Tag: ಅಂಗರಕ್ಷಕ

  • ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವರು- ವಿವಾದದ ಬಳಿಕ ಸೊಂಟ ನೋವೆಂದು ಸಮರ್ಥನೆ

    ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವರು- ವಿವಾದದ ಬಳಿಕ ಸೊಂಟ ನೋವೆಂದು ಸಮರ್ಥನೆ

    ಧಾರವಾಡ: ಸಚಿವ ಹೆಚ್‌ಸಿ ಮಹದೇವಪ್ಪ (HC Mahadevappa) ಅವರು ಅಂಗರಕ್ಷಕನಿಂದ (Bodyguard) ಶೂ (Shoe) ಹಾಕಿಸಿಕೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಈ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಬಳಿಕ ಸಚಿವರು ಸ್ಪಷ್ಟನೆ ನೀಡಿದ್ದಾರೆ.

    ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಂಜನಗೂಡು ಉಪಚುನಾವಣೆಯಲ್ಲಿ ನನಗೆ ಸೊಂಟಕ್ಕೆ ಪೆಟ್ಟಾಗಿತ್ತು. ಒಳಗಡೆ ಕೀವಾಗಿ ಕಾಲು ಅಲುಗಾಡಿಸದಂತಾಗಿತ್ತು. ಅಂದಿನಿಂದ ಸಮಸ್ಯೆ ಇದೆ. ಹೀಗಾಗಿ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡಿರುವುದಾಗಿ ಸಮರ್ಥನೆ ನೀಡಿದ್ದಾರೆ.

    ಈ ಬಗ್ಗೆ ವಿವರಿಸಿದ ಅವರು, ಕುಳಿತರೆ ಬೇಗ ಏಳಲು ಆಗೋದಿಲ್ಲ, ಬಗ್ಗಲು ಕೂಡ ಸಾಧ್ಯವಾಗೋದಿಲ್ಲ. ಎಷ್ಟೋ ಜನ ಕಾಲು ಮುಂದಕ್ಕೆ ಇಟ್ಟು ನಮಸ್ಕಾರ ಮಾಡಿಸಿಕೊಳ್ಳೋರಿದ್ದಾರೆ. ಹಾಗೆ ನಾನು ಮಾಡುವವನಲ್ಲ. ನೀವು ಇದನ್ನು ಗಮನಿಸಿದ್ದು ಸಂತಸ ತಂದಿದೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದಂತಾಗುತ್ತದೆ ಎಂದು ಹೇಳಿದರು.

    ಆಪರೇಷನ್ ಕಮಲ ಬಗ್ಗೆ ಡಿಕೆಶಿ ಹೇಳಿಕೆ ವಿಚಾರವಾಗಿ ಮಾತನಾಡಿದ ಮಹದೇವಪ್ಪ, ನಮ್ಮ ಅಧ್ಯಕ್ಷರಿಗೆ ಮಾಹಿತಿ ಇರುತ್ತೆ. ಹೀಗಾಗಿ ಅವರು ಹೇಳಿರುತ್ತಾರೆ. ನಾನು ಅಧಿಕಾರಿಗಳ ಸಭೆಯಲ್ಲಿದ್ದೇನೆ. ಹೀಗಾಗಿ ಅದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಮಗಿಂತ ಮಾಧ್ಯಮಗಳಿಗೇ ಹೆಚ್ಚು ಮಾಹಿತಿ ಇದೆ ಎಂದರು. ಇದನ್ನೂ ಓದಿ: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಡಿವಿಎಸ್

    ಬಹುಮತವಿಲ್ಲದೇ ಬಿಜೆಪಿ 2 ಸಲ ಅಧಿಕಾರಕ್ಕೆ ಬಂದಿದೆ. ಅದು ಹೇಗೆ ಬಂದಿದ್ದು ಅನ್ನೋದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಇತಿಹಾಸವೇ ಹಾಗಿದೆ. ಆ ಇತಿಹಾಸವನ್ನು ಮಾಧ್ಯಮದವರೇ ಹೇಳಲಿ ಎಂದರು.

    ಇನ್ನು ಬಿಜೆಪಿ ಶಾಸಕರ ಬಗ್ಗೆ ಎಸ್‌ಟಿ ಸೋಮಶೇಖರ್ ಬರದ ಬಗ್ಗೆ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸೋಮಶೇಖರ್ ಸರಿಯಾಗಿಯೇ ಹೇಳಿದ್ದಾರೆ. ಅವರು ಆ ಬಗ್ಗೆ ಕರಾರುವಕ್ಕಾಗಿ ಹೇಳಿದ್ದಾರೆ. ಕೇಂದ್ರಕ್ಕೆ ಹೋಗಿ ಹೇಳಿ ಅಂದಿದ್ದಾರೆ. ಇನ್ನು ಬರದ ಎಲ್ಲ ವರದಿಯನ್ನು ನೀಡಲಾಗಿದೆ. ರಾಜ್ಯದ ಜನರ ಹಿತ ಕಾಯಬೇಕೆಂದಿದ್ದರೆ ಕೇಂದ್ರಕ್ಕೆ ಕೇಳಲಿ. ಸಂಕಷ್ಟದಲ್ಲಿರೋ ರೈತರಿಗೆ ಪರಿಹಾರ ಕೊಡಬೇಕೆಂದರೆ ಕೇಂದ್ರವನ್ನು ಕೇಳಲಿ. 4,000 ಕೋಟಿ ರೂ. ಹಣ ಕೇಳಲಾಗಿದೆ. ದಯವಿಟ್ಟು ಆ ಹಣವನ್ನು ನೀಡುವಂತೆ ಕೇಳಲಿ ಎಂದು ಅವರು ಹೇಳಿದರು. ಇದನ್ನೂ ಓದಿ: ನವೆಂಬರ್ ಒಳಗೆ ಜಾತಿ ಜನಗಣತಿ ಬಿಡುಗಡೆ ಮಾಡದಿದ್ರೆ ಸಿಎಂಗೆ ಸಾಧು ಸಂತರ ಶಾಪ: ಈಶ್ವರಪ್ಪ

