ಧಾರವಾಡ: ಅಂಬುಲೆನ್ಸ್ಗೆ (Ambulence) ಎಷ್ಟೋ ಜನ ಜಾಗಬಿಟ್ಟುಕೊಡುವುದೇ ಇಲ್ಲ. ಇನ್ನು, ಸಿಎಂ ಕಾನ್ವೆ ಕಾರು ಬರುವಾಗ ಅಂಬುಲೆನ್ಸ್ಗೆ ಜಾಗಬಿಟ್ಟುಕೊಡುವುದಿಲ್ಲ, ಟ್ರಾಫಿಕ್ನಲ್ಲೇ ಅಂಬುಲೆನ್ಸ್ ಸಿಲುಕುತ್ತೆ ಅಂತಾ ದೂರಿದ್ದವರೇ ಹೆಚ್ಚು. ಆದರೆ ಸಿಎಂ ಸಿದ್ದರಾಮಯ್ಯ (Siddaramaiah), ಅಂಬುಲೆನ್ಸ್ಗೆ ದಾರಿ ಮಾಡಿಕೊಡುವ ಮೂಲಕ ಅಪವಾದಿಂದ ಮುಕ್ತರಾಗಿದ್ದಾರೆ.
ಹೌದು, ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯನ್ನ ಅಂಬುಲೆನ್ಸ್ನಲ್ಲಿ ಕರೆದೊಯ್ಯುವಾಗ ದಾರಿ ಬಿಟ್ಟು ಕೊಟ್ಟಿದ್ದಾರೆ ಸಿಎಂ ಸಿದ್ದರಾಮಯ್ಯ. ಧಾರವಾಡ (Dharwad) ಕೃಷಿ ವಿವಿಯ ಕೃಷಿ ಮೇಳ ಉದ್ಘಾಟನೆ ಕಾರ್ಯಕ್ರಮ ಮುಗಿಸಿ ಹುಬ್ಬಳ್ಳಿಗೆ ವಾಪಸ್ ಆಗುತ್ತಿದ್ದ ವೇಳೆ ಧಾರವಾಡ ನಗರದ ಎನ್ಟಿಟಿಎಫ್ ಬಳಿ ಸಿಎಂ ಕಾರು ಇದ್ದಾಗಲೇ ಹಿಂದಿನಿಂದ ಅಂಬುಲೆನ್ಸ್ ಬಂದಿದೆ. ಇದನ್ನೂ ಓದಿ: ಮಡಿಕೇರಿ | ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ
ತಿರುವನಂತಪುರ: ವಾಹನಗಳ ಉದ್ದನೆಯ ಸಾಲು, ಭಾರೀ ಟ್ರಾಫಿಕ್ ಜಾಮ್… ಈ ಟ್ರಾಫಿಕ್ (Traffic) ಜಾಮ್ ಮಧ್ಯೆ ನಿರಂತರವಾಗಿ ಕೇಳುತ್ತಿದ್ದ ಅಂಬುಲೆನ್ಸ್ (Ambulence) ಸೈರನ್ ಸದ್ದು… ಇದರ ಮಧ್ಯೆ ಓಡೋಡಿ ಬರುತ್ತಿರುವ ಪೊಲೀಸ್ ಅಧಿಕಾರಿ. ಟ್ರಾಫಿಕ್ ಜಾಮ್ನಿಂದ ಅಂಬುಲೆನ್ಸ್ನಲ್ಲಿ ಒದ್ದಾಡುತ್ತಿದ್ದ ಜೀವ ಉಳಿಸಲು ಕೇರಳದ ತ್ರಿಶೂರ್ (Thrissur) ನಗರದಲ್ಲಿ ಎಎಸ್ಐ ಅಪರ್ಣಾ (ASI Aparna) ಲವ್ ಕುಮಾರ್ ರಸ್ತೆಯಲ್ಲಿ ಕಿ.ಮೀಗಟ್ಟಲೇ ಓಡಿ ಟ್ರಾಫಿಕ್ ಕ್ಲಿಯರ್ ಮಾಡಲು ಪ್ರಯತ್ನ ಪಟ್ಟಿದ್ದಾರೆ.
ഓരോ ജീവനും വിലപ്പെട്ടത്🥰
അപകടാവസ്ഥയിലായ ഒരു ജീവനും കൊണ്ടാണ് ഓരോ ആംബുലൻസും വരുന്നത്. ആംബുലൻസ് വരുന്ന സൂചന ലഭിച്ചാൽ ആംബുലൻസിന് എത്രയും വേഗം കടന്നു പോകാൻ വഴിയൊരുക്കുക എന്നതാണ് നമ്മുടെ കടമ.#keralapolicepic.twitter.com/UnXIatUXxT
ಇನ್ನು ಈ ಪೊಲೀಸ್ ಅಧಿಕಾರಿ ಈ ಹಿಂದೆ ದುಡ್ಡಿನ ಕೊರತೆಯಿಂದ ಮಹಿಳೆಯ ಮೃತದೇಹ ನೀಡದ್ದಕ್ಕೆ ತನ್ನ ಬಂಗಾರದ ಬಳೆಯನ್ನು ನೀಡಿ ಗಿರವಿ ಇಡಲು ಹೇಳಿ ದುಡ್ಡಿನ ವ್ಯವಸ್ಥೆ ಮಾಡಿದ್ದರು. ಅಲ್ಲದೇ ಕ್ಯಾನ್ಸರ್ ರೋಗಿಗಳಿಗೆ ತಲೆಗೂದಲನ್ನು ಕೂಡ ದಾನ ಮಾಡಿ ಗಮನ ಸೆಳೆದಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ
ಪಾಟ್ನಾ: ಗೃಹರಕ್ಷಕ ದಳ (Home Guard) ನೇಮಕಾತಿ ವೇಳೆ ಮೂರ್ಛೆ ಹೋದ 26 ವರ್ಷದ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ, ಚಲಿಸುತ್ತಿದ್ದ ಅಂಬುಲೆನ್ಸ್ನಲ್ಲೇ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ (Bihar) ಬೋಧ್ ಗಯಾದಲ್ಲಿ ನಡೆದಿದೆ.
ಏನಾಗಿತ್ತು?
ಇದೇ ಜುಲೈ 24ರಂದು ಬೋಧ್ ಗಯಾದ ಬಿಹಾರ ಮಿಲಿಟರಿ ಪೊಲೀಸ್ ಮೈದಾನದಲ್ಲಿ ಗೃಹರಕ್ಷಕ ದಳದ ನೇಮಕಾತಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಮಹಿಳೆ ಮೂರ್ಛೆ ಹೋಗಿದ್ದಳು. ಇದರಿಂದ ತರಬೇತಿ ಕ್ಯಾಂಪಸ್ನಲ್ಲೇ ಇದ್ದ ಅಂಬುಲೆನ್ಸ್ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಹಿರಿಯ ಅಧಿಕಾರಿಗಳು ವ್ಯವಸ್ಥೆ ಮಾಡಿದರು. ಅಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪ್ರಜ್ಞಾಹೀನಳಾಗಿದ್ದ ನನ್ನ ಮೇಲೆ ಕೆಲ ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಸಂತ್ರಸ್ತೆ ಹೇಳಿಕೆ ಆಧರಿಸಿ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದರು. ತನಿಖೆಗಾಗಿ ವಿಶೇಷ ತಂಡ ಮತ್ತು ವಿಧಿವಿಜ್ಞಾನ ತಂಡವನ್ನ ನಿಯೋಜನೆ ಮಾಡಲಾಗಿತ್ತು. ಕೆಲವೇ ಗಂಟೆಗಳಲ್ಲಿ ಅಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ಇಬ್ಬರನ್ನು ತನಿಖಾ ತಂಡ ಬಂಧಿಸಿತು. ಸದ್ಯ ಇಬ್ಬರು ಪೊಲೀಸ್ ವಶದಲ್ಲಿದ್ದು ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಚಿಕ್ಕಪ್ಪನಿಂದಲೇ ಅಣ್ಣನ ಮಕ್ಕಳ ಕ್ರೂರ ಹತ್ಯೆ – ಇಬ್ಬರು ಸಾವು, 5 ವರ್ಷದ ಮಗು ಜೀವನ್ಮರಣ ಹೋರಾಟ
ವಿಜಯಪುರ: ಲಾರಿ, ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ನಲ್ಲಿದ್ದ ಬಿಎಸ್ಎಫ್ ಯೋಧ (BSF soldier) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ನಿಡಗುಂದಿ (Nidagundi) ಪಟ್ಟಣದ ಎನ್ಎಚ್ 50ರಲ್ಲಿ ನಡೆದಿದೆ.
ಮುದ್ದೇಬಿಹಾಳ ತಾಲೂಕಿನ ಕಾಳಗಿ ಗ್ರಾಮದ ಮೌನೇಶ ರಾಠೋಡ್(35) ಮೃತ ಯೋಧ. ಲಾರಿ ಬೈಕ್ಗೆ ಡಿಕ್ಕಿಯಾದ ಬಳಿಕ ಬೈಕ್ ಸಮೇತ ಎಳೆದುಕೊಂಡು ಎದುರಿಗೆ ಬರುತ್ತಿದ್ದ ಅಂಬುಲೆನ್ಸ್ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಅಂಬುಲೆನ್ಸ್ ಚಾಲಕ ಕೇರಳ ಮೂಲದ ರಿತೇಶ್ ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: 26 ರಫೇಲ್ ಯುದ್ಧ ವಿಮಾನ ಖರೀದಿ – ಭಾರತ ಫ್ರಾನ್ಸ್ ಮಧ್ಯೆ 63,000 ಕೋಟಿ ಡೀಲ್ಗೆ ಅನುಮೋದನೆ
ಅಪಘಾತದ ಕಾರಣ ಎನ್ಎಚ್ 50ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಪಘಾತಕ್ಕೀಡಾದ ಲಾರಿ, ಅಂಬುಲೆನ್ಸ್ ಹಾಗೂ ಬೈಕ್ ತೆರವು ಮಾಡಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅಂಬುಲೆನ್ಸ್ನಲ್ಲಿದ್ದ ಸಹಾಯಕನಿಗೆ ಹಾಗೂ ಲಾರಿ ಚಾಲಕ, ಕ್ಲೀನರ್ಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಏಪ್ರಿಲ್ 10ರಂದು ತೆರೆಗಾಣಲು ಸಜ್ಜಾದ ‘ವಿದ್ಯಾಪತಿ’!
ಘಟನಾ ಸ್ಥಳಕ್ಕೆ ನಿಡಗುಂದಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಕ್ನೋ: ಉತ್ತರ ಪ್ರದೇಶದ (Utttar Pradesh) ಹಾಪುರ್ ಜಿಲ್ಲೆಯಲ್ಲಿ (Hapur District) 50 ವರ್ಷದ ಮಹಿಳೆಯೊಬ್ಬರು ಅಂಬುಲೆನ್ಸ್ನಲ್ಲಿ (Ambulance) 14ನೇ ಮಗುವಿಗೆ ಜನ್ಮ ನೀಡಿದ್ದಾರೆ.
ಪಿಲ್ಖುವಾದ ಮೊಹಲ್ಲಾ ಬಜರಂಗಪುರಿಯ ನಿವಾಸಿ ಇಮಾಮುದ್ದೀನ್ ಅವರ ಪತ್ನಿ 50 ವರ್ಷದ ಗುಡಿಯಾ ಬೇಗಂ ಅವರಿಗೆ ಹೆರಿಗೆ ನೋವು ಇತ್ತು. ಅವರನ್ನು ಪಿಲ್ಖುವಾ ಪ್ರಾಥಮಿಕ ಆರೋಗ್ಯಕ್ಕೆ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಈ ವೇಳೆ ವೈದ್ಯರು ಮೀರತ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು. ಆರೋಗ್ಯ ಇಲಾಖೆಯ 108 ಆಂಬ್ಯುಲೆನ್ಸ್ ಮಹಿಳೆಯನ್ನು ಕರೆದೊಯ್ಯಲಾಯಿತು. ಇದನ್ನೂ ಓದಿ: ಭೂಕಂಪದಿಂದಾಗಿ ಆಸ್ಪತ್ರೆ ನಾಮಾವಶೇಷ – ಬ್ಯಾಂಕಾಕ್ನ ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ದಾರಿಯಲ್ಲಿ ಗುಡಿಯಾಗೆ ಹೆರಿಗೆ ನೋವು ಹೆಚ್ಚಾಯಿತು. ಪರಿಸ್ಥಿತಿ ಹದಗೆಟ್ಟಾಗ ಅಂಬುಲೆನ್ಸ್ ನಿಲ್ಲಿಸಿ ಸಿಬ್ಬಂದಿ ಲಭ್ಯವಿರುವ ಹೆರಿಗೆ ಕಿಟ್ ಸಹಾಯದಿಂದ ಮಹಿಳೆಗೆ ಹೆರಿಗೆ ಮಾಡುವಲ್ಲಿ ಯಶಸ್ವಿಯಾದರು. ಹೆರಿಗೆಯ ನಂತರ, ತಾಯಿ ಮತ್ತು ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಸಮಯದಲ್ಲಿ ಮಹಿಳೆಯ 22 ವರ್ಷದ ಮಗ ಕೂಡ ಆಸ್ಪತ್ರೆಗೆ ಬಂದಿದ್ದ.
ರಾಯಚೂರು: ನಗರದ ಹೊರವಲಯದ ಆಶಾಪುರ ರಸ್ತೆಯಲ್ಲಿ ಚಲಿಸುತ್ತಿದ್ದ ಅಂಬುಲೆನ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲೇ ಅಂಬುಲೆನ್ಸ್ ಹೊತ್ತಿ ಉರಿದಿದೆ.
ಮೃತದೇಹವನ್ನ ಸಾಗಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಅಂಬುಲೆನ್ಸ್ನ ಇಂಜಿನ್ನಲ್ಲಿ ಸಮಸ್ಯೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಅಂಬುಲೆನ್ಸ್ನಲ್ಲಿದ್ದ ಮೂವರು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಯಚೂರಿನಿಂದ ಉಡಮಗಲ್ ಗ್ರಾಮಕ್ಕೆ ಹೊರಟಿದ್ದ ಅಂಬುಲೆನ್ಸ್ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು, ದಟ್ಟ ಹೊಗೆಯೊಂದಿಗೆ ಹೊತ್ತಿ ಉರಿದಿದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಳಿಕ ಕುಟುಂಬಸ್ಥರು ಮೃತದೇಹವನ್ನು ಬೇರೆ ವಾಹನದಲ್ಲಿ ಗ್ರಾಮಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭೂಪಾಲ್: ಅಂಬುಲೆನ್ಸ್ನಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದಾರುಣ ಘಟನೆ ಮಧ್ಯಪ್ರದೇಶದ (Madhya Pradesh) ಮೌಗಂಜ್ನಲ್ಲಿ (Mauganj) ನಡೆದಿದ್ದು, ತಡವಾಗಿ (ನ.22ರಂದು) ಬೆಳಕಿಗೆ ಬಂದಿದೆ.
ಮೌಗಂಜ್ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯಪ್ರದೇಶ ಸರ್ಕಾರವು ಪಿಪಿಪಿ ಮಾದರಿಯಲ್ಲಿ ಗ್ರಾಮೀಣ ಭಾಗದ ಮಹಿಳೆಯರು, ಮಕ್ಕಳು ಹಾಗೂ ಬಿಪಿಎಲ್ ಕುಟುಂಬಗಳ ಆರೋಗ್ಯ ರಕ್ಷಣೆಗಾಗಿ ಜನನಿ ಎಕ್ಸ್ಪ್ರೆಸ್ ಅಂಬುಲೆನ್ಸ್ ಸೌಲಭ್ಯ ಒದಗಿಸಿತ್ತು. ಈ 108 ಅಂಬುಲೆನ್ಸ್ನಲ್ಲೇ ಕೃತ್ಯ ನಡೆದಿದೆ.
ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಸಾಕೇತ್ ಪಾಂಡೆ ಮಾಹಿತಿ ಪ್ರಕಾರ, ಅಪ್ರಾಪ್ತೆಯು ತನ್ನ ಸಹೋದರಿ ಹಾಗೂ ಮಾವನೊಂದಿಗೆ ಅಂಬುಲೆನ್ಸ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕ ಹಾಗೂ ಆತನ ಮೂವರು ಸಹಚರರು ಸಹ ಅಂಬುಲೆನ್ಸ್ನಲ್ಲಿದ್ದರು. ಮಾರ್ಗಮಧ್ಯೆ ನೀರು ತರಲೆಂದು ಬಾಲಕಿಯ ಸಹೋದರಿ ಹಾಗೂ ಆಕೆಯ ಮಾವ ಕೆಳಗಿಳಿದಿದ್ದಾರೆ. ಅವರಿಗಾಗಿ ಕಾಯದೇ ಅಂಬುಲೆನ್ಸ್ನ್ನೂ ಚಲಾಯಿಸಿಕೊಂಡು ಬಂದಿದ್ದು, ಚಾಲಕನ ಸ್ನೇಹಿತ ರಾಕೇಶ್ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಆ ದಿನ ರಾತ್ರಿ ಆಕೆಯನ್ನು ವಾಹನದಲ್ಲಿಯೇ ಇರಿಸಿಕೊಂಡು ಮಾರನೇ ದಿನ ರಸ್ತೆಯ ಬದಿಯಲ್ಲಿ ಬಿಸಾಡಿ ಹೋಗಿದ್ದಾರೆ. ಬಳಿಕ ಅಪ್ರಾಪ್ತೆ ಮನೆ ತಲುಪಿದ್ದು, ನಡೆದ ವಿಷಯವನ್ನು ತಾಯಿಗೆ ತಿಳಿಸಿದ್ದಾಳೆ. ಇದ್ದರಿಂದ ಗಾಬರಿಯಾದ ತಾಯಿ ಮನೆಯ ಮರ್ಯಾದೆ ಪ್ರಶ್ನೆ ಎಂದು ದೂರು ದಾಖಲಿಸಿರಲಿಲ್ಲ.
ಬಳಿಕ ನ.25 ರಂದು ಸಂತ್ರಸ್ತೆ ಹಾಗೂ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದು, ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ನ.27 ರಂದು ನಾಲ್ವರ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ಈ ಕೃತ್ಯದಲ್ಲಿ ಸಂತ್ರಸ್ತೆಯ ಸಹೋದರಿ ಹಾಗೂ ಮಾವ ಭಾಗಿಯಾಗಿರುವುದಾಗಿ ತಿಳಿಸಿದ್ದು, ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.
ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅತ್ಯಾಚಾರ ಎಸಗಿರುವುದಾಗಿ ದೃಢಪಟ್ಟಿದ್ದು, ಇನ್ನುಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ಮತ್ತೆ ಚಿರತೆ ಹಾವಳಿ – ಒಬ್ಬೊಬ್ಬೊರೆ ಓಡಾಡದಂತೆ ಎಚ್ಚರಿಕೆ
ಉಡುಪಿ: ಎನ್ಕೌಂಟರ್ನಲ್ಲಿ (Encounter) ಮೃತಪಟ್ಟಿದ್ದ ನಕ್ಸಲ್ ನಾಯಕ ವಿಕ್ರಂ ಗೌಡನ (Vikram Gowda) ಮೃತದೇಹವನ್ನು ಅಂತ್ಯಸಂಸ್ಕಾರಕ್ಕಾಗಿ ತೆಗೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್ (Ambulance) ಪಲ್ಟಿಯಾದ ಘಟನೆ ಹೆಬ್ರಿಯ ಕೂಡ್ಲು ಸಮೀಪ ನಡೆದಿದೆ.
ಇಂದು ಬೆಳಗ್ಗೆ ಮಣಿಪಾಲದ ಕೆಎಂಸಿಯಲ್ಲಿ (KMC) ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಮೃತದೇಹವನ್ನು ಅಂಬುಲೆನ್ಸ್ ಮೂಲಕ ಸಾಗಿಸಲಾಗುತ್ತಿತ್ತು.
ವೇಗವಾಗಿ ಸಾಗುತ್ತಿದ್ದಾಗ ದಿಢೀರ್ ದನ ರಸ್ತೆಗೆ ಅಡ್ಡ ಬಂದಿದೆ. ದನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬದಿಗೆ ಅಂಬುಲೆನ್ಸ್ ಚಲಾಯಿಸಿದಾಗ ಪಲ್ಟಿಯಾಗಿದೆ. ಆದರೆ ಈ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಬಳಿಕ ಸ್ಥಳೀಯರ ನೆರವಿನಿಂದ ಅಂಬುಲೆನ್ಸ್ ಅನ್ನು ರಸ್ತೆಗೆ ತಂದು ಮೃತದೇಹವನ್ನು ಕೊಂಡೊಯ್ಯಲಾಗಿದೆ. ಇದನ್ನೂ ಓದಿ: ದಿನಸಿಗೆಂದು ಬಂದಿದ್ದ ವಿಕ್ರಂಗೌಡ ಉಡೀಸ್ – ಎನ್ಕೌಂಟರ್ಗೂ ಮುನ್ನ ಪೊಲೀಸರಿಂದ ಮನೆಯವರ ಶಿಫ್ಟ್
ಮಧ್ಯಾಹ್ನ ವಿಕ್ರಂ ಗೌಡನ ಸ್ವಗ್ರಾಮ ಕೂಡ್ಲುಗೆ ಮೃತದೇಹ ತಲುಪಿದೆ. ಕುಟುಂಬಸ್ಥರು ಅಂತಿಮ ವಿಧಿ ವಿಧಾನ ನಡೆಸಿದ ಬಳಿಕ ಚಿತೆಗೆ ಅಗ್ನಿ ಸ್ಪರ್ಶ ನಡೆಯಲಿದೆ.
ಮುಂಬೈ: ಅಂಬುಲೆನ್ಸ್ನ (Ambulance) ಇಂಜಿನ್ಗೆ ಬೆಂಕಿ ಹೊತ್ತಿಕೊಂಡು ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಮಹಾರಾಷ್ಟ್ರದ (Maharashtra) ಜಲಗಾಂವ್ ಜಿಲ್ಲೆಯಲ್ಲಿ ಬುಧವಾರ ಸಂಜೆ ನಡೆದಿದೆ.
ಅಂಬುಲೆನ್ಸ್ಗೆ ಬೆಂಕಿ ಹೊತ್ತಿಕೊಂಡು ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿರುವ ದೃಶ್ಯ ಜನರ ಮೊಬೈಲ್ನಲ್ಲಿ ಸೆರೆಯಾಗಿದೆ. ಸ್ಫೋಟದ ತೀವ್ರತೆಗೆ ಬೆಂಕಿ ಭಾರೀ ಎತ್ತರಕ್ಕೆ ಚಿಮ್ಮಿದೆ. ಅಲ್ಲದೇ ಕೆಲವು ಮನೆಗಳ ಗಾಜುಗಳು ಪುಡಿಪುಡಿಯಾಗಿವೆ. ಘಟನೆಯಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಇಂಜಿನ್ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ, ಅಂಬುಲೆನ್ಸ್ನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಅವರ ಕುಟುಂಬಸ್ಥರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ಬಳಿಕ ಅಂಬುಲೆನ್ಸ್ನ ಇಂಜಿನ್ಗೆ ಬೆಂಕಿ ಹೊತ್ತಿಕೊಂಡಿದೆ ಮತ್ತು ಕೆಲವೇ ನಿಮಿಷಗಳಲ್ಲಿ ವಾಹನದಲ್ಲಿದ್ದ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.
ಎರಾಂಡೋಲ್ ಸರ್ಕಾರಿ ಆಸ್ಪತ್ರೆಯಿಂದ ಜಲಗಾಂವ್ ಜಿಲ್ಲಾ ಆಸ್ಪತ್ರೆಗೆ ಅಂಬುಲೆನ್ಸ್ ಗರ್ಭಿಣಿ ಮಹಿಳೆ ಮತ್ತು ಅವರ ಕುಟುಂಬವನ್ನು ಕರೆದೊಯ್ಯುತ್ತಿದ್ದಾಗ ದಾದಾ ವಾಡಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆಯಲ್ಲಿ ಈ ಘಟನೆ ನಡೆದಿದೆ.