Tag: ಅಕ್ಕಿ ಕಡಿತ

  • ಅನ್ನಭಾಗ್ಯ ಗುದ್ದಾಟದ ಮಧ್ಯೆಯೇ ಒಂದಾಗಿ ಶೋ ರೂಮ್ ಉದ್ಘಾಟಿಸಿದ ಎಚ್‍ಡಿಕೆ-ಜಮೀರ್

    ಅನ್ನಭಾಗ್ಯ ಗುದ್ದಾಟದ ಮಧ್ಯೆಯೇ ಒಂದಾಗಿ ಶೋ ರೂಮ್ ಉದ್ಘಾಟಿಸಿದ ಎಚ್‍ಡಿಕೆ-ಜಮೀರ್

    ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಆಹಾರ ಹಾಗೂ ನಾಗರೀಕ ಸಚಿವ ಜಮೀರ್ ಅಹ್ಮದ್ ಕಳೆದ ಕೆಲವು ದಿನಗಳಿಂದ ಒಬ್ಬರಿಗೊಬ್ಬರು ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ ಇಂದು ಇಬ್ಬರು ಒಂದಾಗಿಯೇ ಶೋ ರೂಮ್ ಒಂದನ್ನು ಉದ್ಘಾಟನೆ ಮಾಡಿದ್ದಾರೆ.

    ನಗರದ ಚಾಮರಾಜಪೇಟೆಯಲ್ಲಿ ನಿಸಾರ್ ಮೆಟಲ್ಸ್‍ನ ಹೊಸ ಶೋ ರೂಮ್ ಅನ್ನು ಕುಮಾರಸ್ವಾಮಿ ಹಾಗೂ ಜಮೀರ್ ಅಹ್ಮದ್ ಒಟ್ಟಾಗಿ ರಿಬ್ಬನ್ ಕಟ್ ಮಾಡಿ, ಉದ್ಘಾಟಿಸಿದ್ದಾರೆ.

    ಅಕ್ಕಿ ಕಡಿತದ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ನನ್ನ ಬಳಿ ಚರ್ಚೆ ಮಾಡಬೇಕಿತ್ತು. ಆದರೆ ಹಾಗೇ ಮಾಡಲಿಲ್ಲ. ಹೀಗಾಗಿ ಹಿಂದಿನಂತೆ 7 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ ಮಂಗಳವಾರ ಹೇಳಿಕೆ ನೀಡಿದ್ದರು. ಇದಕ್ಕೆ ಖಾರವಾಗಿಯೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಕುಮಾರಸ್ವಾಮಿ, ಜಮೀರ್ ಅಹ್ಮದ್ ಹೇಳಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ತಿರುಗೇಟು ಕೊಟ್ಟಿದ್ದರು.

  • ಅನ್ನಭಾಗ್ಯ ಯೋಜನೆ: ದೋಸ್ತಿಗೆ ತಿರುಗೇಟು ಕೊಟ್ಟ ಸಿಎಂ ಕುಮಾರಸ್ವಾಮಿ

    ಅನ್ನಭಾಗ್ಯ ಯೋಜನೆ: ದೋಸ್ತಿಗೆ ತಿರುಗೇಟು ಕೊಟ್ಟ ಸಿಎಂ ಕುಮಾರಸ್ವಾಮಿ

    ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಡಿ 7 ಕೆಜಿ ನೀಡಲಾಗುತ್ತದೆ ಎಂದಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಜಮೀರ್ ಅಹ್ಮದ್ ಹೇಳಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

    ಅಕ್ಕಿ ಕಡಿತದ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ನನ್ನ ಬಳಿ ಚರ್ಚೆ ಮಾಡಬೇಕಿತ್ತು. ಆದರೆ ಹಾಗೇ ಮಾಡಲಿಲ್ಲ. ಹೀಗಾಗಿ ಹಿಂದಿನಂತೆ 7 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ ಮಂಗಳವಾರ ಹೇಳಿಕೆ ನೀಡಿದ್ದರು.

    ಬಜೆಟ್‍ನಲ್ಲಿ ಕುಮಾರಸ್ವಾಮಿ ಅವರು ಅನ್ನಭಾಗ್ಯ ಯೋಜನೆಯ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದರು. ಆದರೆ ಇದು ಸೂಕ್ತವಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರು. ಜೊತೆಗೆ ಅಕ್ಕಿ ಕಡಿತ ಮಾಡದಂತೆ ಪತ್ರದ ಮೂಲಕ ಕುಮಾರಸ್ವಾಮಿಯವರಿಗೆ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದರು. ಆದರೆ, ಕುಮಾರಸ್ವಾಮಿ ಅವರು ಯಾವುದೇ ಒತ್ತಡಗಳಿಗೆ, ಮನವಿಗೆ ಬಗ್ಗದೇ ಅಕ್ಕಿಯ ಕಡಿತವನ್ನು ಹಿಂದಕ್ಕೆ ಪಡೆದಿರಲಿಲ್ಲ.

  • ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ ವಿಚಾರದಲ್ಲಿ ದೋಸ್ತಿಗಳ ನಡುವೆಯೇ ಭಿನ್ನಾಭಿಪ್ರಾಯ!

    ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ ವಿಚಾರದಲ್ಲಿ ದೋಸ್ತಿಗಳ ನಡುವೆಯೇ ಭಿನ್ನಾಭಿಪ್ರಾಯ!

    ಬೆಂಗಳೂರು: ಅನ್ನಭಾಗ್ಯ ಯೋಜನೆಯ 2 ಕೆಜಿ ಅಕ್ಕಿ ಕಡಿತ ವಿಚಾರದ ಬಗ್ಗೆ ಈಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಜಮೀರ್ ಅಹ್ಮದ್ ಮಧ್ಯೆ ಇದ್ದ ಭಿನ್ನಾಭಿಪ್ರಾಯ ಬಹಿರಂಗವಾಗಿದೆ.

    ಬಜೆಟ್‍ನಲ್ಲಿ ಕುಮಾರಸ್ವಾಮಿ ಅವರು ಅನ್ನಭಾಗ್ಯ ಯೋಜನೆಯ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದರು. ಇದರಿಂದ ಸರ್ಕಾರದ ಮೇಲಾಗುವ 2 ಸಾವಿರ ಕೋಟಿ ರೂ. ಹೊರೆ ತಡೆಯಬಹುದು ಎಂದು ಲೆಕ್ಕ ಹಾಕಿದ್ದರು. ಅನ್ನ ಭಾಗ್ಯದಲ್ಲಿ ಅಕ್ಕಿ ಕಡಿತಗೊಂಡಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಕ್ಕಿ ಕಡಿತ ಮಾಡದಂತೆ ಪತ್ರದ ಮೂಲಕ ಕುಮಾರಸ್ವಾಮಿಯವರಿಗೆ  ಮನವಿ ಮಾಡಿಕೊಂಡಿದ್ದರು. ಆದರೆ, ಕುಮಾರಸ್ವಾಮಿ ಅವರು ಯಾವುದೇ ಒತ್ತಡಗಳಿಗೆ, ಮನವಿಗೆ ಒಳಗಾಗದೆ ಅಕ್ಕಿಯ ಕಡಿತವನ್ನು ಹಿಂದಕ್ಕೆ ಪಡೆಯಲಿಲ್ಲ. ಈಗ ಆಹಾರ ಸಚಿವ ಜಮೀರ್ ಅಹ್ಮದ್ ಮೊದಲಿನಂತೆ 7 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಪಟ್ಟು ಹಿಡಿದಿದ್ದಾರೆ.

    ಅಕ್ಕಿ ಕಡಿತದ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ನನ್ನ ಬಳಿ ಚರ್ಚೆ ಮಾಡಬೇಕಿತ್ತು. ಆದರೆ ಹಾಗೇ ಮಾಡಲಿಲ್ಲ. ಹೀಗಾಗಿ ಹಿಂದಿನಂತೆ 7 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದರು.

    ವಿಧಾನಸೌಧದಲ್ಲಿ ಸಿಎಂ ಜೊತೆ ಅನಿಲ ಭಾಗ್ಯ ಕುರಿತ ಸಭೆ ಬಳಿಕ ಮಾತನಾಡಿದ ಸಚಿವರು, ಅನಿಲ ಭಾಗ್ಯ ಯೋಜನೆಯ ಮೊದಲ ಹಂತವನ್ನು ಇನ್ನೆರಡು ತಿಂಗಳಲ್ಲಿ ಪೂರ್ಣ ಗೊಳಿಸಲಾಗುತ್ತದೆ. ಈಗಾಗಲೆ 32 ಲಕ್ಷ ಅರ್ಜಿಗಳು ಬಂದಿವೆ. ಮೂರು ಹಂತದಲ್ಲಿ ಯೋಜನೆ ಅನುಷ್ಠಾನ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಿದ್ದೇವೆ. ಮೊದಲ ಹಂತದಲ್ಲಿ 10 ಲಕ್ಷ ಫಲಾನುಭವಿಗಳಿಗೆ ಸ್ಟೌವ್, ಗ್ಯಾಸ್ ಸಂಪರ್ಕ ನೀಡಲಾಗುತ್ತದೆ. ನಂತರದ ಎರಡು ಹಂತದಲ್ಲಿ ಉಳಿದ ಫಲಾನುಭವಿಗಳಿಗೆ ಯೋಜನೆ ತಲುಪಲಿದೆ ಎಂದು ತಿಳಿಸಿದರು.

    ಸರ್ಕಾರವು ಒಂದು ಗ್ಯಾಸ್ ಸಂಪರ್ಕ ಕಲ್ಪಿಸಲು 4,200 ರೂ. ಖರ್ಚು ಮಾಡುತ್ತಿದೆ. ಈಗಾಗಲೇ 1 ಲಕ್ಷ ಸ್ಟೌವ್ ಖರೀದಿ ಮಾಡಲಾಗಿದೆ. ಇನ್ನು ಎರಡು ತಿಂಗಳಲ್ಲಿ ಮೊದಲ ಹಂತದ ವಿತರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಅನಿಲ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ಯೋಜನೆಯ ಸಂಪೂರ್ಣ ಹೊಣೆ ಹೊತ್ತಿದೆ. ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಯೋಜನೆ ವಿಳಂಬ ಆಗಿದೆ ಎಂದು ಸ್ಪಷ್ಟಪಡಿಸಿದರು.

  • ಅಕ್ಕಿ ಕಡಿತ ಮಾಡಿದ್ಯಾಕೆ, ನನಗೆ ಈಗ 2 ಕೆ.ಜಿ. ಅಕ್ಕಿ ಬೇಕು: ಕಾರ್ಯಕ್ರಮದಲ್ಲೇ ಸಚಿವರಿಗೆ ವ್ಯಕ್ತಿಯಿಂದ ಬೇಡಿಕೆ

    ಅಕ್ಕಿ ಕಡಿತ ಮಾಡಿದ್ಯಾಕೆ, ನನಗೆ ಈಗ 2 ಕೆ.ಜಿ. ಅಕ್ಕಿ ಬೇಕು: ಕಾರ್ಯಕ್ರಮದಲ್ಲೇ ಸಚಿವರಿಗೆ ವ್ಯಕ್ತಿಯಿಂದ ಬೇಡಿಕೆ

    ಚಿಕ್ಕಬಳ್ಳಾಪುರ: ಅನ್ನಭಾಗ್ಯ ಪಡಿತರದಲ್ಲಿ ಎರಡು 2 ಕೆ.ಜಿ. ಅಕ್ಕಿಯನ್ನು ಕಡಿತ ಮಾಡಿದ್ದು ಯಾಕೆ? ನನಗೆ 2 ಕೆಜಿ ಅಕ್ಕಿ ಬೇಕು ಕೊಡಿ ಎಂದು ಖಾಲಿ ಚೀಲ ಹಿಡಿದು ಸರ್ಕಾರಿ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ಕೃಷಿ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ.

    ಗೌರಿಬಿದನೂರು ತಾಲೂಕಿನ ಕಾಚಮಾಚೇನಹಳ್ಳಿ ಗ್ರಾಮದ ಬೊಮ್ಮಲಿಂಗೇಶ್ವರ ದೇವಾಲಯದ ಆವರಣದಲ್ಲಿ 2018-19 ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ ಸಚಿವ ಶಿವಶಂಕರ್ ರೆಡ್ಡಿ ಉದ್ಘಾಟಿಸಿದರು. ಈ ವೇಳೆ ಕಾರ್ಯಕ್ರಮದ ಬಳಿ ಬಂದ ಸ್ಥಳೀಯ ವ್ಯಕ್ತಿಯೊರ್ವ ಏಕೆ ಎರಡು ಕೆ.ಜಿ. ಅಕ್ಕಿ ಕಡಿತ ಮಾಡಿದ್ದೀರಿ ಹೇಳಿ ಅಂತ ಪ್ರಶ್ನೆ ಮಾಡಿದ್ರು. ಅಷ್ಟೇ ಅಲ್ಲದೇ ನನಗೆ 2 ಕೆ.ಜಿ ಅಕ್ಕಿ ಕೊಡಲೇ ಬೇಕು ಅಂತಾ ಖಾಲಿ ಚೀಲ ತಂದು ಪ್ರದರ್ಶನ ಮಾಡಿದರು.

    ಕಾಯಕ್ರಮದ ಧ್ವನಿವರ್ಧಕದ ಧ್ವನಿಯಿಂದ ವ್ಯಕ್ತಿಯ ಮಾತು ಸಚಿವರ ಕಿವಿಗೆ ಬೀಳಲಿಲ್ಲ. ಅಷ್ಟರಲ್ಲಿಯೇ ಅಲ್ಲೇ ಇದ್ದ ಸ್ಥಳೀಯರು ವ್ಯಕ್ತಿಯನ್ನು ಸಮಾಧಾನ ಪಡಿಸಲು ಯತ್ನಿಸಿದರು. ಕೊನೆಗೆ ಯಾರ ಮಾತನ್ನು ಕೇಳದ ಸ್ಥಿತಿಯಲ್ಲಿದ್ದ ಅವರನ್ನು ಪೊಲೀಸರು ಕಾರ್ಯಕ್ರಮದಿಂದ ಹೊರಗೆ ಕರೆದುಕೊಂಡರು.

    https://youtu.be/IdCjm6_9ABA