  • ಕೆಜಿಎಫ್ ಎಸ್‍ಪಿ ಅಂಗರಕ್ಷಕನ ಮೇಲೆ ಹಲ್ಲೆ – ಐವರ ಬಂಧನ

    ಕೆಜಿಎಫ್ ಎಸ್‍ಪಿ ಅಂಗರಕ್ಷಕನ ಮೇಲೆ ಹಲ್ಲೆ – ಐವರ ಬಂಧನ

    ಕೋಲಾರ: ಕೆಜಿಎಫ್ ಜಿಲ್ಲಾ ವರಿಷ್ಠಾಧಿಕಾರಿ ಅಜ್ಜಪ್ಪನಹಳ್ಳಿ ರಸ್ತೆಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಐವರು ದುಷ್ಕರ್ಮಿಗಳು ಬೈಕ್‍ನಲ್ಲಿ ಬಂದು ಅಂಗರಕ್ಷನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ.

    ಕೆಜಿಎಫ್ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಗರನ್ ಈ ಸಂಬಂಧ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದು, ನನ್ನ ಬೆಂಗಾವಲು ಸಿಬ್ಬಂದಿ ಮುನಿರತ್ನ ಅವರ ಮೇಲೆ ಐವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಚಿನ್ನಾಭರಣ ದೋಚಲು ಯತ್ನಿಸಿದ್ದಾರೆ. ನನ್ನ ಮೇಲೆ ಹಲ್ಲೆ ನಡೆದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ರೈತರೊಂದಿಗೆ ಒಂದು ದಿನ ಕಾರ್ಯಕ್ರಮಕ್ಕೆ ಚಾಲನೆ – ಕಬ್ಬು ನಾಟಿ ಮಾಡಿದ ಕೌರವ

    ಇಲಕ್ಕಿಯಾ ಅವರ ಅಂಗರಕ್ಷಕನ ಮೇಲೆ ದುಷ್ಕರ್ಮಿಗಳು ಭಾನುವಾರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಂಗರಕ್ಷಕ ಮುನಿರತ್ನಂ ಹಲ್ಲೆಗೊಳಗಾಗಿದ್ದು, ಭಾನುವಾರ ಸಂಜೆ ಬಂಗಾರಪೇಟೆಯಿಂದ ಬೈಕ್ ನಲ್ಲಿ ಕೆಜಿಎಫ್‍ಗೆ ಬರುತ್ತಿದ್ದ ವೇಳೆ ಅಜ್ಜಪ್ಪನಹಳ್ಳಿ ಬಳಿ ಬೈಕ್ ಅಡ್ಡಗಟ್ಟಿದ ಐವರು ಚಾಕು ತೋರಿಸಿ ಹಲ್ಲೆ ಮಾಡಿದ್ದಾರೆ.

    ಈ ವೇಳೆ ಗಾಯಗೊಂಡಿದ್ದ ಮುನಿರತ್ನಂ ಅವರನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಈ ಘಟನೆ ಸಂಬಂಧ ಕಾರ್ಯ ಪ್ರೌರುತ್ತರಾದ ಉರಿಗಾಂ ಪೊಲೀಸ್ ಠಾಣಾ ಸರ್ಕಲ್ ಇನ್ಸ್ ಸ್ಪೆಕ್ಟರ್ ವೆಂಕಟರಮಣಪ್ಪ ಹಾಗೂ ಸಿಬ್ಬಂದಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಅವಿನಾಶ್ ರಾಜ್, ಸ್ಯಾಮ್ ಸ್ಟೀಫನ್, ರಂಜಿತ್, ಅಜಯ್ ಮತ್ತು ಪ್ರಕಾಶ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ:  ತಂದೆ ತಾಲಿಬಾನ್ ವಿರೋಧಿಯಾಗಿದ್ದಕ್ಕೆ ಮಗುವನ್ನು ಗಲ್ಲಿಗೇರಿಸಿದ್ರು

    ಇಲಕ್ಕಿಯಾ ಅವರು ಭಾನುವಾರ ರಾತ್ರಿ ಕೆಜಿಎಫ್‍ನ ಅಜ್ಜಪನಹಳ್ಳಿ ರಸ್ತೆಯಲ್ಲಿ ವಾಯುವಿಹಾರಕ್ಕೆ ಹೋಗಿದ್ದಾಗ 5 ಮಂದಿ ದುಷ್ಕರ್ಮಿಗಳು ಬೈಕ್‍ಗಳಲ್ಲಿ ಹಿಂಬಾಲಿಸಿ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ್ದಾರೆ ಎಂದು ಸೋಮವಾರ ಸಂಜೆ ವದಂತಿ ಹಬ್ಬಿತ್ತು.