದಾರೆ.

ಕೆಆರ್‌ಎಸ್ ಸುತ್ತಮುತ್ತ 20 ಕಿ.ಮೀ ವ್ಯಾಪ್ತಿ ಗಣಿಗಾರಿಕೆ ನಿಷೇಧದ ಪ್ರದೇಶವಾಗಿಯೆ ಇರಲಿ. ಇದೇ ನನ್ನ ಹಾಗೂ ರೈತ, ಪ್ರಗತಿಪರ ಸಂಘಟನೆಗಳ ನಿಲುವು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅಭಿವೃದ್ಧಿಗೆ ಕ್ರಿಶ್ಚಿಯನ್ನರೇ ಕಾರಣ, ಕ್ರಿಶ್ಚಿಯನ್ನರು ಇಲ್ಲದಿದ್ರೆ ರಾಜ್ಯ ಬಿಹಾರ ಆಗ್ತಿತ್ತು: ತಮಿಳುನಾಡು ಸ್ಪೀಕರ್

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *