Tag: ಅಂಗಾರ

  • ದಕ್ಷಿಣ ಕನ್ನಡದಲ್ಲಿ ದಾಖಲೆ ಬರೆದ ಸುಳ್ಯದ ಎಸ್ ಅಂಗಾರ

    ದಕ್ಷಿಣ ಕನ್ನಡದಲ್ಲಿ ದಾಖಲೆ ಬರೆದ ಸುಳ್ಯದ ಎಸ್ ಅಂಗಾರ

    ಮಂಗಳೂರು: ಸೋಲಿಲ್ಲದ ಸರದಾರ, ಸುಳ್ಯದ ಬಂಗಾರ ಎಂದೇ ಪ್ರಸಿದ್ಧಿ ಪಡೆದಿರುವವರು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ (Sulya) ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಅಂಗಾರ. ಸತತ 6 ಬಾರಿ ವಿಧಾನಸಭೆ ಪ್ರವೇಶಿಸಿದ ದ.ಕ. ಜಿಲ್ಲೆಯ ಏಕೈಕ ಬಿಜೆಪಿ ಶಾಸಕ (BJP MLA) ಎಂಬ ಹೆಗ್ಗಳಿಕೆ ಪಡೆದುಕೊಂಡಿರುವವರು ಕೂಡ ಇವರೇ. ಈ ಸಲ ಹಿರಿತನದ ನೆಲೆಯಲ್ಲಿ, ಪಕ್ಷ ನಿಷ್ಠ ಮತ್ತು ಆರ್‌ಎಸ್‌ಎಸ್ ಹಿನ್ನೆಲೆ ಇರುವ ನಿಟ್ಟಿನಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಈ ಮೂಲಕ ಸುಳ್ಯ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಸಚಿವ ಪಟ್ಟ ಅಲಂಕರಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಹೇಳಿ ಕೇಳಿ ಸುಳ್ಯ ಬಿಜೆಪಿಯ ಭದ್ರಕೋಟೆ. ಬಹುಜನ ಸಮಾಜವೇ ಹೆಚ್ಚಿರುವ ಸುಳ್ಯ ಮೊದಲ ವಿಧಾನಸಭಾ ಚುನಾವಣೆಯಿಂದಲೂ ರಾಜ್ಯದ ಏಕೈಕ ದಲಿತ ಮೀಸಲು ಕ್ಷೇತ್ರ. ವಿಧಾನಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಹಲವು ಬಾರಿಯಾದರೂ ಸುಳ್ಯದ ಮೀಸಲಾತಿ ಮಾತ್ರ ಬದಲಾಗಿಲ್ಲ. 1972ರಿಂದ ಇಲ್ಲಿ ಪರಿಶಿಷ್ಟ ಜಾತಿಯವರಿಗೆ ಮಾತ್ರ ಸ್ಪರ್ಧೆಗೆ ಅವಕಾಶ ಇದೆ. 1994ರಿಂದ ಸುಳ್ಯ ಕ್ಷೇತ್ರವನ್ನು ಆಳುತ್ತಿರುವ ಬಿಜೆಪಿ ಪಕ್ಷಕ್ಕೆ ಎಸ್ ಅಂಗಾರ (S Angara) ಒಬ್ಬರೇ ನಾಯಕ. 1994, 1999, 2004, 2008, 2013, 2018 ಹೀಗೆ ಸತತ 6 ಚುನಾವಣೆಗಳಲ್ಲಿ ಬಿಜೆಪಿಯ ಸಚಿವ ಅಂಗಾರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು 2013ರಲ್ಲಿ ದಕ್ಷಿಣ ಕನ್ನಡದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಸೋತಾಗ ಗೆದ್ದ ಏಕೈಕ ವ್ಯಕ್ತಿ ಎಂದರೆ ಅದು ಅಂಗಾರ. ಜಿಲ್ಲೆಯಲ್ಲಿ ಬಿಜೆಪಿಯ ಮಾನ ಉಳಿಸಿದ್ದು ಕೂಡ ಇವರೇ. ಅದಕ್ಕೆ ಅಂಗಾರ ಯಾವತ್ತೂ ಸುಳ್ಯದ ಬಂಗಾರ ಎಂಬ ಮಾತಿದೆ.

    ಸುಳ್ಯ ತಾಲೂಕು ನೆಲ್ಲೂರು ಕೆಮ್ರಾಜೆ ಗ್ರಾಮದ ದಾಸನಕಜೆ ಚನಿಯ ಮತ್ತು ಹುಕ್ರು ಅವರ ಮಗನಾಗಿ ಜುಲೈ 1, 1964 ರಲ್ಲಿ ಜನಿಸಿದ ಅಂಗಾರ ಅವರು ಕಡುಬಡತನದಲ್ಲಿ ಬಾಲ್ಯವನ್ನು ಕಳೆದರು. ಹೀಗಾಗಿ ಪ್ರೌಢಶಾಲೆಯವರೆಗೆ ಶಿಕ್ಷಣ ಪಡೆಯಲಷ್ಟೇ ಸಾಧ್ಯವಾಯ್ತು. ಶಾಲಾ ದಿನಗಳಲ್ಲೇ ನಾಯಕತ್ವದ ಗುಣ ಹೊಂದಿದ್ದ ಅಂಗಾರ ಅವರು ಓದಿನ ಜತೆಗೆ ಕೂಲಿ ಕೆಲಸವನ್ನು ಕೂಡ ಮಾಡುತ್ತಿದ್ದರು. ಅದರ ಜತೆಗೆ ಹೋರಾಟದ ಮನೋಭಾವ, ಪ್ರಾಮಾಣಿಕತೆ ಕೂಡ ಅವರಲ್ಲಿ ಇತ್ತು.

    ಬಡತನ, ಕೂಲಿ ಕೆಲಸ ವಿದ್ಯಾಭ್ಯಾಸದ ನಡುವೆ ಅಂಗಾರರಿಗೆ ಸಮಾಜ ಸೇವೆ ಮಾಡುವ ತುಡಿತ ಇತ್ತು. ಆ ತುಡಿತವೇ ಮುಂದೆ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಸೇರಲು ಪ್ರೇರಣೆಯಾಯ್ತು. ಇವರಲ್ಲಿದ್ದ ಕ್ರಿಯಾಶೀಲತೆಯನ್ನು ಗುರುತಿಸಿ ತಳೂರು ಚಂದ್ರಶೇಖರ ಸೂಕ್ತ ಪ್ರೋತ್ಸಾಹ ನೀಡಿದರು. ಸಂಘದ ಎಲ್ಲಾ ಶಿಸ್ತು,ಸಂಯಮವನ್ನು ಅಳವಡಿಸಿಕೊಂಡ ಅಂಗಾರ ರಾಜಕೀಯ ಕ್ಷೇತ್ರಕ್ಕೆ ಕಾಲಿಡಲು ಹೆಚ್ಚು ಒತ್ತು ನೀಡಿದವರು ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ. ಆರ್‌ಎಸ್‌ಎಸ್ ಕಾರ್ಯಕರ್ತರಾಗಿದ್ದ ಅಂಗಾರ ಅವರು 1979ರಲ್ಲಿ ಬಿಜೆಪಿ ಕಾರ್ಯಕರ್ತರಾಗಿ ನಿಯೋಜನೆಯಾದರು. ಬಳಿಕ ತಾಲೂಕು ಕಾರ್ಯದರ್ಶಿಯಾಗಿ, ಜಿಲ್ಲಾ ಮತ್ತು ರಾಜ್ಯ ಸಮಿತಿಯ ಸದಸ್ಯರಾಗಿಯೂ ಕರ್ತವ್ಯ ನಿರ್ವಹಿಸಿದರು. ಅಂಗಾರ ಬಿಜೆಪಿಯಲ್ಲಿ ಸಕ್ರೀಯ ಸದಸ್ಯರಾಗಿ, ನಿಷ್ಠಾವಂತರಾಗಿ ಇರುವುದನ್ನು ಗುರುತಿಸಿದ ಹಿರಿಯರು 1989ರಲ್ಲಿ ಚುನಾವಣಾ ಕಣಕ್ಕಿಳಿಸಿದರು. ಪ್ರಪ್ರಥಮ ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದ ಅಂಗಾರ ಕಾಂಗ್ರೆಸ್ ಅಭ್ಯರ್ಥಿ ಕೆ ಕುಶಲ ಅವರ ಎದುರು ಅಲ್ಪ ಮತಗಳಿಂದ ಸೋಲು ಕಂಡರು.

    1989ರ ಚುನಾವಣೆಯ ಸೋಲನ್ನೇ ಸೋಪಾನ ಎಂದೆನಿಸಿಕೊಂಡ ಅಂಗಾರ ಮತ್ತೆ 1994ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಕಾಂಗ್ರೆಸ್ ಅಭ್ಯರ್ಥಿ ಕುಶಲ ಅವರ ಎದುರು ಸ್ಪರ್ಧಿಸಿ ಗೆಲುವು ಕಂಡರು. ಈ ಮೂಲಕ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು. ಮತ್ತೆ ಹಿಂತಿರುಗಿ ನೋಡಲೇ ಇಲ್ಲ. ಅಂದಿನಿಂದ ಇಂದಿನವರೆಗೆ ಗೆಲ್ಲುತ್ತಲೇ ಬಂದಿರುವ ಅಂಗಾರ ಸೋಲಿಲ್ಲದ ಸರದಾರ ಮಾತ್ರವಲ್ಲ ಸುಳ್ಯದ ಬಂಗಾರ ಎನಿಸಿಕೊಂಡರು.

    ರಾಜಕೀಯ ಜೀವನ, ಸಮಾಜ ಸೇವೆಯ ನಡುವೆಯೇ 1997 ರ ಜೂನ್ 11 ರಂದು ಉಡುಪಿಯ ಕೋಟೆ ಗ್ರಾಮದ ವೇದಾವತಿ ಎಂಬವರನ್ನು ವರಿಸಿದರು. ದಂಪತಿಗೆ ಪೂಜಾಶ್ರಿ ಮತ್ತು ಗೌತಮ್ ಎಂಬ ಮಕ್ಕಳಿದ್ದಾರೆ. ಸಿಗುವ ಸ್ವಲ್ಪ ಸಮಯವನ್ನು ಕುಟುಂಬದ ಜತೆ ಕಳೆಯುತ್ತಾರೆ.

    ಉನ್ನತ ಸ್ಥಾನದಲ್ಲಿ ಇದ್ದರೂ ಇಂದಿಗೂ ಮನೆಯ ಕೃಷಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಮಾನ್ಯ ರೈತನಂತೆ ಬದುಕುತ್ತಿರುವ ಅಂಗಾರರದ್ದು ಸರಳ ಜೀವನ, ವಿಧಾನಸೌಧಕ್ಕೆ ಕೆಲವೊಮ್ಮೆ ಬಸ್‌ನಲ್ಲೇ ಹೋಗಿ ಬರುತ್ತಾರೆ. ಶಾಸಕರ ಭವನದಲ್ಲಿ ತಾವೇ ಅಡುಗೆ ಮಾಡಿ ಊಟ ಮಾಡುತ್ತಾರೆ. ಇದು ಅವರ ಸಜ್ಜನಿಕೆ ಮತ್ತು ಸರಳತೆ. ಇದನ್ನೂ ಓದಿ: ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳನ್ನು ನೀಡಿದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರ

    ಅಂಗಾರದ್ದು ಮಾತು ಕಡಿಮೆ ಕೆಲಸ ಜಾಸ್ತಿ. ಸುಳ್ಯ ವಿಧಾನಸಭಾ ಕ್ಷೇತ್ರವು ಬಹುತೇಕ ಕಾಡು, ನದಿ ಬೆಟ್ಟಗಳಿಂದ ಕೂಡಿದ ಹಳ್ಳಿಗಾಡು ಪ್ರದೇಶ. ತೀರಾ ಹಿಂದುಳಿದಿದ್ದ ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದು ಸುಲಭದ ಮಾತಾಗಿರಲಿಲ್ಲ. ಅಂಗಾರ ಶಾಸಕರಾದ ಬಳಿಕ ಸುಳ್ಯವು ಬಹಳಷ್ಟು ಅಭಿವೃದ್ಧಿ ಕಂಡಿದೆ. ಪ್ರಾರಂಭದಲ್ಲಿ ಅಭಿವೃದ್ಧಿ ಮಂದಗತಿಯಲ್ಲಿ ಇದ್ದರೂ ಬಳಿಕ ಶಿಕ್ಷಣ, ಸಾಂಸ್ಕೃತಿಕ ಮಾತ್ರವಲ್ಲ ವ್ಯಾಪಾರ, ವಾಣಿಜ್ಯ, ರಸ್ತೆಗಳು ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣುತ್ತಿದೆ.

    ಸತತ 6 ಬಾರಿ ವಿಧಾನಸಭೆ ಪ್ರವೇಶಿಸಿದ ದ.ಕ. ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಎನಿಸಿಕೊಂಡಿರುವ ಅಂಗಾರ ಅವರು ಈ ಹಿಂದೆ 2006ರಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಇದ್ದಾಗ 2008ರಲ್ಲಿ ಬಿಎಸ್‌ವೈ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಸಚಿವ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ ಆದರೆ ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರಿತ್ತು. 2011ರಲ್ಲಿ ಡಿವಿ ಸದಾನಂದ ಗೌಡ ರಾಜ್ಯದ ಮುಖ್ಯಮಂತ್ರಿಯಾದಾಗ ಅಂಗಾರ ಅವರಿಗೆ ಮಂತ್ರಿ ಸ್ಥಾನ ಸಿಕ್ಕೇ ಸಿಗುತ್ತೆ ಎಂದು ಸುಳ್ಯದ ಜನ ಭಾವಿಸಿದ್ದರು. ಏಕೆಂದರೆ ಡಿವಿ ಸದಾನಂದ ಗೌಡ ಅವರು ಸುಳ್ಯದವರು. ಎರಡು ಬಾರಿ ವಿಧಾಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂಗಾರ ಅವರಿಗೆ ಮತ ಹಾಕಿದವರು. ಇದನ್ನೂ ಓದಿ: ಆಮ್ ಆದ್ಮಿ ಪಕ್ಷದಿಂದ ಯುವ ನಿರ್ದೇಶಕ, ನಟನಿಗೆ ಟಿಕೆಟ್ ಘೋಷಣೆ

    1957ರಲ್ಲಿ ವಿಧಾನಸಭೆ ಚುನಾವಣೆ ಶುರುವಾದಾಗ ಸುಳ್ಯ ವಿಧಾನಸಭೆ ಕ್ಷೇತ್ರ ಎಂದು ಪ್ರತ್ಯೇಕ ಕ್ಷೇತ್ರ ಇರಲಿಲ್ಲ. ಆಗ ಪುತ್ತೂರು ವಿಧಾನಸಭೆ ಕ್ಷೇತ್ರದೊಂದಿಗೆ ದ್ವಿಸದಸ್ಯ ಕ್ಷೇತ್ರವಾಗಿ ಸುಳ್ಯ ಇತ್ತು. 1962ರಲ್ಲಿ ಪುತ್ತೂರು ವಿಧಾನಸಭೆ ಕ್ಷೇತ್ರದ ದ್ವಿಸದಸ್ಯತ್ವ ರದ್ದಾದಾಗ ಸುಳ್ಯ ವಿಧಾನಸಭೆ ಕ್ಷೇತ್ರವನ್ನು ಹುಟ್ಟುಹಾಕಲಾಯ್ತು, ಮಾತ್ರವಲ್ಲ ಸುಳ್ಯವನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲು ಕ್ಷೇತ್ರವನ್ನಾಗಿ ಚುನಾವಣೆ ಆಯೋಗ ಘೋಷಣೆ ಮಾಡಿತ್ತು. ಅಂದಿನಿಂದ ಇಂದಿನವರೆಗೂ ಸುಳ್ಯ ಮೀಸಲು ಕ್ಷೇತ್ರವಾಗಿಯೇ ಉಳಿದಿದೆ.

  • ಸಿದ್ದರಾಮಯ್ಯ ಮುಳುಗುತ್ತಿರುವ ಹಡಗು: ಸಚಿವ ಅಂಗಾರ

    ಸಿದ್ದರಾಮಯ್ಯ ಮುಳುಗುತ್ತಿರುವ ಹಡಗು: ಸಚಿವ ಅಂಗಾರ

    ಉಡುಪಿ: ಸಿದ್ದರಾಮಯ್ಯ ಏನು ಬೇಕಾದರೂ ಹೇಳಬಹುದು. ಮುಳುಗುವ ಹಡಗು ಸಿದ್ದರಾಮಯ್ಯ ಅವರು ಎಂದು ಮೀನುಗಾರಿಕಾ ಬಂದರು ಸಚಿವ ಎಸ್. ಅಂಗಾರ ತಿರುಗೇಟು ನೀಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಲ್ಲಿ ಸ್ಪಷ್ಟತೆ ಇಲ್ಲ. ಬಿಜೆಪಿಗೆ ಸ್ಪಷ್ಟತೆ ಇದೆ. ಉದ್ದೇಶ ವಿಚಾರ ಧಾರೆ ಇದೆ. ಸಿದ್ದರಾಮಯ್ಯ ಮುಳುಗುವ ಸ್ಥಿತಿಯಲ್ಲಿ ಇದ್ದಾರೆ. ಹಾಗಾಗಿ ಎಲ್ಲರೂ ಮುಳುಗಿದಂತೆ ಕಾಣುತ್ತಿರಬಹುದು ಎಂದು ಟಾಂಗ್ ಕೊಟ್ಟರು.

