Tag: ಅಕ್ಕಿಕಾಳು

  • ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ಬುಕ್ ಆಫ್ ರೆಕಾರ್ಡ್ ಮಾಡಿದ ಯುವಕ

    ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ಬುಕ್ ಆಫ್ ರೆಕಾರ್ಡ್ ಮಾಡಿದ ಯುವಕ

    ಹಾವೇರಿ: ಇತ್ತೀಚೆಗೆ ಗ್ರಾಮೀಣ ಭಾಗದ ಯುವಕರು ತಾವು ಯಾರಿಗೂ ಕಮ್ಮಿಯಿಲ್ಲ ಎಂಬಂತೆ ತಮ್ಮ ಪ್ರತಿಭೆಗಳನ್ನು ಎತ್ತಿ ತೋರಿಸುತ್ತಿದ್ದಾರೆ. ಹಾವೇರಿ (Haveri) ತಾಲೂಕಿನ ಗುಡಿಸಲಕೊಪ್ಪ ಗ್ರಾಮದ ಯುವಕನೊಬ್ಬ ಮೈಕ್ರೋ ಆರ್ಟ್ (Micro Art) ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ (India Book of Record) ಸಾಧನೆ ಮಾಡಿದ್ದಾನೆ.

    ಗ್ರಾಮದ ಪರಮೇಶ ಬಂಡಿ ಎಂಬ ಯುವಕ ಅಕ್ಕಿಕಾಳಿನಲ್ಲಿ ನಾಡಗೀತೆ (Naadageete) ಬರೆದು ಈ ಸಾಧನೆ ಮಾಡಿದ್ದಾನೆ. 80 ನಿಮಿಷದಲ್ಲಿ 144 ಅಕ್ಕಿಕಾಳಿನಿಂದ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ ಆಫ್ ಇಂಡಿಯಾ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪಡೆಯುವ ಮೂಲಕ ಹೊಸ ಇತಿಹಾಸ ಬರೆದಿದ್ದಾನೆ.

    ಅಷ್ಟೇ ಅಲ್ಲದೇ 92 ಅಕ್ಕಿಕಾಳಿನಲ್ಲಿ ವಂದೇ ಮಾತರಂ ಗೀತೆ ಬರೆದಿದ್ದಾನೆ. ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಗೆ 10 ರಿಂದ 20 ಸಾವಿರ ಅಕ್ಕಿಕಾಳಿನಲ್ಲಿ ಜೈ ಶ್ರೀ ರಾಮ್ ಎಂದು ಬರೆಯಲು ತಯಾರಿ ನಡೆಸಿದ್ದಾನೆ. ಇದನ್ನೂ ಓದಿ: ಹುಲಿ ಉಗುರು ಲಾಕೆಟ್‌ ಕೇಸ್‌ – ವರ್ತೂರು ಸಂತೋಷ್‌ಗೆ ಜಾಮೀನು ಮಂಜೂರು

    ಈ ಮೈಕ್ರೋ ಆರ್ಟ್ ಕಲಾವಿದನ ಸಾಧನೆ ನಿಜಕ್ಕೂ ನೋಡುಗರ ಗಮನ ಸೆಳೆಯುತ್ತಿದೆ. ಅದರಲ್ಲೂ ಅಕ್ಕಿಕಾಳಿನಲ್ಲಿ ಬರೆಯುವುದು ಸುಲಭದ ಮಾತಲ್ಲ. ಅಕ್ಕಿ ಕಾಳಿನಲ್ಲಿ ತನ್ನ ಕೈಚಳಕವನ್ನು ತೋರಿಸಿದ್ದಾನೆ. ಓದಿದ್ದು ಪಿಯುಸಿ ಆದರೂ ಮೈಕ್ರೋ ಆರ್ಟ್ ಮೂಲಕ ಹೆಸರು ಮಾಡಿದ್ದಾನೆ. ಇದನ್ನೂ ಓದಿ: ಎಂಜಿನಿಯರಿಂಗ್, ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಕೋರ್ಸುಗಳಿಗೆ ಪ್ರವೇಶಾತಿ ಅಕ್ಟೋಬರ್ 30ಕ್ಕೆ ವಿಶೇಷ ಸುತ್ತು: KEA

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕ್ಕಿಕಾಳಿನ ಆಕೃತಿ ನಿರ್ಮಿಸಿ, ಅನ್ನಭಾಗ್ಯ ಸ್ಮರಿಸಿದ ಸಿದ್ದು ಅಭಿಮಾನಿ

    ಅಕ್ಕಿಕಾಳಿನ ಆಕೃತಿ ನಿರ್ಮಿಸಿ, ಅನ್ನಭಾಗ್ಯ ಸ್ಮರಿಸಿದ ಸಿದ್ದು ಅಭಿಮಾನಿ

    ಚಾಮರಾಜನಗರ: ವಿಪಕ್ಷ ನಾಯಕ ಸಿದ್ದರಾಮಯ್ಯರ ಅಮೃತಮಹೋತ್ಸವಕ್ಕೆ ಸಾಗರೋಪಾದಿಯಲ್ಲಿ ಅಭಿಮಾನಿಗಳು ನೆರೆದಿದ್ದಾರೆ. ಲಕ್ಷಾಂತರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

    ಒಂದೆಡೆ ಛಾಯಾಚಿತ್ರಗಳಲ್ಲಿ ಸಿದ್ದರಾಮಯ್ಯರ ಬದುಕು ಮತ್ತು ಸಾಧನೆ ಅನಾವರಣಗೊಳಿಸಲಾಗಿದೆ. ಕೆಲವು ಅಭಿಮಾನಿಗಳು ಎದೆಯ ಮೇಲೆ ಟ್ಯಾಟು ಹಾಕಿಸಿಕೊಂಡು ಸಂಭ್ರಮಿಸಿದ್ದಾರೆ. ಈ ನಡುವೆ ಯುವ ಕಲಾವಿದನೊಬ್ಬ ಅಕ್ಕಿ ಕಾಳಿನಲ್ಲಿ ಸಿದ್ದರಾಮಯ್ಯ ಅವರ ಪುತ್ಥಳಿ ನಿರ್ಮಿಸುವ ಮೂಲಕ ಅಭಿಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಷ್ಟಲಿಂಗ ಪೂಜೆ ಹೇಳಿಕೊಡಲು ದೆಹಲಿಗೆ ಬನ್ನಿ ಅಂದ ರಾಹುಲ್

    ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಟಿ.ಹೊಸೂರು ಗ್ರಾಮದ ಕಲಾವಿದ ಬಿ.ಮಹೇಶ್ ತಮ್ಮ ಕೈಳಕದಿಂದ ಅಕ್ಕಿ ಕಾಳಿನಲ್ಲಿ ಸಿದ್ದರಾಮಯ್ಯರ ಆಕೃತಿ ನಿರ್ಮಿಸಿ, ಅನ್ನಭಾಗ್ಯ ಯೋಜನೆಯನ್ನು ಸ್ಮರಿಸಿದ್ದಾರೆ. ಇದನ್ನೂ ಓದಿ: ಈಡಿಗ-ಬಿಲ್ಲವ ಸಮುದಾಯದ ಯುವಕರನ್ನು ಬಿಜೆಪಿ ಯೂಸ್ & ಥ್ರೋ ಮಾಡುತ್ತಿದೆ: ಪ್ರಣವಾನಂದ ಸ್ವಾಮೀಜಿ

    ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ನಂತರ ಮೊದಲು ಘೋಷಣೆ ಮಾಡಿದ ಮಹತ್ವ ಪೂರ್ಣ ಯೋಜನೆಯೇ ಅನ್ನಭಾಗ್ಯ. ಅವರ 75ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಈ ಯೋಜನೆಯನ್ನು ನೆನಪಿಸುವ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ. ಸಮಾರಂಭದಲ್ಲಿ ಅಕ್ಕಿ ಕಾಳಿನ ಪ್ರತಿಮೆಯನ್ನು ಸಿದ್ದರಾಮಯ್ಯರಿಗೆ ಕೊಡಲು ಅಭಿಮಾನಿ ಮಹೇಶ್ ತೆರಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]