Tag: ಅಂಗನವಾಡಿ ಕಾರ್ಯಕರ್ತೆ

  • ಒಟ್ಟಿಗೆ ಓದಿದ್ರೂ ಅತ್ಯಾಚಾರ ಮಾಡಲು ಸಹಾಯ- ಕೃತ್ಯದ ವೀಡಿಯೋ ಅತ್ತೆಗೆ ಕಳಿಸಿದ ಕಿರಾತಕರು

    ಲಕ್ನೋ: ಮಹಿಳೆಯ ಮೇಲೆ ನಾಲ್ವರು ಅತ್ಯಾಚಾರ ಮಾಡಿ, ಅದನ್ನು ವೀಡಿಯೋ ಮಾಡಿರುವ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ.

    ಮಹಿಳೆಯೊಬ್ಬಳು ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ತುಂಬಲು ಸಾರ್ವಜನಿಕ ಸೇವಾ ಕೇಂದ್ರಕ್ಕೆ ಹೋಗುತ್ತಿದ್ದಾಗ ಕೇಂದ್ರದ ನಿರ್ವಾಹಕರು, ಕಂಪ್ಯೂಟರ್ ಆಪರೇಟರ್, ಅಂಗಡಿ ಮಾಲೀಕರು ಹಾಗೂ ಮತ್ತೊಬ್ಬರು ಸೇರಿ ಆಕೆಯ ಮೇಲೆ ಅತ್ಯಾಚಾರ ಮಾಡಿಕೊಂಡಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ವೀಡಿಯೋವನ್ನು ಮಾಡಿಕೊಂಡಿದ್ದು, ಆರೋಪಿಗಳಲ್ಲಿ ಒಬ್ಬಾತ ಆ ವೀಡಿಯೋವನ್ನು ಆಕೆಯ ಅತ್ತೆಗೆ ಕಳುಹಿಸಿದ್ದಾನೆ. ಆಗ ಈ ವಿಷಯ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಫ್ಲ್ಯಾಶ್‌ಲೈಟ್‌ನಲ್ಲಿ ಇಸಿಜಿ ಟೆಸ್ಟ್ ಮಾಡಿದ ಸರ್ಕಾರಿ ಆಸ್ಪತ್ರೆ ವೈದ್ಯರು

    ಘಟನೆ ಸಂಬಂಧಿಸಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ನಾಲ್ವರಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಘಟನೆಯಲ್ಲಿ ಭಾಗಿಯಾಗಿದ್ದ ಆರೋಪಿಗಳೆಲ್ಲರೂ ಮಹಿಳೆಯ ಪೋಷಕರು ವಾಸಿಸುತ್ತಿದ್ದ ಅಲಿಗಢ ಜಿಲ್ಲೆಗೆ ಸೇರಿದ ಹಳ್ಳಿಯವರಾಗಿದ್ದಾರೆ. ಮಹಿಳೆ ಹಾಗೂ ಆರೋಪಿಗಳು ಒಟ್ಟಿಗೆ ಓದಿದ್ದರು ಎಂಬುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಗುಂಡನನ್ನು ಹುಡುಕಿಕೊಟ್ಟವರಿಗೆ 30 ಸಾವಿರ ರೂ. ಬಹುಮಾನ – ಮಗನಂತೆ ಸಾಕಿದ್ದ ಶ್ವಾನಕ್ಕಾಗಿ ಮಹಿಳೆ ಕಣ್ಣೀರು

    Live Tv
    [brid partner=56869869 player=32851 video=960834 autoplay=true]

  • ಒಂಟಿ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಕತ್ತು ಕೊಯ್ದ ಕಿರಾತಕರು – ಕೊಲೆಯ ಹಿಂದೆ ಅನುಮಾನದ ಹುತ್ತ

    ಒಂಟಿ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಕತ್ತು ಕೊಯ್ದ ಕಿರಾತಕರು – ಕೊಲೆಯ ಹಿಂದೆ ಅನುಮಾನದ ಹುತ್ತ

    ಚಿಕ್ಕಬಳ್ಳಾಪುರ: ಅಂಗವಾಡಿಯಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡ್ತಿದ್ದ ಒಂಟಿ ಮಹಿಳೆ ಮನೆಗೆ ನುಗ್ಗಿ ಕಿರಾತಕರು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ವೆಂಕಟಲಕ್ಷ್ಮಮ್ಮ(50) ಕೊಲೆಯಾದ ದುರ್ದೈವಿ. ಗಂಡನಿಂದ ದೂರವಾಗಿ ಕಳೆದ ಕೆಲವು ವರ್ಷಗಳಿಂದ ವೆಂಕಟಲಕ್ಷ್ಮಮ್ಮ ಒಬ್ಬಂಟಿ ಜೀವನ ಸಾಗಿಸ್ತಿದ್ದರು. ಮನೆಯ ಕೆಲಸಗಳನ್ನು ಮುಗಿಸಿ ಅಂಗನವಾಡಿಗೆ ಹೋಗಬೇಕು ಎಂದು ಮನೆಯಿಂದ ಹೊರ ಹೋಗುವಷ್ಟರಲ್ಲಿ ದುಷ್ಕರ್ಮಿಗಳು ಮನೆಗೆ ನುಗ್ಗಿ ವೆಂಕಟಲಕ್ಷ್ಮಮ್ಮನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿ ಹೋಗಿದ್ದಾರೆ. ಕೊಲೆಯ ಹಿಂದೆ ಹಲವಾರು ಅನುಮಾನಗಳು ಮೂಡಿವೆ. ಇದನ್ನೂ ಓದಿ: ಪ್ರೇಯಸಿಯನ್ನು ಚಾಕುವಿನಿಂದ ಇರಿದು ಪೊಲೀಸರಿಗೆ ಶರಣಾದ

    ಹಿನ್ನೆಲೆ ಏನು?
    ವೆಂಕಟಲಕ್ಷ್ಮಮ್ಮ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದ ನಿವಾಸಿ. ಇವರಿಗೆ ಮದುವೆಯಾಗಿ ಮಗಳು ಇದ್ದಾಳೆ. ವೆಂಕಟಲಕ್ಷ್ಮಮ್ಮ ನಾಯನಹಳ್ಳಿ ಗ್ರಾಮದ ಪಕ್ಕದಲ್ಲೆ ಇರುವ ಚೊಕ್ಕನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡ್ತಿದ್ದರು. ನಿನ್ನೆ ಅಂಗನವಾಡಿಗೆ ಹೋಗಲು ರೆಡಿಯಾಗಿ ಇನ್ನೇನು ಮನೆಯಿಂದ ಆಚೆ ಹೋಗಬೇಕಿತ್ತು, ಅಷ್ಟರಲ್ಲೆ ದುಷ್ಕರ್ಮಿಗಳ ಕೈಗೆ ಸಿಲುಕಿ ಕೊಲೆಯಾಗಿದ್ದಾರೆ.

    1991 ರಲ್ಲಿ ವೆಂಕಟಲಕ್ಷ್ಮಮ್ಮ ಅವರಿಗೆ ಪಕ್ಕದ ಗ್ರಾಮ ಕತ್ತರಿಗುಪ್ಪೆಯ ಟಿ.ಆಂಜಪ್ಪನ ಜೊತೆ ಮದುವೆಯಾಗಿ ಮಗಳಿದ್ದಳು. ಆಂಜಪ್ಪ 1998ರಲ್ಲಿ ಹೆಂಡತಿಯನ್ನು ಬಿಟ್ಟು, ಬೇರೆ ಮದುವೆಯಾಗಿ ಬೇರೆ ಗ್ರಾಮದಲ್ಲಿ ಇದ್ದಾನೆ. ಮೃತಳಿಗೆ ಓರ್ವ ಮಗಳಿದ್ದು ಆಕೆ ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ಗಂಡನ ಜೊತೆ ವಾಸವಿದ್ದಾಳೆ. ಕಳೆದ ಎರಡು ದಿನಗಳಿಂದ ವೆಂಕಟಲಕ್ಷ್ಮಮ್ಮ ಅವರಿಗೆ ಆರೋಗ್ಯ ಸಮಸ್ಯೆ ಇದ್ದ ಕಾರಣ ಮಗಳು ಮತ್ತು ಅಳಿಯ ಆಸ್ಪತ್ರೆಗೆ ತೋರಿಸಿ ಮನೆಗೆ ಬಿಟ್ಟಿದ್ದಾರೆ. ಈ ವೇಳೆ ವೆಂಕಟಲಕ್ಷ್ಮಮ್ಮ ಔಷಧಿ ತೆಗೆದುಕೊಳ್ಳುವಂತೆ ನೆನಪಿಸಲು ಅವರಿಬ್ಬರು ಫೋನ್‌ ಮಾಡಿದ್ದಾರೆ.

    ಆದರೆ ವೆಂಕಟಲಕ್ಷ್ಮಮ್ಮ ಅವರು ಫೋನ್ ರಿಸೀವ್ ಮಾಡಿಲ್ಲ. ಇದ್ರಿಂದ ಅನುಮಾನಗೊಂಡ ಮಗಳು ಮತ್ತು ಅಳಿಯ ಮನೆಗೆ ಬಂದು ನೋಡಿದ್ದಾರೆ. ಆಗ ಮನೆಯ ಬಾಗಿಲು ಸ್ವಲ್ಪ ಓಪನ್ ಆಗಿತ್ತು. ಒಳ ಹೋಗಿ ನೋಡಿದ್ರೆ ಮಂಚದ ಮೇಲೆ ವೆಂಕಟಲಕ್ಷ್ಮಮ್ಮ ಅವರ ಶವ ಕಾಣಿಸಿದೆ. ಇದರಿಂದ ಗಾಬರಿಗೊಂಡ ಅವರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ.

    ವೆಂಕಟಲಕ್ಷ್ಮಮ್ಮ ಅವರ ಮುಖ ಹಾಗೂ ಕತ್ತಿಗೆ ಮಾರಕಾಸ್ತ್ರಗಳಿಂದ ತಿವಿದು ಕೊಲೆ ಮಾಡಲಾಗಿದೆ. ಇದ್ರಿಂದ ಯಾರೊ ಪರಿಚಯಸ್ಥರು, ತನ್ನ ಪತ್ನಿಯ ಬಳಿ ಇದ್ದ ಚಿನ್ನಾಭರಣದ ದುರಾಸೆಗೆ ಕೊಲೆ ಮಾಡಿರಬಹುದು ಎಂದು ಮೃತನ ಪತಿ ಅಂಜಪ್ಪ ಹೇಳ್ತಿದ್ದಾರೆ. ಇದನ್ನೂ ಓದಿ: 1,231 ಮಂದಿಗೆ ಕೊರೊನಾ – ಸಿಲಿಕಾನ್ ಸಿಟಿಯಲ್ಲಿಯೇ 1,124 ಪ್ರಕರಣ 

