Tag: ಅಂಬೇಡ್ಕರ್ ಭವನ

  • ಅಂಬೇಡ್ಕರ್, ವಾಲ್ಮೀಕಿ ಭವನಗಳಲ್ಲಿ ಗ್ರಂಥಾಲಯ ನಿರ್ಮಿಸಲು ಕ್ರಮ: ಜೆ ಮಂಜುನಾಥ್

    ಅಂಬೇಡ್ಕರ್, ವಾಲ್ಮೀಕಿ ಭವನಗಳಲ್ಲಿ ಗ್ರಂಥಾಲಯ ನಿರ್ಮಿಸಲು ಕ್ರಮ: ಜೆ ಮಂಜುನಾಥ್

    ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವತಿಯಿಂದ ನಿರ್ಮಿಸಿರುವ ಅಂಬೇಡ್ಕರ್ ಭವನ ಹಾಗೂ ಮಹರ್ಷಿ ವಾಲ್ಮೀಕಿ ಭವನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಯುವಜನರಿಗೆ ಸುಸಜ್ಜಿತ ಗ್ರಂಥಾಲಯಗಳನ್ನು ನಿರ್ಮಿಸಿ ನಿರ್ವಹಿಸಲು ಬಿಬಿಎಂಪಿ ಆಯವ್ಯಯದಲ್ಲಿ ಸೇರ್ಪಡೆಗೊಳಿಸುವಂತೆ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.

    ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಂಜುನಾಥ್ ಮಾತನಾಡಿದರು. ನಗರದ ಬಹುಭಾಗಗಳಲ್ಲಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಸಮರ್ಪಕವಾಗಿ ಉಪಯೋಗವಾಗುತ್ತಿಲ್ಲ. ಈ ಬಗ್ಗೆ ಸಮಿತಿಯ ವತಿಯಿಂದ ಬಿಬಿಎಂಪಿಗೆ ಪ್ರಸ್ತಾವನೆ ಸಲ್ಲಿಸಿ ಮೂಲಭೂತ ಸೌಕರ್ಯಗಳಿಗೆ ಅನುದಾನ ಮೀಸಲಿಡಲು ಕೋರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

    ದೌರ್ಜನ್ಯ ಪ್ರಕರಣಗಳ ಸಂಬಂಧ ಬಾಧಿತರು ಪೊಲೀಸ್ ಬಳಿ ಮೊರೆ ಹೋದಾಗ ವಿಳಂಬ ಧೋರಣೆ ತೋರದೆ, ದೂರಿಗೆ ಕೂಡಲೇ ಸ್ವೀಕೃತಿಯನ್ನು ನೀಡಬೇಕು. ದೂರು ದಾಖಲಿಸಲು ಬಂದವರೊಡನೆ ಸೌಜನ್ಯದಿಂದ ನಡೆದುಕೊಳ್ಳುವಂತೆ ಸೂಚಿಸಿದರು.  ಇದನ್ನೂ ಓದಿ: ವಿದ್ಯಾರ್ಥಿಗಳ ರಕ್ಷಣೆ ಯಾವಾಗ?: ಸಿಎಂ ಬಸವರಾಜ ಬೊಮ್ಮಾಯಿಗೆ ನಟಿ ರಮ್ಯಾ ಪ್ರಶ್ನೆ

    ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಂಗಳಿಗೆ ಒಮ್ಮೆ ಪರಿಶಿಷ್ಠ ಜಾತಿ, ಪಂಗಡದ ಮುಖಂಡರನ್ನು ಆಹ್ವಾನಿಸಿ ಸಭೆ ನಡೆಸಿ ಸಮಸ್ಯೆಗಳ ಸೂಕ್ತ ಚರ್ಚೆಗೆ ಅವಕಾಶ ಕಲ್ಪಿಸಬೇಕು. ನಿರ್ಧಿಷ್ಟವಾಗಿ ಯಾವ ಠಾಣೆಗಳಲ್ಲಿ ಈ ಸಭೆ ನಡೆಸಲಾಗುತ್ತಿಲ್ಲವೋ ಅವರ ಬಗ್ಗೆ ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲು ಸಮಿತಿ ಸದಸ್ಯ ಕಾರ್ಯದರ್ಶಿ ಮತ್ತು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಲಕ್ಷ್ಮಣ್ ರೆಡ್ಡಿಗೆ ಸೂಚಿಸಿದರು.

    ಹರೆಬಿನ್ನಮಂಗಲ, ಜಾಲಹೋಬಳಿ ಹಾಗೂ ಜ್ಯೋತಿಪುರ ಗ್ರಾಮಗಳಲ್ಲಿ ಫಾರಂ 53ರ ಅರ್ಜಿಗಳನ್ನು ದಾಖಲಿಸಿ ಭೂಮಿ ಸಕ್ರಮೀಕರಣಗೊಳಿಸಲು ಮಂಜೂರಾತಿ ಈಗಾಗಲೇ ನೀಡಲಾಗಿದ್ದರೂ ಪ. ಜಾ/ ಪ. ಪಂ ಫಲಾನುಭವಿಗಳಿಗೆ ಮಾತ್ರ ಸಾಗವಳಿ ಚೀಟಿ ವಿತರಿಸಿರುವುದಿಲ್ಲ ಎಂದು ಸಮಿತಿ ಸದಸ್ಯ ಹೆಣ್ಣೂರು ಶ್ರೀನಿವಾಸ್ ಸಭೆಯಲ್ಲಿ ಗಮನಕ್ಕೆ ತಂದರು. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಿವಂತೆ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದರು.

    ಕೊಳಚೆ ಅಭಿವೃದ್ಧಿ ಮಂಡಳಿಯ ಹೆಸರನ್ನು ಬದಲಾಯಿಸಲು ಸದಸ್ಯರೆಲ್ಲರೂ ಸಭೆಯ ಅಧ್ಯಕ್ಷರಿಗೆ ಆಗ್ರಹಿಸಿದರು. ಈ ಬಗ್ಗೆ ಸೂಕ್ತ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಇದನ್ನೂ ಓದಿ: ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ: ಗೋವಿಂದ ಕಾರಜೋಳ

    ದೌರ್ಜನ್ಯ ಪ್ರಕರಣಗಳಲ್ಲಿ ಪ್ರಾಣ ಕಳೆದುಕೊಂಡಂತಹ ಪ.ಜಾ/ ಪ.ಪಂ ದವರ ಕುಟುಂಬದವರಿಗೆ ಅನುಕಂಪಾಧಾರಿತ ಸರ್ಕಾರಿ ನೌಕರಿ ನೀಡುವಲ್ಲಿ ಕೆಲವು ಕಡೆ ಲೋಪ ಕಂಡುಬಂದಿವೆ ಎಂಬ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಲಕ್ಷ್ಮಣ್ ರೆಡ್ಡಿ, ಪ್ರಸ್ತುತ 32 ನೊಂದ ಕುಟುಂಬಗಳಿಗೆ ಪ್ರತಿ ತಿಂಗಳು 5,000 ರೂ. ಮಾಸಾಶನವನ್ನು ಕಳೆದ ಒಂದು ವರ್ಷದಿಂದ ಒದಗಿಸಲಾಗುತ್ತಿದೆ ಎಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಗಪ್ಪ, ದಕ್ಷಿಣ ಉಪವಿಭಾಗಾಧಿಕಾರಿ ರಘುನಂದನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಂಗಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕಿ ಪಲ್ಲವಿ ಹೊನ್ನಾಪುರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

  • ಮಂಗಳೂರಿನ ಅಂಬೇಡ್ಕರ್ ಭವನ ಲೋಕಾರ್ಪಣೆ ಮಾಡಿದ ಬೊಮ್ಮಾಯಿ

    ಮಂಗಳೂರಿನ ಅಂಬೇಡ್ಕರ್ ಭವನ ಲೋಕಾರ್ಪಣೆ ಮಾಡಿದ ಬೊಮ್ಮಾಯಿ

    ಮಂಗಳೂರು: ನಗರದ ಉರ್ವಾಸ್ಟೋರ್ ನಲ್ಲಿ ನಿರ್ಮಾಣಗೊಂಡ ಡಾ.ಬಿ.ಆರ್ ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಲೋಕಾರ್ಪಣೆ ಮಾಡಿದರು.

    ಕಳೆದ ಕೆಲ ವರ್ಷಗಳ ಬೇಡಿಕೆಯಾಗಿದ್ದ, ಈ ಅಂಬೇಡ್ಕರ್ ಭವನ ನಿರ್ಮಾಣಗೊಂಡು ವರ್ಷ ಕಳೆದರೂ ಉದ್ಘಾಟನಾ ಭಾಗ್ಯ ಸಿಕ್ಕಿರಲಿಲ್ಲ. ಇದೀಗ ನೂತನ ಮುಖ್ಯಮಂತ್ರಿಯಾಗಿ ಜಿಲ್ಲೆಗೆ ಆಗಿಮಿಸಿದ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು. ಇದನ್ನೂ ಓದಿ: ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಮೆಡಿಸಿನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

    ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಸಚಿವರಾದ ಸುಧಾಕರ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

  • ಅಂಬೇಡ್ಕರ್ ಭವನದ ಜಾಗ ಈಗ ಅನೈತಿಕ ಚಟುವಟಿಕೆಗಳ ತಾಣ!

    ಅಂಬೇಡ್ಕರ್ ಭವನದ ಜಾಗ ಈಗ ಅನೈತಿಕ ಚಟುವಟಿಕೆಗಳ ತಾಣ!

    – ಭ್ರಷ್ಟರ ಹಣದಾಹಕ್ಕೆ ಆಹುತಿಯಾಯ್ತಾ 18 ಕೋಟಿ ಕಾಮಗಾರಿ

    ಬೆಂಗಳೂರು: ಭವ್ಯವಾದ ಅಂಬೇಡ್ಕರ್ ಭವನವಾಗಬೇಕಿದ್ದ ಜಾಗ ಈಗ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಶಂಕುಸ್ಥಾಪನೆಯಾಗಿ 9 ವರ್ಷ ಕಳೆದಿದೆ. ಕೋಟಿ ಕೋಟಿ ದುಡ್ಡು ಭ್ರಷ್ಟರ ಪಾಲಾಗಿದೆ. ಅಲ್ಲಿ ಹೇಳೋರು ಇಲ್ಲ. ಕೇಳೋರು ಇಲ್ಲ. ಈಗಾಗಲೇ ಅಲ್ಲಿ ನಾಲ್ಕೈದು ಜನ ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಆ ಕಾಮಗಾರಿ ಬಗ್ಗೆ ಮಾತ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

    ಹೌದು. ಸುಮಾರು ಎರಡು ಎಕರೆ ಜಾಗದಲ್ಲಿ ಅಂಬೇಡ್ಕರ್ ಭವನ ಕಟ್ಟೋಕೆ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಆಗಿನ ಶಾಸಕ ನಂದೀಶ್ ರೆಡ್ಡಿ ನೇತೃತ್ವದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗಿತ್ತು. ಆದರೆ ಅದಾಗಿ ಕೋಟಿ ಕೋಟಿ ಖರ್ಚು ಎಂದು ಹೇಳಿದ್ದು ಬಿಟ್ಟರೆ ಕಾಮಗಾರಿ ನಡಿಯಲೇ ಇಲ್ಲ. ಕಾಮಗಾರಿ ನಿಲ್ಲಿಸಿ 9 ವರ್ಷವಾದರೂ ಮತ್ತೆ ಶುರು ಮಾಡುವ ಮನಸ್ಸು ಕೂಡ ಯಾರೂ ಮಾಡಿಲ್ಲ.

    2010ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸಾರ್ವಜನಿಕರ ಅನುಕೂಲಕ್ಕೆಂದು ಎರಡು ಎಕರೆ ಸರ್ಕಾರಿ ಜಮೀನಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಹೆಸರಲ್ಲಿ ಭವನ ನಿರ್ಮಾಣ ಮಾಡಲು ಶಂಕುಸ್ಥಾಪನೆ ನೆರವೇರಿಸಿದ್ದರು. ಆದರೆ ಶಂಕುಸ್ಥಾಪನೆಯಾಗಿ ಬರೋಬ್ಬರಿ ಒಂಬತ್ತು ವರ್ಷಗಳೇ ಕಳೆದರೂ ಕಾಮಗಾರಿ ಮಾತ್ರ ಇನ್ನೂ ಪೂರ್ಣಗೊಂಡಿಲ್ಲ.

    ಕೆಆರ್ ಪುರ ವಿಧಾನಸಭಾ ಕ್ಷೇತ್ರದ ದೇವಸಂದ್ರ ವಾರ್ಡ್ ನ ಮಹದೇವಪುರ ಗ್ರಾಮದಲ್ಲಿ ಅಂದಿನ ಸರ್ಕಾರ ಸುಮಾರು 18 ಕೋಟಿ ರೂ. ವೆಚ್ಚದಲ್ಲಿ ಭವನ ನಿರ್ಮಾಣಕ್ಕೆ ಚಾಲನೆ ನೀಡಿದರು. ಆದರೆ ಕಾಮಗಾರಿ ಪ್ರಾರಂಭವಾಗಿ ಕೆಲವೇ ತಿಂಗಳಲ್ಲಿ ಅರ್ಧಕ್ಕೆ ನಿಂತುಹೋಗಿ, ಈಗ ಮಳೆ ನೀರು ತುಂಬಿ, ಸುತ್ತಮುತ್ತಲಿನ ಕಸ ತುಂಬಿ ಹಾಳು ಕೊಂಪೆಯಾಗಿಸಿದ್ದಾರೆ. ಕಾಮಗಾರಿಗೆ ಎಂದು ಹಾಕಿದ್ದ ಎರಡೂವರೆ ಟನ್ ಕಬ್ಬಿಣ ಕಳ್ಳತನ ಬೇರೆ ಆಗಿದೆ. ಆದರೆ ಆ ಬಗ್ಗೆಯೂ ಯಾವುದೇ ತನಿಖೆಯಾಗಿಲ್ಲ. ಸಿಕ್ಕಸಿಕ್ಕವರು ಈ ಭವನದ ದುಡ್ಡ ಹಂಚಿ ತಿಂದಿದ್ದಾರೆ ಅನ್ನೋದು ಸ್ಥಳೀಯರ ಆರೋಪವಾಗಿದೆ.

    ಈ ಪಾಳು ಭವನ ಈಗ ಅಕ್ಷರಶಃ ಅನೈತಿಕತೆಯ ತಾಣವಾಗಿದೆ. ಇಲ್ಲಿ ಹಗಲು ರಾತ್ರಿ ಎನ್ನದೆ ಅನೈತಿಕ ಚಟುವಟಿಕೆಗಳು ಅಂಬೇಡ್ಕರ್ ಭವನದಲ್ಲಿ ನಡೀತಾ ಇದೆ. ಅಂಬೇಡ್ಕರ್ ಹೆಸರಲ್ಲಿ ಹಣ ತಿನ್ನುವವರು ಚೆನ್ನಾಗಿ ತಿಂದಿದ್ದಾರೆ. ಇನ್ನು ಮುಂದಿನ ಬಜೆಟ್‍ನಲ್ಲಿ ಅನುದಾನ ನೀಡಿ ಇದನ್ನು ಅಭಿವೃದ್ಧಿಪಡಿಸೋದಾಗಿ ಶಾಸಕರ ಬಿ.ಎ.ಬಸವರಾಜ ಹೇಳಿದರು.

    ಅಂಬೇಡ್ಕರ್ ಭವನವಾಗಿ ಸಾರ್ವಜನಿಕರಿಗೆ ಉಪಯೋಗವಾಗಬೇಕಾಗಿತ್ತು. ಆದರೆ ಈಗ ಅಕ್ರಮದ ತಾಣವಾಗಿ ಜನರಿಗೆ ತಲೆನೋವಾಗಿದೆ.

  • ಮಂಡ್ಯದಲ್ಲಿ ಶಂಕುಸ್ಥಾಪನೆ ಕಲ್ಲಿಗಾಗಿ ಕಾಂಗ್ರೆಸ್, ಜೆಡಿಎಸ್ ಕಲಹ..!

    ಮಂಡ್ಯದಲ್ಲಿ ಶಂಕುಸ್ಥಾಪನೆ ಕಲ್ಲಿಗಾಗಿ ಕಾಂಗ್ರೆಸ್, ಜೆಡಿಎಸ್ ಕಲಹ..!

    ಮಂಡ್ಯ: ರಾಜ್ಯದಲ್ಲಿ ದೋಸ್ತಿ ಸರ್ಕಾರವಿದ್ದು ಎಲ್ಲದ್ರಲ್ಲೂ ಹೊಂದಾಣಿಕೆ ರಾಜಕೀಯ ನಡೀತಿದೆ. ಆ ಊರಲ್ಲಿ ಶಂಕುಸ್ಥಾಪನೆ ಕಲ್ಲಿಗಾಗಿ ಹಾಲಿ-ಮಾಜಿ ಶಾಸಕರ ನಡುವೆ ರಾಜಕೀಯ ಶುರುವಾಗಿದೆ. ರಾಜಕೀಯ ನಾಯಕರ ಪಾಲಿಟಿಕ್ಸ್ ಫೈಟ್‍ಗೆ ಹೆದರಿದ ಪೊಲೀಸರು ಶಂಕುಸ್ಥಾಪನೆ ಕಲ್ಲುಗಳಿಗೆ ಬಂದೋಬಸ್ತ್ ಮಾಡಿದ್ದಾರೆ.

    ಜಿಲ್ಲೆ ಮಳವಳ್ಳಿಯಲ್ಲಿ ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಅಂಬೇಡ್ಕರ್ ಭವಣ ನಿರ್ಮಾಣ ಮಾಡಲಾಗ್ತಿದೆ. 2012ರಲ್ಲಿ ಮಾಜಿ ಶಾಸಕ ನರೇಂದ್ರಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದ್ದರು. 2014ರಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಭವನ ಉದ್ಘಾಟಿಸಿದ್ದರು. ಆದ್ರೆ ಕಳೆದ ಡಿಸೆಂಬರ್‍ನಲ್ಲಿ ರಾತ್ರೋರಾತ್ರಿ ಭವನದಲ್ಲಿ ಮತ್ತೊಂದು ಕಲ್ಲು ಪ್ರತ್ಯಕ್ಷವಾಗಿದ್ದು ಅದ್ರಲ್ಲಿ 2007ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಶಂಕುಸ್ಥಾಪನೆ ಅಂತ ಹೇಳಲಾಗಿದೆ. ಇದು ಮಾಜಿ ಶಾಸಕ ನರೇಂದ್ರಸ್ವಾಮಿ ಬೆಂಬಲಿಗರನ್ನು ಕೆರಳಸಿದ್ದು ಕೂಡಲೇ ಬೋಗಸ್ ಶಿಲಾನ್ಯಾಸದ ಕಲ್ಲನ್ನು ತೆಗೆಸಬೇಕೆಂದು ಪ್ರತಿಭಟನೆ ನಡೆಸಿದ್ದಾರೆ.

    ಪ್ರತಿಭಟನೆ ವಿರುದ್ಧ ಹರಿಹಾಯ್ದಿರುವ ಹಾಲಿ ಶಾಸಕ ಡಾ.ಅನ್ನದಾನಿ, 2007ರ ಏಪ್ರಿಲ್‍ನಲ್ಲಿ ಅಂದಿನ ಸಿಎಂ ಎಚ್‍ಡಿಕೆ ಶಂಕುಸ್ಥಾಪನೆ ಮಾಡಿದ್ರು. ಅಂದು 58 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡಿದ್ದರು. ಆದ್ರೆ ನರೇಂದ್ರಸ್ವಾಮಿ ಶಾಸಕರಾಗಿದ್ದ 10 ವರ್ಷಗಳಲ್ಲಿ ನೆರವೇರಿಸಿದ್ದ ಶಂಕುಸ್ಥಾಪನಾ ಕಲ್ಲುಗಳು ನಾಪತ್ತೆಯಾಗಿವೆ. ಈ ವಿಚಾರ ಸುಳ್ಳು ಎಂದಾದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೇನೆ. ನರೇಂದ್ರ ಸ್ವಾಮಿ ಹೇಳ್ತಿರೋದು ಸುಳ್ಳಾದ್ರೆ ರಾಜಕೀಯ ನಿವೃತ್ತಿ ತೆಗೆದುಕೊಳ್ತಾರಾ ಎಂದು ಸವಾಲು ಹಾಕಿದ್ದಾರೆ.

    ಚುನಾವಣೆ ವೇಳೆ ಹಾವು-ಮುಂಗುಸಿಯಂತೆ ಕಿತ್ತಾಡುತ್ತಿದ್ದ ಕ್ಷೇತ್ರದ ಇಬ್ಬರು ನಾಯಕರು ಅದನ್ನ ಮುಂದುವರಿಸಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ರೂ ಬಹುತೇಕ ವಿಧಾನಸಭಾ ಕ್ಷೇತ್ರಗಳ ರಾಜಕೀಯ ಚಿತ್ರಣ ಹೀಗೆಯೇ ಇದೆ ಅನ್ನೋದಕ್ಕೆ ಮಳವಳ್ಳಿ ಕ್ಷೇತ್ರ ಉತ್ತಮ ಉದಾಹರಣೆ ಎನ್ನಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾವೆಲ್ಲ ಖಾದಿ ಹಾಕ್ತೀವಿ, ಆದ್ರೆ ಒಳಗಡೆ ಯಂತ್ರದಿಂದ ತಯಾರಿಸಿದ ಬನಿಯನ್ ಹಾಕ್ತೀವಿ: ಸಿಎಂ

    ನಾವೆಲ್ಲ ಖಾದಿ ಹಾಕ್ತೀವಿ, ಆದ್ರೆ ಒಳಗಡೆ ಯಂತ್ರದಿಂದ ತಯಾರಿಸಿದ ಬನಿಯನ್ ಹಾಕ್ತೀವಿ: ಸಿಎಂ

    ಗದಗ: ನಾವೆಲ್ಲ ಖಾದಿ ಹಾಕ್ತೀವಿ, ಆದ್ರೆ ಒಳಗಡೆ ಮಷಿನ್ ನಿಂದ ತಯಾರಿಸಿದ ಬನಿಯನ್ ಹಾಕ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

    ಗದಗ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ವಿವಿ ಉದ್ಘಾಟನಾ ಸಮಾರಂಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಟೀಲ್ ಪುಟ್ಟಪ್ಪ ಅವರನ್ನ ಶ್ಲಾಘಿಸಿ, ನಾವೆಲ್ಲ ಖಾದಿ ಹಾಕ್ತೀವಿ, ಆದ್ರೆ ಒಳಗಡೆ ಮಷಿನ್ ನಿಂದ ತಯಾರಿಸಿದ ಬನಿಯನ್ ಹಾಕ್ತೀವೆ. ಆದ್ರೆ ಪಾಟೀಲ್ ಪುಟ್ಟಪ್ಪ ಅವರು ಹಾಗಲ್ಲ. ಅಪ್ಪಟ ಗಾಂಧಿವಾದಿಯಾಗಿದ್ದರೆಂದು ನೆನೆದರು. ಗ್ರಾಮೀಣಾಭಿವೃದ್ಧಿಗೆ ಸರ್ಕಾರದಿಂದ ಸಹಾಯಕ್ಕೆ ಸಿದ್ಧವಾಗಿದ್ದೇವೆ. ಆದ್ರೆ ಅಭಿವೃದ್ಧಿ ನಿರೀಕ್ಷಿತ ಹಾದಿಯಲ್ಲಿರಬೇಕೆಂದು ಹೇಳಿದರು.

    ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಕಡಿಮೆ ಇದೆ. ಸಮಾಜದಲ್ಲಿ ಶಿಕ್ಷಣದಿಂದ ವಂಚಿತರಾದವರು ಹಿಂದೆ ಇರ್ತಾರೆ. ಈ ತಾರತಮ್ಯ ಯಾವಾಗ್ಲೂ ಇದೆ. ಶತಶತಮಾನದಿಂದ ಬಹುಸಂಖ್ಯಾತ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಬಸವಣ್ಣನವರ ಕಾಲದಲ್ಲಿ ಮಾತ್ರ ಮಹಿಳೆಯರಿಗೆ ಸಮಾನ ಸ್ಥಾನಮಾನವಿತ್ತು. ಆದರೆ ಈಗ ಮತ್ತೆ ಪ್ರತಿಭೆ ವಿಕಾಸಕ್ಕೆ ಅವಕಾಶ ಸಿಗುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.

    ಪ್ರತಿಭೆ ಯಾರ ಸ್ವತ್ತು ಅಲ್ಲ, ಒಂದು ವರ್ಗಕ್ಕೆ ಸೀಮಿತವೂ ಅಲ್ಲ. ಅವಕಾಶ ಸಿಕ್ಕಾಗ ಮಾತ್ರ ಸುಪ್ತ ಪ್ರತಿಭೆಯ ಅನಾವರಣ ಸಾಧ್ಯವಾಗುತ್ತೆ. ಗ್ರಾಮಗಳ ಸಬಲೀಕರಣಕ್ಕೆ ಇಂದು ಅನೇಕ ಪ್ರಯತ್ನಗಳು ನಡೆದಿವೆ. ಅಧಿಕಾರ, ಸಂಪತ್ತು ಹಂಚಿಕೆಯಾಗಬೇಕು. ಹಳ್ಳಿಯ ಜನರು ಬೆಳವಣಿಗೆಯಾಗಲು ಗ್ರಾಮೀಣಾಭಿವೃದ್ಧಿ ವಿವಿ ಮೂಲಕ ಸಂಶೋಧನೆ ನಡೆಯಬೇಕೆಂದು ಮನವಿ ಮಾಡಿದರು.

    ಅಧ್ಯಯನ ಮತ್ತು ಸಂಶೋಧನೆ ಒಟ್ಟಿಗೆ ಹೋದಾಗ ಮಾತ್ರ ವಿವಿಯ ಕಾರ್ಯ ಸಾರ್ಥಕವಾಗುತ್ತೆ. ಏನು ಮಾಡಿದ್ರೆ ಗ್ರಾಮಗಳ ವಿಕಾಸವಾಗುತ್ತೆ ಅಂತ ವಿಶ್ವವಿದ್ಯಾಲಯದವರಿಗೆ ಅರ್ಥವಾಗಿರಬೇಕು. ಎಷ್ಟು ಶಿಕ್ಷಣ ಪಡೆದಿದ್ದೇವೆ ಅನ್ನೋದು ಮುಖ್ಯವಲ್ಲ. ಸಮಾಜಕ್ಕೆ ಸ್ಪಂದಿಸುವ ಮನಸ್ಥಿತಿ ಬೆಳೆಯಬೇಕು. ಶಿಕ್ಷಣದಲ್ಲಿ ನೈತಿಕತೆ ಇದ್ರೆ ಮಾತ್ರ ಜ್ಞಾನ ವಿಕಾಸವಾಗುತ್ತೆ. ಗದಗದಲ್ಲಿರೋ ಗ್ರಾಮೀಣಾಭಿವೃದ್ಧಿ ವಿವಿ ರಾಜ್ಯ ಹಾಗೂ ರಾಷ್ಟ್ರಕ್ಕೆ ಮಾದರಿಯಾಗಬೇಕು ಎಂದು ಹಾರೈಸಿದರು.

  • ಅಂಬೇಡ್ಕರ್ ಭವನದಲ್ಲಿ ಗುಂಡಿನ ಪಾರ್ಟಿ – ಗಲಾಟೆ ಮಧ್ಯೆ ಗನ್ ತೋರಿಸಿದ ಕೌನ್ಸಿಲರ್ ಬೆಂಬಲಿಗ

    ಅಂಬೇಡ್ಕರ್ ಭವನದಲ್ಲಿ ಗುಂಡಿನ ಪಾರ್ಟಿ – ಗಲಾಟೆ ಮಧ್ಯೆ ಗನ್ ತೋರಿಸಿದ ಕೌನ್ಸಿಲರ್ ಬೆಂಬಲಿಗ

    ಮಡಿಕೇರಿ: ನಾಮಕರಣ ನಡೆಯುತ್ತಿದ್ದ ಹಾಲ್‍ಗೆ ನುಗ್ಗಿ ಮಡಿಕೇರಿ ನಗರಸಭೆ ಕೌನ್ಸಿಲರ್ ಹಾಗೂ ಅವರ ಬೆಂಬಲಿಗರು ಗನ್ ತೋರಿಸಿ ದಾಂಧಲೆ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

    ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ನಾಮಕರಣ ಸಮಾರಂಭವೊಂದು ನಡೆಯುತ್ತಿತ್ತು. ನಗರಸಭೆ ಕೌನ್ಸಿಲರ್ ವೀಣಾಕ್ಷಿ ಹಾಗೂ ಸಮಾರಂಭದಲ್ಲಿ ಮದ್ಯಪಾನ ಮಾಡುತ್ತಿದ್ದ ಹುಡುಗರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಈ ಸಂದರ್ಭ ಅಲ್ಲಿಗೆ ಬಂದ ವೀಣಾಕ್ಷಿ ಬೆಂಬಲಿಗನೊಬ್ಬ ಗನ್ ತೋರಿಸಿ ಬೆದರಿಸಿದ್ದಾನೆ.

    ಸಮಾರಂಭದಲ್ಲಿ ಕಟ್ಟಡದ ಮೊದಲ ಅಂತಸ್ತಿನಲ್ಲಿ ಕುಳಿತು ಮದ್ಯಪಾನ ಮಾಡುತ್ತಿದ್ದ ಯುವಕರ ಗುಂಪೊಂದು ಅಲ್ಲಿಂದ ಗ್ಲಾಸ್ ಹಾಗೂ ಬಾಟಲಿಗಳನ್ನು ಕೆಳಕ್ಕೆ ಬೀಳಿಸಿದ್ದಾರೆ. ಅದೇ ಕಟ್ಟಡದಲ್ಲಿ ಅಂಗಡಿ ನಡೆಸುತ್ತಿರುವ ನಗರಸಭೆ ಸದಸ್ಯೆ ವೀಣಾಕ್ಷಿ ಇದನ್ನು ಪ್ರಶ್ನಿಸಿದಾಗ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

    ಈ ಸಂದರ್ಭ ವೀಣಾಕ್ಷಿ ಹಾಗೂ ಅದೇ ಬಡಾವಣೆಯ ಯುವಕರು ಹಾಲ್‍ಗೆ ನುಗ್ಗಿದ್ದು, ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಆಗ ಏಕಾ ಏಕಿ ಬಂದ ವೀಣಾಕ್ಷಿ ಬೆಂಬಲಿಗ ಎಂದು ಹೇಳಲಾಗುತ್ತಿರುವ ಯುವಕನೊಬ್ಬ ತನ್ನ ಕಾರ್‍ನಿಂದ ಬಂದೂಕು ತಂದು ಅಲ್ಲಿದ್ದವರನ್ನ ಬೆದರಿಸಿದ್ದಾನೆ.