Tag: ಅಕ್ರಮ ಗಣಿಗಾರಿಕೆ

  • ಅಕ್ರಮ ಗಣಿಗಾರಿಕೆ ಆರೋಪ; ಭಗವಂತ್ ಖೂಬಾಗೆ 25 ಕೋಟಿ ದಂಡ ವಿಧಿಸಿ ನೋಟಿಸ್

    ಅಕ್ರಮ ಗಣಿಗಾರಿಕೆ ಆರೋಪ; ಭಗವಂತ್ ಖೂಬಾಗೆ 25 ಕೋಟಿ ದಂಡ ವಿಧಿಸಿ ನೋಟಿಸ್

    ಕಲಬುರಗಿ: ಅಕ್ರಮ ಗಣಿಗಾರಿಕೆ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಭಗವಂತ್‌ ಖೂಬಾ (Bhagwanth Khuba) ಅವರಿಗೆ ಕಲಬುರಗಿ ಜಿಲ್ಲೆಯ ಕಾಳಗಿ ತಹಶೀಲ್ದಾರ್‌ (Tahsildar) 25.30 ಕೋಟಿ ರೂ. ದಂಡ ಪಾವತಿಸುವಂತೆ ಸೂಚಿಸಿ ನೋಟಿಸ್ ನೀಡಿದ್ದಾರೆ.

    ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಚ್ಚಾ ಗ್ರಾಮದಲ್ಲಿ 2014ರ ಜು.19 ರಿಂದ 2019ರ ಜು.18ರ ವರೆಗೆ ವಚ್ಚಾ ಗ್ರಾಮದ ಸರ್ವೆ ನಂ.24/4 ರಲ್ಲಿ 2 ಎಕರೆಗೆ ಅನುಮತಿ ಪಡೆದು 8 ಎಕರೆಗಿಂತ ಹೆಚ್ಚಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಸಂಜೀವಕುಮಾರ್ ತಿಪ್ಪಣ್ಣ ಜವಕರ್ ಎಂಬವರು ಇದರ ವಿರುದ್ಧ ದೂರು ನೀಡಿದ್ದರು.

    ದೂರಿನ ಆಧಾರದ ಮೇಲೆ ಗಣಿ ಇಲಾಖೆ ಹಾಗೂ ಕಾಳಗಿ ತಹಶೀಲ್ದಾರ ಜಂಟಿ ಪರಿಶೀಲನೆ ನಡೆಸಿದಾಗ, ಅಕ್ರಮ ಗಣಿಗಾರಿಕೆ ನಡೆದಿದೆ ಅನ್ನೋದು ತಿಳಿದುಬಂದಿದೆ. ಬಳಿಕ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ವರದಿ ಬಳಿಕ 25.30 ಕೋಟಿ ರೂ. ದಂಡ ಪಾವತಿಸುವಂತೆ ಮೂರು ಬಾರಿ ಅಧಿಕಾರಿಗಳು ನೊಟೀಸ್ ನೀಡಿದ್ದಾರೆ. ಈ ಬಗ್ಗೆ ಅಧಿಕಾರಿಗಳ ನೋಟಿಸ್ ಪ್ರಶ್ನಿಸಿ ಖೂಬಾ ಕಾನೂನು ಮೊರೆ ಹೋಗಿದ್ದಾರೆ.

  • ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

    ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

    ಮಡಿಕೇರಿ: ಅದು ಪ್ರಕೃತಿಯ ತವರು ಕೊಡಗು (Kodagu), ದೇಶ ವಿದೇಶಗಳ ಜನರು ನಿತ್ಯ ಈ ಊರಿಗೆ ಭೇಟಿ ನೀಡಿ ಪ್ರಕೃತಿಯ ಮಡಿಲಲ್ಲಿ ದಿನ ಕಳೆಯುತ್ತಾರೆ. ಬೆಟ್ಟಗುಡ್ಡಗಳ ಹಸಿರಿನ ವಾತಾವರಣ ಕಂಡು ಖುಷಿಯಿಂದ ತೆರಳುತ್ತಾರೆ. ಇದರಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಪ್ರವಾಸೋದ್ಯಮ (Tourism) ಚಟುವಟಿಕೆಗಳು ಹೆಚ್ಚಾಗುತ್ತಿದೆ. ಇಂತಹ ಕೊಡಗಿನಲ್ಲಿ ಕೆಲ ದುರುಳರು ಹಣದ ಆಸೆಗೆ ಬೃಹತ್ ಬೆಟ್ಟಗಳನ್ನೇ ನಾಶ ಮಾಡಲು ಹೊರಟಿದ್ದಾರೆ. ಇಡೀ ಬೆಟ್ಟ ಪ್ರದೇಶವನ್ನೇ ರಕ್ಕಸನ ಬಾಯಿಯಂತೆ ನುಂಗುತ್ತಿದ್ದಾರೆ. ಹೀಗಾಗಿ ಆ ಊರ ಸುತ್ತಮುತ್ತ ಪ್ರದೇಶಗಳಲ್ಲಿ ವಾಸ ಮಾಡುವ ಜನರು ದಿನ ಕಳೆದಂತೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಅನ್ನೋ ಆರೋಪವೂ ಕೇಳಿಬಂದಿದೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಪಂಚಾಯತಿ ವ್ಯಾಪ್ತಿಯ ಯಲಕನೂರು ಹಾಗೂ ಹೊಸಳ್ಳಿ ಗ್ರಾಮದಲ್ಲಿ ಕೆಲ ದುರುಳರು ಪ್ರಕೃತಿಯ ಒಡಲಿಗೆ ಕೈಹಾಕಿದ್ದಾರೆ. ಲಾರಿ, ಇಟಾಚಿಗಳನ್ನ ಬಳಸಿಕೊಂಡು ಹಗಲು ರಾತ್ರಿ ಎನ್ನದೇ ಬಾರಿ ಸ್ಫೋಟಕಗಳನ್ನು ಸಿಡಿಸಿ ಅಕ್ರಮವಾಗಿ ಗಣಿಗಾರಿಕೆ (Illegal Mining) ನಡೆಸುತ್ತಿದ್ದಾರೆ. ಇದರಿಂದ ಹಲವಾರು ಜನರು ಅನಾರೋಗ್ಯ ಸಮಸ್ಯೆ ಎದುರಿಸಬೇಕಾಗಿದೆ.

    ಊರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 17ಕ್ಕೂ ಹೆಚ್ಚು ಕಲ್ಲು ಕೊರೆಗಳು ಇದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಇತ್ತಿಷ್ಟು ಜಾಗದಲ್ಲಿ ಗಣಿಗಾರಿಕೆ ನಡೆಸುತ್ತೇವೆ ಅಂತ ಅನುಮತಿ ಪಡೆದಿದ್ದಾರೆ. ಆದ್ರೆ ಕಲ್ಲುಗಣಿಗಾರಿಕೆ ನಡೆಸುತ್ತಿರುವರು ಇಲಾಖೆಯ ಕೆಲ ಮಾನದಂಡಗಳನ್ನ ಗಾಳಿಗೆ ತೂರಿ ಪ್ರಕೃತಿ ಮಾತೆಯ ಭೂಗರ್ಭವನ್ನೇ ಸೀಳುತ್ತಿದ್ದಾರೆ. ಹಗಲು ರಾತ್ರಿ ಎನ್ನದೇ ಭಾರೀ ಸ್ಫೋಟಕಗಳನ್ನ ಸಿಡಿಸಿ ಗಣಿ ಕೆಲಸ ನಡೆಸುತ್ತಿದ್ದಾರೆ. ಮೀಸಲು ಅರಣ್ಯ ಪ್ರದೇಶವನ್ನ ಬೀಡದೇ ಮನಸ್ಸೋ ಇಚ್ಚೆ ಗಣಿಗಾರಿಕೆ ನಡೆಸುತ್ತಿದ್ದಾರೆ. ಇದು ಸುತ್ತಮುತ್ತ ನೆಲೆಸಿರುವ ಪ್ರದೇಶದ ಜನರನ್ನೂ ಆತಂಕ್ಕೆ ದೂಡಿದೆ.

    ಇನ್ನೂ ಈ ಊರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರುವ ಹಲವು ಕಲ್ಲುಗಣಿಗಾರಿಕೆ ಅಕ್ರಮವಾಗಿದೆ. ಅವೈಜ್ಞಾನಿಕ ನಿರ್ವಹಣೆಯಿಂದಾಗಿ ಊರಿನ ವಾತಾವರಣ ಕಲುಷಿತಗೊಂಡು ಗ್ರಾಮದ ಶೇ.90ರಷ್ಟು ಮಂದಿಗೆ ಶ್ವಾಸಕೋಶದ ತೊಂದರೆ ಎದುರಾಗಿದೆ. ಹೀಗಾಗಿ ಕಲ್ಲುಗಣಿಗಾರಿಕೆ ತಕ್ಷಣ ನಿಲ್ಲಿಸಬೇಕು, ಇಲ್ಲದಿದ್ದಲ್ಲಿ ದಯಾಮರಣ ನೀಡಿ ಎಂದು ಗ್ರಾಮಸ್ಥರು ವಿವಿಧ ಇಲಾಖಾ ಅಧಿಕಾರಿಗಳ ಎದುರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

    ಕಲ್ಲುಗಣಿಗಾರಿಕೆಯಿಂದ ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಭಾರೀ ಸಮಸ್ಯೆ ಸೃಷ್ಟಿಯಾಗಿದೆ. ಅತೀ ಹೆಚ್ಚು ಭಾರದ ವಾಹನಗಳ ಸಂಚಾರದಿಂದ ರಸ್ತೆಗಳು ಹದಗೆಟ್ಟಿದ್ದು, ಜನರ ಬದುಕು ದುಸ್ತರವಾಗಿದೆ. ಸಂಜೆ ವೇಳೆ ಕೋರೆಗಳಲ್ಲಿ ಭಾರೀ ಸ್ಫೋಟಗಳನ್ನು ಬಳಸಲಾಗುತ್ತಿದೆ. ಇಲ್ಲಿನ ಮನೆಗಳೂ ಸಾಕಷ್ಟು ಬಿರುಕುಬಿಟ್ಟಿವೆ. ಜೀವನವೇ ನರಕವಾಗಿದೆ ಗ್ರಾಮಸ್ಥರು ಅಧಿಕಾರಿಗಳೆದುರು ಅಳಲು ತೋಡಿಕೊಂಡಿದ್ದಾರೆ. ಆದ್ರೆ ಇದ್ಯಾವುದಕ್ಕೂ ಕಿವಿಗೊಡದೆ ಅಧಿಕಾರಿಗಳು ತಮ್ಮ ಪಾಡಿಗೆ ಇದ್ದಾರೆ. ಇನ್ನೂ ಕೆಲವರು ಗ್ರಾಮಸ್ಥರಿಗೆ ಹಣ ನೀಡಿ ಇಲ್ಲಿ ಯಾವ್ದೇ ಸಮಸ್ಯೆ ಇಲ್ಲವೆಂದು ಹೇಳುವಂತೆ ಹೇಳಿಕೊಟ್ಟಿದ್ದಾರೆ ಅಂತ ʻಪಬ್ಲಿಕ್‌ ಟಿವಿʼ ರಿಯಾಲಿಟಿ ಚೆಕ್‌ ವೇಳೆ ಯುವಕನೊಬ್ಬ ಹೇಳಿಕೊಂಡಿದ್ದಾನೆ.

  • ಮೈನಿಂಗ್ ಕೇಸಲ್ಲಿ 7 ವರ್ಷ ಜೈಲು – ಶಾಸಕ ಸ್ಥಾನದಿಂದ ಅನರ್ಹರಾಗ್ತಾರಾ ರೆಡ್ಡಿ?

    ಮೈನಿಂಗ್ ಕೇಸಲ್ಲಿ 7 ವರ್ಷ ಜೈಲು – ಶಾಸಕ ಸ್ಥಾನದಿಂದ ಅನರ್ಹರಾಗ್ತಾರಾ ರೆಡ್ಡಿ?

    ಬಳ್ಳಾರಿ/ಬೆಂಗಳೂರು: ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಂಕಷ್ಟ ಎದುರಾಗಿದೆ. ಮೈನಿಂಗ್ ಕೇಸ್‌ನಲ್ಲಿ ರೆಡ್ಡಿ ದೋಷಿ ಎಂದು ತೀರ್ಪು ನೀಡಿರುವ ಕೋರ್ಟ್, 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈಗ ರೆಡ್ಡಿಗೆ ಶಾಸಕ ಸ್ಥಾನದಿಂದ ಅನರ್ಹವಾಗುವ ಭೀತಿ ಎದುರಾಗಿದೆ.

    ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಗೆದ್ದಿದ್ದ ಜನಾರ್ದನ ರೆಡ್ಡಿ ತಮ್ಮ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ 2 ವರ್ಷಗಳಿಗಿಂತ ಹೆಚ್ಚು ಶಿಕ್ಷೆಯಾದರೆ ಅನರ್ಹ ಸಾಧ್ಯತೆಯಿದೆ. 6 ವರ್ಷಗಳ ಕಾಲ ಚುನಾವಣೆಗೆ ನಿಲ್ಲುವಂತಿಲ್ಲ. ಅಲ್ಲದೇ, ಸದ್ಯದ ಶಾಸಕ ಸ್ಥಾನ ಸಹ ಅನರ್ಹವಾಗಬಹುದು. ಇದೆಲ್ಲವೂ ಸಿಬಿಐ ಕೋರ್ಟ್ನ ಆದೇಶ ಜಾರಿಯಾದರೆ ಮಾತ್ರ ಸಾಧ್ಯ. ಹೈಕೋರ್ಟ್ನಿಂದ ಸ್ಟೇ ತಂದರೆ ಯಾವುದೇ ತೊಂದರೆಯಿಲ್ಲ.

    1951 ರ ಪ್ರಜಾಪ್ರತಿನಿಧಿ ಕಲಂ 8(3) ಅಡಿ 2 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಯಾದರೆ ಶಾಸಕ ಸ್ಥಾನದಿಂದ ಅನರ್ಹರಾಗ್ತಾರೆ. ಅಲ್ಲದೇ, ಮುಂದಿನ 6 ವರ್ಷಗಳ ತನಕ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. 3 ತಿಂಗಳ ಒಳಗೆ ಕೋರ್ಟ್ ಆದೇಶವನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವಿದೆ. ಅಲ್ಲಿ ಅರ್ಜಿ ಪುರಸ್ಕರಿಸಿದರೆ ಶಾಸಕ ಸ್ಥಾನ ಅನರ್ಹತ್ವಕ್ಕೆ ತಡೆ ಬೀಳಲಿದೆ.

  • ಅಕ್ರಮ ಗಣಿಗಾರಿಕೆ ಕೇಸ್- ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

    ಅಕ್ರಮ ಗಣಿಗಾರಿಕೆ ಕೇಸ್- ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

    – ಮಾಜಿ ಸಚಿವನಿಗೆ ಶಾಕ್‌ ಕೊಟ್ಟ ಸಿಬಿಐ ಕೋರ್ಟ್‌

    ಬಳ್ಳಾರಿ/ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ದೋಷಿ ಎಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದೆ.

    ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್‌ ರೆಡ್ಡಿ ಮತ್ತು ಅಲಿ ಖಾನ್‌ಗೆ ಕೋರ್ಟ್‌ ಸೇರಿ ಐದು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಪ್ರಕರಣದಲ್ಲಿ ಅವಿಭಜಿತ ಆಂಧ್ರಪ್ರದೇಶ ಗಣಿ ಸಚಿವೆಯಾಗಿದ್ದ ಸಬಿತಾ ಇಂದ್ರರೆಡ್ಡಿ, ಕೃಷ್ಣ ನಂದಾಗೆ ಕೋರ್ಟ್‌ ಕ್ಲೀನ್‌ಚಿಟ್‌ ನೀಡಿದೆ. ಇದನ್ನೂ ಓದಿ: ನನಗೆ ನಮ್ಮ ದೇಶ ಮುಖ್ಯ, ಅದಕ್ಕೆ ಯುದ್ಧಕ್ಕೆ ಹೋಗ್ತೀನಿ ಎಂದಿದ್ದೆ: ಸಚಿವ ಜಮೀರ್

    ಏನಿದು ಪ್ರಕರಣ?
    ಆಂಧ್ರ-ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡ ಹೀರೆಹಾಳ್-ಸಿದ್ದಾಪುರ ಬಳಿಯ ಓಬಳಾಪುರಂ ಬೆಟ್ಟದಲ್ಲಿ ನಡೆದಿದ್ದ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಓಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸರೆಡ್ಡಿ ಮತ್ತು ಜನಾರ್ದನರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಈ ಕಂಪನಿಗೆ ಗಣಿ‌ಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ ಹಾಗೂ ಗಣಿ‌ ಇಲಾಖೆಯಿಂದಲೂ ಅಕ್ರಮ‌ ನಡೆದಿತ್ತು. ಇದರಲ್ಲಿ ರಾಜ್ಯದ 29 ಲಕ್ಷ ಟನ್ ಅದಿರನ್ನು ಲೂಟಿ ಮಾಡಿ 884 ಕೋಟಿ ರೂ. ಆದಾಯ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಪ್ರಕರಣದಲ್ಲಿ ಶ್ರೀನಿವಾಸರೆಡ್ಡಿ, ಜನಾರ್ದನ ರೆಡ್ಡಿ, ಆಪ್ತ ಅಲಿಖಾನ್, ಗಣಿ ಇಲಾಖೆಯ ನಿರ್ದೇಶಕ ರಾಜಗೋಪಾಲ್, ಆಂಧ್ರದ ಮಾಜಿ ಸಚಿವೆ ಸಬಿತಾ ಇಂದ್ರಾರೆಡ್ಡಿ, ನಿವೃತ್ತ ಐಎಎಸ್ ಅಧಿಕಾರಿ ಕೃಪಾನಂದ, ಶ್ರೀಲಕ್ಷ್ಮೀ ಇದ್ದಾರೆ.

    2009ರಲ್ಲಿ ಆಂಧ್ರದ ಅಂದಿನ ಮುಖ್ಯಮಂತ್ರಿ ಕಾಂಗ್ರೆಸ್‌ನ ರೋಷಯ್ಯ ಅವರು 2009 ರಲ್ಲಿ ಈ ಪ್ರಕರಣವನ್ನು‌ ಸಿಬಿಐ ತನಿಖೆಗೆ ನೀಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರ ಸೆಪ್ಟೆಂಬರ್ 5 ರಂದು ಜನಾರ್ದನ ರೆಡ್ಡಿ, ಶ್ರೀನಿವಾಸರೆಡ್ಡಿ ಸಿಬಿಐನಿಂದ ಬಂಧಿತರಾಗಿ, ಮೂರುವರೆ ವರ್ಷಗಳ ಕಾಲ ಚಂಚಲಗುಡ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ವಾಸ ಅನುಭವಿಸಿದ್ದರು. ಪ್ರಕರಣದಲ್ಲಿ ಟಪಾಲ್ ಗಣೇಶ ಮತ್ತವರ ಸಹೋದರ ಏಕಾಂಬರಂ, ಪ್ರಮುಖ ಸಾಕ್ಷಿಯಾಗಿದ್ದು, ಈಗಾಗಲೇ ಸಿಬಿಐ 3400 ಕ್ಕೂ ಹೆಚ್ಚು ದಾಖಲೆಗಳ‌ ಪರಿಶೀಲನೆ ಹಾಗೂ 219ಕ್ಕೂ ಹೆಚ್ವು ಸಾಕ್ಷಿಗಳ ವಿಚಾರಣೆ ನಡೆಸಿದೆ. ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಎಲ್ಲಾ ಆರೋಪಿಗಳು ಜೈಲಿಗೆ ಹೋಗೇ ಹೋಗ್ತಾರೆ ಎಂದು ಟಪಾಲ್ ಗಣೇಶ್ ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಹಿಂದೆ ಜನಾರ್ದನ ರೆಡ್ಡಿ ಹಾಗೂ ಅವರ ಪಟಾಲಂನಿಂದ ಅನುಭವಿಸಿದ್ದ ಕಿರುಕುಳದ ಬಗ್ಗೆಯೂ ಇಂಚಿಂಚಾಗಿ ತೆರೆದಿಟ್ಟಿದ್ದರು. ಇದನ್ನೂ ಓದಿ: ಸುಹಾಸ್‌ ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ: ದಿನೇಶ್ ಗುಂಡೂರಾವ್ ತಿರುಗೇಟು

  • ಆನಂದ್‌ ಸಿಂಗ್‌ ವಿರುದ್ಧ ಅಕ್ರಮ ಗಣಿಗಾರಿಕೆ ಕೇಸ್‌ – ಫೆ.24ಕ್ಕೆ ಅಂತಿಮ ತೀರ್ಪು ಪ್ರಕಟ

    ಆನಂದ್‌ ಸಿಂಗ್‌ ವಿರುದ್ಧ ಅಕ್ರಮ ಗಣಿಗಾರಿಕೆ ಕೇಸ್‌ – ಫೆ.24ಕ್ಕೆ ಅಂತಿಮ ತೀರ್ಪು ಪ್ರಕಟ

    ಬೆಂಗಳೂರು: ಮಾಜಿ ಸಚಿವ ಆನಂದ್‌ ಸಿಂಗ್‌ (Anand singh) ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪು ಫೆಬ್ರವರಿ 24ಕ್ಕೆ ಪ್ರಕಟವಾಗಲಿದೆ.

    ಪ್ರಕರಣದ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Peoples Representatives Court) ಮತ್ತೆ ಅಂತಿಮ ತೀರ್ಪು ಪ್ರಕಟಿಸುವ ದಿನಾಂಕವನ್ನು ಮುಂದೂಡಿದೆ. ನ್ಯಾ. ಸಂತೋಷ್ ಗಜಾನನ ಭಟ್ ಅವರ ಏಕಸದಸ್ಯ ಪೀಠ ಫೆಬ್ರವರಿ 24ಕ್ಕೆ ಅಂತಿಮ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

    ಮಾಜಿ ಸಚಿವ ಆನಂದ್‌ ಸಿಂಗ್‌ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿವಿಸಿ ವರದಿ ಆಧರಿಸಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ತನಿಖೆ ನಡೆಸಿತ್ತು. 16,976 ಮೆಟ್ರಿಕ್ ಟನ್ ಅದಿರು ಅಕ್ರಮ ಗಣಿಗಾರಿಕೆ ಆರೋಪ, ಜೈಸಿಂಗ್‌ಪುರದ ಬಳಿ ಎಸ್‌ವಿಕೆ ಫ್ಲಾಟ್‌ನಲ್ಲಿ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ 2015ರಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ಮಹಾ ಕುಂಭದಿಂದ ಸಂಸ್ಕೃತಿ, ಏರ್‌ಶೋನಿಂದ ರಕ್ಷಣಾ ಬಲಿಷ್ಠತೆಯನ್ನ ಭಾರತ ಜಗತ್ತಿಗೇ ಸಾರಿದೆ: ರಾಜನಾಥ್‌ ಸಿಂಗ್‌

    ಡಿವೈಎಸ್ಪಿ ವೇಣುಗೋಪಾಲ್ ನೇತೃತ್ವದ ತಂಡ ತನಿಖೆ ನಡೆಸಿ ಚಾರ್ಜ್‌ ಶೀಟ್‌ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌ ಇಂದಿಗೆ ಚಿಚಾರಣೆ ಕಾಯ್ದಿರಿಸಿತ್ತು. ಇದನ್ನೂ ಓದಿ: ನಾನು ಓದಿರೋದು 10ನೇ ತರಗತಿ, ಮುಡಾ ಕೇಸ್‌ನಲ್ಲಿ ನಾನೇ ವಾದ ಮಾಡ್ತೀನಿ: ಸ್ನೇಹಮಹಿ ಕೃಷ್ಣ

  • ಜನಾರ್ದನ ರೆಡ್ಡಿಗೆ ಸುಪ್ರೀಂ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಗ್ರೀನ್‌ಸಿಗ್ನಲ್‌

    ಜನಾರ್ದನ ರೆಡ್ಡಿಗೆ ಸುಪ್ರೀಂ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಗ್ರೀನ್‌ಸಿಗ್ನಲ್‌

    ನವದೆಹಲಿ/ ಬಳ್ಳಾರಿ:  ಅಕ್ರಮ ಗಣಿಗಾರಿಕೆಯ (Illegal Mining) ಪ್ರಮುಖ ಆರೋಪಿ ಮಾಜಿ ಸಚಿವ ಗಂಗಾವತಿ ವಿಧಾನಸಭೆ ಕ್ಷೇತ್ರದ ಹಾಲಿ ಶಾಸಕ ಜನಾರ್ದನ ರೆಡ್ಡಿಗೆ (Janardhana Reddy) ಬಿಗ್ ರಿಲೀಫ್ ಸಿಕ್ಕಿದ್ದು, ಬಳ್ಳಾರಿ (Ballari) ಜಿಲ್ಲಾ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್‌ (Supreme Court) ತೆರವು ಮಾಡಿದೆ.  ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

    ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠ ಈ ಆದೇಶ ನೀಡಿದೆ. ಪ್ರಕರಣದ ತನಿಖೆ ಮುಕ್ತಾಯಗೊಂಡು ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು ಈ ಹಂತದಲ್ಲಿ ಸಾಕ್ಷ್ಯ ನಾಶ ಸಾಧ್ಯವಿಲ್ಲ ಎನ್ನುವ ವಾದ ಪುರಸ್ಕರಿಸಿದ ಕೋರ್ಟ್ ಜಾಮೀನಿನಲ್ಲಿದ್ದ ಷರತ್ತನ್ನು ರದ್ದು ಮಾಡಿದೆ.

