ಬಿಜೆಪಿ ಮುಖಂಡರ ಭೇಟಿಯಲ್ಲಿ ಸುಮಲತಾ ಮಾತಿನ ಬಗ್ಗೆ ಶಿವಲಿಂಗಯ್ಯ ಸ್ಪಷ್ಟನೆ

ಮಂಡ್ಯ: ನಟಿ ಸುಮಲತಾ ಅವರು ಗುರುವಾರ ರಾತ್ರಿ ಬಿಜೆಪಿ ಮುಖಂಡರಾದ ಮೀರಾ ಶಿವಲಿಂಗಯ್ಯ ಅವರ ಮನೆಗೆ ಭೇಟಿ ಮಾಡಿರುವ ಕುರಿತು ಇದೀಗ ಬಿಜೆಪಿಯ ಮುಖಂಡ ಶಿವಲಿಂಗಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮೀರಾ ಪತಿ ಶಿವಲಿಂಗಯ್ಯ, ಸುಮಲತಾ ಅವರು ರಾತ್ರಿ ನಮ್ಮ ಮನೆಗೆ ಭೇಟಿ ಕೊಟ್ಟಿದ್ದರು. ನಾನು ಕಾಂಗ್ರೆಸ್ ಟಿಕೆಟ್ ಕೇಳುತ್ತಿದ್ದೇನೆ. ಒಂದು ವೇಳೆ ಕಾಂಗ್ರೆಸ್ ಟಿಕೆಟ್ ಸಿಕ್ಕಿಲ್ಲ ಅಂದ್ರೆ ನಾನು ಪಕ್ಷೇತರಳಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಹೀಗಾಗಿ ನೀವು ನಮಗೆ ಸಪೋರ್ಟ್ ಮಾಡಬೇಕು ಎಂದು ಕೇಳಿದ್ದಾರೆ ಎಂದು ಹೇಳಿದ್ರು. ಇದನ್ನೂ ಓದಿ: ರಾತ್ರಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ್ರು ಸುಮಲತಾ..!

ಕಾಂಗ್ರೆಸ್ ನಲ್ಲಿ ಟಿಕೆಟ್ ಸಿಕ್ಕಿಲ್ಲ ಅಂದ್ರೆ ಬಿಜೆಪಿಗೆ ಬನ್ನಿ ನಾವು ಬೆಂಬಲ ಕೊಡುತ್ತೇವೆ ಎಂದು ಹೇಳಿದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷದ ಮತಗಳ ದೃಷ್ಟಿಯಿಂದ ಬಿಜೆಪಿಗೆ ಸೇರ್ಪಡೆಯಾಗಲು ಸುಮಲತಾ ನಿರಾಕರಿಸಿದರು. ನಾನು ಇನ್ನೂ ಕಾಂಗ್ರೆಸ್ ಪಕ್ಷದ ಟಿಕೆಟ್ ನಿರೀಕ್ಷೆಯಲ್ಲಿದ್ದೇನೆ. ಮಂಡ್ಯ ಜನ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹೇಳುತ್ತಿದ್ದಾರೆ. ಹೀಗಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸೋದಾಗಿ ಸಮಲತಾ ಅವರು ಹೇಳಿರುವುದಾಗಿ ತಿಳಿಸಿದ್ದಾರೆ.

ಸುಮಲತಾ ಅವರಿಗೆ ಬಿಜೆಪಿ ಸಪೋರ್ಟ್ ಮಾಡುವ ಬಗ್ಗೆ ಪಕ್ಷದ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. ಆದರೆ ನಮ್ಮ ಪಕ್ಷದ ಹಿತದೃಷ್ಟಿಯಿಂದ ಬಿಜೆಪಿಗೆ ಬನ್ನಿ ಎಂದು ಆಹ್ವಾನ ನೀಡಿದ್ದು ನಿಜ ಎಂದು ಶಿವಲಿಂಗಯ್ಯ ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *