Tag: ಅಂಬಾರಿ

  • ಜಂಬೂಸವಾರಿ ವೇಳೆ ವಾಲಿದ ಅಂಬಾರಿ- ಕೈಸನ್ನೆ ಮಾಡಿದ ಪ್ರಮೋದಾದೇವಿ

    ಜಂಬೂಸವಾರಿ ವೇಳೆ ವಾಲಿದ ಅಂಬಾರಿ- ಕೈಸನ್ನೆ ಮಾಡಿದ ಪ್ರಮೋದಾದೇವಿ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜಂಬೂಸವಾರಿ ನಡೆಯುತ್ತಿದ್ದ ವೇಳೆ ಅಂಬಾರಿ ವಾಲಿದ್ದು, ಅದನ್ನು ಸರಿ ಮಾಡಲು ರಾಜಮಾತೆ ಪ್ರಮೋದಾದೇವಿ ಕೈಸನ್ನೆ ಮಾಡಿದ್ದರು.

    ಮಂಗಳವಾರ ಗಜಪಡೆ ನಾಯಕ ಅರ್ಜುನ ಅಂಬಾರಿ ಹೊತ್ತು ಜಂಬೂಸವಾರಿ ಆರಂಭಿಸಿದ ವೇಳೆ ಅಂಬಾರಿ ಕೊಂಚ ವಾಲಿತ್ತು. ಈ ವೇಳೆ ಅರಮನೆಯಿಂದ ಜಂಬೂಸವಾರಿ ವೀಕ್ಷಿಸಲು ನಿಂತಿದ್ದ ರಾಜಮಾತೆ ಪ್ರಮೋದಾದೇವಿ ಗಜಪಡೆ ಬಳಿ ಇದ್ದ ಸಿಬ್ಬಂದಿಗೆ ಅದನ್ನು ಸರಿ ಮಾಡುವಂತೆ ಕೈಸನ್ನೆ ಮಾಡಿದ್ದರು. ಈ ದೃಶ್ಯಾವಳಿಗಳು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

    ನಂತರ ಹಗ್ಗದ ಸಹಾಯದಿಂದ ಆರಂಭದಿಂದ ಕೊನೆಯವರೆಗೂ ಜಂಬೂಸವಾರಿ ನಡೆದು ಯಶಸ್ವಿಯಾಗಿ ಪೂರ್ಣಗೊಂಡಿತು. ಸಿಎಂ ಯಡಿಯೂರಪ್ಪ ಅವರು ಪುಷ್ಪಾರ್ಚನೆ ಮಾಡುತ್ತಿದ್ದ ವೇಳೆಯೂ ಅಂಬಾರಿಗೆ ಹಗ್ಗದ ಸಪೋರ್ಟ್ ನೀಡಲಾಗಿತ್ತು. ನಾಡಹಬ್ಬ ದಸರಾದಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಸಾಗುವ ಅಂಬಾರಿ ವಾಲಿದರೆ ನಾಡಿಗೆ ಕೆಡಕಾಗುತ್ತಾ ಎಂಬ ಆತಂಕ ಇದೀಗ ಶುರುವಾಗಿದೆ.

    750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿದೇವಿಯನ್ನು ಹೊತ್ತುಕೊಂಡು ನಾಯಕ ಅರ್ಜುನ ಗಜಪಡೆ ಜೊತೆ ಹೆಜ್ಜೆ ಹಾಕಿ ದಸರಾವನ್ನು ಯಶಸ್ವಿಯಾಗಿದ್ದಾನೆ. ಅರಮನೆ ಉತ್ತರ ದ್ವಾರವಾದ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.09ಕ್ಕೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಸಂಜೆ 4.17ರ ಶುಭ ಕುಂಬ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದರು.

    ಜಂಬೂ ಸವಾರಿಯಲ್ಲಿ 8ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ಸಾಗಿದ್ದನು. ಈ ಜಂಬೂಸವಾರಿಯಲ್ಲಿ 39 ಸ್ತಬ್ಧ ಚಿತ್ರಗಳು, ವಿವಿಧ ಜಾನಪದ ಕಲಾತಂಡಗಳು, 100ಕ್ಕೂ ಹೆಚ್ಚು ಕಲಾ ತಂಡಗಳು, ಉತ್ತರ ಭಾರತದ ವಿವಿಧ ರಾಜ್ಯಗಳ 5 ಕಲಾ ತಂಡ, 1,675 ಕಲಾವಿದರು ಸೇರಿದಂತೆ ಒಟ್ಟು 2 ಸಾವಿರ ಮಂದಿ ಭಾಗಿಯಾಗಿದ್ದವು.

    ಸಂಜೆ 4.30ಕ್ಕೆ ಹೊರಟ ಅಂಬಾರಿ ಸಂಜೆ 7 ಗಂಟೆಗೆ ಬನ್ನಿ ಮಂಟಪ ತಲುಪಿ, ಇತ್ತ ರಾತ್ರಿ 7.30ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತಿನ ಕಾರ್ಯಕ್ರಮದಲ್ಲಿ ನೂರಾರು ಮಂದಿ ಪಂಜನ್ನು ಹಿಡಿದು ಸಾಹಸ ಪ್ರದರ್ಶಿಸಿದರು. ಈ ಪಂಜಿನ ಕವಾಯತಿನ ಬಳಿಕ ರಾತ್ರಿ 10 ಗಂಟೆಗೆ ಪಟಾಕಿ ಸಿಡಿಸೋ ಮೂಲಕ ದಸರಾ ಯಶಸ್ವಿ ತೆರೆಕಂಡಿದೆ.

  • ಅರ್ಜುನನಿಗೆ ಇನ್ನೂ 10 ವರ್ಷ ಅಂಬಾರಿ ಹೊರುವ ತಾಕತ್ತಿದೆ- ಮಾವುತ ವಿನು

    ಅರ್ಜುನನಿಗೆ ಇನ್ನೂ 10 ವರ್ಷ ಅಂಬಾರಿ ಹೊರುವ ತಾಕತ್ತಿದೆ- ಮಾವುತ ವಿನು

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. 9ನೇ ಬಾರಿ ಅಂಬಾರಿ ಹೊರಲು ಅರ್ಜುನ ಸಿದ್ಧನಾಗಿದ್ದಾನೆ. ಅಂಬಾರಿ ಹೊರೋಕೆ ಅರ್ಜುನ ಹೇಗೆ ಸಿದ್ಧವಾಗಿದ್ದಾನೆ ಎಂಬುದರ ಬಗ್ಗೆ ಮಾವುತ ವಿನು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.

    ಅರ್ಜುನ ಈ ಬಾರಿ ಲಾಸ್ಟ್ ಅಂಬಾರಿ ಹೋರೋದು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಅರ್ಜುನನಿಗೆ ಇನ್ನೂ 10 ವರ್ಷ ಅಂಬಾರಿ ಹೊರುವ ಶಕ್ತಿ ಇದೆ. ಅರ್ಜುನ ಸ್ವಲ್ಪ ತುಂಟ. ಆದರೆ ಇಲ್ಲಿಗೆ ಬಂದರೆ ತಾಯಿ ಆಶೀರ್ವಾದದಿಂದ ಆ ತುಂಟತನ ಇರಲ್ಲ ಎಂದು ಹೇಳಿದ್ದಾರೆ.

    ಅರ್ಜುನ ಗಾಂಭೀರ್ಯದಿಂದ ಅಂಬಾರಿ ಹೊರುತ್ತಾನೆ. ಆತ ಈ ಬಾರಿಯೂ ಅರಾಮವಾಗಿ ಅಂಬಾರಿ ಹೊರುತ್ತಾನೆ. ಅರ್ಜುನನ ಜೊತೆ ನಾನು ಕನ್ನಡದಲ್ಲಿ ಮಾತಾಡುವುದಾಗಿ ವಿನು ತಿಳಿಸಿದ್ದಾರೆ.

    ಅಂಬಾರಿ ಹೊರುವ ಅರ್ಜುನನಿಗೆ ಗಂಡುಭೇರುಂಡಾ, ಶಂಕ ಚಕ್ರ, ವಿವಿಧ ಚಿತ್ತಾರಗಳ ಕಲಾಕೃತಿ ಅರ್ಜುನನಿಗೆ ಬಿಡಿಸಲಾಗುತ್ತಿದೆ. ಒಟ್ಟಿನಲ್ಲಿ ಬಣ್ಣ ಬಣ್ಣದ ಚಿತ್ತಾರದಲ್ಲಿ ಅಂಬಾರಿ ಹೊರಲು ಅರ್ಜುನ ರೆಡಿಯಾಗಿದ್ದಾನೆ.

    ಜಂಬೂ ಸವಾರಿ ವೀಕ್ಷಿಸಲು ಈಗಾಗಲೇ ಅಂಬಾವಿಲಾಸ ಅರಮನೆ ಮುಂಭಾಗ 26 ಸಾವಿರ ಜನರಿಗೆ ಕುರ್ಚಿ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ, ಅಂಬಾರಿ ಸಾಗುವ ರಸ್ತೆಯ ಬದಿಲ್ಲೂ ಸಹ ಆಸನಗಳ ವ್ಯವಸ್ಥೆ ಇದೆ. ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ಭಾರೀ ಜನಸ್ತೋಮ ಅರಮನೆ ನಗರಿಯಲ್ಲಿದೆ.

    ಜಂಬೂ ಸವಾರಿಗೆ ಸಿದ್ಧತೆ ಆರಂಭವಾಗುವುದು ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮಧ್ಯಾಹ್ನ 2.25ರಿಂದ 3 ಗಂಟೆಯ ನಡುವೆ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಪೂಜೆ ಬಳಿಕ ಮೆರವಣಿಗೆ ಆರಂಭವಾಗುತ್ತದೆ. ಸಂಜೆ 4.30ರಿಂದ 5 ಗಂಟೆ ನಡುವೆ ಕುಂಭ ಲಗ್ನದಲ್ಲಿ ಅಂಬಾರಿಗೆ ಸಿಎಂ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ 7 ಗಂಟೆಗೆ ಅಂಬಾರಿ ಬನ್ನಿ ಮಂಟಪ ತಲುಪತ್ತದೆ. ರಾತ್ರಿ 7.30ಕ್ಕೆ ಬನ್ನಿ ಮಂಟಪದಲ್ಲಿ ಪಂಜಿನ ಕವಾಯತು ಆರಂಭವಾಗುತ್ತದೆ. ಇದಕ್ಕೆ ರಾಜ್ಯಪಾಲ ವಜೂಭಾಯ್ ವಾಲಾ ಚಾಲನೆ ನೀಡಲಿದ್ದಾರೆ. ರಾತ್ರಿ 10 ಗಂಟೆಗೆ ಪಟಾಕಿ ಸಿಡಿಸಿ ದಸರಕ್ಕೆ ಅಧಿಕೃತ ತೆರೆಬೀಳುತ್ತದೆ.

    https://www.youtube.com/watch?v=ZnmJAbUqvg0

     

  • ಜಂಬೂಸವಾರಿ ವೇಳೆ ಅಂಬಾರಿ ಆನೆಯನ್ನೇ ನಿಲ್ಲಿಸಿದ ಪೊಲೀಸರು..!

    ಜಂಬೂಸವಾರಿ ವೇಳೆ ಅಂಬಾರಿ ಆನೆಯನ್ನೇ ನಿಲ್ಲಿಸಿದ ಪೊಲೀಸರು..!

    ಮೈಸೂರು: ಶುಕ್ರವಾರ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ವಿಜಯದಶಮಿ ಜಂಬೂ ಸವಾರಿ ವೇಳೆ ಪೊಲೀಸ್ ಅಧಿಕಾರಿಗಳು ಸಯ್ಯಾಜಿರಾವ್ ರಸ್ತೆಯಲ್ಲಿ ಅಂಧಾ ದರ್ಬಾರ್ ನಡೆಸಿದ್ದಾರೆ.

    ಅಂಬಾರಿ ಹೊತ್ತ ಅರ್ಜುನ ಮುಂದೆ ಪೊಲೀಸ್ ಅಧಿಕಾರಿ ಹಾಗೂ ಅವರ ಸಹದ್ಯೋಗಿ ಪೊಲೀಸರು ಫೋಟೋ ತೆಗೆಸಿಕೊಳ್ಳುವುದ್ದಕ್ಕೆ ರಸ್ತೆ ಮಧ್ಯೆ ಅರ್ಜನನ್ನು ನಿಲ್ಲಿಸಿದ್ದಾರೆ. ಅಂಬಾರಿ ಹೊತ್ತು ಸಾಗುತ್ತಿದ್ದ ಅರ್ಜುನನ್ನು ಬಲವಂತವಾಗಿ ನಿಲ್ಲಿಸಿ ಫೋಟೋ ತೆಗೆಸಿಕೊಂಡಿದ್ದಾರೆ.

    ಪೊಲೀಸ್ ಅಧಿಕಾರಿ ಸೂಚನೆಯಂತೆ ಅರಣ್ಯ ಇಲಾಖೆ ಸಿಬ್ಬಂದಿ ಅರ್ಜುನನ ದಂತ ಹಿಡಿದು ಎಳೆದು ನಿಲ್ಲಿಸಿದ್ದಾರೆ. ಸಾಮಾನ್ಯವಾಗಿ ಅಂಬಾರಿ ಹೊತ್ತ ಅರ್ಜುನ ದಾರಿ ಮಧ್ಯೆ ನಿಲ್ಲುವುದಿಲ್ಲ. ಆದರೆ ಫೋಟೋ ಹುಚ್ಚಿಗಾಗಿ ಅಂಬಾರಿ ಆನೆಯನ್ನೇ ನಿಲ್ಲಿಸಿ ಅರ್ಜುನನಿಗೆ ಕಿರಿಕಿರಿ ಉಂಟು ಮಾಡಿದ್ದಾರೆ.

    ಪೊಲೀಸರ ಅಂದ ದರ್ಬಾರ್ ಸ್ಥಳಿಯರ ಮೊಬೈಲ್‍ನಲ್ಲಿ ಸೆರೆಯಾಗಿದ್ದು ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರೇ ಇದೇನಾ ನಿಮ್ಮ ಶಿಸ್ತು? ಖಾಕಿ ಹಾಕಿಕೊಂಡು ಪೊಲೀಸರು ಏನ್ ಬೇಕಾದರೂ ಮಾಡಬಹುದಾ? ಇದು ಜಂಬೂಸವಾರಿಯಾ? ಅಥವಾ ಪೊಲೀಸ್ ಸವಾರಿಯಾ? ಎಂದು ಜನ ಪ್ರಶ್ನಿಸಿ ತರಾಟೆಗೆ ತೆಗದುಕೊಳ್ಳುತ್ತಿದ್ದಾರೆ.

    https://www.youtube.com/watch?v=U3wetUpNpe0

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೈಸೂರಿನ ಒರಿಜಿನಲ್ ದಸರಾದ ನೆನಪನ್ನು ಬಿಚ್ಚಿಟ್ಟ ಅಂಬರೀಶ್

    ಮೈಸೂರಿನ ಒರಿಜಿನಲ್ ದಸರಾದ ನೆನಪನ್ನು ಬಿಚ್ಚಿಟ್ಟ ಅಂಬರೀಶ್

    ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರು ನಾನು ನೋಡಿದ ಆ ಕಾಲದ ದಸರಾದ ರಾಜ ವೈಭವವನ್ನ ಪಬ್ಲಿಕ್ ಟಿವಿ ಜೊತೆ ಹಂಚಿಕೊಂಡಿದ್ದಾರೆ.

    ದಸರಾ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ತಾತ ಪಿಟೀಲು ಚೌಡಯ್ಯ ಅವರೊಂದಿಗೆ ದಸರಾ ದರ್ಬಾರಿಗೆ ಹೋಗುತ್ತಿದ್ದೆ. ಅಲ್ಲಿ ಅವರು ಪಿಟೀಲು ಬಾರಿಸುತ್ತಿದ್ದರು. ಚಿಕ್ಕವನಾಗಿದ್ದ ನಾನು ತಾತನ ಜೊತೆ ಮೈಸೂರು ಪೇಟಾ, ಶಲ್ಯ, ಕೋಟು ತೊಟ್ಟು ಅರಮನೆಗೆ ಹೋಗುತ್ತಿದ್ದೆ ಎಂದು ಹಳೆಯ ನೆನಪನ್ನು ಮೆಲುಕು ಹಾಕಿದರು.

    ಮಹರಾಜರು ಅಂಬಾರಿ ಮೇಲೆ ಸವಾರಿ ಮಾಡುವುದನ್ನು ನೋಡುವುದೇ ಕಣ್ಣಿಗೆ ಹಬ್ಬವಾಗಿತ್ತು. ಅಂತಹ ದೃಶ್ಯ ಇನ್ನೆಲ್ಲೂ ಸಿಗುವುದಿಲ್ಲ. ನಾನು ಸ್ವಲ್ಪ ದೊಡ್ಡವನಾದ ಮೇಲೆ ತಂದೆ ನನ್ನನ್ನ ಜಂಬೂ ಸವಾರಿ ನೋಡಲು ಕರೆದುಕೊಂಡು ಹೋಗುತ್ತಿದ್ದರು. ಆಗ ನಾವು ಕೆಆರ್‌ಎಸ್‌ ಆಸ್ಪತ್ರೆ ಮೇಲೆ, ದೇವರಾಜ ಮಾರ್ಕೆಟ್ ಮೇಲೆ ನಿಲ್ಲುತ್ತಿದ್ದೆವು. ಆ ಸಮಯದಲ್ಲಿ ಮಹಾರಾಜರು ಅಪ್ಪಿ-ತಪ್ಪಿ ನಿಂತಿದ್ದ ನಮ್ಮನ್ನು ನೋಡಿದರೆ ಅಯ್ಯೋ ಮಹಾರಾಜರು ನಮ್ಮನ್ನ ನೋಡಿಬಿಟ್ಟರು, ಅವರ ಆಶೀರ್ವಾದ ನಮ್ಮ ಮೇಲೆ ಎಷ್ಟೋ ಇದೆ ಎಂದು ಸಂತಸ ಪಡುತ್ತಿದ್ದೆವು. ಇದು ಒರಿಜಿನಲ್ ದಸರಾ ಎಂದು ಹೇಳಿದರು.

    ಮಹಾರಾಜರು ಆನೆ ಮೇಲೆ ಸವಾರಿ ಮಾಡಿದರೆ, ಇವತ್ತು ಎಷ್ಟು ಜನ ದಸರಾ ನೋಡಲು ಸೇರುತ್ತಾರೋ ಅದಕ್ಕಿಂತ 60 ಪಟ್ಟು ಜನ ಸೇರುತ್ತಾರೆ. ಈ ವರ್ಷದ ದಸರಾದಲ್ಲಿ ಅರಮನೆಯ ದೀಪಾಲಂಕಾರ ಮತ್ತು ಮೈಸೂರು ನಗರಿಯನ್ನ ಬಹಳ ಸೊಗಸಾಗಿ ಅಲಂಕರಿಸಿದ್ದಾರೆ. ನವರಾತ್ರಿಯ ಸಮಯದಲ್ಲಿ ಯುವ ದಸರಾ, ಕ್ರೀಡೆ ಮುಂತಾದವುಗಳು ಎಲ್ಲರಿಗೂ ಮನೋರಂಜನೆ ನೀಡಿದೆ ಎಂದು ಅಂಬಿ ಯವರು “ನಾನು ಕಂಡ ದಸರಾದ” ಅನುಭವವನ್ನ ಪಬ್ಲಿಕ್ ಟಿವಿಯೊಂದಿಗೆ ಹಂಚಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ – ಇಂದು ಮೈಸೂರಿನಲ್ಲಿ ಐತಿಹಾಸಿಕ ಜಂಬೂ ಸವಾರಿ

    ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ – ಇಂದು ಮೈಸೂರಿನಲ್ಲಿ ಐತಿಹಾಸಿಕ ಜಂಬೂ ಸವಾರಿ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ವಿಜಯದಶಮಿಯಂದು ನಡೆಯುವ ಜಂಬೂಸವಾರಿ ಮೆರವಣಿಗೆ ನೋಡಲು ದೇಶ-ವಿದೇಶದಿಂದ ಪ್ರವಾಸಿಗರು ಬಂದು ತುದಿಗಾಲಲ್ಲಿ ನಿಂತಿದ್ದಾರೆ. ಅದ್ಧೂರಿ ದಸರಾ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.

    ಮಧ್ಯಾಹ್ನ 2.30 ರಿಂದ 3.16 ರೊಳಗೆ ಅರಮನೆ ಉತ್ತರ ದ್ವಾರವಾದ ಬಲರಾಮ ದ್ವಾರದಲ್ಲಿ ನಂದಿ ಪೂಜೆ ಮಾಡಿ ಬಳಿಕ ಮಧ್ಯಾಹ್ನ 3.40 ರಿಂದ 4.10 ರೊಳಗೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.

    ಜಂಬೂ ಸವಾರಿಯಲ್ಲಿ ಸತತ 5ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಲ್ಲಿ ಸಾಗಲಿದ್ದಾನೆ. ಅರ್ಜುನನಿಗೆ ಕಾವೇರಿ ಮತ್ತು ವರಲಕ್ಷ್ಮಿ ಆನೆಗಳು ಸಾಥ್ ನೀಡಲಿವೆ. ನಿಶಾನೆ ಮತ್ತು ನೌಪತ್ ಆನೆಗಳಾಗಿ ಅಭಿಮನ್ಯು, ಬಲರಾಮ, ಕ್ರಮ, ದ್ರೋಣ, ಕಾವೇರಿ, ವಿಜಯ, ಚೈತ್ರ, ಗೋಪಿ ಪ್ರಶಾಂತ, ನಂಜಯ ಆಣೆಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಲಿವೆ. ಜಂಬೂ ಸವಾರಿಗೂ ಮೊದಲು ವಜ್ರಮುಷ್ಠಿ ಜಟ್ಟಿ ಕಾಳಗ ನಡೆಯಲಿದೆ.

    ದಸರಾ ಮೆರವಣಿಗೆಯಲ್ಲಿ ಏನೆಲ್ಲಾ ಇರಲಿದೆ?
    * 42 ಸ್ತಬ್ಧ ಚಿತ್ರಗಳು, 40 ವಿವಿಧ ಜಾನಪದ ಕಲಾತಂಡಗಳು
    * 10 ವಿಶೇಷ ಕಲಾ ತಂಡ, ಉತ್ತರ ಭಾರತದ ವಿವಿಧ ರಾಜ್ಯಗಳ 5 ಕಲಾ ತಂಡ
    * 1, 675 ಕಲಾವಿದರು ಸೇರಿದಂತೆ ಜಂಬೂಸವಾರಿಯಲ್ಲಿ ಒಟ್ಟು 2 ಸಾವಿರ ಮಂದಿ ಭಾಗಿಯಾಗಲಿದ್ದಾರೆ.

    ಜಂಬೂಸವಾರಿಗೆ ನಗರದ ಎಲ್ಲೆಡೆ ಖಾಕಿ ಕಣ್ಣು:
    * ಅರಮನೆ ಹಾಗೂ ಜಂಬೂ ಸವಾರಿ ಮೆರವಣಿಗೆ 70 ಮಂದಿ ಕಮಾಂಡೋಗಳ ನಿಯೋಜನೆ
    * ಜಂಬೂಸವಾರಿ ಮೆರವಣಿಗೆ ಮಾರ್ಗದಲ್ಲಿ 86 ಸಿಸಿ ಕ್ಯಾಮೆರಾ ಅಳವಡಿಕೆ
    * 11 ಎಸ್‍ಪಿ, ಡಿಸಿಪಿ, 43 ಎಸಿಪಿ, 131 ಪೊಲೀಸ್ ಇನ್ಸ್ ಪೆಕ್ಟರ್
    * 328 ಸಬ್ ಇನ್ಸ್ ಪೆಕ್ಟರ್, 521 ಸಹಾಯಕ ಸಬ್ ಇನ್ಸ್ ಪೆಕ್ಟರ್
    * 304 ಮಹಿಳಾ ಪೊಲೀಸರು, 1600 ಹೋಂ ಗಾರ್ಡ್
    * 3944 ಮಂದಿ ಪೊಲೀಸ್ ಪೇದೆಗಳ ನಿಯೋಜನೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೌಹಾರ್ದದ ಮೈಸೂರು ಜಂಬೂಸವಾರಿ – ಆನೆಗೆ ಅಂಬಾರಿ ಕಟ್ತಾರೆ ಮುಸ್ಲಿಮರು!

    ಸೌಹಾರ್ದದ ಮೈಸೂರು ಜಂಬೂಸವಾರಿ – ಆನೆಗೆ ಅಂಬಾರಿ ಕಟ್ತಾರೆ ಮುಸ್ಲಿಮರು!

    ಮೈಸೂರು: ಕರ್ನಾಟಕದ ನಾಡಹಬ್ಬವಾಗಿರುವ ಮೈಸೂರು ದಸರಾ ಸೌಹಾರ್ದತೆಯ ಪ್ರತೀಕವೂ ಆಗಿದ್ದು, ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿಯ ವೇಳೆ ಆನೆಗೆ ಮುಸ್ಲಿಮರು ಅಂಬಾರಿ ಕಟ್ಟುವುದು ವಿಶೇಷ.

    ಹೌದು, ಸಾವಿರಾರು ಪ್ರವಾಸಿಗರನ್ನು ತನ್ನತ್ತಾ ಸೆಳೆಯುವ ದಸರಾ ಜಂಬೂಸವಾರಿಯ ಗಜಪಡೆಯನ್ನು ಸಿದ್ದಗೊಳಿಸುವಲ್ಲಿ ಮುಸ್ಲಿಂ ಸಮುದಾಯದ ಪಾತ್ರವು ಇದೆ. ಹೀಗಾಗಿ ಮೈಸೂರು ದಸರಾ ಸೌಹಾರ್ದತೆಯ ಪ್ರತೀಕವಾಗಿದೆ.

    ಗಜಪಡೆಯ ಆರೈಕೆಯಲ್ಲದೇ, ಜಂಬೂಸವಾರಿಗೆ ಅಂಬಾರಿಯನ್ನು ಕಟ್ಟುವಲ್ಲಿ ಅಕ್ರಂ, ನವೀದ್, ಕಲೀಂ, ಪಾಷಾ ಹಾಗೂ ಜಕಾವುಲ್ಲಾರವರು ಪ್ರಮುಖ ಪಾತ್ರ ವಹಿಸುತ್ತಾರೆ. ಧರ್ಮದ ಹಂಗಿಲ್ಲದೇ ಧಾರ್ಮಿಕ ಕಾರ್ಯಕ್ರಮಕ್ಕೆ ಇವರ ಶ್ರಮ ಎಲೆಮರೆ ಕಾಯಿಯಂತಿದೆ.

    ಮಾವುತರಾಗಿರುವ ಅಕ್ರಂ ಕಳೆದ 19 ವರ್ಷಗಳಿಂದ ಗಜಪಡೆಯ ಆರೈಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅರಮನೆಯಲ್ಲಿ ಬೀಡುಬಿಟ್ಟಿರುವ 12 ಆನೆಗಳಿಗೆ ಆಹಾರ ಸಿದ್ಧಪಡಿಸುವ ಜವಾಬ್ದಾರಿಯಿಂದ ಹಿಡಿದು ಅವುಗಳ ಆರೈಕೆ, ಅಲಂಕಾರ, ಹಗ್ಗ ನೇಯುವುದು, ಚಿಕಿತ್ಸೆ ನೀಡುವಾಗ ಪಶುವೈದ್ಯರಿಗೆ ಸಹಕರಿಸುತ್ತಾರೆ. ವಿಶೇಷವಾಗಿ ಆನೆಗಳ ಜೊತೆ ಆತ್ಮೀಯತೆಯನ್ನು ಬೆಳೆಸಿಕೊಂಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಅಕ್ರಂ, ನನ್ನ ಪಾಲಿಗೆ ದಸರೆಯೇ ದೊಡ್ಡ ಹಬ್ಬ. ಖುಷಿಯಿಂದ ದೇವರು ನೀಡಿದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನನ್ನ ಮನೆಯ ಕೆಲಸವೆಂದು ತಿಳಿದು ದುಡಿಯುತ್ತಿದ್ದೇನೆ. ಇದಲ್ಲದೇ ನಾವೆಲ್ಲರೂ ಸೇರಿ ಧಾರ್ಮಿಕ ಕಾರ್ಯಕ್ರಮಗಳನ್ನು ಸಹ ಭಕ್ತಿ-ಭಾವದಿಂದ ನೆರವೇರಿಸುತ್ತೇವೆ. ಎಲ್ಲರೂ ಸೇರಿ ಕೆಲಸ ಮಾಡಿ ದಸರಾ ಯಶಸ್ವಿಯಾಗುವಂತೆ ಮಾಡುತ್ತೇವೆ. ಇದರಿಂದ ಮೈಸೂರಿಗೆ ಆಗಮಿಸುವ ಪ್ರವಾಸಿಗರು ಸಹ ಸಂತೋಷ ಪಡುತ್ತಾರೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಅರ್ಜುನ ಆನೆಗೆ 750 ಕೆಜಿ ತೂಕದ ಚಿನ್ನದ ಅಂಬಾರಿ ಹಾಗೂ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಸರಾಗವಾಗಿ ಹೊರುವುದಕ್ಕೆ ಗಾದಿ ಹಾಗೂ ನಮ್ದಾ ಪ್ರಮುಖ ಪಾತ್ರ ವಹಿಸುತ್ತದೆ. ಈ ಗಾದಿ ಹಾಗೂ ನಾಮ್ದಾ ತಯಾರಿಕೆಯಲ್ಲಿ ದಸ್ತಗಿರಿ ಪಾಷಾ ಹಾಗೂ ಜಕಾವುಲ್ಲಾರ ಕೈಚಳಕ ಅಡಗಿದೆ. ಇವರು ಸಿದ್ಧಪಡಿಸಿದ ನಂತರ ಅಂಬಾರಿ ಕಟ್ಟುವ ಹೊಣೆಯನ್ನು ಅಕ್ರಂ ಚಾಣಾಕ್ಷತನದಿಂದ ನಿಭಾಯಿಸುತ್ತಾರೆ.

    ಇವರಲ್ಲದೇ ನವೀದ್ ಎಂಬವರು ಕಳೆದ ಎರಡು ವರ್ಷಗಳಿಂದ ಗೋಪಿಯ ಆನೆಯ ಮಾವುತರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ದಸ್ತಗಿರಿ ಪಾಷಾ ಎಂಬವರು ಅರಮನೆಯ ಆನೆಗಳಾದ ಚಂಚಲಾ, ಸೀತಾ, ಜೆಮಿನಿ, ಪ್ರೀತಿ, ರಾಜೇಶ್ವರಿ ಹಾಗೂ ರೂಬಿ ಕಾಳಜಿಯನ್ನು ನೋಡಿಕೊಳ್ಳುತ್ತಾರೆ. ಇದರ ಜೊತೆ ಅರಮನೆಯ ಗಂಡಾನೆಗಳಾದ ವಿಕ್ರಂ ಹಾಗೂ ಗೋಪಿಯನ್ನು ಅರಮನೆಯ ಆವರಣದಲ್ಲಿ ರಾಜವಂಶಸ್ಥರು ನಡೆಸುವ ನವರಾತ್ರಿ ಕಾರ್ಯಕ್ರಮಗಳಲ್ಲಿ ಆನೆಗಳಿಗೆ 9 ದಿನವು ಅಲಂಕಾರ ಮಾಡಿ ಪೂಜೆಗೆ ಕರೆದುಕೊಂಡು ಹೋಗುವ ಜವಾಬ್ದಾರಿಯನ್ನು ಸಹ ಹೊತ್ತಿದ್ದಾರೆ.

    ಧಾರ್ಮಿಕ ಕಾರ್ಯಕ್ರಮಗಳಿಗೆ ರಕ್ತದ ಹಂಗಿಲ್ಲ. ಮನುಷ್ಯರ ಜಾತಿ, ಧರ್ಮದ ಬಗ್ಗೆ ಆನೆಗಳಿಗೆ ಗೊತ್ತಿಲ್ಲ. ಅನ್ನ ನೀಡುವ ಕೆಲಸವೇ ನನಗೆ ದೇವರು ಎಂದು ದಸ್ತಗಿರಿ ತಮ್ಮ ಕಾಯಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚಿನ್ನದ ಅಂಬಾರಿ ಮೈಸೂರಿಗೆ ಬಂದಿದ್ದು ಹೇಗೆ? `ಮೈಸೂರು ದಸರಾ’ವಾಗಿ ವಿಶ್ವವಿಖ್ಯಾತಿ ಪಡೆದ ಕಥೆ ಓದಿ

    ಚಿನ್ನದ ಅಂಬಾರಿ ಮೈಸೂರಿಗೆ ಬಂದಿದ್ದು ಹೇಗೆ? `ಮೈಸೂರು ದಸರಾ’ವಾಗಿ ವಿಶ್ವವಿಖ್ಯಾತಿ ಪಡೆದ ಕಥೆ ಓದಿ

    ಭಾರತದಲ್ಲಿ ದಸರಾ ಹಬ್ಬವನ್ನು ಎಲ್ಲ ಕಡೆ ಆಚರಿಸಿದ್ದರೂ, ಮೈಸೂರಿನ ದಸರಾ ಮಾತ್ರ ವಿಭಿನ್ನ. ಹೀಗಾಗಿ ಮೈಸೂರಿನ ದಸರಾ ವಿಶ್ವವಿಖ್ಯಾತಿಗಳಿಸಿದೆ. ದಸರಾ ಹಬ್ಬದ ಜಂಬೂ ಸವಾರಿಯಲ್ಲಿ ಪ್ರಮುಖ ಆಕರ್ಷಣೆಯೇ 750 ಕೆಜಿ ತೂಕದ ಚಿನ್ನದ ಅಂಬಾರಿ. ಅಂಬಾರಿಯಲ್ಲಿರುವ ತಾಯಿ ಚಾಮುಂಡೇಶ್ವರಿ ದೇವಿಯ ಈ ಮೆರವಣಿಗೆಯನ್ನು ನೋಡಲು ದೇಶ, ವಿದೇಶಗಳಿಂದ ಲಕ್ಷಾಂತರ ಮಂದಿ ಮೈಸೂರಿಗೆ ಬರುತ್ತಾರೆ.

    ರಸ್ತೆಯ ಮೂಲೆಮೂಲೆಗಳಲ್ಲಿ ಜನಸಾಗರವೇ ಈ ಅಂಬಾರಿಯನ್ನು ನೋಡುತ್ತಿರುತ್ತದೆ. ತಾಯಿ ಚಾಮುಂಡೇಶ್ವರಿಯ ಅಂಬಾರಿಯನ್ನು ಹೊತ್ತು ಅರ್ಜುನ ಮತ್ತು ಆತನ ಜೊತೆ ಆನೆಗಳು ಬನ್ನಿ ಮಂಟಪದತ್ತ ಹೋಗುವ ದೃಶ್ಯ ನೋಡುಗರನ್ನು ಮನಸೂರೆಗೊಳಿಸುವಂತೆ ಮಾಡುತ್ತದೆ.

    ಈ ಅಂಬಾರಿಯ ಮೂಲ ಹಾಗೂ ನಡೆದು ಬಂದ ಕಥೆಯೇ ರೋಚಕ. ಅಂಬಾರಿಯ ನಂಟು ಕೊಪ್ಪಳದ ಕುಮ್ಮಟದುರ್ಗಕ್ಕೂ ಇದೆ. ಅಂಬಾರಿಯು 14ನೇ ಶತಮಾನದ ಪ್ರಾರಂಭದಲ್ಲಿ ಕಂಪಿಲರಾಯನ ಆಡಳಿತದ ಕುಮ್ಮಟ ದುರ್ಗದಲ್ಲಿತ್ತು ಎಂಬುದು ಇತಿಹಾಸದಲ್ಲಿ ಉಲ್ಲೇಖವಾಗಿದೆ.

    ಮಹಾರಾಷ್ಟ್ರದ ದೇವಗಿರಿಯಲ್ಲಿ ಮೂಲತಃ ಈ ರತ್ನ ಖಚಿತ ಅಂಬಾರಿ ಇತ್ತು. ದೇವಗಿರಿ ನಾಶವಾದ ಬಳಿಕ ಇದನ್ನು ದೇವಗಿರಿಯ ರಾಜ ಮುಮ್ಮಡಿ ಸಿಂಗ ನಾಯಕನಿಗೆ ಹಸ್ತಾಂತರ ಮಾಡಿ, ಕಾಪಾಡುವಂತೆ ಕೇಳಿಕೊಳ್ಳಲಾಗಿತ್ತು. ಮುಮ್ಮಡಿ ಸಿಂಗ ನಾಯಕ ಇದನ್ನು ಬಳ್ಳಾರಿ ಬಳಿಯ ರಾಮದುರ್ಗ ಕೋಟೆಯಲ್ಲಿ ಮುಚ್ಚಿಟ್ಟಿದ್ದ. ಈತನ ಮಗ ಕಂಪಿಲರಾಯ ರಾಜ್ಯ ವಿಸ್ತರಿಸುತ್ತಾ, ಕುಮ್ಮಟದುರ್ಗವನ್ನು ರಾಜಧಾನಿಯಾಗಿ ಮಾಡಿಕೊಳ್ಳುತ್ತಾನೆ. ಕುಮ್ಮಟದುರ್ಗದಲ್ಲಿ ಶ್ರೀ ದುರ್ಗಾದೇವಿಯನ್ನು ಸ್ಥಾಪಿಸಿ ಪೂಜಿಸಲಾಗುತ್ತದೆ. ಈ ಪೂಜೆಯನ್ನು ಕಂಪಿಲರಾಯನ ಮಗ ಯುವರಾಜನ ಕಾಲದಲ್ಲಿಯೂ ನಡೆಯುತ್ತದೆ.

    1327ರಲ್ಲಿ ದೆಹಲಿ ಸುಲ್ತಾನರ ದಾಳಿಗೆ ಕಂಪಿಲ ರಾಜ್ಯ ನಾಶವಾಗುತ್ತದೆ. ಆಗ ಭಂಡಾರ ಸಂರಕ್ಷಣೆ ಮಾಡುತ್ತಿದ್ದ ಹಕ್ಕ-ಬುಕ್ಕ ಸಹೋದರರು ಚಿನ್ನದ ಅಂಬಾರಿಯನ್ನು ಹುತ್ತವೊಂದರಲ್ಲಿ ಮುಚ್ಚಿಟ್ಟು ಹೋಗುತ್ತಾರೆ. ಇದಾದ ನಂತರ 1,336ರ ವೇಳೆಗೆ ದೆಹಲಿ ಸುಲ್ತಾನರು ನಾಶವಾದ ಸಮಯದಲ್ಲಿ ಪುನಃ ರಾಜ್ಯ ಸ್ಥಾಪಿಸುವುದಕ್ಕೆ ಹಕ್ಕಬುಕ್ಕರು ಮುಂದಾಗುತ್ತಾರೆ. ಆನೆಗೊಂದಿಯಲ್ಲಿ ವಿಜಯನಗರ ಸಾಮ್ರಾಜ್ಯ ಸ್ಥಾಪನೆ ಮಾಡಲಾಗುತ್ತದೆ. ಇದು ವಿಜಯನಗರ ಸಾಮ್ರಾಜ್ಯದ ಮೊದಲನೇ ರಾಜಧಾನಿಯಾಗುತ್ತದೆ. ನಂತರ ಹಕ್ಕ ಬುಕ್ಕರು ಹಂಪಿಯಲ್ಲಿ ವಿಜಯನಗರ ಸಾಮ್ರಾಜ್ಯದ ಎರಡನೇ ರಾಜಧಾನಿ ಸ್ಥಾಪನೆ ಮಾಡುತ್ತಾರೆ. ಇದಾದ ನಂತರ ಹಂಪಿಗೆ ಅಂಬಾರಿ ಸ್ಥಳಾಂತರ ಮಾಡಲಾಗುತ್ತದೆ.

    ಸಂಗಮ, ಸಾಳವ, ತುಳುವ ಹಾಗೂ ಅರವಿಡು ಎನ್ನುವ ನಾಲ್ಕು ವಂಶಗಳು ವಿಜಯನಗರ ಸಾಮ್ರಾಜ್ಯ ಆಳ್ವಿಕೆ ಮಾಡುತ್ತವೆ. ವಿಜಯನಗರ ಸಾಮ್ರಾಜ್ಯ ನಾಶವಾದಾಗ ಅಂಬಾರಿಯನ್ನು ಸಂರಕ್ಷಣೆಗಾಗಿ ಆಂಧ್ರದ ಪೆನಗೊಂಡಕ್ಕೆ ಸ್ಥಳಾಂತರ ಮಾಡಲಾಗುತ್ತದೆ. ಬಳಿಕ ಕೆಲವು ವರ್ಷದ ನಂತರ ಶ್ರೀರಂಗಪಟ್ಟಣ, ಕೊನೆಯದಾಗಿ ಮೈಸೂರಿಗೆ ಬಂದು ಸೇರುತ್ತದೆ.

    `ಮೈಸೂರು ದಸರಾ’ ಆಗಿದ್ದು ಹೇಗೆ?
    ಆರಂಭದಲ್ಲಿ ವಿಜಯದಶಮಿಯನ್ನು ವಿಜಯನಗರದ ಅರಸರು ಆಚರಿಸಿಕೊಂಡು ಬರುತ್ತಿದ್ದರು. ವಿಜಯನಗರ ಸಾಮ್ರಾಜ್ಯ ಪತನದ ಬಳಿಕ ಮೈಸೂರಿನ ಯದುವಂಶಸ್ಥರು ಇದನ್ನು ಮುಂದುವರಿಸಿಕೊಂಡು ಬಂದರು ಎಂದು ಇತಿಹಾಸ ಹೇಳುತ್ತದೆ. ಶ್ರೀರಂಗಪಟ್ಟಣವನ್ನು ರಾಜಧಾನಿಯನ್ನಾಗಿಸಿಕೊಂಡು ರಾಜ್ಯವನ್ನು ಆಳುತ್ತಿದ್ದ ರಾಜ ಒಡೆಯರ್ 1610ರಲ್ಲಿ ವಿಜಯದಶಮಿಯನ್ನು ಮೊದಲು ಆಚರಿಸಿದರು. ಮುಮ್ಮಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ (1799-1868) ತಮ್ಮ ರಾಜಧಾನಿಯನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ಬದಲಾಯಿಸಿದರು. 1800ರಲ್ಲಿ ಮೈಸೂರಿನಲ್ಲಿ ದಸರಾ ಆರಂಭವಾಗಿ ಬಳಿಕ “ಮೈಸೂರು ದಸರಾ” ಎಂದೇ ವಿಶ್ವವಿಖ್ಯಾತಿ ಪಡೆಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜಬೀದಿಯಲ್ಲಿ ತಾಲೀಮು ಆರಂಭ: ದಸರಾ ಆನೆಗಳ ತೂಕ 1 ವರ್ಷದ ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?

    ರಾಜಬೀದಿಯಲ್ಲಿ ತಾಲೀಮು ಆರಂಭ: ದಸರಾ ಆನೆಗಳ ತೂಕ 1 ವರ್ಷದ ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?

    ಮೈಸೂರು: ಮೈಸೂರು ದಸರೆಗಾಗಿ ಆಗಮಿಸಿರುವ ಕ್ಯಾಪ್ಟನ್ ಅರ್ಜುನ ನೇತೃತ್ವದ ಮೊದಲ ಗಜಪಡೆಯ ಟೀಂ ರಾಜಬೀದಿಯಲ್ಲಿ ತಾಲೀಮು ಆರಂಭಿಸಿದೆ.

    ಅಂಬಾರಿ ಮೆರವಣಿಗೆ ವೇಳೆಗೆ ಆನೆಗಳು ಮತ್ತಷ್ಟು ಶಕ್ತಿಶಾಲಿ ಆಗಬೇಕಿದ್ದು, ತಾಲೀಮು ಆರಂಭಿಸುವ ಮುನ್ನ ಅವುಗಳ ತೂಕ ಪರೀಕ್ಷೆ ನಡೆಸಲಾಗುತ್ತದೆ. ಗಜಪಡೆಯ ಆರೈಕೆ ಹಾಗೂ ಆರೋಗ್ಯದ ಮೇಲೆ ನಿಗಾ ಇಡುವ ಸಲುವಾಗಿ ಅರಣ್ಯ ಇಲಾಖೆಯೂ ಈ ಪರೀಕ್ಷೆ ನಡೆಸುತ್ತದೆ. ಕಳೆದ ಬಾರಿ ದಸರಾ ಮುಗಿಸಿ ಕಾಡಿಗೆ ಹಿಂದಿರುಗಿದ್ದ ಗಜಪಡೆಯ ತೂಕಕ್ಕೂ ಇವತ್ತಿನ ತೂಕಕ್ಕೂ ಇರುವ ವ್ಯತ್ಯಾಸದ ಕುರಿತ ಇನ್‍ಟ್ರೆಸ್ಟಿಂಗ್ ಅಂಶಗಳು ಇಂತಿದೆ.

    ಇಂದು ಟ್ರಕ್‍ಗಳ ತೂಕ ಹಾಕುವ ಕೇಂದ್ರದಲ್ಲಿ ಆನೆಗಳ ತೂಕ ಪರೀಕ್ಷಿಸಲಾಯಿತು. ಕ್ಯಾಪ್ಟನ್ ಅರ್ಜುನ, ವರಲಕ್ಷ್ಮಿ, ವಿಕ್ರಮ, ಧನಂಜಯ, ಗೋಪಿ ಮತ್ತು ಚೈತ್ರ ಆನೆಗಳ ದೇಹ ತೂಕ ಪರೀಕ್ಷಿಸಲಾಯಿತು. ಕಳೆದ ವರ್ಷ 5,250 ಕೆಜಿ ತೂಕವಿದ್ದ ಕ್ಯಾಪ್ಟನ್ ಅರ್ಜುನ ಈಗ 5,650 ಕೆಜಿ ತೂಕವಿದ್ದಾನೆ. ಅಲ್ಲಿಗೆ, ಒಂದು ವರ್ಷಕ್ಕೆ 400 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾನೆ. ಇನ್ನೂ ವರಲಕ್ಷ್ಮಿ ಆನೆ 3,120 ಕೆಜಿ ತೂಕವಿದೆ. ಕಳೆದ ವರ್ಷ ಈ ಆನೆ 2,830 ಕೆಜಿ ಇತ್ತು. ಅಲ್ಲಿಗೆ 290 ಕೆಜಿ ತೂಕವನ್ನು ವರಲಕ್ಷ್ಮಿ ಹೆಚ್ಚಿಸಿಕೊಂಡಿದೆ.

    ವಿಕ್ರಮ ಆನೆ 3,985 ಕೆಜಿ, ಗೋಪಿ 4,435 ಕೆಜಿ, ಚೈತ್ರಾ 2,920 ಕೆಜಿ ಹಾಗೂ ಇದೇ ಮೊದಲ ಬಾರಿಗೆ ದಸರಾದಲ್ಲಿ ಭಾಗವಹಿಸುತ್ತಿರುವ ಧನಂಜಯ ಆನೆ 4,045 ಕೆಜಿ ತೂಕವಿದ್ದಾನೆ. ಅಲ್ಲಿಗೆ ಮೊದಲ ತಂಡದ ಆನೆಗಳಲ್ಲಿ ಕ್ಯಾಪ್ಟನ್ ಅರ್ಜುನ ಹೆಚ್ಚು ಬಲಶಾಲಿಯಾಗಿದ್ದಾನೆ. ಉಳಿದಂತೆ ಎಲ್ಲಾ ಆನೆಗಳು ಸದೃಢವಾಗಿವೆ. ಆನೆಗಳ ಬಲವನ್ನು ಇನ್ನಷ್ಟು ಹೆಚ್ಚಿಸಲು ಇಂದಿನಿಂದ ಪೌಷ್ಠಿಕ ಆಹಾರ ನೀಡಲಾಗುತ್ತದೆ. ಬೆಲ್ಲ, ತೆಂಗಿನಕಾಯಿ, ಭತ್ತ, ಮುದ್ದೆ, ಬೆಣ್ಣೆ ಸೇರಿದಂತೆ ಪೌಷ್ಠಿಕವಾದ ಕಾಳು, ಹಸಿರು ಹುಲ್ಲನ್ನು ಪ್ರತಿ ದಿನವೂ ನಾಲ್ಕೈದು ಬಾರಿ ಆನೆಗಳಿಗೆ ನೀಡಿ ಅವುಗಳನ್ನು ಇನ್ನಷ್ಟು ಬಲಶಾಲಿ ಆಗುವಂತೆ ಮಾಡಲಾಗುತ್ತದೆ.

    ನಾಡಿನಲ್ಲಿ ಒಂದೂವರೆ ತಿಂಗಳು ಸಿಗುವ ರಾಜಾತಿಥ್ಯದಲ್ಲಿ ಆನೆಗಳು ತಮ್ಮ ಬಲವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವುದರಲ್ಲಿ ಅನುಮಾನಗಳೇ ಇಲ್ಲ. ವಿಜಯದಶಮಿ ಮೆರವಣಿಗೆಯಲ್ಲಿ ಐದು ಕಿಮೀ ದೂರವನ್ನು ಈ ಆನೆಗಳು ಕ್ರಮಿಸುತ್ತದೆ. ಹೀಗಾಗಿ ಆನೆಗಳ ಸಾರ್ಮಥ್ಯದ ಮೇಲೆ ಅರಣ್ಯ ಇಲಾಖೆ ಹೆಚ್ಚು ನಿಗಾವಹಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದಸರಾ ಜಂಬೂ ಸವಾರಿಗೆ ಆನೆಗಳ ಭರ್ಜರಿ ತಾಲೀಮು

    ದಸರಾ ಜಂಬೂ ಸವಾರಿಗೆ ಆನೆಗಳ ಭರ್ಜರಿ ತಾಲೀಮು

    ಮೈಸೂರು: ವಿಶ್ವವಿಖ್ಯಾತ ದಸರಾ ಹಬ್ಬ ಈಗಾಗಲೇ ಶುರುವಾಗಿದ್ದು, ಅರಮನೆ ಮುಂದೆ ಹಲವು ತಯಾರಿಗಳು ನಡೆಯುತ್ತಿವೆ. ಅದರಲ್ಲಿ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಇನ್ನು ನಾಲ್ಕು ದಿನಗಳು ಬಾಕಿ ಇರುವಾಗಲೇ ಇಂದು ಅರಮನೆ ಮೈದಾನದಲ್ಲಿ ಆನೆಗಳ ತಾಲೀಮು ಭರ್ಜರಿಯಾಗಿ ನಡೆಯಿತು.

    ಮೈಸೂರಿನ ಎಸಿಪಿ ಶೈಲೇಂದ್ರ ಮತ್ತು ಇನ್ಸ್ ಪೆಕ್ಟರ್ ಚಂದ್ರಶೇಖರ್ ಅಂಬಾರಿ ಹೋರುವ ಅರ್ಜುನನಿಗೆ ಪುಷ್ಪ ಎರಚುವ ಮೂಲಕ ಆನೆಗಳ ತಾಲಿಮಿಗೆ ಚಾಲನೆ ನೀಡಿದರು. ವಿಜಯದಶಮಿಯಂದು ಅಂಬಾರಿ ಹೊರುವ ಅರ್ಜುನ ಮತ್ತು ಸಾಥ್ ನೀಡುವ ಆನೆಗಳಿಗೆ ಸರತಿ ಸಾಲಿನ ಪೂರ್ವನಿಗದಿಗಾಗಿ ಇಂದು ತಾಲೀಮು ಕಾರ್ಯ ನಡೆಯಿತು. ಇಂದು ನಿಗದಿಯಾಗಿದ್ದ ಮರದ ಅಂಬಾರಿ ಹೋರುವ ತಾಲಿಮನ್ನು ರದ್ದುಗೊಳಿಸಲಾಯಿತು. ಅಂಬಾರಿ ನಡೆಯುವ ಸಮಯದಲ್ಲಿ ಯಾವುದೇ ರೀತಿಯ ಅಡಚಣೆಗಳು ನಡೆಯಬಾರದು ಎಂಬ ದೃಷ್ಟಿಯಿಂದ ಈ ತಾಲೀಮು ಕಾರ್ಯ ನಡೆಯುತ್ತದೆ.

    ವಿಜಯ ದಶಮಿಯಂದು ಅಂಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಲಿದ್ದಾರೆ. ಇನ್ನೂ ತಾಲೀಮಿನ ವೇಳೆ ಕೆ.ಎಸ್.ಆರ್.ಪಿ, ಡಿ.ಎ.ಆರ್, ಸಿ.ಎ.ಆರ್, ಅಶ್ವರೋಹಿ ದಳ, ಹೋಮ್ ಗಾರ್ಡ್ ಸಿಬ್ಬಂದಿಗಳ ಪೂರ್ವ ಪಥಸಂಚಲನವೂ ಕೂಡ ನಡೆಯಿತು.

  • ಮೈಸೂರಿನಲ್ಲಿ ದಸರಾಗೆ ತಯಾರಿ: ಇಂದಿನಿಂದ ಅರ್ಜುನನಿಗೆ ಮರದ ಅಂಬಾರಿ ಹೊರುವ ತಾಲೀಮು

    ಮೈಸೂರಿನಲ್ಲಿ ದಸರಾಗೆ ತಯಾರಿ: ಇಂದಿನಿಂದ ಅರ್ಜುನನಿಗೆ ಮರದ ಅಂಬಾರಿ ಹೊರುವ ತಾಲೀಮು

    ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂ ಸವಾರಿಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ದಸರಾ ಗಜಪಡೆಯ ತಾಲೀಮು ಜೋರಿದೆ.

    ಇಷ್ಟು ದಿನ ಮಣ್ಣಿನ ಮೂಟೆಗಳನ್ನು ಬೆನ್ನ ಮೇಲೆ ಹೊತ್ತು ತಾಲೀಮು ನಡೆಸುತ್ತಿದ್ದ ಅರ್ಜುನನಿಗೆ ಇವತ್ತಿನಿಂದ ಮರದ ಅಂಬಾರಿ ಕಟ್ಟಿ ತಾಲೀಮು ಆರಂಭಿಸಲಾಯಿತು. 750 ಕೆಜಿ ಚಿನ್ನದ ಅಂಬಾರಿ ಹೊತ್ತು ಅರ್ಜುನ ಸಾಗಬೇಕಿರುವ ಕಾರಣ ಇವತ್ತಿನಿಂದ 250 ಕೆಜಿ ತೂಕದ ಮರದ ಅಂಬಾರಿ ಹಾಗೂ 500 ಕೆಜಿ ತೂಕದ ಮರಳಿನ ಮೂಟೆಗಳನ್ನು ಅರ್ಜನನ ಬೆನ್ನಿಗೆ ಕಟ್ಟಿ ತಾಲೀಮು ಶುರು ಮಾಡಲಾಯಿತು.

    ಮೈಸೂರು ಅರಮನೆ ಆವರಣದಲ್ಲಿ ಅರ್ಜುನನ ಬೆನ್ನಿಗೆ ಮರದ ಅಂಬಾರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಟ್ಟಿದರು. ಡಿಸಿಎಫ್ ಏಡುಕುಂಡಲ, ಆನೆ ವೈದ್ಯ ಡಾ.ನಾಗರಾಜ್ ಮರದ ಅಂಬಾರಿಗೆ ಪೂಜೆ ಸಲ್ಲಿಸಿದರು. ಮರದ ಅಂಬಾರಿ ಹೊತ್ತು ಸಾಗುವ ಕ್ಯಾಪ್ಟನ್ ಅರ್ಜುನನಿಗೆ ಕುಮ್ಕಿ ಆನೆಗಳಾದ ವಿಜಯ, ವರಲಕ್ಷ್ಮಿ ಸಾಥ್ ನೀಡಿದವು.