    ವೆಂಕಟಲಕ್ಷ್ಮಮ್ಮ ಕೊಲೆ ಸುದ್ದಿ ತಿಳಿಯುತ್ತಿದ್ದಂತೆ, ಚಿಂತಾಮಣಿ ಗ್ರಾಮಾಂತರ ಪೊಲೀಸರು ಹಾಗೂ ಚಿಕ್ಕಬಳ್ಳಾಪುರ ಎಸ್‍ಪಿ ನಾಗೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗ ಮಹಿಳೆಯ ಕೊಲೆಯ ಸುತ್ತ ಅನುಮಾನಗಳ ಹುತ್ತ ಬೆಳೆದಿದೆ. ಪರಿಚಯಸ್ಥರೆ ವೆಂಕಟಲಕ್ಷ್ಮಮ್ಮ ಕೊಲೆ ಮಾಡಿರುವ ಬಗ್ಗೆ ಸಂಶಯ ಇರುವ ಹಿನ್ನೆಲೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ

    ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ

    ತುಮಕೂರು: ಅಂಗನವಾಡಿ ಕಾರ್ಯಕರ್ತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಣಿಗಲ್ ತಾಲೂಕಿನ ನಾಗೇಗೌಡನ ಪಾಳ್ಯ ಗ್ರಾಮದಲ್ಲಿ ನಡೆದಿದೆ.

    ಗೀತಾ (29) ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ. ಕಾರ್ಯಕರ್ತೆಯು ಹಿಂಬಡ್ತಿ ನೀಡಿದ ಕಾರಣಕ್ಕೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಗೇನಹಳ್ಳಿ ಮಿನಿ ಅಂಗನವಾಡಿ ಕೇಂದ್ರದಿಂದ ಕಟ್ಟಿಗೇನಹಳ್ಳಿ ಕೇಂದ್ರಕ್ಕೆ ಮುಂಬಡ್ತಿ ನೀಡಿತ್ತು. ಮುಂಬಡ್ತಿಯಿಂದ ಹಿಂಬಡ್ತಿ ಆದೇಶ ನೀಡಿದಕ್ಕೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ

    ಗೀತಾ ಅವರು ಮನೆಯಲ್ಲೇ ಸೀರೆಯಿಂದ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಕುಟುಂಬದವರೇ ಅವರು ನೇಣು ಹಾಕಿಕೊಳ್ಳುವುದನ್ನು ಕಂಡು ನೇಣಿನ ಕುಣಿಕೆಯನ್ನ ಬಿಚ್ಚಿದ್ದಾರೆ. ಅವರು ಕಳೆದ ಎರಡು ದಿನಗಳಿಂದಲೂ ಊಟ ಮಾಡದೇ ಇದ್ದರು. ಇದನ್ನೂ ಓದಿ: ಇಂಟಲಿಜೆನ್ಸ್ ಈಶ್ವರಪ್ಪ ಹತ್ರ ಇದೆಯಾ..?- ಪ್ರಿಯಾಂಕ್ ಖರ್ಗೆ ಕಿಡಿ

    ಗೀತಾ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಸಿಡಿಪಿಒ ಅನುಷಾ, ಗಂಗಭೈರಮ್ಮ ವಿರುದ್ಧ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು. ಈಗ ಅವರಿಗೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನೆಯು ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಬಾಲಕಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಅಂಗನವಾಡಿ ಕಾರ್ಯಕರ್ತೆ ಅಮಾನತು

    ಬಾಲಕಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಅಂಗನವಾಡಿ ಕಾರ್ಯಕರ್ತೆ ಅಮಾನತು

    ಕೊಪ್ಪಳ: ಬಾಲಕಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

    ಕನಕಗಿರಿ ಯೋಜನೆಯ ಗುಂಡೂರು ಗ್ರಾಮದ ಅಂಗನವಾಡಿಯ ಸಂಗಮ್ಮ ವಸ್ತ್ರದ್ ಅಮಾನತುಗೊಂಡ ಕೇಂದ್ರದ ಕಾರ್ಯಕರ್ತೆ. ಸಂಗಮ್ಮ ಪುಟಾಣಿ ಬಾಲಕಿ ಮೇಲೆ ಅಮಾನವೀಯವಾಗಿ ಥಳಿಸಿದ್ದರು. ಈ ಸಂಬಂಧ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ ಕನಕಗಿರಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದರೆ ಸಂಗಮ್ಮ ಅಂಗನವಾಡಿಯಲ್ಲಿ ಹಾಗೂ ಗ್ರಾಮದಲ್ಲಿ ಇಲ್ಲದಿರುವ ಕುರಿತು ಅಂಗನವಾಡಿ ಸಹಾಯಕಿ ಹಾಗೂ ಗ್ರಾಮಸ್ಥರಿಂದ ತಿಳಿದು ಬಂದಿದೆ. ಬಳಿಕ ಅಧಿಕಾರಿಗಳು, ಕಾರ್ಯಕರ್ತೆಯನ್ನು ಅಂಗನವಾಡಿಗೆ ಹಾಜರು ಪಡಿಸಿಕೊಳ್ಳದಂತೆ ನಿರ್ಬಂಧ ವಿಧಿಸಿದ್ದಾರೆ.

    ಬಾಲಕಿರ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ವೈದ್ಯಕೀಯ ತಪಾಸಣೆ ಮಾಡಿಸಿ, ಆರೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ. ಕುಟುಂಬದವರಿಗೆ ಸಾಂತ್ವನ ಹೇಳಿ ಮಗುವನ್ನು ಪುನಃ ಅಂಗನವಾಡಿಗೆ ಹಾಜರಾಗುವಂತೆ ಕ್ರಮವಹಿಸಲಾಗಿದೆ. ಅಂಗನವಾಡಿಯಲ್ಲಿ ಪಾಲಕರ ಸಭೆ ನಡೆಸಿ ನಿಯಮಾನುಸಾರ ಕ್ರಮವಹಿಸುವ ಕುರಿತು ಅಧಿಕಾರಿಗಳು ತಿಳಿಸಿದರು.

    ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ಯಕರ್ತೆಯನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಮ್ಮ ಕರ್ತವ್ಯವನ್ನು ಎಚ್ಚರಿಕೆಯಿಂದ ನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಹೇಳಿದರು.

  • ಭಾಗ್ಯಲಕ್ಷ್ಮಿ ಬಾಂಡ್‍ಗೆ 5 ಸಾವಿರ ಲಂಚ – ಅಂಗನವಾಡಿ ಕಾರ್ಯಕರ್ತೆಗೆ ಗ್ರಾಮಸ್ಥರಿಂದ ತರಾಟೆ

    ಭಾಗ್ಯಲಕ್ಷ್ಮಿ ಬಾಂಡ್‍ಗೆ 5 ಸಾವಿರ ಲಂಚ – ಅಂಗನವಾಡಿ ಕಾರ್ಯಕರ್ತೆಗೆ ಗ್ರಾಮಸ್ಥರಿಂದ ತರಾಟೆ

    ಚಿಕ್ಕಬಳ್ಳಾಪುರ: ಅಂಗನವಾಡಿ ಕಾರ್ಯಕರ್ತೆಯ ಬೇಜವಾಬ್ದಾರಿ ನಡತೆಗೆ ಬೇಸತ್ತ ಗ್ರಾಮಸ್ಥರು ಆಕೆಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಬ್ಲೂಡು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವೆಂಕಟಲಕ್ಷ್ಮಮ್ಮ ಅವರ ಮೇಲೆ ಗ್ರಾಮಸ್ಥರು ಆರೋಪ ಮಾಡಿದ್ದು, ಮಕ್ಕಳಿಗೆ ಸರ್ಕಾರದಿಂದ ವಿತರಣೆಯಾಗುವ ಆಹಾರ ಪದಾರ್ಥಗಳನ್ನ ಸರಿಯಾದ ಪ್ರಮಾಣದಲ್ಲಿ ವಿತರಣೆ ಮಾಡುತ್ತಿಲ್ಲ. ಅಲ್ಲದೆ ಅದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಕರ್ತವ್ಯಕ್ಕೂ ಸರಿಯಾಗಿ ಹಾಜರಾಗುವುದಿಲ್ಲ ಎಂದು ದೂರಿದ್ದಾರೆ.

    ಹೆಣ್ಣು ಮಗು ಜನಿಸಿದ್ರೆ ಭಾಗ್ಯಲಕ್ಷ್ಮಿ ಬಾಂಡ್ ಅನ್ನು ಅಂಗನವಾಡಿಯಲ್ಲಿ ವಿತರಣೆ ಮಾಡಲಾಗುತ್ತಿದೆ. ಆದರೆ ಇದರಲ್ಲಿಯೂ ಸಾಕಷ್ಟು ಅವವ್ಯಹಾರ ನಡೆಯುತ್ತಿದೆ ಎಂದು ವೆಂಕಟಲಕ್ಷಮ್ಮ ವಿರುದ್ಧ ದೂರಿದ್ದಾರೆ. ಭಾಗ್ಯಲಕ್ಷ್ಮಿ ಬಾಂಡ್ ಮಾಡಿಸಲು 5 ಸಾವಿರ ಹಣಕ್ಕಾಗಿ ಪೀಡಿಸುವುದಲ್ಲದೆ, ಮಕ್ಕಳ ಹಾಜರಾತಿ ಸರ್ಕಾರಕ್ಕೆ ಹೆಚ್ಚುವರಿಯಾಗಿ ತೋರಿಸಿ ಹೆಚ್ಚಿನ ಪದಾರ್ಥಗಳನ್ನು ಹಾಗೂ ಸೌಲಭ್ಯಗಳು ಪಡೆಯುತ್ತಿದ್ದಾರೆ. ಆಹಾರ ಪದಾರ್ಥಗಳನ್ನು ಮನೆಗೆ ತೆಗೆದುಕೊಂಡು ಹೋಗುತ್ತಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಸದ್ಯ ಅಂಗನವಾಡಿ ಕಾರ್ಯಕರ್ತೆಯನ್ನು ಈ ಬಗ್ಗೆ ಪ್ರಶ್ನಿಸಿದಾಗ ನಾನು ಯಾವುದೇ ಮೋಸ ಮಾಡಿಲ್ಲ. ಇದೆಲ್ಲ ಸುಳ್ಳು ಸುದ್ದಿ ಬೇಕಾದ್ರೆ ಇದುವರೆಗೂ ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ ಮಾಡಿದವರನ್ನು ಕೇಳಿ ಎಂದು ತನ್ನ ಮೇಲೆ ಇದ್ದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

    ಒಟ್ಟಾರೆಯಾಗಿ ಈ ಗ್ರಾಮದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರದ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದು, ಇದರಲ್ಲಿ ಯಾರದ್ದು ತಪ್ಪು ಸರಿ ಎಂಬುದನ್ನು ಮಾತ್ರ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ ಮಕ್ಕಳಿಗೆ ಅನ್ಯಾಯವಾಗದಂತೆ ಕ್ರಮಕೈಗೊಳ್ಳಬೇಕಾಗಿದೆ.