    ಡಿ.ಕೆ. ಶಿವಕುಮಾರ್ ಸಂಪರ್ಕದಲ್ಲಿ ಬಿಜೆಪಿ ಶಾಸಕರು ಇದ್ದು, ರೆಸಾರ್ಟ್‍ನಲ್ಲಿ ಇಬ್ಬರು ಬಿಜೆಪಿಯ ನಾಯಕರು ಡಿಕೆಶಿ ಜೊತೆ ಚರ್ಚೆ ಮಾಡಿದ್ದಾರೆ ಎಂಬ ವಿಚಾರಕ್ಕೆ ಕುರಿತಂತೆ ಪ್ರತಿಕ್ರಿಯಿಸಿ, ಅಪಪ್ರಚಾರ ಏನು ಬೇಕಾದರೂ ಮಾಡಬಹುದು. ನಾಳೆ ನಾನು ಕೂಡ ಡಿಕೆಶಿ ಜೊತೆಗಿದ್ದೇನೆ ಎಂದು ಹೇಳಬಹುದು. ಅಂಗಾರ ಏನು ಎಂದು ಜನಗಳಿಗೆ ಗೊತ್ತುಂಟು. ಹಾಗಾಗಿ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡೋದು ಬೇಡ. ಯತ್ನಾಳ್ ಏನಾದರೂ ಹೇಳಬಹುದು, ಅದನ್ನು ನಂಬಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ ಇದ್ದಾರೆ ಎಂಬ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಂಘಟನೆಯ ವ್ಯವಸ್ಥೆಯಲ್ಲಿ ನಾವೆಲ್ಲ ಅಧಿಕಾರ ಪಡೆದಿದವರು. ನಾವು ಹೇಗೆ ನಡೆದುಕೊಳ್ಳಬೇಕು ಎಂದು ಮೊದಲು ಆಲೋಚಿಸಬೇಕು. ನಾವೇ ಅನಗತ್ಯ ವಿವಾದ ಮಾಡಿದರೆ ಹೊರ ಹೋಗಬೇಕಾಗುತ್ತದೆ ಎಂದು ಸಲಹೆ ನೀಡಿದರು.

    ನಮ್ಮ ತಪ್ಪುಗಳಿಗೆ ಸಂಘಟನೆ ಹೊಣೆಯಾಗುವುದಿಲ್ಲ. ಸಂಘಟನೆಗೆ ನಿಷ್ಠರಾಗಿದ್ದರೆ, ಸಂಘಟನೆ ನಮ್ಮ ಕೈ ಬಿಡುವುದಿಲ್ಲ. ಯಾರಾದರೂ ಸಂಘಟನೆ ಕೈಬಿಡುವಂತೆ ವರ್ತಿಸಿದರೆ ನಾವು ಹೊಣೆಗಾರರಲ್ಲ ಎಂದರು. ಇದನ್ನೂ ಓದಿ: ನಾರಾಯಣ ಗುರುಗಳ ಬಗ್ಗೆ ಪ್ರಧಾನಿ ಸೇರಿದಂತೆ ಎಲ್ಲರಿಗೂ ಗೌರವ ಇದೆ: ಎಸ್.ಅಂಗಾರ

    ಉಸ್ತುವಾರಿ ಹಂಚಿಕೆಯ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಅಂಗಾರ, ನಮ್ಮಲ್ಲಿ ಯಾವ ಅಸಮಾಧಾನವೂ ಇಲ್ಲ. ಎಲ್ಲವು ಪಕ್ಷದ ತೀರ್ಮಾನಕ್ಕೆ ಬಿಟ್ಟದ್ದು. ಉಸ್ತುವಾರಿ ಸಿಗದಿದ್ದರೂ ಚುನಾಯಿತ ಪ್ರತಿನಿಧಿಯಾಗಿ ನನ್ನ ಕೆಲಸ ನಾನು ಮಾಡಬೇಕು. ನನ್ನ ಕ್ಷೇತ್ರದ ಕೆಲಸದ ಜೊತೆ ಹೆಚ್ಚುವರಿಯಾಗಿ ಉಸ್ತುವಾರಿ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: ಗಣರಾಜ್ಯೋತ್ಸವ – ಶಾಲೆಯಲ್ಲಿ ವಿದ್ಯುತ್ ಅವಘಡ, ವಿದ್ಯಾರ್ಥಿ ಸಾವು

  • ಮೈಸೂರಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ ಅನ್ನೋ ಸಿದ್ದರಾಮಯ್ಯ, ತಮ್ಮ ಸರ್ಕಾರ ಇದ್ದಾಗ ಏನು ಮಾಡಿದ್ರು: ಅಂಗಾರ ಪ್ರಶ್ನೆ

    ಮೈಸೂರಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ ಅನ್ನೋ ಸಿದ್ದರಾಮಯ್ಯ, ತಮ್ಮ ಸರ್ಕಾರ ಇದ್ದಾಗ ಏನು ಮಾಡಿದ್ರು: ಅಂಗಾರ ಪ್ರಶ್ನೆ

    ಮಡಿಕೇರಿ: ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ಹದಗೆಟ್ಟು ಹೋಗಿದೆ ಎಂದು ಟೀಕಿಸುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಇದ್ದಾಗ ಅವರು ಏನು ಮಾಡಿದ್ದರು ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್. ಅಂಗಾರ ಪ್ರಶ್ನೆ ಮಾಡಿದ್ದಾರೆ.

    ಮಡಿಕೇರಿಯಲ್ಲಿ ನಡೆಯುತ್ತಿರುವ ಅರೆಭಾಷೆ ದಶವರ್ಷ ಸಂಭ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತಾನಾಡಿದ ಅಂಗಾರ, ಅದೆಲ್ಲಾ ರಾಜಕೀಯವಾಗಿ ಹೇಳೋದೆಲ್ಲಾ ಇದ್ದೇ ಇದೆ. ಕಾಂಗ್ರೆಸ್ ಅವರ ಸರ್ಕಾರದ ಸಂದರ್ಭ ರಾಜ್ಯದಲ್ಲಿ ಏನು ನಡೆದಿತ್ತು ಎನ್ನುವುದು ಎಲ್ಲರಿಗೆ ಗೊತ್ತಿದೆ. ಅದನ್ನು ಸ್ವಲ್ಪ ಅವರು ಯೋಚನೆ ಮಾಡಲಿ. ಈಗ ನಮ್ಮ ಸರ್ಕಾರವಿದೆ ಕಾನೂನು ಸುವ್ಯವಸ್ಥೆಗೆ ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ ಎಂದರು. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾಲಹರಣ ಮಾಡಿಲ್ಲ – ಗೃಹ ಸಚಿವ ಸ್ಪಷ್ಟನೆ

    ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ವಿಷಯದಲ್ಲಿ ರಾಜಕೀಯ ಮಾಡುವುದು ಸರಿ ಅಲ್ಲ. ಕಾಂಗ್ರೆಸ್ ನವರು ನನ್ನ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ ಎನ್ನುವ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ ವಿಚಾರ ಸಂಬಂಧಿಸಿದಂತೆ ನಾನು ವಿಚಾರಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣದ ಸಂತ್ರಸ್ತೆ ತನಿಖೆಗೆ ಸ್ಪಂದಿಸುತ್ತಿಲ್ಲ: ಎಸ್‍ಟಿಎಸ್ ಆರೋಪ

  • ಹಿಂದುತ್ವ ನನ್ನ ಮೊದಲ ಆಯ್ಕೆ ಆಮೇಲೆ ಸಚಿವ, ಶಾಸಕ ಸ್ಥಾನ: ಸುನೀಲ್ ಕುಮಾರ್

    ಹಿಂದುತ್ವ ನನ್ನ ಮೊದಲ ಆಯ್ಕೆ ಆಮೇಲೆ ಸಚಿವ, ಶಾಸಕ ಸ್ಥಾನ: ಸುನೀಲ್ ಕುಮಾರ್

    ಉಡುಪಿ: ಹಿಂದುತ್ವ ಮತ್ತು ಅಭಿವೃದ್ಧಿ ವಿಚಾರದಲ್ಲಿ ರಾಜಿಯೇ ಇಲ್ಲ. ಹಿಂದುತ್ವವೇ ನನ್ನ ಮೊದಲ ಆಯ್ಕೆ. ಸಚಿವ, ಶಾಸಕ ಸ್ಥಾನ ಆ ನಂತರದ ಆಯ್ಕೆ ಎಂದು ಉಡುಪಿ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

