Tag: ಅಕ್ಕಿನೇನಿ ನಾಗಾರ್ಜುನ್

  • ನಾನು ಅವನ ಬಗ್ಗೆ ಯೋಚಿಸಿದ್ರೆ, ಅವನಿಗೆ ನನ್ನ ಬಗ್ಗೆಯೇ ಚಿಂತೆ ಜಾಸ್ತಿ: ನಾಗಾರ್ಜುನ್

    ನಾನು ಅವನ ಬಗ್ಗೆ ಯೋಚಿಸಿದ್ರೆ, ಅವನಿಗೆ ನನ್ನ ಬಗ್ಗೆಯೇ ಚಿಂತೆ ಜಾಸ್ತಿ: ನಾಗಾರ್ಜುನ್

    ಹೈದರಾಬಾದ್: ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ್ ಅವರು ತಮ್ಮ ಮಗ ನಾಗಚೈತನ್ಯ ಡಿವೋರ್ಸ್ ಕುರಿತಾಗಿ ಮೊದಲ ಬಾರಿಗೆ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

     

    ಸಂಕ್ರಾಂತಿ ಪ್ರಯುಕ್ತ ನಾಗಾರ್ಜುನ್ ಅವರು ಅಭಿನಯಿಸಿರುವ ಬಂಗಾರ‍್ರಾಜು ಸಿನಿಮಾ ತೆರೆಕಂಡಿದೆ. ಚಿತ್ರದ ಪ್ರಚಾರದ ವೇಳೆ ನಾಗಾರ್ಜುನ್ ಮಾತನಾಡಿದ್ದಾರೆ. ನಾಗ ಚೈತನ್ಯ ಮತ್ತು ಸಮಂತಾ ಬೇರೆ ಆದಾಗ ತಮ್ಮ ಪರಿಸ್ಥಿತಿ ಹೇಗಿತ್ತು ಎಂಬುದನ್ನು ಭಾವನಾತ್ಮಕವಾಗಿ ಹೇಳಿದ್ದಾರೆ. ಇದನ್ನೂ ಓದಿ:  190 ವರ್ಷದ ಆಮೆ- ಗಿನ್ನಿಸ್ ಪುಟಕ್ಕೆ ಸೇರ್ಪಡೆ

    ಡಿವೋರ್ಸ್ ಆದ ಸಂದರ್ಭಗಳಲ್ಲಿ ಅವನು ಅಷ್ಟೊಂದು ಶಾಂತನಾಗಿ ಇದ್ದಿದ್ದಕ್ಕೆ ಅವನ ಬಗ್ಗೆ ನನಗೆ ಹೆಮ್ಮೆ ಇದೆ. ಒಂದು ಮಾತು ಹೇಳುವಷ್ಟು ಕೂಡ ಆತ ಪ್ರಚೋದನೆಗೆ ಒಳಗಾಗಲಿಲ್ಲ. ಎಲ್ಲ ತಂದೆಯರ ರೀತಿ ನಾನು ಕೂಡ ಮಗನ ಬಗ್ಗೆ ಚಿಂತೆಗೆ ಒಳಗಾಗಿದ್ದೆ. ಆದರೆ ಅವನಿಗೆ ನನ್ನ ಬಗ್ಗೆಯೇ ಚಿಂತೆ ಜಾಸ್ತಿ ಆಗಿತ್ತು ಎಂದು ನಾಗಾರ್ಜುನ ಹೇಳಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಕೌತುಕಕ್ಕೆ ಸಾಕ್ಷಿಯಾದ ಗವಿ ಗಂಗಾಧರೇಶ್ವರ ದೇಗುಲ – ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ

    ಸೆಲೆಬ್ರಿಟಿ ದಂಪತಿ ನಾಗ ಚೈತನ್ಯ, ಸಮಂತಾ ಕಳೆದ ವರ್ಷ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಈ ವಿಚಾರವಾಗಿ ಚೈತನ್ಯ ತಂದೆ ಅಕ್ಕಿನೇನಿ ನಾಗಾರ್ಜುನ ಸೋಶಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಹಾಕಿ ಸುಮ್ಮನಾಗಿದ್ದರು. ಈಗ ಮಗನ ಡಿವೋರ್ಸ್ ಬಗ್ಗೆ ಮುಕ್ತವಾಗಿ ಕೆಲವು ವಿಚಾರವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬೇಬಿ ಬಂಪ್ ಫೋಟೋಶೂಟ್‍ನಲ್ಲಿ ನಟಿ ಅಮೂಲ್ಯ

