ಮಂಡ್ಯದಿಂದ ಬೆಂಗಳೂರಿಗೆ ಸುಮಲತಾ ವಾಪಸ್

ಮಂಡ್ಯ: ನಟಿ ಸುಮಲತಾ ಅಂಬರೀಶ್ ಅವರು ವಿಶ್ರಾಂತಿ ಮೊರೆ ಹೋಗಿದ್ದು, ಲೋಕಸಭಾ ಚುನಾವಣೆಯ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ನಡುವೆ ನಡೆಯುತ್ತಿದ್ದ ಪೈಪೋಟಿಗೆ ತಾತ್ಕಾಲಿಕ ವಿರಾಮ ಸಿಕ್ಕಿದೆ.

ಸುಮಲತಾ ಅವರು ಕೆಲವು ದಿನಗಳಿಂದ ಮಂಡ್ಯದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದರು. ಆದರೆ ಅವರು ವಿಶ್ರಾಂತಿ ಮೊರೆ ಹೋಗಿದ್ದು, ಮಂಡ್ಯದಿಂದ ಬೆಂಗಳೂರಿಗೆ ಸುಮಲತಾ ಅವರು ವಾಪಸ್ಸಾಗಿದ್ದಾರೆ. ಇಂದು ಮತ್ತು ನಾಳೆ ಬೆಂಗಳೂರಲ್ಲೇ ಸುಮಲತಾ ಅವರು ಉಳಿಯುವ ಸಾಧ್ಯತೆ ಇದೆ.

ಇತ್ತ ನಿಖಿಲ್ ಕುಮಾಸ್ವಾಮಿ ಅವರಿಗೂ ಮಂಡ್ಯದಲ್ಲಿ ಯಾವುದೇ ಕಾರ್ಯಕ್ರಮಗಳಿಲ್ಲ. ಹೀಗಾಗಿ ಮಂಡ್ಯದ ರಾಜಕೀಯದಲ್ಲಿ ಸ್ವಲ್ಪ ಮಟ್ಟಿನ ವಿರಾಮ ಸಿಕ್ಕಿದಂತಾಗಿದೆ. ಕಳೆದು ಒಂದು ವಾರದಿಂದ ಮಂಡ್ಯದಲ್ಲಿ ಸುಮಲತಾ ಅಥವಾ ನಿಖಿಲ್ ಇಬ್ಬರಲ್ಲಿ ಒಬ್ಬರು ಬರುತ್ತಿದ್ದರು. ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಮಂಡ್ಯದಲ್ಲಿ ಚುನಾವಣೆ ಕಣ ರಂಗೇರಿತ್ತು.

ಇತ್ತ ಮಂಡ್ಯದಲ್ಲಿ ಸಾಮಾಜಿಕ ಜಾಲತಾಣಗಳಿಲ್ಲಿ ನಿಖಿಲ್ ಕುಮಾರಸ್ವಾಮಿ ಪರ-ವಿರೋಧವಾಗಿ ಟೀಕೆಗಳು ವ್ಯಕ್ತವಾಗುತ್ತಿದೆ. ದೇವೇಗೌಡರು ಟೀಂ ಇಂಡಿಯಾ ಕಟ್ಟುತ್ತಿದ್ದರೆ ಅವರ ಇಡೀ ಕುಟುಂಬ ಟೀಂ ಇಂಡಿಯಾದಲ್ಲಿರುತ್ತಿತ್ತು ಎಂದು ಹೇಳುವಂತಹ ಫೋಟೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *