ಬೆಳಗಾವಿ: ಕಳೆದ ಮೂರು ವರ್ಷಗಳ ಹಿಂದೆ ಖಾನಾಪೂರ ತಾಲೂಕಿಗೆ ಮಂಜೂರಾಗಿದ್ದ ಡಿಗ್ರಿ ಕಾಲೇಜು, ಗದಗಿಗೆ ಸ್ಥಳಾಂತರಗೊಂಡಿತ್ತು. ಅದನ್ನು ಮತ್ತೆ ಖಾನಾಪೂರ ತಾಲೂಕಿಗೆ ತಂದು ವಿದ್ಯಾರ್ಥಿಗಳಿಗೆ ಸಮರ್ಪಣೆ ಮಾಡುವುದರಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಯಶಸ್ವಿ ಆಗಿದ್ದಾರೆ.
ಈ ಹಿಂದೆ ಖಾನಾಪುರ ತಾಲೂಕಿಗೆ ಮಂಜೂರಾಗಿದ್ದ ಸರ್ಕಾರಿ ಡಿಗ್ರಿ ಕಾಲೇಜು ಗದಗ್ಗೆ ಸ್ಥಳಾಂತರಗೊಂಡಿತ್ತು. ಅದನ್ನು ಮಾಜಿ ಸಚಿವ ಎಚ್.ಕೆ ಪಾಟೀಲ್ ಸಹಾಯದಿಂದ ಮತ್ತೆ ಖಾನಾಪುರ ತಾಲೂಕಿಗೆ ತರುವಲ್ಲಿ ಡಾ. ಅಂಜಲಿ ನಿಂಬಾಳ್ಕರ್ ಯಶಸ್ವಿಯಾಗಿದ್ದಾರೆ.
ಈ ಕುರಿತು ಸ್ವತಃ ಅಂಜಲಿ ನಿಂಬಾಳ್ಕರ್ ಮಾತನಾಡಿ, ತಾಲೂಕಿನ ಬೀಡಿ ಗ್ರಾಮದ ಹೊರವಲಯದಲ್ಲಿ ಡಿಗ್ರಿ ಕಾಲೇಜು ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಂದರ್ಭದಲ್ಲಿ, ಎರಡು ಕೋಟಿಯ ಅನುದಾನ ಕೂಡಾ ಮಂಜುರಾತಿ ಮಾಡಿಸಿಕೊಂಡು ಬಂದಿರುವುದಾಗಿ ಹೇಳಿದರು. ಇದನ್ನೂ ಓದಿ: ಯುಕೆ ಮಾರ್ಗಸೂಚಿ ಬದಲಾವಣೆ – ಅ.11ರಿಂದ ಲಸಿಕೆ ಪಡೆದ ಭಾರತೀಯರಿಗಿಲ್ಲ ಕ್ವಾರಂಟೈನ್
ಬೆಂಗಳೂರು: ಮೈಸೂರು ಅತ್ಯಾಚಾರ ಪ್ರಕರಣದ ಕುರಿತು ಸದನದಲ್ಲಿ ಇಂದು ಭಾರೀ ಚರ್ಚೆ ನಡೆದಿದ್ದು, ಕಾಂಗ್ರೆಸ್ನ ಮಹಿಳಾ ಶಾಸಕಿಯರು ಭಾವುಕರಾಗಿ ಮಾತನಾಡಿದ್ದಾರೆ. ಅಲ್ಲದೆ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಕಣ್ಣೀರು ಹಾಕಿದ್ದಾರೆ.
ಅತ್ಯಾಚಾರ ಪ್ರಕರಣದ ಬಗ್ಗೆ ಮಾತಾಡಲು ಅವಕಾಶ ಕೊಡುತ್ತಿಲ್ಲ ಎಂದು ಆರಂಭದಲ್ಲಿ ಸದನದ ಬಾವಿಗಳಿದು ಕಾಂಗ್ರೆಸ್ನ ಮಹಿಳಾ ಶಾಸಕಿಯರು ಪ್ರತಿಭಟನೆ ನಡೆಸಿದರು. ಅಂಜಲಿ ನಿಂಬಾಳ್ಕರ್ ಹಾಗೂ ಸೌಮ್ಯ ರೆಡ್ಡಿ ಬಾವಿಗಿಳಿದು ಧರಣಿ ಕುಳಿತರು. ಬಳಿಕ ಸ್ಪೀಕರ್ ವಿಶ್ವೇಶರ ಹೆಗಡೆ ಕಾಗೇರಿ ಅವರನ್ನು ಸಮಧಾನ ಪಡಿಸಿ ಕಳುಹಿಸಿದರು. ಸ್ಪೀಕರ್ ಮಾತಿನ ನಂತರ ಮಹಿಳಾ ಶಾಸಕಿಯರು ಧರಣಿ ವಾಪಸ್ ಪಡೆದರು. ಇದನ್ನೂ ಓದಿ: 116.16 ಎಕರೆಯನ್ನು ಕೇವಲ 50 ಕೋಟಿಗೆ ಕೊಟ್ಟರೆ ಹೇಗೆ – ಸರ್ಕಾರಕ್ಕೆ ಡಿಕೆಶಿ ಪ್ರಶ್ನೆ
ಅತ್ಯಾಚಾರ ಸಂಬಂಧ ಸದನದಲ್ಲಿ ನಡೆಯುತ್ತಿರುವ ಚರ್ಚೆ ಕೇಳಿ, ನೊಂದು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅತ್ತಿದ್ದಾರೆ. ಶಾಸಕ ರಾಜೂ ಗೌಡ ಅವರು ಶಾಸಕಿ ಬಳಿ ಹೋಗಿ ಸಮಾಧಾನ ಮಾಡಲು ಯತ್ನಿಸಿದರು. ಬಳಿಕ ಹೊರಗೆ ಬಂದು ಮೊಗಸಾಲೆಯಲ್ಲಿ ಕೂತು ಅಂಜಲಿ ನಿಂಬಾಳ್ಕರ್ ಅತ್ತಿದ್ದಾರೆ.
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಎಷ್ಟು ರೇಪ್ ಆಗಿದೆ ಎಂದು ಆಡಳಿತ ಪಕ್ಷದವರು ತಿರುಗೇಟು ನೀಡಿದ್ದರು. ಈ ಕುರಿತು ಮಾತನಾಡಿದ ಅಂಜಲಿ ನಿಂಬಾಳ್ಕರ್, ರೇಪ್ಗೆ ಆ ಕಾಲ, ಈ ಕಾಲ ಅಂತ ಇಲ್ಲ ಎಂದು ಕಾಂಗ್ರೆಸ್ ಮಹಿಳಾ ಸದಸ್ಯರು ಸಿಡಿದೆದ್ದರು. ಈ ರೀತಿ ರೇಪ್ ರೇಪ್ ಎಂದು ಹೇಳ್ಬೇಡಿ, ನಮ್ಮ ಮನಸ್ಸಿಗೆ ನೋವಾಗುತ್ತೆ ಎಂದು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಪಂಚೆ ಕಳಚಿದೆ ಅಂತ ಸಿದ್ದರಾಮಯ್ಯನವರ ಕಿವಿಯಲ್ಲಿ ಹೇಳಿದ್ರು ಡಿಕೆಶಿ!
ಇದೇ ವೇಳೆ ಚಿತ್ರದುರ್ಗದಲ್ಲಿ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಪ್ರಸ್ತಾಪಿಸಿ ಶಾಸಕಿ ರೂಪಾ ಶಶಿಧರ್ ಭಾವುಕ ಭಾಷಣ ಮಾಡಿದ್ದಾರೆ. ತಾಯಿ ತನ್ನ ಮಗಳನ್ನು ಮನೆಯಲ್ಲಿ ಬಿಟ್ಟು ಆಚೆ ಹೋಗಿದ್ದರು, ವಾಪಸ್ ಬಂದಾಗ ಘಟನೆ ಬಗ್ಗೆ ಗೊತ್ತಾಗಿದೆ. ಆ ತಾಯಿ ಹೃದಯಕ್ಕೆ ಎಂಥ ನೋವಾಗಿರಬಹುದು? ಒಬ್ಬ ತಾಯಿಯಾಗಿ ಆ ತಾಯಿಯ ನೋವು ನನಗೆ ಅರ್ಥ ಆಗುತ್ತೆ ಎಂದು ಹೇಳಿದರು.
ಈ ಸದನದಲ್ಲಿ ರೇಪ್ ಅನ್ನೋ ಪದ ಬಳಕೆ ಮಾಡಬೇಡಿ ಎಂದು ಇದೇ ವೇಳೆ ಸದನಕ್ಕೆ ಶಾಸಕಿ ರೂಪಾ ಶಶಿಧರ್ ಮನವಿ ಮಾಡಿದರು. ಬೆಂಗಳೂರಿಗೆ ಅತ್ಯಾಚಾರ ಪ್ರಕರಣಗಳ ಸಂಖ್ಯೆಯಲ್ಲಿ ನಾಲ್ಕನೇ ಸ್ಥಾನ ಬಂದಿದೆ. ಬೆಂಗಳೂರಿನಲ್ಲಿ ವಾರ್ಷಿಕ 12 ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. 5 ಸಾವಿರ ಕೇಸ್ ಗಳಲ್ಲಿ ಇನ್ನೂ ಆರೋಪಿಗಳು ಪತ್ತೆಯಾಗಿಲ್ಲ ಎಂದು ಕಿಡಿಕಾರಿದರು.
ನಮ್ಮ ದೇಶದಲ್ಲಿ ದೇವಿ ಪೂಜೆ ನಡೆಯುತ್ತೆ, ನಮಗೆ ಪೂಜೆ ಅಗತ್ಯ ಇಲ್ಲ. ನಮಗೆ ಗೌರವ ಬೇಕು, ಸುರಕ್ಷತೆ ಬೇಕು ಎಂದು ಶಾಸಕಿ ಸೌಮ್ಯ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಕೇಸ್ ಮುಚ್ಚಿ ಹಾಕ್ತೀವಿ ಅನ್ನೋದನ್ನು ನಾವು ಖಂಡಿಸುತ್ತೇವೆ ಎಂದರು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಬಸರಾಜ್ ಬೊಮ್ಮಾಯಿ, ಮೈಸೂರು ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಯಾವುದೇ ಲೋಪ ದೋಷ ಆಗಿಲ್ಲ ಹೇಳಿದರು. ಇದನ್ನೂ ಓದಿ: ಕೋರ್ಟ್ ಆದೇಶ ನೀಡಿದ್ರೂ ಕೆಲಸಕ್ಕೆ ನೇಮಿಸಿಲ್ಲ – ವಾಟರ್ ಮ್ಯಾನ್ ಆತ್ಮಹತ್ಯೆಗೆ ಯತ್ನ
ಬೆಳಗಾವಿ: ಒಂದು ತಿಂಗಳಾದರೂ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿ ಮುಂದುವರಿದರೆ ಒಳ್ಳೆಯದು ಎಂದು ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಪರೋಕ್ಷವಾಗಿ ಹೇಳಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ವೇಳೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಪರಿಸ್ಥಿತಿಯಲ್ಲಿ ಬಿಜೆಪಿ ಸಿಎಂ ಬದಲಾವಣೆ, ಮಂತ್ರಿ ಯಾರನ್ನು ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಅವರನ್ನು ದೇವರೇ ಕಾಪಾಡಬೇಕು ಎಂದರು.
ಆಪರೇಷನ್ ಕಮಲ ಮಾಡಿ ಜನಾಶೀರ್ವಾದ ಮೀರಿ ಸರ್ಕಾರ ಮಾಡಿದರು. ಜನರ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇಲ್ಲ. ಇಂತಹ ಸಂದರ್ಭಗಳಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಆಗ್ತಿದೆ, ಬಹಳ ದುಃಖದ ಪರಿಸ್ಥಿತಿ ಇದೆ. ನಾಯಕತ್ವ ಬದಲಾವಣೆ ವಿಚಾರ ಬಿಜೆಪಿಗೆ ಬಿಟ್ಟಿದ್ದು. ಆದರೆ ಇಂತಹ ಪರಿಸ್ಥಿತಿಯಲ್ಲಿ ಇವರೇ ಒಂದು ತಿಂಗಳು ಸಿಎಂ ಆಗಿ ಮುಂದುವರಿದ್ರೆ ಪರಿಹಾರ ಬೇಗ ಕೊಡಲು ಸಾಧ್ಯವಿದೆ ಎಂದು ಹೇಳಿದರು.
ಕಡೇಪಕ್ಷ ಒಂದು ತಿಂಗಳು ಈಗಿನವರೇ ಸಿಎಂ ಆಗಿ ಮುಂದುವರಿದ್ರೆ ಒಳ್ಳೆಯದು. ಹೊಸ ಸಿಎಂ ಬಂದ್ಮೇಲೆ ಅಧಿಕಾರಿಗಳಿಗೆ ನಿರ್ದೇಶನ ಕೊಡಲು ಮತ್ತೆ ಲೇಟ್ ಆಗುತ್ತದೆ. ಜನರ ಪರವಾಗಿ ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡ್ತಾರೋ ಇಲ್ವೋ ಗೊತ್ತಿಲ್ಲ ಅದು ಅವರ ಪಕ್ಷದ ವಿಷಯ. ನನಗೆ ಈ ಬಗ್ಗೆ ಮಾತನಾಡಲು ಅಧಿಕಾರ ಇಲ್ಲ. ಆದರೆ ಜನರ ಪರ ತೀರ್ಮಾನ ಕೈಗೊಳ್ಳಬೇಕು ಅಂತ ಒಂದು ಆಸೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ರಣ ಮಳೆಗೆ ಮಹಾರಾಷ್ಟ್ರದಲ್ಲಿ 100 ಮಂದಿ ಬಲಿ- 1,000ಕ್ಕೂ ಹೆಚ್ಚು ಮಂದಿ ಸ್ಥಳಾಂತರ
ಇದೇ ವೇಳೆ ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆ ವಿಚಾರ ಸಂಬಂಧ ಮಾತನಾಡಿ, 2019ರಲ್ಲೂ ಇದೇ ರೀತಿ ಪ್ರವಾಹ ಬಂದಿತ್ತು, ಈಗಾಗಲೇ ಖಾನಾಪುರದಲ್ಲಿ 521 ಮಿ.ಮೀ ಮಳೆಯಾಗಿದೆ. ಆಗಸ್ಟ್ನಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇತ್ತು, ಈಗಾಗಲೇ ಆಗಿಬಿಟ್ಟಿದೆ ಎಂದರು. ಇದನ್ನೂ ಓದಿ:ಶ್ವಾನದ ಸವಿನೆನಪಿಗೆ ಕಂಚಿನ ಪ್ರತಿಮೆ – ಬಿಡಿಸಲಾಗದ ಮಾಲೀಕ, ಶ್ವಾನದ ನಂಟು
ಜಿಲ್ಲಾ ಉಸ್ತುವಾರಿ ಸಚಿವ ಡಿಸಿಎಂ ಗೋವಿಂದ ಕಾರಜೋಳ ಜೊತೆ ಚರ್ಚೆ ನಡೆಸುತ್ತೇನೆ. ಮಳೆಯಿಂದ ಆದ ಹಾನಿಗೆ ಆದಷ್ಟು ಬೇಗ ಪರಿಹಾರ ನೀಡಲು ಮನವಿ ಮಾಡುತ್ತೇನೆ. ದುರ್ಗಾನಗರ, ಪೊಲೀಸ್ ತರಬೇತಿ ಕೇಂದ್ರ ಜಲಾವೃತ ಆಗಿದೆ. ಇನ್ನೂ ಮೂರು ದಿನ ಇದೇ ರೀತಿ ಮಳೆಯಾದ್ರೆ ಪರಿಸ್ಥಿತಿ ಬಿಗಡಾಯಿಸುತ್ತೆ. ನನ್ನ ಮನೆಯೂ ಸಂಪೂರ್ಣ ಜಲಾವೃತಗೊಂಡಿದೆ, ಕಳೆದ ವರ್ಷ ನನ್ನ ಮನೆಯ ಮೊದಲ ಮಹಡಿವರೆಗೆ ನೀರು ಬಂದಿತ್ತು. ಪರಿಹಾರ ಕೇಂದ್ರ ವ್ಯವಸ್ಥೆ ಬಗ್ಗೆ ತಾಲೂಕು ಅಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.
ಮಳೆಯಿಂದ ಹಲವು ರಸ್ತೆಗಳು ಜಲಾವೃತಗೊಂಡು ಸಂಪರ್ಕ ಕಡಿತವಾಗಿದೆ. ಖಾನಾಪುರ ತಾಲೂಕಿನಲ್ಲಿ ಹೊಲಕ್ಕೆ ಹೋಗಿದ್ದ ರೈತ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ರೈತನ ಮೃತದೇಹ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕರೆ ತರಲು ಆಗ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮೃತದೇಹ ಮನೆಯಲ್ಲಿ ಇಟ್ಟುಕೊಳ್ಳಲಾಗಲ್ಲ. ಈ ವರ್ಷವಾದರೂ ಸರ್ಕಾರ ಬೇಗ ಪರಿಹಾರ ಬೇಗ ಕೊಡಬೇಕು ಅಂತಾ ವಿನಂತಿ ಮಾಡ್ತೇನೆ ಎಂದರು.
ಬೆಳಗಾವಿ: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಕೂಡ ವರುಣ ಆರ್ಭಟಿಸುತ್ತಿದ್ದಾನೆ. ಜಡಿ ಮಳೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಜಲಾವೃತವಾಗಿದೆ.
ಜಿಲ್ಲೆಯಲ್ಲಿರುವ ಮಲಪ್ರಭಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ಖಾನಾಪುರ ಪಟ್ಟಣಕ್ಕೆ ನೀರು ನುಗ್ಗುತ್ತಿದೆ. ಖಾನಾಪುರ ಪಟ್ಟಣದ ಹೊರವಲಯದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.
ಖಾನಾಪುರ ಪಟ್ಟಣದ ಹೊರವಲಯದ ಮೀನಿನ ಮಾರುಕಟ್ಟೆಗೆ ನೀರು ನುಗ್ಗಿದ್ದು, ನಿರಂತರ ಮಳೆಯಿಂದ ಖಾನಾಪುರ ಪಟ್ಟಣದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕೆಎಸ್ಆರ್ಪಿ ತರಬೇತಿ ಕೇಂದ್ರದ ಮೈದಾನ ಜಲಾವೃತವಾಗಿದೆ. ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಎದುರಿನ ಪ್ರದೇಶವೂ ಜಲಾವೃತಗೊಂಡಿದೆ. ಇದನ್ನೂ ಓದಿ: ಕೊರೊನಾ ಕಾಲದಲ್ಲೂ ಮಾದಪ್ಪನಿಗೆ ಹಣದ ಹೊಳೆ – 47 ದಿನದಲ್ಲಿ 2.33 ಕೋಟಿ ಸಂಗ್ರಹ
ವಡಗಾವಿಯ ಕೇಶವ ನಗರದಲ್ಲಿ 50ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಇರದ ಹಿನ್ನೆಲೆ ಮನೆಗಳಿಗೆ ನುಗ್ಗಿದ ಮಳೆನೀರು ನುಗ್ಗಿದೆ. ಪ್ರತಿ ಬಾರಿ ಮಳೆಯಾದಾಗ ಸಾರ್ವಜನಿಕರು ಇದೇ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸದ್ಯ ಸಾರ್ವಜನಿಕರು ಮನೆ ಬಿಟ್ಟು ಹೊರಬಂದಿಲ್ಲ.
ನೆಲಮಹಡಿಯಲ್ಲಿ ವಾಸವಿದ್ದ ಜನರು ಬೇರೆಡೆ ಸ್ಥಳಾಂತರಗೊಂಡಿದ್ದಾರೆ. ರಾತ್ರೋರಾತ್ರಿ ಮನೆಗೆ ನೀರು ನುಗ್ಗಿದ್ದರಿಂದ ಸಾರ್ವಜನಿಕರು ಪರದಾಡುತ್ತಿದ್ದಾರೆ. ನಗರ ನಿವಾಸಿಗಳು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಧಾರವಾಡ: ಮರಾಠ ಕ್ರಾಂತಿ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮರಾಠಿ ಭಾಷಾ ಪ್ರೇಮ ಪ್ರದರ್ಶಿಸಿದ್ದಾರೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಬಂದ್ ಖಂಡಿಸಿ ನಡೆದ ಸಭೆಯಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಶಾಸಕಿ,ಸ ಮರಾಠ ಸಮಾಜಕ್ಕೆ 2ಎ ಮೀಸಲಾತಿ ನೀಡದಿದ್ದರೆ ಚುನಾವಣೆ ಬಹಿಷ್ಕಾರ ಮಾಡುತ್ತೇವೆ. ಮರಾಠ ಸಮಾಜದ ಬಗ್ಗೆ ಕಾಳಜಿ ಇದ್ದರೆ 2ಎ ಮೀಸಲಾತಿ ನೀಡಲಿ. ನಾವು ಕೂಡ ಸಮಾಜದ ಮುಖಂಡರಿಂದ ಪತ್ರ ಬರೆಯುತ್ತೇವೆ. ಏಳು ದಿನಗಳ ಒಳಗೆ ಮೀಸಲಾತಿ ನಿರ್ಣಯ ಮಾಡಬೇಕು. ಮೀಸಲಾತಿ ಮಾಡಿದ್ರೆ ಮಾತ್ರ ಮತ ಹಾಕುತ್ತೇವೆ. ಇಲ್ಲದಿದ್ದರೇ ಬೆಳಗಾವಿ, ಮಸ್ಕಿ, ಗ್ರಾಪಂ, ಜಿಪಂ ಎಲ್ಲ ಎಲೆಕ್ಷನ್ ಬಹಿಷ್ಕಾರ ಹಾಕ್ತೇವಿ ಎಂದು ಶಾಸಕಿ ಅಂಜಲಿ ಎಚ್ಚರಿಸಿದರು.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯ ವಿಷಯದಲ್ಲಿ ನಾವು ಯಡಿಯೂರಪ್ಪ ಬಳಿ ಭಿಕ್ಷೆ ಕೇಳುತ್ತಿಲ್ಲ. ನಮಗೆ ಐವತ್ತು ಕೋಟಿಯಲ್ಲ, ಐನೂರು ಕೋಟಿ ಕೊಟ್ಟರೂ ಬೇಕಾಗಿಲ್ಲ. ಲಿಂಗಾಯತ ಸಮಾಜಕ್ಕೆ ಐನೂರು ಕೋಟಿ ಕೊಟ್ಟಿದೀರಿ. ಹಾಗೆಯೇ ಚುನಾವಣಾ ಗಿಮಿಕ್ ಅಂತಾ ಯಾವ ಸಮಾಜಕ್ಕೆ ಏನೇನು ಕೊಡ್ತಿರೋ ಕೊಡಿ. ಯಾವ ಜಾತಿಗೆ ಎಷ್ಟು ಮತ ಇದೆ ಅಷ್ಟು ಪ್ರಾಧಿಕಾರ ಮಾಡುತ್ತಾ ಹೋಗಲಿ ಎಂದರು.
ಇದೇ ಸಂದರ್ಭದಲ್ಲಿ ಮರಾಠಿ ಭಾಷಾ ಪ್ರೇಮ ಪ್ರದರ್ಶಿಸಿದ ಅಂಜಲಿ, ಭಾಷಣದುದ್ದಕ್ಕೂ ಮರಾಠಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದರು. ನನ್ನ ಖಾನಾಪುರ ಕ್ಷೇತ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮರಾಠಿ ಭಾಷಿಕರು ಹೆಚ್ಚಿದ್ದಾರೆ. ಮಾರವಾಡಿ, ಲಿಂಗಾಯತರ, ಬ್ರಾಹ್ಮಣ ಯಾವುದೇ ಜಾತಿ ಇದ್ದರೂ ಮರಾಠಿ ಭಾಷಿಕರು ಹೆಚ್ಚಿದ್ದಾರೆ. ಅಲ್ಲಿ ಕನ್ನಡ ಮಾತನಾಡಿದರೆ ಅರ್ಥ ಆಗುವುದಿಲ್ಲ. ಅದಕ್ಕೆ ನಾವು ಅಲ್ಲಿ ಮರಾಠಿ ಭಾಷೆಯನ್ನೇ ಮಾತನಾಡುತ್ತೇವೆ ಎಂದ ಅವರು, ಬೆಂಗಳೂರಿನಲ್ಲೆ ಕನ್ನಡ ನಾಡಿನಲ್ಲೇ ಹುಟ್ಟಿದ ಜನರಿಗೆ ಕನ್ನಡ ಬರೋದಿಲ್ಲ. ಅವರು ತಮಿಳು, ತೆಲುಗು ಮಾತನಾಡುತ್ತಾರೆ. ಆದರೆ ಮರಾಠ ಸಮಾಜ ಕನ್ನಡ ಭಾಷೆ ಬಗ್ಗೆ ಅಭಿಮಾನ ಹೊಂದಿದ್ದೇವೆ ಎಂದರು.
ಕೋಲಾರ: ನೆರೆಯಿಂದ ತತ್ತರಿಸಿರುವ ಕ್ಷೇತ್ರದ ಜನರನ್ನ ಕಾಪಾಡು ತಿಮ್ಮಪ್ಪ ಎಂದು ಖಾನಾಪುರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಬೆಂಗಳೂರಿನಿಂದ ತಿರುಪತಿಗೆ ಮಾಡುತ್ತಿರುವ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಶನಿವಾರ ಕೋಲಾರ ತಾಲೂಕಿನ ಮೂಲಕ ಹಾದುಹೋಗಿ ಇಂದು ಮುಳಬಾಗಿಲು ತಾಲೂಕಿನಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಿಂದ ತಿರುಪತಿಗೆ ಪಾದಯಾತ್ರೆ ಮಾಡುತ್ತಿರುವ ಶಾಸಕಿ, ಇಂದು ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಪ್ರಾರ್ಥನಾ ಯಾತ್ರೆ ಮಾಡಿದರು.
ನೆರೆಯಿಂದ ತತ್ತರಿಸಿರುವ ಬೆಳಗಾವಿ ಹಾಗೂ ಖಾನಾಪುರ ಕ್ಷೇತ್ರದ ಸಂತ್ರಸ್ತರಿಗೆ ತಿರುಪತಿ ತಿಮ್ಮಪ್ಪ ದಯೆ ತೋರಬೇಕು. ಕ್ಷೇತ್ರದ ಅಭಿವೃದ್ಧಿಯೊಂದಿಗೆ ಸಂತ್ರಸ್ತರ ಬದುಕನ್ನು ಹಸನುಗೊಳಿಸಬೇಕೆಂದು ತಿಮ್ಮಪ್ಪನ ದರ್ಶಕ್ಕೆ ಪ್ರಾರ್ಥನಾ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ತಮ್ಮ ಪತಿ ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರೊಂದಿಗೆ ದರ್ಶನಕ್ಕೆ ತೆರಳಿರುವ ಶಾಸಕಿ, ಪ್ರತಿದಿನ 30 ಕಿಲೋಮೀಟರ್ಗಳಷ್ಟು ಪಾದಯಾತ್ರೆ ಮಾಡುತ್ತಿದ್ದಾರೆ.
ಖಾನಾಪುರ(ಬೆಳಗಾವಿ): ತಂತ್ರಜ್ಞಾನದ ಈ ಯುಗದಲ್ಲಿ ಯುವ ಜನತೆ ಮೊಬೈಲ್ನಲ್ಲಿ ಗೇಮ್, ಚಾಟಿಂಗ್ ಇನ್ನಿತರ ಚಟುವಟಿಕೆಗಳನ್ನು ಮಾಡುವುದನ್ನು ಬಿಟ್ಟು ಹೊರಾಂಗಣದಲ್ಲಿ ಶರೀರವನ್ನು ವ್ಯಾಯಾಮ ಮತ್ತು ಆಟ ಆಡುವ ಮೂಲಕ ಸದೃಢವಾಗಿಟ್ಟುಕೊಂಡರೆ ಮಾತ್ರ ಆರೋಗ್ಯ ಚೆನ್ನಾಗಿರುತ್ತದೆ ಎಂದು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದರು.
ತಾಲೂಕಿನ ಕಣಕುಂಬಿ ಗ್ರಾಮದಲ್ಲಿ ಶನಿವಾರದಂದು ಯುವಕರು ಹಮ್ಮಿಕೊಂಡಂತಹ ಓಪನ್ ಕ್ರಿಕೆಟ್ ಟೂರ್ನಮೆಂಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರು ಆರೋಗ್ಯವಾಗಿರಬೇಕು ಎಂದು ಊಹಿಸುತ್ತಾರೆ. ಆದರೆ ಶರೀರಕ್ಕೆ ಯಾವುದೇ ತರಹದ ಕೆಲಸ ನೀಡದ ಕಾರಣ ಇತ್ತೀಚಿನ ದಿನಗಳಲ್ಲಿ ಶುಗರ್, ಬಿಪಿ ಹೀಗೆ ಹತ್ತು ಹಲವಾರು ರೋಗಗಳಿಗೆ ಬಲಿಯಾಗಿ ತಮ್ಮ ಜೀವ ಬೆಲೆಯಿಲ್ಲದ ಹಾಗೇ ಬೇಜವಾಬ್ದಾರಿ ತೋರುತ್ತಿದ್ದಾರೆ. ಆದ್ದರಿಂದ ಯುವಜನತೆಗೆ ಮದ್ಯಪಾನ, ಧೂಮಪಾನ ಹಾಗೂ ಅಕ್ರಮ ಚಟುವಟಿಕೆಗಳಿಂದ ದೂರವಿದ್ದು ಹೊರಾಂಗಣ ಆಟ ಆಡಿ, ವ್ಯಾಯಾಮ ಮಾಡಿ ತಮ್ಮ ಆರೋಗ್ಯ ಸದೃಢವಾಗಿಟ್ಟುಕೊಳ್ಳಬೇಕೆಂದು ಸಲಹೆ ನೀಡಿದರು.
ಈ ಸಂಧರ್ಭದಲ್ಲಿ ಪಂದ್ಯಾವಳಿಯನ್ನು ಶಾಸಕಿ ಅಂಜಲಿಯವರು ಬ್ಯಾಟ್ ಹಿಡಿದು ಚೆಂಡನ್ನು ಹೊಡೆದು ಉದ್ಘಾಟಿಸಿ ಅಲ್ಲಿದ್ದ ಪ್ರೇಕ್ಷಕರ ಮನರಂಜಿಸಿದರು. ಇದರ ಜೊತೆಗೆ ಈ ಪಂದ್ಯಾವಳಿಯಲ್ಲಿ ಪ್ರಥಮ ಮತ್ತು ದ್ವೀತಿಯ ಬಹುಮಾನದ 50,000 ನಗದು ಮೊತ್ತವನ್ನು ನೀಡಿ ಪ್ರೋತ್ಸಾಹಿಸಿದರು.
ಈ ಸಂಧರ್ಭದಲ್ಲಿ ಕ್ರಿಕೇಟ್ ಟೂರ್ನಮೆಂಟ್ ಆಯೋಜಿತ ಯುವಕರು, ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ಕ್ರೀಡಾ ಪ್ರೇಮಿಗಳು ಹಾಜರಿದ್ದರು.
ಬೆಳಗಾವಿ: ಅರ್ಜಿ ಸಲ್ಲಿಸಿ ವರ್ಷ ಕಳೆದರೂ ಪೆನ್ಷನ್ ಮಾಡಿಕೊಡದ ಅಧಿಕಾರಿಗಳಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಮೈಚಳಿ ಬಿಡಿಸಿದ್ದಾರೆ.
ಜಿಲ್ಲೆಯ ಖಾನಾಪುರ ಪಟ್ಟಣದ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕಿ, ಅರ್ಜಿ ಸಲ್ಲಿಸಿ ಒಂದು ವರ್ಷವಾದರೂ ಪೆನ್ಷನ್ ಮಾಡಿಕೊಡ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಂಜಲಿ ನಿಂಬಾಳ್ಕರ್ ಕಳೆದ ವರ್ಷ 160 ಪೆನ್ಷನ್ ಅರ್ಜಿ ನೀಡಿದ್ದರು. ಒಂದು ವರ್ಷವಾದರೂ ಅಧಿಕಾರಿಗಳು ಪೆನ್ಷನ್ ಮಾಡಿಕೊಟ್ಟಿರಲಿಲ್ಲ, ಈ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.
ಒಂದು ವರ್ಷವಾದರೂ ಅರ್ಜಿಯನ್ನು ವಿಲೇವಾರಿ ಮಾಡದ್ದಕ್ಕೆ ಪೆನ್ಷನ್ ಸೂಪರ್ ವೈಸರ್ ಮತ್ತು ಕೇಸ್ ವರ್ಕರ್ಗೆ ಶಾಸಕಿ ಮೈಚಳಿ ಬಿಡಿಸಿದ್ದು, ದಾಖಲೆ ಸಮೇತ ಕಚೇರಿಗೆ ಆಗಮಿಸಿ ಅಧಿಕಾರಿಗಳಿಗೆ ಬೆವರಿಳಿಸಿದ್ದಾರೆ. ಜನರ ಪರವಾಗಿ ಕೆಲಸ ಮಾಡದಿದ್ದರೆ ಖಾನಾಪುರ ಬಿಡುವಂತೆ ಎಚ್ಚರಿಕೆ ನೀಡಿದ್ದಾರೆ.
ಯಾವ ರೀತಿ ಅರ್ಜಿಗಳ ವಿಲೇವಾರಿ ಮಾಡುತ್ತೀರಿ ಹೇಳಿ, ಅಧಿಕಾರಿಗಳು ಶಾಸಕಿ ಮುಂದೆಯೇ ನನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಒಬ್ಬರ ಮೇಲೆ ಒಬ್ಬರು ಹಾಕಿ ಜಾರಿಕೊಳ್ಳಲು ಯತ್ನಿಸಿದರು. ಮಧ್ಯಾಹ್ನ ಆದರೂ ಎರಡನೇ ದರ್ಜೆ ಅಧಿಕಾರಿಗಳು ಕಚೇರಿಗೆ ಬಂದಿರಲಿಲ್ಲ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಅಧಿಕಾರಿಗಳ ಮಾತಿನಿಂದ ಬೇಸರಗೊಂಡ ಶಾಸಕಿ ಅಂಜಲಿ ನಿಂಬಾಳ್ಕರ್, ನಿಮ್ಮ ವೇತನ ಆಗದಿದ್ದರೆ ಸರ್ಕಾರ ಮತ್ತು ತಹಶಿಲ್ದಾರ ತಲೆ ತಿನ್ನುತ್ತೀರಿ. ನಮ್ಮ ಕೆಲಸವನ್ನು ಸರಿಯಾಗಿ ಮಾಡಿಕೊಡಿ ಎಂದು ಕೇಸ್ ವರ್ಕರ್ಗೆ ಕೈ ಮುಗಿದು ಬೇಡಿಕೊಂಡಿದ್ದಾರೆ. ನಿಮ್ಮ ಕಾಲಿಗೆ ಬೇಕಾದರೂ ಬೀಳುತ್ತೇನೆ ಕೆಲಸ ಮಾಡಿ. ಜನರ ಬಗ್ಗೆ ಸ್ವಲ್ಪ ಕಳಕಳಿ ಇಟ್ಟುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಳಗಾವಿ: ಮಳೆಯಿಂದ ಸೇತುವೆ ಹಾನಿಗೊಳಗಾಗಿತ್ತು. ಆದರೂ ಕಿರಿದಾದ ಸೇತುವೆಯ ಮೇಲೆ ಚಾಲಕರು ಲಾರಿ ಚಲಾಯಿಸುತ್ತಿದ್ದರು. ಇದನ್ನು ನೋಡಿದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಲಾರಿ ಚಾಲಕನನ್ನು ತರಾಟೆ ತೆಗೆದುಕೊಂಡಿದ್ದಾರೆ.
ಖಾನಾಪುರ ಪಟ್ಟಣದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಲಾರಿ ಚಾಲಕನಿಗೆ ಬೈದು ವಾಪಸ್ ಕಳುಹಿಸಿದ್ದಾರೆ. ಇಷ್ಟು ದೊಡ್ಡ ಗಾಡಿ ಕಿರಿದಾದ ಸೇತುವೆ ಮೇಲೆ ಬಂದರೆ ಸಣ್ಣ ವಾಹನಗಳು ಹೇಗೆ ಓಡಾಡುತ್ತವೆ. ನೀನು ಒಂದು ದಿನ ಅರ್ಧ ಗಂಟೆ ಬಂದು ಹೋಗುತ್ತೀಯಾ, ನಂತರ ಇಲ್ಲಿನ ಹಾಗೂ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಆಕ್ರೋಶದಿಂದ ಹೇಳಿದರು. ಇದನ್ನೂ ಓದಿ: ಪಾಸ್ ಇರೋ ವಿದ್ಯಾರ್ಥಿಗಳನ್ನು ಹತ್ತಿಸದ್ದಕ್ಕೆ ಬಸ್ ಚೇಸ್ ಮಾಡಿ ಸಿಬ್ಬಂದಿಗೆ ಅಂಜಲಿ ನಿಂಬಾಳ್ಕರ್ ಕ್ಲಾಸ್!
ಈಗ ಯೂಟರ್ನ್ ತೆಗೆದುಕೊಂಡು ಖಾನಾಪುರದ ಮೇಲೆ ಬೆಳಗಾವಿಗೆ ಹೋಗು. ನನ್ನ ಎದರುಗಡೆಯೇ ಯೂಟರ್ನ್ ತೆಗೆದುಕೊಂಡು ಹೋಗು, ಇಲ್ಲದಿದ್ದರೆ ಲಾರಿಯ ಚಕ್ರದಲ್ಲಿರುವ ಗಾಳಿಯನ್ನು ತೆಗೆಯುತ್ತೇನೆ. ಮಹಾರಾಷ್ಟ್ರ-ರಾಜಸ್ಥಾನದಿಂದ ಬರುತ್ತೀರಾ, ಇಷ್ಟು ಭಾರವಾದ ವಾಹನ ಓಡಾಡಿದರೆ ಸೇತುವೆ ಹಾಳಾಗುತ್ತದೆ ಎಂದು ಚಾಲಕನಿಗೆ ಹಿಗ್ಗಾಮುಗ್ಗಾ ಬೈದಿದ್ದಾರೆ.
ಖಾನಾಪುರ ಮತ್ತು ಪಣಜಿ ಸಂಪರ್ಕ ಇರುವ ಸೇತುವೆ ಇದಾಗಿದ್ದು, ಅತಿಯಾದ ಮಳೆಯ ಹಿನ್ನೆಲೆಯಲ್ಲಿ ಸೇತುವೆಯ ಮೇಲೆ ಭಾರವಾದ ವಾಹನ ಚಲಾಯಿಸಬಾರದು ಎಂದು ಸೂಚನೆ ನೀಡಲಾಗಿತ್ತು. ಸೂಚನೆ ನೀಡಿದ್ದರೂ ಚಾಲಕರು ಲಾರಿ ಚಲಾಯಿಸುತ್ತಿದ್ದರು. ಇದರಿಂದ ಶಾಸಕಿ ಲಾರಿ ಚಾಲಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರು: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಮಧ್ಯೆಯೇ ಒಡಕು ಮೂಡಿದೆ. ನನಗೆ ದೇಶ ಮೊದಲು ಜಮ್ಮು- ಕಾಶ್ಮೀರ ವಿಶೇಷಾಧಿಕಾರ ರದ್ದು ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿ ಮತ್ತು 35 (ಎ)ನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದು ಮಾಡಿದೆ. ಈ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಇದು ಸಂವಿಧಾನ ವಿರೋಧಿ ನೀತಿ ಎಂದು ಅಸಮಾಧಾನ ಹೊರಹಾಕುತ್ತಿರುವ ಸಮಯದಲ್ಲಿ ಬೆಳಗಾವಿಯ ಖಾನಪುರದ ಶಾಸಕಿ ಅಂಜಲಿ ನಿಂಬಾಳ್ಕರ್ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Desperate Times, Desperate Measures! #Article370 had kept us Desperate for last 70 years! Congratulations @narendramodi & @AmitShah 🙏
We The New India are with you whenever it is ‘Nation First’..
— Dr. Anjali Hemant Nimbalkar (@DrAnjaliTai) August 6, 2019
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅಂಜಲಿ ನಿಂಬಾಳ್ಕರ್, ನಮಗೆ ದೇಶ ಮೊದಲು, ನವ ಭಾರತ ನಿಮ್ಮೊಂದಿಗೆ ಇದೆ ಜಮ್ಮು- ಕಾಶ್ಮೀರ ವಿಶೇಷಾಧಿಕಾರ ರದ್ದು ಮಾಡಿದ್ದನ್ನು ಸ್ವಾಗತಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.
ಈ ವಿಚಾರವನ್ನು ಬೆಂಬಲಿಸಿದ್ದ ಕಾಂಗ್ರೆಸ್ನ ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಪ್ರದೇಶವನ್ನು ಭಾರತದ ಒಕ್ಕೂಟಕ್ಕೆ ಸೇರಿಸುವುದಕ್ಕೆ ಬೆಂಬಲ ನೀಡುತ್ತೇನೆ. ಈ ಮೂಲಕ ಭಾರತವು ಸಂಪೂರ್ಣ ಏಕೀಕರಣವಾಗಲಿದೆ. ಆದರೆ ಸಾಂವಿಧಾನಿಕ ಪ್ರಕ್ರಿಯೆಯನ್ನು ಅನುಸರಿಸಿದ್ದರೆ ಚೆನ್ನಾಗಿರುತ್ತಿತ್ತು. ಆಗ ಯಾವುದೇ ಪ್ರಶ್ನೆಗಳನ್ನು ಎತ್ತಲು ಸಾಧ್ಯವಾಗುತ್ತಿರಲಿಲ್ಲ. ಅದೇನೇ ಇದ್ದರೂ, ಇದು ನಮ್ಮ ದೇಶದ ಹಿತಾಸಕ್ತಿ ಮತ್ತು ನಾನು ಇದನ್ನು ಬೆಂಬಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು. ಇದನ್ನು ಓದಿ: ಸಿದ್ಧಾಂತಗಳಿಂದಲೇ ಕಾಂಗ್ರೆಸ್ ಆತ್ಮಹತ್ಯೆ – ಪಕ್ಷವನ್ನೇ ತ್ಯಜಿಸಿದ ಕೈ ನಾಯಕ
ಈ 370 ಕಲಂ ರದ್ದು ಮಾಡಿದ ನಂತರ ಈ ವಿಚಾರವಾಗಿ ಕಾಂಗ್ರೆಸ್ ನಾಯಕರ ಸಭೆ ಕರೆದಿದ್ದ ಸೋನಿಯಾ ಗಾಂಧಿ ಅವರು, ಕೇಂದ್ರ ಸರ್ಕಾರದ ನಡೆಯನ್ನು ನಾವು ವಿರೋಧಿಸುತ್ತೇವೆ. ಆದರೆ, ನಮ್ಮ ವಿರೋಧವು ಜಮ್ಮು ಮತ್ತು ಕಾಶ್ಮೀರದ ಜನತೆ ಹಾಗೂ ರಾಜ್ಯದ ವಿಧಾನಸಭೆಯನ್ನು ಸಂಪರ್ಕಿಸದಿರುವುದನ್ನು ಆಧರಿಸಿದೆ ಎಂದು ಕಾಂಗ್ರೆಸ್ ಸಂಸದರು ಹಾಗೂ ನಾಯಕರಿಗೆ ಸಭೆಯಲ್ಲಿ ಸ್ಪಷ್ಟಪಡಿಸಲಾಗಿತ್ತು.
Kashmir’s mainstream political leaders have been jailed at secret locations.
This is unconstitutional & undemocratic.
It’s also short sighted and foolish because it will allow terrorists to fill the leadership vaccum created by GOI.
ರಾಹುಲ್ ಗಾಂಧಿ ಟ್ವೀಟ್ ಮಾಡಿ ಏಕಪಕ್ಷೀಯವಾಗಿ ಜಮ್ಮು ಮತ್ತು ಕಾಶ್ಮೀರವನ್ನು ಇಬ್ಭಾಗ ಮಾಡುವ ನಿರ್ಧಾರ ಕೈಗೊಳ್ಳುವುದು, ಜನಪ್ರತಿನಿಧಿಗಳನ್ನು ಬಂಧಿಸುವುದು ಹಾಗೂ ಸಂವಿಧಾನವನ್ನು ಉಲ್ಲಂಘಿಸುವ ಮೂಲಕ ರಾಷ್ಟ್ರದ ಏಕೀಕರಣವನ್ನು ಹೆಚ್ಚಿಸಲು ಸಾಧ್ಯವಿಲ್ಲ. ಜನರಿಂದ ದೇಶ ನಿರ್ಮಾಣವಾಗಿದೆ. ಇದು ಕೇವಲ ತುಂಡು ಭೂಮಿಯಲ್ಲ. ಆಡಳಿತಾತ್ಮಕ ಅಧಿಕಾರದ ದುರುಪಯೋಗ ಮಾಡಿರುವುದು ರಾಷ್ಟ್ರೀಯ ಭದ್ರತೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಿದ್ದರು.