  • ಭಾರತ್ ಬಂದ್ ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಸಾವು

    ಭಾರತ್ ಬಂದ್ ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಸಾವು

    ಕಾರವಾರ: ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದಿದೆ.

    ಮುಂಡಗೋಡು ತಾಲೂಕಿನ ಶಿಡ್ಲಗುಂಡಿ ಗ್ರಾಮದ ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ (57) ಸಾವನ್ನಪ್ಪಿದ ಅಂಗನವಾಡಿ ಕಾರ್ಯಕರ್ತೆ. ಕಾರ್ಮಿಕ ಸಂಘಟನೆಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕರೆ ನೀಡಿದ್ದ ಭಾರತ ಬಂದ್‍ನಲ್ಲಿ ಶಾಂತಾ ಅವರು ಭಾಗವಹಿಸಿದ್ದರು.

    ಪ್ರತಿಭಟನಾಕಾರರು ನಗರದಲ್ಲಿ ಮೆರವಣಿಗೆ ಕೈಗೊಂಡಿದ್ದರು. ಈ ವೇಳೆ ಮೆರವಣಿಗೆ ತಾಲೂಕು ಪಂಚಾಯತಿ ಸಮೀಪಕ್ಕೆ ಬರುತ್ತಿದ್ದಂತೆ ಶಾಂತಾ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ಆಸ್ಪತ್ರೆ ಎದುರು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಸಿಪಿಐ ಶಿವಾನಂದ ಚಲವಾದಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೇಂದ್ರದ ಅನುದಾನದ ಬಳಕೆ ಹೇಗೆ ಆಗಿದೆ ಅನ್ನೋದನ್ನು ಮೊದ್ಲು ತಿಳಿಸಲಿ: ಸಿಎಂಗೆ ಬಿಎಸ್‍ವೈ ತಿರುಗೇಟು

    ಕೇಂದ್ರದ ಅನುದಾನದ ಬಳಕೆ ಹೇಗೆ ಆಗಿದೆ ಅನ್ನೋದನ್ನು ಮೊದ್ಲು ತಿಳಿಸಲಿ: ಸಿಎಂಗೆ ಬಿಎಸ್‍ವೈ ತಿರುಗೇಟು

    ಮೈಸೂರು: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರವನ್ನು ಬೊಟ್ಟು ಮಾಡುತ್ತಿರುವುದು ಸರಿಯಲ್ಲ. ಈ ಕುರಿತು ಮಂಗಳವಾರ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಲಿಶಾವಾದ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ:  ಅಂಗನವಾಡಿ ನೌಕರರಿಂದ ಆಹೋರಾತ್ರಿ ಧರಣಿ – ಬೀದಿಯಲ್ಲೇ ಮಕ್ಕಳ ನಿದ್ದೆ

    ಈ ಬಗ್ಗೆ ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‍ವೈ ಮೊದಲು 14ನೇ ಹಣಕಾಸು ಆಯೋಗದಿಂದ ಕೇಂದ್ರ ಸರ್ಕಾರ ನೀಡಿರುವ ಹಣವನ್ನು ರಾಜ್ಯ ಸರ್ಕಾರ ಯಾವ ಉದ್ದೇಶಕ್ಕೆ ಬಳಸಿಕೊಂಡಿದೆ ಎಂಬುದನ್ನು ತಿಳಿಸಲಿ. ಕೇಂದ್ರ ಸರ್ಕಾರ ನೀಡುವ ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ. ಬಳಿಕ ಸಮಸ್ಯೆ ಎದುರಾದಾಗ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಅಂತಾ ಸಿಎಂ ಆರೋಪಕ್ಕೆ ತಿರುಗೇಟು ನೀಡಿದರು.

    ಇದನ್ನೂ ಓದಿ: ಅಂಗನವಾಡಿ ನೌಕರರ ಧರಣಿ: ಸಾವಿರಾರು ಮಹಿಳೆಯರಿಗೆ ಒಂದೇ ಶೌಚಾಲಯ

    ಸಮಸ್ಯೆಗೆ ರಾಜ್ಯ ಸರ್ಕಾರವೇ ಕಾರಣ: ಅಂಗನವಾಡಿ ಕಾರ್ಯಕರ್ತೆಯರ ಈಗಿನ ಸಮಸ್ಯೆಗೆ ರಾಜ್ಯ ಸರ್ಕಾರವೇ ಕಾರಣ. ಕೇಂದ್ರದಿಂದ ರಾಜ್ಯಕ್ಕೆ ನೀಡುತ್ತಿರುವ ಹಣ ದುರುಪಯೋಗವಾಗುತ್ತಿದೆ. ಕೇಂದ್ರ ಸರ್ಕಾರ ನೀಡುವ ಅನುದಾನವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಗಳಿಗೆ ಬಳಕೆ ಮಾಡುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ರಾಜ್ಯ ಸರ್ಕಾರ ಬೇರೆ ಬೇರೆ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದೆ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವೇ ಹಣ ನೀಡಬೇಕು ಅಂತಾ ಸಂಸದೆ ಶೋಭಾಕರಂದ್ಲಾಜೆ ಆಗ್ರಹಿಸಿದರು.