    ಹೆಜಮಾಡಿ ಮೂಲಕ ಸುನೀಲ್ ಕುಮಾರ್ ಉಡುಪಿ ಜಿಲ್ಲೆಗೆ ಆಗಮಿಸಿದರು. ಬೆಳ್ಮಣ್ ನಲ್ಲಿ ಸಚಿವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬಿಜೆಪಿ ನಾಯಕರು, ಕಾರ್ಯಕರ್ತರು ಬರಮಾಡಿಕೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುನೀಲ್ ಕುಮಾರ್ ಅವರು, ಸಚಿವನಾಗಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸುತ್ತಿದ್ದೇನೆ. ಉಡುಪಿಗೆ ಬರುತ್ತಿರುವುದು ಸಂತೋಷ, ಭಾವನಾತ್ಮಕ ಕ್ಷಣ. ಕಾರ್ಕಳ ಕ್ಷೇತ್ರದ ಜನ ಮೂರುಬಾರಿ ಆಯ್ಕೆ ಮಾಡಿದ್ದರಿಂದ ಸಚಿವನಾದೆ. ಆದರೆ ಯಾವುದೇ ಹಂತದಲ್ಲೂ ಹಿಂದುತ್ವ ವಿಚಾರದಲ್ಲಿ ರಾಜಿ ಮಾಡುವುದಿಲ್ಲ. ಮೊದಲ ಆಯ್ಕೆ ಹಿಂದುತ್ವ ಮತ್ತು ಅಭಿವೃದ್ಧಿ ಎಂದರು.

    ಪಕ್ಷ ದೊಡ್ಡ ಪ್ರಮಾಣದ ಹೊಣೆಗಾರಿಕೆಯನ್ನು ಹೆಗಲಿಗೇರಿಸಿದೆ. ಸಿಎಂ ಮತ್ತು ಪಕ್ಷದ ಹಿರಿಯರ ನಿರೀಕ್ಷೆಯಿಟ್ಟು ಸ್ಥಾನ ಕೊಟ್ಟಿದ್ದಾರೆ. ಜವಾಬ್ದಾರಿ ನಿಭಾಯಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನಗೆ ಇಷ್ಟದ ಖಾತೆ ಎಂದು ಯಾವುದು ಇಲ್ಲ ಮುಖ್ಯಮಂತ್ರಿಗಳು ಕೊಟ್ಟ ಖಾತೆಯನ್ನು ಜವಾಬ್ದಾರಿಯಿಂದ ನಿಭಾಯಿಸುತ್ತೇನೆ ಎಂದರು. ಇದನ್ನೂ ಓದಿ: ಅಭಿನಂದಿಸಲು ಹಾರ ತುರಾಯಿ ತರಬೇಡಿ, ಪುಸ್ತಕ ತನ್ನಿ: ಸುನೀಲ್ ಕುಮಾರ್

    ಹಿರಿಯರ ಮಾರ್ಗದರ್ಶನದಲ್ಲಿ ಕೆಲಸ
    ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಪಕ್ಷ ಗೌರವ ಕೊಟ್ಟಿದೆ. ಶ್ರೀನಿವಾಸ್ ಶೆಟ್ಟಿಅವರಿಗೆ ಇನ್ನಷ್ಟು ಗೌರವ ಸಿಗಬೇಕು ಎಂಬ ನಿರೀಕ್ಷೆ ಸಹಜ. ಸಚಿವನಾಗಿ ನಾನು ಮಾಡುವ ಕೆಲಸಕ್ಕೆ ಶ್ರೀನಿವಾಸ್ ಶೆಟ್ಟಿ ಬೆಂಬಲ ಬೇಕು. ಸಚಿವ ಶ್ರೀನಿವಾಸ ಪೂಜಾರಿ, ಅಂಗಾರ ಅವರ ಮಾರ್ಗದರ್ಶನದಲ್ಲಿ ನಾನು ನಡೆಯುತ್ತೇನೆ. ಬಿಜೆಪಿ ಹಾಲಾಡಿಯವರನ್ನು ಖಂಡಿತ ಗುರುತಿಸುತ್ತದೆ. ಪಕ್ಷ ಹಾಲಾಡಿಯನ್ನು ಕರೆದು ಮಾತನಾಡಿಸುತ್ತದೆ ಎಂದು ಸುನೀಲ್ ಕುಮಾರ್ ಹೇಳಿದರು.

    ವಿಜಯೇಂದ್ರ ಅವರಿಗೆ ಸೂಕ್ತ ಸ್ಥಾನಮಾನ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಅದನ್ನು ತೀರ್ಮಾನಿಸುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ವಿಚಾರಕ್ಕೆ ಹೆಚ್ಚು ಪ್ರತಿಕ್ರಿಯೆ ನೀಡದ ಅವರು, ನಳಿನ್ ಕುಮಾರ್ ಕಟೀಲ್ ಅವರೇ ನಮ್ಮ ಅಧ್ಯಕ್ಷರು ಎಂದರು.

    ಕಾಪು ಶಾಸಕ ಲಾಲಾಜಿ ಮೆಂಡನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಂಗಳೂರು ಶಾಸಕ ಭರತ್ ಶೆಟ್ಟಿ ಸಚಿವರ ಜೊತೆಗಿದ್ದರು.

  • ತುಂಬಿ ಹರಿಯುವ ನದಿಯಲ್ಲಿ ಗಾಯಾಳು ಮಹಿಳೆಯನ್ನು ಸ್ಟ್ರೆಚ್ಚರ್ ನಲ್ಲಿ ಹೊತ್ತೊಯ್ದರು

    ತುಂಬಿ ಹರಿಯುವ ನದಿಯಲ್ಲಿ ಗಾಯಾಳು ಮಹಿಳೆಯನ್ನು ಸ್ಟ್ರೆಚ್ಚರ್ ನಲ್ಲಿ ಹೊತ್ತೊಯ್ದರು

    -ಸಚಿವ ಅಂಗಾರ ಕ್ಷೇತ್ರದ ದುರವಸ್ಥೆ

    ಮಂಗಳೂರು: ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರ ಕ್ಷೇತ್ರದಲ್ಲಿ ತುಂಬಿ ಹರಿಯುವ ನದಿಯಲ್ಲಿ ಗಾಯಾಳು ಮಹಿಳೆಯನ್ನು ಸ್ಟ್ರೆಚರ್ ನಲ್ಲಿ ಎತ್ತಿಕೊಂಡು ಹೋದ ಘಟನೆ ಇಂದು ನಡೆದಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರಿನ ಮರಸಂಕ ಎಂಬಲ್ಲಿನ ನಿವಾಸಿ ದೇವಕಿಯವರು ಮನೆಯಲ್ಲಿ ಕಾಲು ಜಾರಿ ಬಿದ್ದು, ಕಾಲು ಮುರಿತಕ್ಕೊಳಗಾಗಿದ್ದರು. ಆದರೆ ಚಿಕಿತ್ಸೆಗಾಗಿ ನಗರಕ್ಕೆ ಹೋಗಬೇಕಾದರೆ ಮರಸಂಕದಲ್ಲಿರುವ ಕಿರುನದಿಯನ್ನು ದಾಟಿ ಹೋಗಬೇಕು. ಈ ನದಿಗೆ ಸೇತುವೆಯೇ ಇಲ್ಲ. ಆದ್ದರಿಂದ ತುಂಬಿ ಹರಿಯುವ ಹೊಳೆಯನ್ನೇ ದಾಟಿ ಹೋಗಬೇಕು. ಹೀಗಾಗಿ ತುಂಬಿ ಹರಿಯುವ ಹೊಳೆಯಲ್ಲಿ ದೇವಕಿಯವರನ್ನು ಸ್ಥಳೀಯರು ಸ್ಟ್ರೆಚರ್ ನಲ್ಲಿ ಹೊತ್ತುಕೊಂಡು ಹೋದರು. ಬಳಿಕ ಹೊಳೆ ದಾಟಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿದರು. ಇದು ಅಂಗಾರ ಅವರ ಕ್ಷೇತ್ರದ ದುರವಸ್ಥೆಯಾಗಿದೆ.  ಇದನ್ನೂ ಓದಿ: ಅಂಗಾರ ವಿರುದ್ಧ ಭೋಜೇಗೌಡ ಕಿಡಿ – ಡಿಸಿ ಕಚೇರಿ ಬಳಿ ಏಕಾಂಗಿ ಪ್ರತಿಭಟನೆ

    ಜಾಲ್ಸೂರಿನ ಮರಸಂಕದಲ್ಲಿ 9 ಮನೆಗಳಿದ್ದು ಸುಮಾರು 50 ಜನ ವಾಸಿಸುತ್ತಿದ್ದಾರೆ. ಸುಮಾರು ಅರ್ಧ ಕಿಲೋಮೀಟರ್ ಹೊಳೆ ದಾಟಿ ನಡೆದುಕೊಂಡೇ ಹೋಗಬೇಕಾದ ಪರಿಸ್ಥಿತಿ ಇಲ್ಲಿದೆ. ಪಯಸ್ವಿನಿ ನದಿಗೆ ಸೇರುವ ಈ ಹೊಳೆಯಲ್ಲಿ ಬಾರಿ ಮಳೆ ಬರುತ್ತಿರುವಾಗ ನೀರು ಅಪಾಯದ ಮಟ್ಟ ತಲುಪುತ್ತದೆ. ಕಳೆದ ವರ್ಷ ಗರ್ಭಿಣಿಯನ್ನು ಹೊತ್ತುಕೊಂಡು ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಈ ಊರಿನ ಜನ 15 ವರ್ಷದಿಂದ ಸೇತುವೆಗಾಗಿ ಮನವಿ ಮಾಡಿದ್ರೂ ಇಂದಿಗೂ ಸೇತುವೆ ಕನಸಿನ ಭರವಸೆ ಹಾಗೇ ಉಳಿದಿದೆ.

  • ಅಂಗಾರ ವಿರುದ್ಧ ಭೋಜೇಗೌಡ ಕಿಡಿ – ಡಿಸಿ ಕಚೇರಿ ಬಳಿ ಏಕಾಂಗಿ ಪ್ರತಿಭಟನೆ

    ಅಂಗಾರ ವಿರುದ್ಧ ಭೋಜೇಗೌಡ ಕಿಡಿ – ಡಿಸಿ ಕಚೇರಿ ಬಳಿ ಏಕಾಂಗಿ ಪ್ರತಿಭಟನೆ

    ಚಿಕ್ಕಮಗಳೂರು: ಜಿಲ್ಲಾಡಳಿತ ನನ್ನನ್ನು ನಿರ್ಲಕ್ಷ್ಯ ಮಾಡಿದೆ. ಜಿಲ್ಲಾಧಿಕಾರಿ ಉದ್ದೇಶ ಪೂರ್ವಕವಾಗಿ ಮಾಡಿದ್ದರೆ ಪ್ರಿವಿಲೇಜ್ ಮೂವ್ ಮಾಡಿ ಏನೆಂದು ತೋರಿಸುತ್ತಿದ್ದೆ. ಆದರೆ, ಇಲ್ಲಿ ಜಿಲ್ಲಾಧಿಕಾರಿಯನ್ನು ರಾಜಕಾರಣದ ಕೈಗೊಂಬೆ ಮಾಡಿಕೊಂಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಎದುರು ಮಾಧ್ಯಮಗಳೊಂದಿಗೆ ಮಾತನಾಡಿದ ಭೋಜೇಗೌಡರು, ಇಂದು ಜಿಲ್ಲಾಡಳಿತ ನನ್ನನ್ನು ನಿರ್ಲಕ್ಷ್ಯ ಮಾಡಿದೆ. ಯಾವುದೇ ಸಭೆ-ಕಾರ್ಯಕ್ರಮಗಳಿಗೆ ಕರೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿಯಾಗಿ ಕೂತು ಪ್ರತಿಭಟನೆ ನಡೆಸಿದರು.

    ಜಿಲ್ಲಾ ಮಂತ್ರಿಗಳಿಗೆ ಪ್ರೋಟೋಕಾಲ್ ಏನೆಂದು ಗೊತ್ತಿಲ್ಲವೇ? ಎಂಟು ಬಾರಿ ಶಾಸಕರಾಗಿದ್ದಾರೆ, ನಾನು ಹೇಳಿಕೊಡಬೇಕಾ? ಒಂದು-ಎರಡು ಬಾರಿಯಲ್ಲ ಹಲವು ಬಾರಿ ಹೇಳಿದ್ದೇನೆ. ಅವರು ನಮಗೆ ಬುದ್ಧಿ ಹೇಳಬೇಕು. ಸರ್ಕಾರ ಅವರಿಗೆ ಜನರ ದುಡ್ಡಲ್ಲಿ ಎಲ್ಲಾ ಅಧಿಕಾರಿಗಳನ್ನು ನೀಡಿದೆ. ಕೈಗೊಬ್ಬ-ಕಾಲಿಗೊಬ್ಬ ಪಿಎಗಳು ಇದ್ದಾರೆ. ಪಿಎಗಳ ಮೂಲಕ ಶಾಸಕರಿಗೆ ನಿಮ್ಮ ಪ್ರವಾಸದ ಕಾರ್ಯಕ್ರಮವನ್ನು ತಿಳಿಸಲು ಆಗುವುದಿಲ್ಲವೇ? ನಿಮ್ಮ ತಿಂಗಳ ಪ್ರವಾಸದ ಕಾಪಿ ಹಾಕುವುದಿಲ್ಲವೇ, ಕಾರ್ಯಕ್ರಮದ ಕಾಪಿಯನ್ನು ಶಾಸಕರಿಗೆ ಏಕೆ ಕಳಿಸುವುದಿಲ್ಲ ಎಂದು ಸಚಿವ ಅಂಗಾರ ವಿರುದ್ಧ ಕಿಡಿಕಾರಿದ್ದಾರೆ.

    ಆರಂಭದಲ್ಲೇ ಜಿಲ್ಲಾ ಮಂತ್ರಿಗಳಿಗೂ ಹೇಳಿದ್ದೇನೆ. ಪ್ರಾಣೇಶ್ ಇದ್ದರೂ ನಿನ್ನದು ಬರಬೇಕು ಕಣಯ್ಯ ಎಂದಿದ್ದೇನೆ. ಅವರು ಉಪಸಭಾಪತಿ ಗೌರವವಿದೆ, ಸಮಾಧಾನದಲ್ಲಿ ಹೇಳಿದ್ದೇನೆ. ಅಧಿಕಾರಿಗಳ ಸಭೆಗಳಲ್ಲಿ ಭೋಜೇಗೌಡ ಇರುವುದಿಲ್ಲ ಸಭೆಯಲ್ಲಿ ಶಾಸಕರು, ಸಂಸದರು ಕೂತಾಗ ನಮಗೆ ಬೇರೆಯವರು ಕೇಳುತ್ತಾರೆ. ನಾನೊಬ್ಬ ಜನಪ್ರತಿನಿಧಿಯಾಗಿ ಸಭೆಗೆ ಹೋಗಿಲ್ಲ ಅಂದರೆ ಜನ ಏನೆಂದು ತಿಳಿದುಕೊಳ್ಳುತ್ತಾರೆ. ನೀವು ಶಿಷ್ಟಾಚಾರವನ್ನು ಪಾಲನೆ ಮಾಡಿದ್ದೀರಾ? ನಾನು ಶಾಸಕ ಅಲ್ವಾ. 6 ಜಿಲ್ಲೆ 39 ತಾಲೂಕಿನಲ್ಲಿ ನನಗೆ ಪ್ರೋಟೋಕಾಲ್ ಇದೆ ಎಂದು ಹೇಳಿದರು. ಇದನ್ನೂ ಓದಿ: ಉತ್ತಮ ಆಡಳಿತ ಕೊಡುವ ಮನೋಭಾವ ಇದ್ರೆ ಖಾತೆ ಕ್ಯಾತೆ ಬರಲ್ಲ- ಅಸಮಾಧಾನಿತರನ್ನು ಚಿವುಟಿದ ಅಂಗಾರ

    ಇದು ನನ್ನ ನೋಡೆಲ್ ಕ್ಷೇತ್ರ. ನಿಮ್ಮ ಗುಂಪುಗಾರಿಕೆ ಇದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಿ. ಜಿಲ್ಲಾ ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ ನನಗೆ ಅದು ಗೊತ್ತಿದೆ. ಆ ಶಾಸಕರು, ಈ ಶಾಸಕರನ್ನು ಕರೆಯಬಾರದು ಎಂದು ನಿಮ್ಮ ಗುಂಪುಗಾರಿಕೆಯಿಂದ ನಿಮ್ಮ ಪಕ್ಷದ ಕಚೇರಿಯಲ್ಲಿ ಅಥವಾ ಮನೆಯಲ್ಲಿ ಇಟ್ಟುಕೊಳ್ಳಿ ಎಂದು ಹೇಳಿ ಅಂಗಾರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

  • ಮೀನುಗಾರರಿಗೆ ಕೊರೊನಾ ಪರಿಹಾರ ಘೋಷಣೆ ರೂಪುರೇಷೆ ಸಿದ್ದವಾಗಿಲ್ಲ – ಸಚಿವ ಅಂಗಾರ

    ಮೀನುಗಾರರಿಗೆ ಕೊರೊನಾ ಪರಿಹಾರ ಘೋಷಣೆ ರೂಪುರೇಷೆ ಸಿದ್ದವಾಗಿಲ್ಲ – ಸಚಿವ ಅಂಗಾರ

    ಕಾರವಾರ: ರಾಜ್ಯದಲ್ಲಿ ಮೀನುಗಾರರಿಗೆ ಕೊರೊನಾ ಪರಿಹಾರ ಘೋಷಣೆ ವಿಚಾರದಲ್ಲಿ ಇನ್ನೂ ಸರಿಯಾದ ರೂಪುರೇಷೆ ಸಿದ್ದವಾಗಿಲ್ಲ ಎಂದು ಮೀನುಗಾರಿಕೆ ಸಚಿವ ಎಸ್ ಅಂಗಾರ ಹೇಳಿದ್ದಾರೆ. ಇದನ್ನು ಓದಿ: ತುಮಕೂರು, ಎರಡು ಪ್ರತ್ಯೇಕ ಅಪಘಾತ – ನಾಲ್ವರ ಸಾವು

    ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಮತ್ತು ಬೈತಖೋಲ್ ಬಂದರು ಪ್ರದೇಶಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಮೀನುಗಾರರಿಗೆ ಸೂಕ್ತ ಪರಿಹಾರ ಘೋಷಿಸಿರಲಿಲ್ಲ. ಈ ಬಾರಿ ಮುಖ್ಯಮಂತ್ರಿಗಳು ಗಮನ ನೀಡಿದ್ದಾರೆ. ಮೀನುಗಾರರ ಉಳಿತಾಯ ಪರಿಹಾರ ಯೋಜನೆ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಬರುವ ಶುಕ್ರವಾರ ಮೀನುಗಾರಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಫೈನಲ್ ಮಾಡುತ್ತೇವೆ. ಡಿಸೇಲ್, ಸೀಮೆಎಣ್ಣೆ ಸಬ್ಸಿಡಿ ಬಾಕಿ ಇರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಹೆಚ್ಚುವರಿ ಹಣ ಬಿಡುಗಡೆಗೆ ಒತ್ತಾಯಿಸಿದ್ದೇವೆ ಎಂದರು.

    ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವೆಲ್ಲರೂ ಒಂದು ವಿಚಾರದಲ್ಲಿ ಬೆಳೆದು ಬಂದವರು. ನಮಗೆ ನಾಯಕತ್ವದ ಪ್ರಶ್ನೆ ಬರೋದಿಲ್ಲ. ನಾವು ಯಾವ ನಾಯಕತ್ವದಲ್ಲಿ ಇರಲು ಸಿದ್ದರಿದ್ದೇವೆ. ಹಾಗಂತ ಯಡಿಯೂರಪ್ಪ ಅವರನ್ನ ಬದಲಾಯಿಸಲು ಬಯಸುವುದಿಲ್ಲ ಎಂದು ಅಂಗಾರ ಹೇಳಿದರು. ಇದನ್ನು ಓದಿ: ನಮ್ಮಲ್ಲಿ ಯಾವುದೇ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿಲ್ಲ: ಕೇಂದ್ರ ಸಚಿವ ಜೋಶಿ

  • ಪತ್ರಕರ್ತರ ಗ್ರಾಮ ವಾಸ್ತವ್ಯ ನನ್ನ ಕಣ್ಣು ತೆರೆಸಿದೆ, ಎಲ್ಲಾ ಜಿಲ್ಲೆಗಳಲ್ಲಿ ನಡೆಯಲಿ- ಈಶ್ವರಪ್ಪ

    ಪತ್ರಕರ್ತರ ಗ್ರಾಮ ವಾಸ್ತವ್ಯ ನನ್ನ ಕಣ್ಣು ತೆರೆಸಿದೆ, ಎಲ್ಲಾ ಜಿಲ್ಲೆಗಳಲ್ಲಿ ನಡೆಯಲಿ- ಈಶ್ವರಪ್ಪ

    ಮಂಗಳೂರು:ಕುಟುಂಬದ ರೀತಿಯಲ್ಲಿ ಗ್ರಾಮಸ್ಥರನ್ನು ಸೇರಿಸಿ ಅಭಿವೃದ್ಧಿಗೆ ಪೂರಕವಾದ ಈ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ. ಈ ಗ್ರಾಮ ವಾಸ್ತವ್ಯ ಎಲ್ಲಾ ಜಿಲ್ಲೆಗಳಲ್ಲಿ ನಡೆಯುವಂತಾಗಲಿ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

    ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಭಾನುವಾರ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ತೆಂಗಿನ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

    ಈ ಕಾರ್ಯಕ್ರಮ ನನ್ನ ಕಣ್ಣು ತೆರೆಸಿದೆ. ಇದರಿಂದ ಗ್ರಾಮಗಳ ಸಮಸ್ಯೆಗಳು ಬಗೆ ಹರಿಯಲಿದೆ. ಇಲಾಖೆಗಳು ಚುರುಕು ಪಡೆಯುತ್ತವೆ ಎಂದು ಅವರು ಹೇಳಿದರು. ಸಚಿವ ಅಂಗಾರರನ್ನು ಮುಕ್ತ ಕಂಠದಿಂದ ಹೊಗಳಿದ ಈಶ್ವರಪ್ಪ ಅಂಗಾರ ಅವರೊಬ್ಬ ನಿಷ್ಠಾವಂತ ಕಾರ್ಯಕರ್ತ ಮಾತ್ರವಲ್ಲದೆ ರಾಜ್ಯದ ಮಾದರಿ ರಾಜಕಾರಣಿ ಎಂದರು.

    ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆದ ಹಿಂದುಳಿದ ಪ್ರದೇಶವಾದ ಕೊಂಬಾರು ಗ್ರಾಮದ ಜನರ ಬಹು ಬೇಡಿಕೆಯಾದ ನಾಲ್ಕು ರಸ್ತೆಗಳನ್ನು ಅಭಿವೃದ್ಧಿ ಮಾಡಲು ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

    ತೆಂಗಿನ ಗಿಡಕ್ಕೆ ನೀರೆರೆಯುವ ಮೂಲಕ ಗ್ರಾಮ ವಾಸ್ತವ್ಯ ವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಡಪ್ಪಾಡಿಯಲ್ಲಿ ನಡೆದ ಗ್ರಾಮ ವಾಸ್ತವ್ಯ ದ ಕೈಪಿಡಿಯನ್ನು ಸಚಿವ ಈಶ್ವರಪ್ಪ ಬಿಡುಗಡೆಗೊಳಿಸಿದರು.

    ಬಂದರು, ಮೀನುಗಾರಿಕಾ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಮಾತನಾಡಿ, ಸುಳ್ಯ ವಿಧಾನಸಭೆ ಕ್ಷೇತ್ರ ಬಹಳಷ್ಟು ಗ್ರಾಮೀಣ ಭಾಗವನ್ನು ಹೊಂದಿದೆ. ಗ್ರಾಮೀಣ ಭಾಗದಲ್ಲಿ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಪ್ರಮುಖ ಬೇಡಿಕೆಯಾಗಿದೆ. ಅನುದಾನದ ಲಭ್ಯತೆ ನೋಡಿಕೊಂಡು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದು ಹೇಳಿದರು.

    ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಸ್ಥಳೀಯ ಅನುದಾನಗಳು ಸಾಕಾಗುವುದಿಲ್ಲ. ಅದಕ್ಕಾಗಿ ಗ್ರಾಮೀಣ ರಸ್ತೆಗಳನ್ನು ಲೋಕೋಪಯೋಗಿ ರಸ್ತೆಗಳನ್ನಾಗಿ ಮೇಲ್ದರ್ಜೆಗೆ ಏರಿಸಿ ಹೆಚ್ಚು ಅನುದಾನ ತರಿಸಿ ಸರ್ವಋತು ರಸ್ತೆಗಳನ್ನಾಗಿ ಮಾಡಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು. ಪತ್ರಕರ್ತರ ಗ್ರಾಮ ವಾಸ್ತವ್ಯ ಪರಿಕಲ್ಪನೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾಗೃತಿ ಮೂಡಿಸುವ ಕಾಯ್ರಕ್ರಮ ಆಗಲಿದೆ. ಇಂತಹಾ ಕಾರ್ಯಕ್ರಮ ಹೆಚ್ಚು ಹೆಚ್ಚಾಗಿ ನಡೆಯಲಿ ಎಂದು ಶುಭ ಹಾರೈಸಿದರು.

    ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕಡಬ ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಉಪಾಧ್ಯಕ್ಷೆ ಜಯಂತಿ ಆರ್ ಗೌಡ, ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್, ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್, ಕಡಬ ತಹಶಿಲ್ದಾರ್ ಅನಂತ ಶಂಕರ್, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್. ರವಿಕುಮಾರ್, ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಉಪಸ್ಥಿತರಿದ್ದರು.

    ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಪತ್ರಕರ್ತ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

  • ಬ್ಲೂ ಫಿಲ್ಮ್ ನೋಡಿರುವ ವ್ಯಕ್ತಿಗೆ ಮಂತ್ರಿ ಪದವಿ – ಕರಾವಳಿ ಬಿಜೆಪಿ ಕಾರ್ಯಕರ್ತರ ಆಕ್ರೋಶ

    ಬ್ಲೂ ಫಿಲ್ಮ್ ನೋಡಿರುವ ವ್ಯಕ್ತಿಗೆ ಮಂತ್ರಿ ಪದವಿ – ಕರಾವಳಿ ಬಿಜೆಪಿ ಕಾರ್ಯಕರ್ತರ ಆಕ್ರೋಶ

    – ಫ್ಲೈ ಓವರ್ ಮಾಡಲಾಗದವರು ಪಕ್ಷ ಕಟ್ಟುತ್ತಾರೆಯೇ?

    ಮಂಗಳೂರು: ಕರಾವಳಿ ಜಿಲ್ಲೆಗಳಿಗೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

    ಸುಳ್ಯ ಶಾಸಕ ಎಸ್.ಅಂಗಾರ ಸತತ ಆರು ಬಾರಿ ಶಾಸಕರಾಗಿ ತತ್ವ ಸಿದ್ಧಾಂತ ಪಾಲಿಸಿಕೊಂಡು ಬಂದಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಕರಾವಳಿಯಲ್ಲಿ ಒಬ್ಬ ಶಾಸಕನಿದ್ದರೂ, ಕಾಂಗ್ರೆಸ್ ಸಚಿವ ಸ್ಥಾನ ಕೊಟ್ಟಿತ್ತು. ಬಿಜೆಪಿಯ 15 ಶಾಸಕರಿದ್ದರೂ, ಒಂದೂ ಸ್ಥಾನ ಕೊಟ್ಟಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಶಾಸಕನೇ ಅಲ್ಲದ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿರುವ ವಿಚಾರದಲ್ಲೂ ಟೀಕಿಸಿದ್ದು ಮತದಾರರೇ ತಿರಸ್ಕರಿಸಿರುವ, ಬ್ಲೂ ಫಿಲ್ಮ್ ನೋಡಿರುವ ವ್ಯಕ್ತಿಗೆ ಪದವಿ ನೀಡಿರುವುದು ಅಂಥ ದಂಧೆಯವರಿಗೆ ಉತ್ತೇಜನ ಕೊಟ್ಟಂತಲ್ಲವೇ? ಇಂಥ ಖರೀದ್ ಫರೋಕ್ ಸರ್ಕಾರ ಪತನವಾಗಲೆಂದು ಕಾರ್ಯಕರ್ತರು ಶಾಪ ಹಾಕಿದ್ದಾರೆ.

    ಸಂಸದ ನಳಿನ್ ಕುಮಾರ್ ಅವರನ್ನು ರಾಜ್ಯಾಧ್ಯಕ್ಷ ಮಾಡಿರುವ ಬಗ್ಗೆಯೂ ಕೆಲವು ಕಾರ್ಯಕರ್ತರು ವ್ಯಂಗ್ಯವಾಗಿ ಪೋಸ್ಟ್ ಮಾಡಿದ್ದಾರೆ. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಬದಲಿಸಬೇಕೆಂದು ಕೂಗೆಬ್ಬಿಸಿದ್ದ ಗುಂಪು, ಮಂಗಳೂರಿನಲ್ಲಿ ಫ್ಲೈ ಓವರ್ ಮಾಡಲಾಗದವರು ಪಕ್ಷ ಕಟ್ಟುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಪ್ರವೀಣ್ ತೊಗಡಿಯಾ ಮಂಗಳೂರಿನಿಂದಲೇ ಹೊಸ ಪಕ್ಷ ಕಟ್ಟಲಿದ್ದಾರೆ ಎಂದು ಮೂದಲಿಸಿದ್ದಾರೆ.

    ಪಕ್ಷದ ಶಿಸ್ತಿನ ಸಿಪಾಯಿ ಎಂದೇ ಬಿಂಬಿಸಿಕೊಂಡಿದ್ದ ಸುಳ್ಯ ಶಾಸಕ ಎಸ್ ಅಂಗಾರ ಅವರು ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಮಂಗಳವಾರ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ವಿಡಿಯೋದಲ್ಲಿ ಮಾತನಾಡಿದ ಅವರು, ನಾನು ನಮ್ಮ ಕ್ಷೇತ್ರದಿಂದ ಸಚಿವನಾಗಬೇಕು ಎಂಬುವುದು ನಮ್ಮ ಜಿಲ್ಲೆ ಮತ್ತು ಕ್ಷೇತ್ರದ ಜನರ ಅಪೇಕ್ಷೆಯಾಗಿದೆ. ಆದರೆ ಕಳೆದ ಅನೇಕ ವರ್ಷಗಳಿಂದ ಸಂಘಟನೆಯಲ್ಲಿ ತತ್ವ ಮತ್ತು ಸಿದ್ಧಾಂತವನ್ನು ನಂಬಿ ನಾನು ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಇಂದು ತತ್ವ ನಿಷ್ಠೆಗಳಿಗೆ ಮಹತ್ವ ಇಲ್ಲವೆಂದರೆ ನಾವು ಏನು ಮಾಡುವುದಕ್ಕೆ ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ನಾವು ತತ್ವ ನಿಷ್ಠೆಯನ್ನು ಬಿಡುವುದಕ್ಕೆ ಆಗಲ್ಲ. ಸಂಘಟನೆಯ ಪ್ರಮುಖ ಭಾಗ ಮತ್ತು ಸಂಘಟನೆ ಯಶಸ್ವಿಯಾಗಿ ನಡೆಯಬೇಕಾದರೆ ತತ್ವ ನಿಷ್ಠೆಯೇ ಅತ್ಯಂತ ಪ್ರಮುಖವಾಗಿದೆ. ಆದ ಕಾರಣ ಇಂದು ನಮಗೆ ಸಚಿವ ಸ್ಥಾನ ಸಿಗದೇ ಇರಬಹುದು. ಆದರೆ ಸಂಘಟನೆಯಲ್ಲಿ ಯಾವುದೇ ರೀತಿಯ ಮನಸ್ತಾಪ ಇಲ್ಲ. ಕೆಲವು ಘಟನೆಗಳು ಈ ರೀತಿ ಆಗುತ್ತವೆ. ಅದಕ್ಕೆ ನಾವು ಏನು ಮಾಡುವುದಕ್ಕೆ ಆಗಲ್ಲ. ಇಂದು ನಮ್ಮ ಕ್ಷೇತ್ರದ ಜನರು ನಮ್ಮ ಮೇಲಿನ ಅಭಿಮಾನ ಗೌರವದಿಂದ ಬಂದಿದ್ದರು. ಹೀಗಾಗಿ ಅವರಿಗೆಲ್ಲ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದರು.

     

    ದಕ್ಷಿಣ ಕನ್ನಡದ ಲೋಕಸಭಾ ಕ್ಷೇತ್ರದಲ್ಲಿ ಬರುವ ಒಟ್ಟು 8 ಕ್ಷೇತ್ರಗಳಲ್ಲಿ 7 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದುಕೊಂಡಿದೆ. ಹರೀಶ್ ಪೂಂಜಾ(ಬೆಳ್ತಂಗಡಿ), ಉಮನಾಥ ಕೋಟ್ಯಾನ್(ಮೂಡಬಿದಿರೆ), ಡಾ. ಭರತ್ ಶೆಟ್ಟಿ( ಮಂಗಳೂರು ಉತ್ತರ), ವೇದವ್ಯಾಸ ಕಾಮತ್(ಮಂಗಳೂರು ದಕ್ಷಿಣ), ರಾಜೇಶ್ ನಾಯ್ಕ್(ಬಂಟ್ವಾಳ), ಸಂಜೀವ ಮಠದೂರ್(ಪುತ್ತೂರು) ಜಯಗಳಿಸಿದ್ದರು.

    ರಾಜ್ಯದ ಹಿರಿಯ ಬಿಜೆಪಿ ಶಾಸಕರಾಗಿರುವ ಜೊತೆಗೆ ಜಿಲ್ಲೆಗೊಂದು ಉಸ್ತುವಾರಿ ಸಚಿವರಾಗಬೇಕಾದ ಹಿನ್ನೆಲೆಯಲ್ಲಿ ಈ ಬಾರಿ ಎಸ್‍ಸಿ ಮೀಸಲು ಕ್ಷೇತ್ರದಿಂದ ಜಯಗಳಿಸಿದ್ದ ಅಂಗಾರ ಅವರಿಗೆ ಮಂತ್ರಿ ಸ್ಥಾನ ಸಿಗುವುದು ಖಚಿತ ಎನ್ನುವ ಮಾತು ಕೇಳಿ ಬಂದಿತ್ತು. ಅಷ್ಟೇ ಅಲ್ಲದೇ ಬಿಜೆಪಿ ವಲಯದಲ್ಲೂ ಮಂತ್ರಿ ಸ್ಥಾನದ ಬಗ್ಗೆ ವಿಶ್ವಾಸದ ಮಾತು ಕೇಳಿ ಬಂದಿತ್ತು.

