ಹಳೆ ಮೈಸೂರು ಭಾಗದಲ್ಲಿ ಆಪರೇಷನ್ ಕಮಲ- ಬಿಜೆಪಿಗೆ ಸುಮಲತಾ ಆಪ್ತ ಸಚ್ಚಿದಾನಂದ ಸೇರ್ಪಡೆ

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಆಪ್ತ ಇಂಡುವಾಳು ಸಚ್ಚಿದಾನಂದ ಬಿಜೆಪಿ (BJP) ಗೆ ಸೇರ್ಪಡೆಗೊಂಡರು. ಸಾವಿರಕ್ಕೂ ಹೆಚ್ಚು ಬೆಂಬಲಿಗರೊಡನೆ ತೆರಳಿ ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಚ್ಚಿದಾನಂದ (Sacchidananda) ಅವರು ಪಕ್ಷ ಸೇರ್ಪಡೆಗೊಂಡರು.

ಈ ಕಾರ್ಯಕ್ರಮದಲ್ಲಿ ಸಚಿವರಾದ ಅಶ್ವಥ್ ನಾರಾಯಣ್ (Ashwath Narayan), ಗೋಪಾಲಯ್ಯ, ನಾರಯಣಗೌಡ, ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್, ಶಾಸಕರಾದ ಸತೀಶ್ ರೆಡ್ಡಿ, ರವಿಸುಬ್ರಹ್ಮಣ್ಯ ಭಾಗಿಯಾದರು. ಇದೇ ವೇಳೆ ಮಂಡ್ಯ ಜಿಲ್ಲೆಯ ಹಲವು ಮುಖಂಡರ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಸಚ್ಚಿದಾನಂದ, ಪ್ರಧಾನಿ ನರೇಂದ್ರ ಮೋದಿ (Narendra Modi) ಯ ನಾಯಕತ್ವವನ್ನು ಒಪ್ಪಿ ನಾನು ಬಿಜೆಪಿ ಸೇರಿದ್ದೇನೆ. ಮುಂದೆ ವಿಧಾನಸಭೆಗೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳುಹಿಸಿ ಕೊಡ್ತೀವಿ ಎಂದರು. ಇದನ್ನೂ ಓದಿ: ರಾಜಕಾರಣಿಗಳ ಮಧ್ಯೆ ರೌಡಿಶೀಟರ್ ಸೈಲೆಂಟ್ ಸುನೀಲನ ದರ್ಬಾರ್ – ಪೊಲೀಸರು ಗಪ್‍ಚುಪ್

ಸಚ್ಚಿದಾನಂದ ಅವರು ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕಳೆದ ಸಂಸದ ಚುನಾವಣೆಯಲ್ಲಿ ಸುಮಲತಾ ಪರ ನಿಂತು ಕಾಂಗ್ರೆಸ್‍ನಿಂದ ಉಚ್ಛಾಟನೆ ಮಾಡಲಾಯಿತು. ಇದೀಗ ಸಂಸದೆ ಸುಮಲತಾ ಒಪ್ಪಿಗೆ ಪಡೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಯಾವುದೇ ಪಕ್ಷದಲ್ಲಿದ್ದರು ಸಚ್ಚಿದಾನಂದ ಬೆಂಬಲಿಸುವುದಾಗಿ ಸುಮಲತಾ ಹೇಳಿಕೊಂಡಿದ್ದರು.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *