ಕೋಲಾರ: ಕಡೆಯ ಕಾರ್ತಿಕ ಸೋಮವಾರದ ಹಿನ್ನೆಲೆ ರಾಜ್ಯದ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಅಂತರಗಂಗೆಯಲ್ಲಿ (Antara Gange) ಕಾಶಿ ವಿಶ್ವೇಶ್ವರನ ದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ಎಲ್ಲೆಲ್ಲೂ ರಾರಾಜಿಸುತ್ತಿದ್ದ ಕೇಸರಿ ಬಾವುಟಗಳ ನಡುವೆ ಜನಸಾಗರ ಭಕ್ತಿಯಲ್ಲಿ ಮಿಂದೆದ್ದಿತ್ತು.
ರಾಜ್ಯದ ದಕ್ಷಿಣ ಕಾಶಿ ಎಂದೇ ಕರೆಯಲಾಗುವ ಕೋಲಾರ (Kolar) ನಗರಕ್ಕೆ ಹೊಂದಿಕೊಂಡಿರುವ ಪುರಾತನ ಇತಿಹಾಸ ಹೊಂದಿರುವ ಪ್ರಸಿದ್ಧ ಯಾತ್ರಾಸ್ಥಳ ಅಂತರಗಂಗೆಯಲ್ಲಿ ಇಂದು ಕಾರ್ತಿಕ ಮಾಸದ ಕಡೆಯ ಸೋಮವಾರದಂದು ಪ್ರತಿ ವರ್ಷ ಕಾಶಿ ವಿಶ್ವೇಶ್ವರ (Kashi Vishweshwara) ಸ್ವಾಮಿಯ ಜಾತ್ರೆ ನಡೆಯುತ್ತದೆ. ಬಸವನ ಬಾಯಿಂದ ಹರಿದು ಬರುವ ಗಂಗೆ ಕಾಶಿಯಿಂದಲೇ ಹರಿದು ಬರುತ್ತಾಳೆಂಬ ಪ್ರತೀತಿ ಇದೆ. ಜೊತೆಗೆ ಇಲ್ಲಿ ಸಾಕ್ಷಾತ್ ಕಾಶಿ ವಿಶ್ವೇಶ್ವರಸ್ವಾಮಿಯೇ ನೆಲೆಸಿದ್ದಾನೆ. ಈ ಸಲುವಾಗಿ ಪ್ರತಿ ವರ್ಷ ಕಾರ್ತಿಕ ಮಾಸದ ಕಡೆಯ ಸೋಮವಾರದಂದು ಅಂತರ ಗಂಗೆಯಲ್ಲಿ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗುತ್ತದೆ. ಇದನ್ನೂ ಓದಿ: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿ – 13ನೇ ವರ್ಷದಲ್ಲೇ ಕೋಟ್ಯಧಿಪತಿ
ಈ ದಿನದಂದು ಇಲ್ಲಿಗೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಮಂದಿ ಭಕ್ತರು ಸಾಗರೋಪಾದಿಯಲ್ಲಿ ಹರಿದು ಬರುತ್ತಾರೆ. ಇನ್ನು ವಿಶೇಷವಾಗಿ ಇಲ್ಲಿಗೆ ಬರುವ ಭಕ್ತರು ಕಾಶಿ ವಿಶ್ವೇಶ್ವರ ಸ್ವಾಮಿಯ ದರ್ಶನ ಪಡೆದು ತಮ್ಮ ಕೋರಿಕೆಗಳನ್ನು ಈಡೇರಿಸುವಂತೆ ಪ್ರಾರ್ಥಿಸುತ್ತಾರೆ. ಇಂದು ವಿಶೇಷವಾಗಿ ಕಾಶಿ ವಿಶ್ವೇಶ್ವರ ಸ್ವಾಮಿಗೆ ಮುಂಜಾನೆ ನಾಲ್ಕು ಗಂಟೆಯಿಂದಲೇ ವಿಶೇಷ ಪೂಜೆ, ಅಭಿಷೇಕ, ಹೋಮ ಹವನ ಜೊತೆಗೆ ಸಂಜೆ ವೇಳೆಗೆ ತೆಪ್ಪೋತ್ಸವ ಕಾರ್ಯಕ್ರಮಗಳು ನಡೆದಿದೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂಗಳ ಧ್ವನಿಯಾಗಿದ್ದ ಇಸ್ಕಾನ್ನ ಚಿನ್ಮಯ್ ಕೃಷ್ಣ ದಾಸ್ ಅರೆಸ್ಟ್
ಇನ್ನು ಈ ವಿಶೇಷ ದಿನದಂದು ಇಲ್ಲಿಗೆ ಹರಿದು ಬರುವ ಭಕ್ತಸಾಗರ, ದೇವರ ದರ್ಶನ ಪಡೆದು ಪುನೀತರಾಗುತ್ತಾರೆ. ಮುಜರಾಯಿ ಇಲಾಖೆಗೆ ಸೇರುವ ಈ ಯಾತ್ರಾ ಸ್ಥಳದಲ್ಲಿ ಭಜರಂಗದಳ, ವಿಶ್ವಹಿಂದೂ ಪರಿಷತ್ ಸೇರಿದಂತೆ ಹಿಂದೂ ಪರ ಸಂಘಟನೆಗಳು ಕಳೆದ 25 ವರ್ಷಗಳಿಂದ ಇಲ್ಲಿಗೆ ಬರುವ ಭಕ್ತರಿಗೆ ಕುಡಿಯುವ ನೀರು, ಉಚಿತ ಬಸ್ ವ್ಯವಸ್ಥೆ ಮಾಡಿದರೆ, ವಿವಿಧ ಸಂಘ ಸಂಸ್ಥೆಗಳಿಂದ, ಸ್ನೇಹಿತರ ಬಳಗದಿಂದ ಅನ್ನದಾನ, ಪ್ರಸಾದ ವಿತರಣೆ ಮಾಡಲಾಗುತ್ತದೆ. ಇದನ್ನೂ ಓದಿ: ಬುಧವಾರಕ್ಕೆ ಸಂಸತ್ ಅಧಿವೇಶನ ಮುಂದೂಡಿಕೆ
ಇನ್ನು ಪ್ರತಿ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷವಂತೂ ಅಂತರಗಂಗೆಗೆ ಬಂದ ಭಕ್ತರ ಸಂಖ್ಯೆ ಹೆಚ್ಚಾಗಿಯೇ ಇತ್ತು. ಅದಕ್ಕೆ ತಕ್ಕಂತೆ ಬಂದ ಅಷ್ಟೂ ಭಕ್ತರಿಗೆ ಪ್ರಸಾದ, ಅನ್ನದಾನ ಮಾಡುವವರ ಸಂಖ್ಯೆಯೂ ಹೆಚ್ಚಾಗಿತ್ತು. ದೇವರ ದರ್ಶನಕ್ಕೆ ಬಂದ ಯಾವೊಬ್ಬ ಭಕ್ತಾದಿಯೂ ಹಸಿವಿನಿಂದ ವಾಪಸ್ಸಾಗದ ರೀತಿಯಲ್ಲಿ ಅನ್ನದಾನ ಹಾಗೂ ಪ್ರಸಾದ ವಿತರಣೆ ಮಾಡಲಾಯಿತು. ಇನ್ನು ದೇವರ ದರ್ಶನ ಪಡೆದ ಭಕ್ತರಂತೂ ಪುನೀತರಾಗಿ ತಮ್ಮ ಇಷ್ಟಾರ್ಥಗಳನ್ನು ಈಡೇರಿಸು ದೇವರೇ ಎಂದು ಪ್ರಾರ್ಥನೆ ಸಲ್ಲಿಸಿದರು. ಇನ್ನು ಸ್ಥಳದ ಮಹಿಮೆಯಂತೆ ವರ್ಷದ 365 ದಿನವೂ ಬಸವನ ಬಾಯಿಂದ ಗಂಗೆ ಹರಿದು ಬರುತ್ತಾಳೆ ಅನ್ನೋ ನಂಬಿಕೆ ಇದೆ. ಎಂಥಹದ್ದೇ ಬರಗಾಲವಿದ್ದರೂ ಕೂಡಾ ಇಲ್ಲಿ ನೀರು ಮಾತ್ರ ನಿಲ್ಲೋದಿಲ್ಲ. ಅಷ್ಟೇ ಅಲ್ಲದೆ ಈ ನೀರನ್ನು ಕುಡಿದರೆ ಹಲವು ಚರ್ಮವ್ಯಾಧಿಗಳು ಸೇರಿದಂತೆ ಹಲವು ಕಾಯಿಲೆಗಳು ವಾಸಿಯಾಗುತ್ತವೆ ಎಂಬ ನಂಬಿಕೆ ಇಲ್ಲಿನ ಭಕ್ತರದ್ದು. ಇದನ್ನೂ ಓದಿ: ನಾನೇನು ತಪ್ಪು ಮಾಡಿಲ್ಲ, ಐ ಡೋಂಟ್ ಕೇರ್: ಬೈರತಿ ಸುರೇಶ್
ಒಟ್ಟಾರೆ ಇಂದು ಕಾರ್ತಿಕ ಮಾಸದ ಕೊನೆಯ ಸೋಮವಾರ ಶಿವನಿಗೆ ವಿಷೇಶವಾದ ದಿನವಾಗಿದ್ದು, ಈ ದಿನದಲ್ಲಿ ಶಿವನ ದರ್ಶನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಅದಕ್ಕಾಗಿಯೇ ಕಾಶಿಗೆ ಹೋಗಲಾರದ ಜನರು ಈ ದಕ್ಷಿಣ ಕಾಶಿ ಎಂದು ಹೆಸರಾಗಿರುವ ಕೋಲಾರದ ಅಂತರಗಂಗೆಯಲ್ಲಿ ಬಸವನ ಬಾಯಿಯಿಂದ ಬರುವ ಗಂಗಾ ಜಲವನ್ನು ಕುಡಿದು ಕಾಶಿ ವಿಶ್ವೇಶ್ವರನ ದರ್ಶನ ಪಡೆದು ಪುನೀತರಾಗುತ್ತಾರೆ. ಇದನ್ನೂ ಓದಿ: ಸಿಎಂ ಬಂಪರ್ ಗಿಫ್ಟ್ – ಹೆಸ್ಕಾಂ ಅಧ್ಯಕ್ಷರಾಗಿ ಅಜ್ಜಂಪೀರ್ ಖಾದ್ರಿ ನೇಮಕ
ಅಕ್ಕ ಧಾರಾವಾಹಿಯ ಮೂಲಕವೇ ಮನೆ ಮಾತಾಗಿದ್ದವರು ಅನುಪಮಾ ಗೌಡ. ಸಿನಿಮಾವನ್ನೇ ಪ್ರಧಾನ ಉದ್ದೇಶವಾಗಿಸಿಕೊಂಡು ಕಿರುತೆರೆಯಲ್ಲಿ ಮಿಂಚಿದ್ದ ಈಕೆಯ ಕನಸು ಬಿಗ್ ಬಾಸ್ ಶೋ ಮೂಲಕ ರೆಕ್ಕೆ ಬಿಚ್ಚಿಕೊಂಡಿದೆ. ಈಗಾಗಲೇ ಕರಾಳ ರಾತ್ರಿ ಮುಂತಾದ ಚಿತ್ರಗಳಲ್ಲಿ ನಟಿಸಿ ಸೈ ಅನ್ನಿಸಿಕೊಂಡಿರೋ ಅನುಪಮಾ, ದಯಾಳ್ ನಿರ್ದೇಶನದ ತ್ರಯಂಬಕಂ ಚಿತ್ರದಲ್ಲಿ ನಾಯಕಿಯಾಗಿದ್ದಾರೆ.
ಈ ಚಿತ್ರದಲ್ಲಿ ಅನುಪಮಾ ಗೌಡ ರಾಘವೇಂದ್ರ ರಾಜ್ ಕುಮಾರ್ ಮತ್ತು ರೋಹಿತ್ ಜೊತೆ ನಟಿಸುತ್ತಿದ್ದಾರೆ. ಇದೀಗ ಅಂತರಗಂಗೆ ಬೆಟ್ಟದಲ್ಲಿ ಈ ಚಿತ್ರಕ್ಕಾಗಿ ಅವ್ಯಾಹತವಾಗಿ ಚಿತ್ರೀಕರಣ ನಡೆಯುತ್ತಿದೆ. ಈ ಬಗ್ಗೆ ಒಂದು ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿರುವ ಅನುಪಮಾ ಹತ್ತೊಂಭತ್ತನೇ ದಿನವೂ ಅಂತರಗಂಗೆಯಲ್ಲಿ ಯಶಸ್ವಿಯಾಗಿ ಚಿತ್ರೀಕರಣ ನಡೆಯುತ್ತಿದೆ ಅಂತ ಬರೆದುಕೊಂಡಿದ್ದಾರೆ.
ಈಗಾಗಲೇ ದಯಾಳ್ ಪದ್ಮನಾಭನ್ ಆ ಕರಾಳ ರಾತ್ರಿ ಮತ್ತು ಪುಟ 109 ಚಿತ್ರದ ಮೂಲಕ ಗೆದ್ದಿದ್ದಾರೆ. ಈಗ ಭಿನ್ನ ಬಗೆಯ ಕಥೆಯೊಂದರ ಮೂಲಕ ತ್ರಯಂಬಕಂ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಮೂಲಕವೇ ಅನುಪಮಾ ಗೌಡ ಕೂಡಾ ಮುಖ್ಯ ನಾಯಕಿಯರ ಸಾಲಿನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳೋ ಕನಸು ಹೊಂದಿದ್ದಾರೆ.
ಚಾಮರಾಜನಗರ: ಪಾವಿತ್ರತೆಗೆ ಹೆಸರಾಗಿರುವ ಮಲೆಮಹದೇಶ್ವರ ಬೆಟ್ಟದಲ್ಲಿ ಸ್ನಾನ ಮಾಡಿದರೆ ಪಾಪಗಳು ಕಳೆದು ಹೋಗುತ್ತವೆ ಎಂದುಕೊಂಡಿರುವ ಭಕ್ತರಿಗೆ ಕಾಯಿಲೆಗಳು ಬರುವ ಎಲ್ಲಾ ಲಕ್ಷಣಗಳು ಮಾದಪ್ಪನ ಸನ್ನಿಧಿಯಲ್ಲಿ ಗೋಚರವಾಗುತ್ತಿವೆ.
ರಾಜ್ಯದಲ್ಲಿ ಅತೀ ಹೆಚ್ಚು ಆದಾಯ ತಂದುಕೊಡುವ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿರುವ ಮಲೆಮಹದೇಶ್ವರ ಬೆಟ್ಟ ಇದೀಗ ಅಕ್ಷರಶಃ ಕಾಯಿಲೆಗಳನ್ನು ತಂದೊಡ್ಡುವ ಸ್ಥಿತಿಯಲ್ಲಿ ಇದೆ.
ಮಾದಪ್ಪನ ದರ್ಶನ ಪಡೆಯುವ ಮುನ್ನ ಸನ್ನಿಧಿಯಲ್ಲಿರುವ ಅಂತರಗಂಗೆಯಲ್ಲಿ ಭಕ್ತರು ಮುಳುಗಿದರೆ ಪಾವಿತ್ರತೆ ಬರುತ್ತೆ ಎಂದು ನಂಬಿದ್ದಾರೆ. ಆದರೆ ಇದೀಗ ಈ ಅಂತರ ಗಂಗೆಯಲ್ಲಿ ಮುಳುಗಿದರೆ ಪಾವಿತ್ರತೆ ಬರಲ್ಲ, ಬದಲಾಗಿ ಕಾಯಿಲೆಗಳು ಬಂದೊದಗುತ್ತವೆ. ಪಾವಿತ್ರತೆಗೆ ಹೆಸರಾಗಿರುವ ಅಂತರಗಂಗೆ ಇದೀಗ ಅಕ್ಷರಶಃ ಮಲೀನಗೊಂಡು ಕೊಳಕು ನಾರುತ್ತಿದೆ ಎಂದು ಭಕ್ತರು ಹೇಳುತ್ತಿದ್ದಾರೆ.
ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದ ಬೇಜವಾಬ್ದಾರಿಯಿಂದ ಅಂತರಗಂಗೆಯಲ್ಲಿ ಕೊಳಕು ನೀರು ಸೇರಿಕೊಂಡು ಈ ನೀರು ತನ್ನ ಪವಿತ್ರತೆ ಕಳೆದುಕೊಂಡು ಕಾಯಿಲೆಯನ್ನು ತಂದೊಡ್ಡುವ ಸ್ಥಾನವಾಗಿ ಬದಲಾಗಿದೆ. ಈ ನೀರಲ್ಲಿ ಪ್ರತಿನಿತ್ಯ ಸಾವಿರಾರು ಭಕ್ತರು ಮುಳುಗಿ ಮಾದಪ್ಪನ ದರ್ಶನ ಪಡೆಯುತ್ತಾರೆ.
ಇದಲ್ಲದೇ ನವಂಬರ್ 6, 7 ರಂದು ಮಾದಪ್ಪನ ಬೆಟ್ಟದಲ್ಲಿ ನಡೆಯುವ ದೀಪಾವಳಿ ದೊಡ್ಡ ರಥೋತ್ಸವಕ್ಕೆ ಲಕ್ಷಕ್ಕೂ ಅಧಿಕ ಭಕ್ತರು ಬರುತ್ತಾರೆ. ಅವರೆಲ್ಲರೂ ಇದೇ ಅಂತರಗಂಗೆಗೆ ಬಂದು ಮುಳುಗುತ್ತಾರೆ. ಭಕ್ತರು ಇಲ್ಲಿ ಮುಳುಗಿದರೆ ಜೀವನ ಪವಿತ್ರವಾಗುತ್ತೆ ಎಂಬ ಭಾವನೆಯಿಂದ ಮುಳುಗುತ್ತಾರೆ. ಆದರೆ ಪ್ರಾಧಿಕಾರದ ಕುರುಡು ನಡೆಯಿಂದ ಭಕ್ತರು ಮಾರಕ ಕಾಯಿಲೆಗಳಿಗೆ ತುತ್ತಾಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಭಕ್ತ ಶಿವಕುಮಾರ್ ಹೇಳಿದ್ದಾರೆ.