    ಇದನ್ನೂ ಓದಿ:  ಅಂಗನವಾಡಿ ನೌಕರರ ಪ್ರತಿಭಟನೆಗೆ ಬೆಚ್ಚಿದ ಬೆಂಗಳೂರು – ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್

    ಸರ್ಕಾರ ಹೇಳಿದ್ದೇನು?: ಮಂಗಳವಾರ ವಿಧಾನಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗ್ಗೆ ಚರ್ಚೆ ನಡೆದಿತ್ತು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಮತ್ತು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಅನುದಾನವನ್ನು ಕಡಿತಗೊಳಿಸಿದ್ದರಿಂದ ಈ ಸಮಸ್ಯೆ ಸೃಷ್ಟಿಯಾಗಿದೆ ಎಂದು ಹೇಳಿದ್ದರು.

    ಇದನ್ನೂ ಓದಿ: ಅಂಗನವಾಡಿ ನೌಕರರ ಧರಣಿ- ಹೆಚ್‍ಡಿಕೆ ಭೇಟಿ, ನೊಂದ ಮಹಿಳೆಯರಿಗೆ ಸಾಂತ್ವನ

    ಉಮಾಶ್ರೀ ಮಾತನಾಡಿ, ಯುಪಿಎ ಸರ್ಕಾರ ಇದ್ದಾಗ ಕೇಂದ್ರ ಸರ್ಕಾರ ಶೇ.90ರಷ್ಟು, ರಾಜ್ಯ ಸರ್ಕಾರ ಶೇ.10 ಗೌರವ ಧನ ಕೊಡುತಿತ್ತು. ಆದರೆ ಕೇಂದ್ರ ಸರ್ಕಾರ ಈಗ ಶೇ. 60, ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ 5,200 ರೂ. ಸಹಾಯಧನ ಕೊಡ್ತಿದ್ರೆ, ಕೇಂದ್ರ ಸರ್ಕಾರದ ಪಾಲು 1,800 ರೂ. ಮಾತ್ರ. ಇದರಿಂದಾಗಿ ಒಟ್ಟು 7000 ರೂ ಸಂಬಳ ಸಿಗುತ್ತಿದೆ ಎಂದು ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ: ಹೆಚ್‍ಡಿಕೆ ಆಯ್ತು ಈಗ ಶೆಟ್ಟರ್ ಆಶ್ವಾಸನೆ – ಸದನದಲ್ಲೂ ಶುರುವಾಯ್ತು ಅಂಗನವಾಡಿ ಕೂಗು

    ಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದಿರಾಗಾಂಧಿ ಕಾಲದಲ್ಲಿ ಗೌರವ ಧನ ಕೊಡಲು ಆರಂಭವಾಗಿದ್ದು, ಅಂದಿನಿಂದಲೂ ಕೇಂದ್ರ ಸರ್ಕಾರ ಶೇ.90 ರಷ್ಟು ಗೌರವಧನ ನೀಡುತ್ತಿದೆ. ಆದರೆ ಕೇಂದ್ರ ಸರ್ಕಾರ ಪಾಲು ಕಡಿತಗೊಳಿಸಿದ ಕಾರಣ ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ. ಪ್ರತಿ ವರ್ಷ ನಾವು 500 ರೂ ಹೆಚ್ಚಳ ಮಾಡಿದ್ದೇವೆ. ಆದ್ರೆ 2016-17ರಲ್ಲಿ ಹೆಚ್ಚಳ ಮಾಡಿಲ್ಲ, ಅದು ಕೇಂದ್ರ ಸರ್ಕಾರದ ಕ್ರಮದಿಂದ ಆಗಿಲ್ಲ. ಬರೀ ಮಾತನಾಡಬಹುದು, ಕಾಳಜಿ ತೋರಿಸಬಹುದು.ಆದ್ರೆ ಕೇಂದ್ರ ಸರ್ಕಾರ ಪಾಲು ಕಡಿಮೆ ಮಾಡಿದ್ದು ಯಾಕೆ? ಇದು ಮಹಿಳಾ ಪರ ಕಾಳಜಿನಾ ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

    ಇದನ್ನೂ ಓದಿ: ಸತತ 2ನೇ ದಿನವೂ ಅಂಗನವಾಡಿ ನೌಕರರ ಅಹೋರಾತ್ರಿ ಧರಣಿ

    ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ 7 ಸಾವಿರ ಸಂಬಳ: ಯಾರ ಪಾಲು ಎಷ್ಟು? ಬೇರೆ ರಾಜ್ಯದಲ್ಲಿ ಎಷ್ಟಿದೆ?

  • ಹೆಚ್‍ಡಿಕೆ ಆಯ್ತು ಈಗ ಶೆಟ್ಟರ್ ಆಶ್ವಾಸನೆ – ಸದನದಲ್ಲೂ ಶುರುವಾಯ್ತು ಅಂಗನವಾಡಿ ಕೂಗು

    ಹೆಚ್‍ಡಿಕೆ ಆಯ್ತು ಈಗ ಶೆಟ್ಟರ್ ಆಶ್ವಾಸನೆ – ಸದನದಲ್ಲೂ ಶುರುವಾಯ್ತು ಅಂಗನವಾಡಿ ಕೂಗು

    ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬಳಿಕ ಈಗ ಬಿಜೆಪಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿಯಿಂದ ಧರಣಿ ನಡೆಸುತ್ತಿರೋ ಫ್ರೀಡಂಪಾರ್ಕ್‍ಗೆ ಭೇಟಿ ನೀಡಿದ್ದಾರೆ.