    ನಿಷೇಧ ಹೇರಿದ್ದು ಯಾಕೆ?
    ಆಂಧ್ರದ ಅನಂತಪುರ, ಕರ್ನೂಲು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ 2011 ಸೆಪ್ಟೆಂಬರ್ 5ರಂದು ಜನಾರ್ದನ ರೆಡ್ಡಿಯ ಬಂಧನವಾಗಿತ್ತು.

    ಬಂಧನದ ಬಳಿಕ ನಡೆದ ವಿಚಾರಣೆಯಲ್ಲಿ ಜನಾರ್ದನ ರೆಡ್ಡಿ ಪ್ರಭಾವಿಯಾಗಿದ್ದು ಸಾಕ್ಷಿ ನಾಶ ಮಾಡುವ ಆತಂಕವಿದೆ. ಈ ಕಾರಣಕ್ಕೆ ಬಳ್ಳಾರಿ, ಕರ್ನೂಲು ಮತ್ತು ಆನಂತಪುರ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಬೇಕು ಎಂದು ಸಿಬಿಐ (CBI) ಮನವಿ ಮಾಡಿತ್ತು. ಸಿಬಿಐ ಮನವಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್‌ ಮೂರು ಜಿಲ್ಲೆಗಳ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.

    ಈ ಮಧ್ಯೆ ಮಗಳ ಮದುವೆ, ಮೊಮ್ಮೊಗಳ ನಾಮಕರಣ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಮಾತ್ರ ಕೋರ್ಟ್ ಅನುಮತಿ ನೀಡಿತ್ತು. 2021ರ ನವೆಂಬರ್ ನಲ್ಲಿ ಕೊನೆಯದಾಗಿ ಬಳ್ಳಾರಿಗೆ ಜನಾರ್ದನ ರೆಡ್ಡಿ ಬಳ್ಳಾರಿಗೆ ಆಗಮಿಸಿದ್ದರು

    2011ರಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧಿತರಾಗಿದ್ದ ಜನಾರ್ದನ ರೆಡ್ಡಿ ಮೂರು ವರ್ಷ ನಾಲ್ಕು ತಿಂಗಳು ಜೈಲು ವಾಸ ಅನುಭವಿಸಿದ್ದರು. ಜೈಲುವಾಸದ ಬಳಿಕ 2015 ರಲ್ಲಿ ಬಿಡುಗಡೆಯಾಗಿದ್ದರು. ಬಳ್ಳಾರಿ ಜಿಲ್ಲೆಯಿಂದ ದೂರವೇ ಇದ್ದ ಜನಾರ್ದನ ರೆಡ್ಡಿ 2023ರ ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

  • ಅಕ್ರಮ ಗಣಿಗಾರಿಕೆ; ಪಂಜಾಬ್‌ನ 13 ಸ್ಥಳಗಳಲ್ಲಿ ಇ.ಡಿ ಶೋಧ- 3 ಕೋಟಿ ರೂ. ಜಪ್ತಿ

    ಅಕ್ರಮ ಗಣಿಗಾರಿಕೆ; ಪಂಜಾಬ್‌ನ 13 ಸ್ಥಳಗಳಲ್ಲಿ ಇ.ಡಿ ಶೋಧ- 3 ಕೋಟಿ ರೂ. ಜಪ್ತಿ

    ನವದೆಹಲಿ: ಅಕ್ರಮ ಗಣಿಗಾರಿಕೆ (Illegal Mining) ಪ್ರಕರಣದಲ್ಲಿ ಪಂಜಾಬ್‌ನ (Punjab) ರೋಪರ್ ಜಿಲ್ಲೆಯ 13 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ED) ಬುಧವಾರ ಶೋಧ ನಡೆಸಿದ್ದು, ಇಲ್ಲಿಯವರೆಗೆ 3 ಕೋಟಿ ರೂ. ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಜಲಂಧರ್ ಮೂಲದ ಇ.ಡಿ ತಂಡಗಳಿಂದ ಇನ್ನೂ ದಾಳಿಗಳು ನಡೆಯುತ್ತಿವೆ ಎಂದು ಅಭಿವೃದ್ಧಿಯ ಗೌಪ್ಯ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಯು ಅಕ್ರಮ ಗಣಿಗಾರಿಕೆ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿರುವ ಹಲವಾರು ವ್ಯಕ್ತಿಗಳು ಮತ್ತು ಘಟಕಗಳನ್ನು ಗುರುತಿಸಿ ಶೋಧ ಕಾರ್ಯ ಮುಂದುವರಿಸಿದೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ

    ಕುಖ್ಯಾತ ಭೋಲಾ ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಇಡಿ ವಶಪಡಿಸಿಕೊಂಡ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಈ ಪ್ರಕರಣವು ಪ್ರಸ್ತುತ ಮನಿ ಲಾಂಡರಿಂಗ್ ಆಕ್ಟ್ (PMLA) ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಯ ನಿರ್ಣಾಯಕ ಹಂತದಲ್ಲಿದೆ. ಇದನ್ನೂ ಓದಿ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

  • ಜನವಸತಿ ಪ್ರದೇಶದಲ್ಲೇ ಅಕ್ರಮ ಗಣಿಗಾರಿಕೆ- ಕಟ್ಟಡಗಳು ಬಿರುಕು, ಬೆಚ್ಚಿದ ಅಂಗನವಾಡಿ ಮಕ್ಕಳು

    ಜನವಸತಿ ಪ್ರದೇಶದಲ್ಲೇ ಅಕ್ರಮ ಗಣಿಗಾರಿಕೆ- ಕಟ್ಟಡಗಳು ಬಿರುಕು, ಬೆಚ್ಚಿದ ಅಂಗನವಾಡಿ ಮಕ್ಕಳು

    – ಗಣಿಗಾರಿಕೆ ನಿಲ್ಲಿಸದಿದ್ರೆ ಉಗ್ರ ಹೋರಾಟದ ಎಚ್ಚರಿಕೆ

    ಮಂಗಳೂರು: ಕಪ್ಪು ಕಲ್ಲು ಗಣಿಗಾರಿಕೆ ನಿರ್ಜನ ಪ್ರದೇಶದಲ್ಲಿ ಅನುಮತಿ ಪಡೆದು ನಡೆಸುವುದು ಸಾಮಾನ್ಯ. ಆದರೆ ಈ ಊರಿನಲ್ಲಿ ಜನ ವಸತಿ ಪ್ರದೇಶದಲ್ಲೇ ಅಕ್ರಮ ಕಲ್ಲು ಗಣಿಗಾರಿಕೆ (Illegal Mining) ಆರ್ಭಟಿಸುತ್ತಿದೆ. ಕಟ್ಟಡಗಳು ಬಿರುಕು ಬಿಟ್ಟು, ಸ್ಫೋಟದ ಸದ್ದಿಗೆ ಅಂಗನವಾಡಿಯ ಪುಣಾಣಿ ಮಕ್ಕಳು ಬೆದರುತ್ತಿದ್ದಾರೆ. ಈ ಬಗ್ಗೆ ಜನ ಪ್ರತಿನಿಧಿಗಳಿಗೆ ದೂರು ನೀಡಿದ್ರೂ ಅಧಿಕಾರಿಗಳು ದಾಳಿ ನಡೆಸಿದ್ರೂ ಗಣಿಗಾರಿಕೆ ಮಾತ್ರ ಶಾಶ್ವತವಾಗಿ ಮುಚ್ಚುತ್ತಿಲ್ಲ.

    ಅಕ್ರಮ ಕಲ್ಲುಗಾರಿಕೆಯಿಂದ ಈ ಊರೇ ನಲುಗಿ ಹೋಗಿದೆ. ಮನೆ, ಮಸೀದಿ ಅಂಗನವಾಡಿ ಬಿರುಕು ಬಿಟ್ಟಿದೆ. ಗಣಿಗಾರಿಕೆ ಸ್ಫೋಟದಿಂದ ಪುಟ್ಟ ಮಕ್ಕಳು ಭಯಪಡುವಂತಾಗಿದೆ. ಮಂಗಳೂರು (Mangaluru) ಹೊರ ವಲಯದ ನೀರು ಮಾರ್ಗ (Neeru Marga) ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿತ್‍ಪಾದೆಯಲ್ಲಿ ಜನವಸತಿ ಪ್ರದೇಶದಲ್ಲೇ ಅಕ್ರಮ ಕಲ್ಲು ಗಣಿಗಾರಿಕೆ ಆರ್ಭಟಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ಬಿತ್‍ಪಾದೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಕಟ್ಟಡಗಳ ಗೋಡೆಗಳು ಬಿರುಕು ಬಿಟ್ಟಿದೆ. ಹತ್ತು ಮೀಟರ್ ದೂರದಲ್ಲೇ ಅಂಗನವಾಡಿ ಇದ್ದು, ಪುಟ್ಟ ಕಂದಮ್ಮಗಳು ಬೆದರುತ್ತಿದ್ದಾರೆ.

    ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಊರವರು ಜನಪ್ರತಿನಿಧಿಗಳಿಗೆ ದೂರು ನೀಡಿದಾಗ ತಾತ್ಕಾಲಿಕವಾಗಿ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಗಿತ ಮಾಡುತ್ತಾರೆ.. ಊರವರ ಕೋಪ ತಣ್ಣಗಾದಾಗ ಮತ್ತೆ ಗಣಿಗಾರಿಕೆ ಶುರುವಾಗುತ್ತೆ. ಇದನ್ನೂ ಓದಿ: ಅಣ್ಣನ ಪತ್ನಿ, ಮಕ್ಕಳಿಬ್ಬರನ್ನು ಕೊಂದು ಆರೋಪಿ ಎಸ್ಕೇಪ್!

    ಅಕ್ರಮ ಕಲ್ಲು ಗಣಿಗಾರಿಕೆಯಿಂದ ಊರವರು ರೋಸಿ ಹೋಗಿದ್ದಾರೆ.. ಗಣಿಗಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡುವ ಬದಲು ಶಾಶ್ವತ ತಡೆಗೆ ಆಗ್ರಹಿಸಿದ್ದಾರೆ. ಶಾಶ್ವತವಾಗಿ ಗಣಿಗಾರಿಕೆ ನಿಲ್ಲಿಸದೇ ಇದ್ರೆ ದೊಡ್ಡ ಹೋರಾಟ ನಡೆಸುದಾಗಿ ಎಚ್ಚರಿಕೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ರಿಜ್ ಭೂಷಣ್ ವಿರುದ್ಧ ಅಕ್ರಮ ಗಣಿಗಾರಿಕೆ ತೂಗುಗತ್ತಿ – ತನಿಖೆಗೆ ಆದೇಶಿಸಿದ ನ್ಯಾಯಾಲಯ

