ರಾಜ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಿದ ಸುಮಲತಾ

ಬೆಂಗಳೂರು: ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಇಂದು ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಆಯುಕ್ತ ಸಂಜೀವ್ ಕುಮಾರ್ ರೊಂದಿಗೆ ಮಾತುಕತೆ ನಡೆಸಿದರು.

ಆಯುಕ್ತರ ಭೇಟಿ ಬಳಿಕ ಮಾತನಾಡಿದ ಸುಮಲತಾ ಅವರು, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಕ್ರಮಬದ್ಧ ಆಗಿಲ್ಲ ಎಂದು ಆಯೋಗಕ್ಕೆ ದೂರು ಕೊಟ್ಟಿದ್ದೇವು. ಇದರ ತನಿಖೆ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ಕೊಡಲು ಬಂದಿದ್ದೇವೆ. ನಾಮಪತ್ರ ಸಲ್ಲಿಕೆ ವೀಡಿಯೋ ಟ್ಯಾಂಪರಿಂಗ್ ಮಾಡಿದ್ದಾರೆ. ಇದರ ಬಗ್ಗೆ ಇನ್ನಷ್ಟು ದಾಖಲೆ ಕೇಳಿದ್ದೇವು. ಆದರೆ ದಾಖಲೆ ನಮಗೆ ಇನ್ನೂ ಕೊಟ್ಟಿಲ್ಲ. ಹಾಗಾಗಿ ಇದನ್ನು ಮುಖ್ಯ ಚುನಾವಣಾ ಆಯುಕ್ತರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

ಚುನಾವಣಾ ಪ್ರಚಾರ ನಡೆಸಲು ನಮಗೆ ರಾತ್ರಿ 9.30ಕ್ಕೆ ಅಂತ್ಯ ಮಾಡುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕಿದ್ದಾರೆ. ಆದರೆ ಮತ್ತೊಂದು ಕಡೆ ಜೆಡಿಎಸ್ ಅಭ್ಯರ್ಥಿ ರಾತ್ರಿ 11 ಗಂಟೆ ವರೆಗೂ ಪ್ರಚಾರ ಮಾಡುತ್ತಾರೆ. ಇದನ್ನು ಚುನಾವಣಾಧಿಕಾರಿಗಳು ನಿಲ್ಲಿಸ್ತಿಲ್ಲ. ಜೆಡಿಎಸ್ ಅಭ್ಯರ್ಥಿ ಪ್ರಚಾರ ಅವಧಿ ಮುಗಿದ ನಂತರವೂ ನಡೆಯುತ್ತಿರುತ್ತದೆ. ಆದರೆ ಚುನಾವಣಾ ಅಧಿಕಾರಿಗಳು ವೀಕ್ಷಕರಾಗಿ ನೋಡುತ್ತಾರೆ ಹೊರತು ಅವರ ಪ್ರಚಾರ ನಿಲ್ಲಿಸಲ್ಲ. ಈ ಬಗ್ಗೆಯೂ ಕೂಡ ಮುಖ್ಯ ಚುನಾವಣಾ ಆಯುಕ್ತರ ಗಮನಕ್ಕೆ ತಂದಿದ್ದೇವೆ ಎಂದರು.

Comments

Leave a Reply

Your email address will not be published. Required fields are marked *