    ಈ ವೇಳೆ 10 ಸಾವಿರ ಸಂಬಳ ನೀಡೋವರೆಗೂ ಜಾಗ ಬಿಟ್ಟು ಕದಲಲ್ಲ ಅಂತ ಅಂಗನವಾಡಿ ಕಾರ್ಯಕರ್ತೆಯರು ಶೆಟ್ಟರ್ ಮುಂದೆಯೂ ಆಕ್ರೋಶ ವ್ಯಕ್ತಪಡಿಸಿದ್ರು. ಸದನ ನಡೆಸೋಕೆ ಬಿಡಬೇಡಿ, ನಮ್ಮ ಸಮಸ್ಯೆ ಮೊದ್ಲು ಬಗೆಹರಿಸಿ ಅಂತ ಒತ್ತಡ ಹಾಕಿದ್ರು. ಆದ್ರೆ ಶೆಟ್ಟರ್ ಈ ಕುರಿತು ನಾವು ಕೇಂದ್ರದಿಂದ ನೆರವು ಕೊಡಿಸೋ ಪ್ರಯತ್ನ ಮಾಡ್ತೀವಿ. ನಮ್ಮ ಸರ್ಕಾರ ಬಂದ್ರೆ ನಿಮ್ಮ ಸಮಸ್ಯೆ ಬಗೆಹರಿಸ್ತೀವಿ ಅಂತ ಅಂದ್ರು.

    ಸದಸನದಲ್ಲೂ ಪ್ರಸ್ತಾಪ: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಬಗ್ಗೆ ಇಂದು ಸದನದಲ್ಲಿ ಬಿಜಿಪಿ ಪ್ರಸ್ತಾಪಿಸಿದ್ದು, ನಿಯಮ 69 ರಡಿ ಚರ್ಚೆಗೆ ಅವಕಾಶ ಮಾಡಿಕೊಡಲಾಗಿದೆ. 10 ಸಾವಿರ ಜನ ರಸ್ತೆಯ ಮೇಲೆ ಇದ್ದಾರೆ. ಅವರ ಕಷ್ಟ ಕೇಳಬೇಕು ಅಂತಾ ಆಗ್ರಹಿಸಲಾಯಿತು. ಈ ವೇಳೆ ಪ್ರಶ್ನೋತ್ತರ ಬಳಿಕ ಚರ್ಚೆಗೆ ಅವಕಾಶ ನೀಡುವುದಾಗಿ ಸ್ಪೀಕರ್ ಭರವಸೆ ನೀಡಿದ್ರು.

    ಇದನ್ನೂ ಓದಿ: ಅಂಗನವಾಡಿ ನೌಕರರಿಂದ ಆಹೋರಾತ್ರಿ ಧರಣಿ – ಬೀದಿಯಲ್ಲೇ ಮಕ್ಕಳ ನಿದ್ದೆ

    ಇದನ್ನೂ ಓದಿ: ಅಂಗನವಾಡಿ ನೌಕರರ ಧರಣಿ: ಸಾವಿರಾರು ಮಹಿಳೆಯರಿಗೆ ಒಂದೇ ಶೌಚಾಲಯ

    ಇದನ್ನೂ ಓದಿ: ಅಂಗನವಾಡಿ ನೌಕರರ ಪ್ರತಿಭಟನೆಗೆ ಬೆಚ್ಚಿದ ಬೆಂಗಳೂರು – ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್

    ಇದನ್ನೂ ಓದಿ: ಅಂಗನವಾಡಿ ನೌಕರರ ಧರಣಿ- ಹೆಚ್‍ಡಿಕೆ ಭೇಟಿ, ನೊಂದ ಮಹಿಳೆಯರಿಗೆ ಸಾಂತ್ವನ

  • ಅಂಗನವಾಡಿ ನೌಕರರ ಧರಣಿ- ಹೆಚ್‍ಡಿಕೆ ಭೇಟಿ, ನೊಂದ ಮಹಿಳೆಯರಿಗೆ ಸಾಂತ್ವನ

    ಅಂಗನವಾಡಿ ನೌಕರರ ಧರಣಿ- ಹೆಚ್‍ಡಿಕೆ ಭೇಟಿ, ನೊಂದ ಮಹಿಳೆಯರಿಗೆ ಸಾಂತ್ವನ

    – ಅನ್ನ ನೀರಿಲ್ಲದೇ ಮಹಿಳೆಯರು ನಿತ್ರಾಣ, ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕಾರ್ಯಕರ್ತೆಯರು

    ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗರದಲ್ಲಿ ಸೋಮವಾರ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಫ್ರೀಡಂ ಪಾರ್ಕ್‍ನಲ್ಲಿ ನಡೆದ ಈ ಧರಣಿಗೆ ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲ ನೀಡಿದ್ದಾರೆ.

    ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಎಚ್‍ಡಿಕೆ, ಪ್ರತಿಭಟನಾಕಾರರ ಅಹವಾಲು ಆಲಿಸಿ ಬೆಂಬಲ ಸೂಚಿಸಿದ್ದಾರೆ. ಬಳಿಕ ಮಾತನಾಡಿದ ಅವರು, ನಿಮ್ಮ ಸೇವೆಗೆ 612 ಕೋಟಿ ರೂ. ಕೊಡಬೇಕು. ಸರ್ಕಾರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕಿತ್ತು. ಸದನದಲ್ಲಿ ನಿಮ್ಮ ಪರ ಮಾತನಾಡ್ತಿನಿ ಅಂತಾ ಭರವಸೆ ನೀಡಿದರು.

    ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರೋ ನಿಮಗೆ ನೀರಿಲ್ಲ. ಹೀಗಾಗಿ ನೀರಿನ ಟ್ಯಾಂಕರ್ ಕಳಿಸುತ್ತೇನೆ. ನಿತ್ಯ ಕರ್ಮದ ವ್ಯವಸ್ಥೆ ಮಾಡಲು ಪೊಲೀಸರಿಗೆ ಸೂಚಿಸುತ್ತೇನೆ. ಕಾಲೇಜಿನಲ್ಲಿ ವ್ಯವಸ್ಥೆ ಕಲ್ಪಿಸಲು ಸೂಚಿಸುತ್ತೇನೆ. ಅಂಗನವಾಡಿ ಸಮಸ್ಯೆಗೆ ಮುಖ್ಯಮಂತ್ರಿ ಬಂದು ಸ್ಪಂದಿಸಬೇಕಿತ್ತು. ಈ ಬಗ್ಗೆ ಸಿಎಂ ಜೊತೆ ದೂರವಾಣಿ ಮೂಲಕ ಮಾತನಾಡ್ತೀನಿ. ನಿಮಗೆ ಆಗಿರೋ ತೊಂದರೆಗೆ ನಾನು ಕ್ಷಮೆಯಾಚಿಸುತ್ತೇನೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆ ನಡೆಸುವಂತೆ ನಡೆದುಕೊಂಡಿರಲಿಲ್ಲ. ಇದೀಗ ನೀವು ಒಪ್ಪಿಕೊಂಡರೆ ತಿಂಡಿ ವ್ಯವಸ್ಥೆ ಮಾಡ್ತೀನಿ ಅಂತಾ ಹೇಳಿದರು.

    ಸರ್ಕಾರದ ವಿರುದ್ಧ ಕಿಡಿ: ತಾಯಿ ಸ್ಥಾನದಲ್ಲಿ ನಿಂತು ಕೆಲಸ ಮಾಡುವ ಇವರ ಕಣ್ಣಲ್ಲಿ ನೀರು ಹಾಕಿಸಿ ಈ ಸರ್ಕಾರ ಏನ್ ಸಾಧನೆ ಮಾಡುತ್ತೆ? ಆ ಭವನ ಈ ಭವನ ಅಂತಾ ಕಟ್ಟುತ್ತಾರೆ. ಅದಕ್ಕೆ ನೂರಾರು ಕೋಟಿ ರೂ. ಹಣ ವ್ಯಯ ಮಾಡ್ತಾರೆ. ಯೋಜನೆ ಹೆಸರಲ್ಲಿ ಸರ್ಕಾರ ಕಮಿಷನ್ ಪಡೆಯುತ್ತದೆ. ಯಾವುದಾದ್ರೂ ಒಂದು ಯೋಜನೆಯ ಕಮಿಷನ್ ನಿಲ್ಲಿಸಿದ್ರೆ ಈ ಅಂಗನವಾಡಿ ಕಾರ್ಯಕರ್ತರ ಬೇಡಿಕೆ ಈಡೇರಿಸಬಹುದು ಅಂತಾ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

    ಮಹಿಳೆಯರನ್ನು ರಸ್ತೆ ಮೇಲೆ ಮಲಗಿಸಿದ್ರೆ ಇವರಿಗೆ ಗೌರವ ಬರುತ್ತಾ? ಸರ್ಕಾರಕ್ಕೆ ಕನಿಕರ ಇಲ್ವಾ? ಅಂತಾ ಕಿಡಿಕಾರಿದ ಎಚ್‍ಡಿಕೆ ಇವರಿಗೆ ಕುಡಿಯುವ ನೀರಿಲ್ಲ ಅಂತಾ ಸಿಎಂ ಆಪ್ತ ಕಾರ್ಯದರ್ಶಿಗೆ ಕರೆ ಮಾಡಿ ಮಾತನಾಡಿದ್ರು.

    ಅನ್ನ, ನೀರು ಇಲ್ಲದೇ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಹೋರಾಟ ನಡೆಸಿದ್ದು, ಕೆಲವು ಮಹಿಳೆಯರು ಹಸಿವಿನಿಂದ ನಿತ್ರಾಣರಾಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸೇರಿದ್ದಾರೆ. ಕಳೆದ 21 ಗಂಟೆಗಳಿಂದ ಅಂಗನವಾಡಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕ ಚಿಕ್ಕ ವಯಸ್ಸಿನ ನೂರಾರು ಮಕ್ಕಳು ಬೀದಿಯಲ್ಲೇ ನಿದ್ದೆಹೋಗಿದ್ದರು. ಅಂಗನವಾಡಿ ನೌಕರರು ರಸ್ತೆಯಲ್ಲಿ ನಿದ್ದೆಗೆ ಜಾರಿದ್ದಾಗ ಸಾವಿರಾರು ಪೊಲೀಸರು ರಕ್ಷಣೆ ನೀಡಿದ್ರು.