    ಅಂಗಾರ ಅವರು 1994 ರಿಂದ ಆರಂಭಗೊಂಡು 2018ರವರೆಗೆ ನಡೆದ ಚುನಾವಣೆಯಲ್ಲಿ ಸತತ ಆರು ಬಾರಿ ಗೆದ್ದಿದ್ದಾರೆ. ದೋಸ್ತಿ ಸರ್ಕಾರದಲ್ಲಿ ಮಂಗಳೂರು(ಹಿಂದೆ ಉಳ್ಳಾಲ ಆಗಿತ್ತು) ಕ್ಷೇತ್ರದಿಂದ ಗೆದ್ದಿದ್ದ ಯುಟಿ ಖಾದರ್ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿತ್ತು. ಅದಕ್ಕೂ ಮೊದಲು ಸಿದ್ದರಾಮಯ್ಯ ಸರ್ಕಾರದಲ್ಲಿ ರಾಮನಾಥ ರೈ, ಖಾದರ್ ಸಚಿವರಾಗಿದ್ದರೆ ಪುತ್ತೂರಿನಿಂದ ಗೆದ್ದಿದ್ದ ಶಕುಂತಲಾ ಶೆಟ್ಟಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.

  • ನಾನು ತತ್ವ ನಿಷ್ಠೆಯನ್ನ ಬಿಡೋದಕ್ಕೆ ಆಗಲ್ಲ: ಶಾಸಕ ಅಂಗಾರ ಅಸಮಾಧಾನ

    ನಾನು ತತ್ವ ನಿಷ್ಠೆಯನ್ನ ಬಿಡೋದಕ್ಕೆ ಆಗಲ್ಲ: ಶಾಸಕ ಅಂಗಾರ ಅಸಮಾಧಾನ

    ಬೆಂಗಳೂರು: ಪಕ್ಷದ ಶಿಸ್ತಿನ ಸಿಪಾಯಿ ಎಂದೇ ಬಿಂಬಿಸಿಕೊಂಡಿದ್ದ ಸುಳ್ಯ ಶಾಸಕ ಎಸ್ ಅಂಗಾರ ಅವರು ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

    ವಿಡಿಯೋದಲ್ಲಿ ಮಾತನಾಡಿದ ಅವರು, ನಾನು ನಮ್ಮ ಕ್ಷೇತ್ರದಿಂದ ಸಚಿವನಾಗಬೇಕು ಎಂಬುವುದು ನಮ್ಮ ಜಿಲ್ಲೆ ಮತ್ತು ಕ್ಷೇತ್ರದ ಜನರ ಅಪೇಕ್ಷೆಯಾಗಿದೆ. ಆದರೆ ಕಳೆದ ಅನೇಕ ವರ್ಷಗಳಿಂದ ಸಂಘಟನೆಯಲ್ಲಿ ತತ್ವ ಮತ್ತು ಸಿದ್ಧಾಂತವನ್ನು ನಂಬಿ ನಾನು ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಇಂದು ತತ್ವ ನಿಷ್ಠೆಗಳಿಗೆ ಮಹತ್ವ ಇಲ್ಲವೆಂದರೆ ನಾವು ಏನು ಮಾಡುವುದಕ್ಕೆ ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ನಾವು ತತ್ವ ನಿಷ್ಠೆಯನ್ನು ಬಿಡುವುದಕ್ಕೆ ಆಗಲ್ಲ. ಸಂಘಟನೆಯ ಪ್ರಮುಖ ಭಾಗ ಮತ್ತು ಸಂಘಟನೆ ಯಶಸ್ವಿಯಾಗಿ ನಡೆಯಬೇಕಾದರೆ ತತ್ವ ನಿಷ್ಠೆಯೇ ಅತ್ಯಂತ ಪ್ರಮುಖವಾಗಿದೆ. ಆದ ಕಾರಣ ಇಂದು ನಮಗೆ ಸಚಿವ ಸ್ಥಾನ ಸಿಗದೇ ಇರಬಹುದು. ಆದರೆ ಸಂಘಟನೆಯಲ್ಲಿ ಯಾವುದೇ ರೀತಿಯ ಮನಸ್ತಾಪ ಇಲ್ಲ. ಕೆಲವು ಘಟನೆಗಳು ಈ ರೀತಿ ಆಗುತ್ತವೆ. ಅದಕ್ಕೆ ನಾವು ಏನು ಮಾಡುವುದಕ್ಕೆ ಆಗಲ್ಲ. ಇಂದು ನಮ್ಮ ಕ್ಷೇತ್ರದ ಜನರು ನಮ್ಮ ಮೇಲಿನ ಅಭಿಮಾನ ಗೌರವದಿಂದ ಬಂದಿದ್ದರು. ಹೀಗಾಗಿ ಅವರಿಗೆಲ್ಲ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

    ದಕ್ಷಿಣ ಕನ್ನಡದ ಲೋಕಸಭಾ ಕ್ಷೇತ್ರದಲ್ಲಿ ಬರುವ ಒಟ್ಟು 8 ಕ್ಷೇತ್ರಗಳಲ್ಲಿ 7 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದುಕೊಂಡಿದೆ. ಹರೀಶ್ ಪೂಂಜಾ(ಬೆಳ್ತಂಗಡಿ), ಉಮನಾಥ ಕೋಟ್ಯಾನ್(ಮೂಡಬಿದಿರೆ), ಡಾ. ಭರತ್ ಶೆಟ್ಟಿ( ಮಂಗಳೂರು ಉತ್ತರ), ವೇದವ್ಯಾಸ ಕಾಮತ್(ಮಂಗಳೂರು ದಕ್ಷಿಣ), ರಾಜೇಶ್ ನಾಯ್ಕ್(ಬಂಟ್ವಾಳ), ಸಂಜೀವ ಮಠದೂರ್(ಪುತ್ತೂರು) ಜಯಗಳಿಸಿದ್ದರು.

    ರಾಜ್ಯದ ಹಿರಿಯ ಬಿಜೆಪಿ ಶಾಸಕರಾಗಿರುವ ಜೊತೆಗೆ ಜಿಲ್ಲೆಗೊಂದು ಉಸ್ತುವಾರಿ ಸಚಿವರಾಗಬೇಕಾದ ಹಿನ್ನೆಲೆಯಲ್ಲಿ ಈ ಬಾರಿ ಎಸ್‍ಸಿ ಮೀಸಲು ಕ್ಷೇತ್ರದಿಂದ ಜಯಗಳಿಸಿದ್ದ ಅಂಗಾರ ಅವರಿಗೆ ಮಂತ್ರಿ ಸ್ಥಾನ ಸಿಗುವುದು ಖಚಿತ ಎನ್ನುವ ಮಾತು ಕೇಳಿ ಬಂದಿತ್ತು. ಅಷ್ಟೇ ಅಲ್ಲದೇ ಬಿಜೆಪಿ ವಲಯದಲ್ಲೂ ಮಂತ್ರಿ ಸ್ಥಾನದ ಬಗ್ಗೆ ವಿಶ್ವಾಸದ ಮಾತು ಕೇಳಿ ಬಂದಿತ್ತು.

    ಅಂಗಾರ ಅವರು 1994 ರಿಂದ ಆರಂಭಗೊಂಡು 2018ರವರೆಗೆ ನಡೆದ ಚುನಾವಣೆಯಲ್ಲಿ ಸತತ ಆರು ಬಾರಿ ಗೆದ್ದಿದ್ದಾರೆ. ದೋಸ್ತಿ ಸರ್ಕಾರದಲ್ಲಿ ಮಂಗಳೂರು(ಹಿಂದೆ ಉಳ್ಳಾಲ ಆಗಿತ್ತು) ಕ್ಷೇತ್ರದಿಂದ ಗೆದ್ದಿದ್ದ ಯುಟಿ ಖಾದರ್ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿತ್ತು. ಅದಕ್ಕೂ ಮೊದಲು ಸಿದ್ದರಾಮಯ್ಯ ಸರ್ಕಾರದಲ್ಲಿ ರಾಮನಾಥ ರೈ, ಖಾದರ್ ಸಚಿವರಾಗಿದ್ದರೆ ಪುತ್ತೂರಿನಿಂದ ಗೆದ್ದಿದ್ದ ಶಕುಂತಲಾ ಶೆಟ್ಟಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.