     

  • ಆರತಕ್ಷತೆಯ ಸಂಭ್ರಮದಲ್ಲಿದ್ದ ನಾಗಾರ್ಜುನ್ ಕುಟುಂಬಕ್ಕೆ ಮರುದಿನವೇ ದೊಡ್ಡ ಶಾಕ್: ಹೊತ್ತಿ ಉರಿದ ಸ್ಟುಡಿಯೋ

    ಆರತಕ್ಷತೆಯ ಸಂಭ್ರಮದಲ್ಲಿದ್ದ ನಾಗಾರ್ಜುನ್ ಕುಟುಂಬಕ್ಕೆ ಮರುದಿನವೇ ದೊಡ್ಡ ಶಾಕ್: ಹೊತ್ತಿ ಉರಿದ ಸ್ಟುಡಿಯೋ

    ಹೈದರಾಬಾದ್: ನಗರದ ಬಂಜಾರ ಹಿಲ್ಸ್ ನಲ್ಲಿರುವ ತೆಲುಗು ನಟ ಅಕ್ಕಿನೇನಿ ನಾಗಾರ್ಜುನ್ ಒಡೆತನದ ಅನ್ನಪೂರ್ಣ ಸ್ಟುಡಿಯೋ ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿದೆ.

    ಸುಮಾರು 14 ಸಾವಿರ 800 ಚದರ ಅಡಿ ವಿಸ್ತೀರ್ಣ ಹೊಂದಿರುವ ಸ್ಟುಡಿಯೋ ಬೆಂಕಿಗಾಹುತಿ ಆಗಿದೆ. ಸೋಮವಾರ ಸಂಜೆ ಬೆಂಕಿ ಕಾಣಿಸಿಕೊಂಡ ಕೇವಲ ಎರಡು ಗಂಟೆಗಳಲ್ಲಿ ಅಗ್ನಿಶಾಮಕ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾದರೂ, ಬೆಂಕಿಯ ಕೆನ್ನಾಲಿಗೆಗೆ ಸ್ಟುಡಿಯೋದಲ್ಲಿದ್ದ ಎಲ್ಲಾ ಸಾಮಗ್ರಿಗಳು ಭಸ್ಮವಾಗಿವೆ.

    1975 ರಲ್ಲಿ ನಾಗಾರ್ಜುನ್ ತಂದೆ ನಾಗೇಶ್ವರ್ ರಾವ್ ಸ್ಟುಡಿಯೋವನ್ನು ನಿರ್ಮಾಣ ಮಾಡಿದ್ದರು. ಅಕ್ಕಿನೇನಿ ಕುಟುಂಬದವರ ಸಿನಿಮಾ ಸೇರಿದಂತೆ ಅನೇಕ ನಟರ ಸಿನಿಮಾಗಳ ಚಿತ್ರೀಕರಣ ನಡೆದಿವೆ.

    ಸಂಜೆ ಸುಮಾರು 6 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಟುಡಿಯೋದಲ್ಲಿದ್ದ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನವನ್ನು ಮಾಡಿದ್ದಾರೆ. ಆದರೂ ಬೆಂಕಿ ಸ್ಟುಡಿಯೋದ ಎಲ್ಲ ಭಾಗಗಳಲ್ಲಿ ವ್ಯಾಪಿಸಿದ್ದು, ಭಯಭೀತರಾದ ಸಿಬ್ಬಂದಿ ಹೊರಗಡೆ ಓಡಿ ಬಂದಿದ್ದಾರೆ. ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

    ನಾಗಾರ್ಜುನ್ ಭಾನುವಾರ ಮಗನ ಆರತಕ್ಷತೆಯನ್ನು ಅದ್ಧೂರಿಯಾಗಿ ಮಾಡಿ ಸಂಭ್ರಮಿಸಿದ್ದರು. ನಾಗಾರ್ಜುನ ಕುಟುಂಬಕ್ಕೆ ಆರತಕ್ಷತೆಯ ಮರುದಿನವೇ ದೊಡ್ಡ ಶಾಕ್ ಎದುರಾಗಿದೆ. ಆರತಕ್ಷತೆಯ ಸಂಭ್ರಮದಲ್ಲಿ ನಿರತವಾಗಿದ್ದ ಅಕ್ಕಿನೇನಿ ಕುಟುಂಬಕ್ಕೆ ಈ ಘಟನೆ ಅತೀವ ನೋವುಂಟು ಮಾಡಿದೆ.

    https://twitter.com/BCC_movienews/status/930084452016910336