ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನಟ ಕಾರ್ತಿ, ಸೂರ್ಯರಿಂದ 10 ಲಕ್ಷ ರೂ. ದೇಣಿಗೆ

ಚೆನ್ನೈ: ತಮಿಳು ನಟ ಸೂರ್ಯ ಹಾಗೂ ಅವರು ಸಹೋದರ ಕಾರ್ತಿ ಅವರು ಕೇರಳ ಹಾಗೂ ಕರ್ನಾಟಕ ಪ್ರವಾಹ ಸಂತ್ರಸ್ತರಿಗಾಗಿ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಈ ವರ್ಷ ಕರ್ನಾಟಕ ಹಾಗೂ ಕೇರಳದಲ್ಲಿ ಪ್ರವಾಹ ಎದುರಾಗಿದ್ದು, ದೇಶ್ಯಾದ್ಯಂತ ಹಲವು ಜನರು ಪ್ರವಾಹ ಸಂತ್ರಸ್ತರ ನೆರವಿಗೆ ಬಂದಿದ್ದಾರೆ. ಈಗ ನಟರಾದ ಸೂರ್ಯ ಹಾಗೂ ಕಾರ್ತಿ ಪ್ರವಾಹ ಸಂತ್ರಸ್ತರಿಗಾಗಿ 10 ಲಕ್ಷ ರೂ. ಸಹಾಯಧನ ನೀಡಿದ್ದಾರೆ. ಸೂರ್ಯ ಹಾಗೂ ಕಾರ್ತಿ ಹಲವು ಚಾರಿಟಿ ಕೆಲಸಗಳನ್ನು ಮಾಡುತ್ತಿದ್ದಾರೆ. ಅಲ್ಲದೆ ಕಷ್ಟದಲ್ಲಿ ಇರುವವರಿಗೆ ಸಹಾಯಧನ ನೀಡುತ್ತಾರೆ. ಕಳೆದ ವರ್ಷ ಕೇರಳದಲ್ಲಿ ಆದ ಪ್ರವಾಹಕ್ಕೆ ಕಾರ್ತಿ ಸ್ವತಃ ಸಿಎಂ ಅವರನ್ನು ಭೇಟಿ ಮಾಡಿ 25 ಲಕ್ಷ ರೂ. ಚೆಕ್ ನೀಡಿದ್ದರು.

ಇತ್ತ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಗುರುವಾರ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದರು. ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಅವರು ಸಂತ್ರಸ್ತರಿಗಾಗಿ 5 ಲಕ್ಷ ರೂ. ಚೆಕ್ ನೀಡಿದ್ದರು.

ರಿಯಲ್ ಸ್ಟಾರ್ ಉಪೇಂದ್ರ ಅವರು ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ಸಹಾಯಧನ ನೀಡಿದ್ದರು. ಈ ಬಗ್ಗೆ ಉಪೇಂದ್ರ ಅವರು ತಮ್ಮ ಟ್ವಿಟ್ಟರಿನಲ್ಲಿ, “ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ. ತಾವುಗಳೂ ಪ್ರವಾಹಕ್ಕೆ ಸಿಲುಕಿರುವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದರು.

Comments

Leave a Reply

Your email address will not be published. Required fields are marked *