    ಬ್ರಿಜ್ ಭೂಷಣ್ ವಿರುದ್ಧ ಅಕ್ರಮ ಗಣಿಗಾರಿಕೆ ತೂಗುಗತ್ತಿ – ತನಿಖೆಗೆ ಆದೇಶಿಸಿದ ನ್ಯಾಯಾಲಯ

    ನವದೆಹಲಿ: ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಇದೀಗ ಹೊಸ ಕಾನೂನು ತೊಂದರೆಗೆ ಸಿಲುಕಿದ್ದಾರೆ. ಗೊಂಡಾದಲ್ಲಿದಲ್ಲಿರುವ ಅವರ ಕಂಪನಿಯು ಅಕ್ರಮ ಮರಳು ಗಣಿಗಾರಿಕೆ (Illegal Mining) ಮತ್ತು ಖನಿಜಗಳ ಸಾಗಾಣಿಕೆ ನಡೆಸಿ ಸರಯು ನದಿಗೆ ಹಾನಿ ಉಂಟು ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶಿಸಿದೆ.

    ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಪ್ರಧಾನ ಪೀಠವು (National Green Tribunal) ಅರಣ್ಯ ಸಚಿವಾಲಯ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಸ್ವಚ್ಛ ಗಂಗಾ ರಾಷ್ಟ್ರೀಯ ಮಿಷನ್, ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಗೊಂಡ ಜಿಲ್ಲಾ ಮ್ಯಾಜಿಸ್ಟ್ರೇಟ್‍ನ್ನು ಒಳಗೊಂಡ ಜಂಟಿ ಸಮಿತಿಯನ್ನು ರಚಿಸಿದೆ. ಪ್ರಕರಣದ ಬಗ್ಗೆ ಒಂದು ವಾರದೊಳಗೆ ಸಮಿತಿಯ ಸಭೆ ನಡೆಸುವಂತೆ ಸೂಚಿಸಿದೆ. ಬಳಿಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ. ನ್ಯಾಯಮೂರ್ತಿ ಅರುಣ್ ಕುಮಾರ್ ತ್ಯಾಗಿ ಮತ್ತು ಡಾ. ಎ ಸೆಂಥಿಲ್ ವೇಲ್ ಅವರನ್ನೊಳಗೊಂಡ ದೆಹಲಿಯ ಎನ್‍ಜಿಟಿಯ ಪ್ರಧಾನ ಪೀಠವು ತನ್ನ ಆದೇಶದಲ್ಲಿ ನಿರ್ದೇಶನ ನೀಡಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ಚಲಿಸುತ್ತಿದ್ದ ಟಿಪ್ಪರ್ ಚಕ್ರ ಬ್ಲಾಸ್ಟ್ – ತಪ್ಪಿದ ಭಾರೀ ದುರಂತ‌

    ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕಂಪನಿ ಮಜರತ್, ಜೈತ್‍ಪುರ, ನವಾಬ್‍ಗಂಜ್, ತಹಸಿಲ್ ತರಬ್‍ಗಂಜ್ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದೆ. ಪ್ರತಿದಿನ ಓವರ್‌ಲೋಡ್ ಮಾಡಿದ 700 ಕ್ಕೂ ಹೆಚ್ಚು ಟ್ರಕ್‍ಗಳ ಮೂಲಕ ಅಕ್ರಮವಾಗಿ 20 ಲಕ್ಷ ಕ್ಯೂಬಿಕ್ ಮೀಟರ್ ಅಳತೆಯ ಮರಳು ಮತ್ತು ಖನಿಜಗಳನ್ನು ಸಾಗಿಸಲಾಗಿದೆ. ಇದರಿಂದ ಪಟ್ಪರ್ ಗಂಜ್ ಸೇತುವೆ ಮತ್ತು ರಸ್ತೆಗೆ ಹಾನಿಯಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸಮಿತಿಯು ಎರಡು ತಿಂಗಳೊಳಗೆ ಈ ಬಗ್ಗೆ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

    ಬ್ರಿಜ್ ಭೂಷಣ್ ವಿರುದ್ಧ ಕೊಲೆ ಯತ್ನ, ಗಲಭೆ, ಭೂಮಾಫಿಯಾ ಮತ್ತು ಇತರ ಗಂಭೀರ ಆರೋಪಗಳನ್ನು ಒಳಗೊಂಡಂತೆ 38 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸಿದ್ದರು. ಅವರು 2019ರ ಲೋಕಸಭೆ ಚುನಾವಣೆಗೆ ಮೊದಲು ಸಲ್ಲಿಸಿದ ಅಫಿಡವಿಟ್ ಪ್ರಕಾರ ಈ ಪ್ರಕರಣಗಳಲ್ಲಿ ಖುಲಾಸೆಗೊಂಡಿರುವುದಾಗಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ಕೇರಳದ ಕೊಚ್ಚಿಯಲ್ಲಿ ಕರ್ನಾಟಕ ಪೊಲೀಸರ ಅರೆಸ್ಟ್‌ – ಲಂಚಕ್ಕೆ ಬೇಡಿಕೆಯಿಟ್ಟು ಲಾಕ್‌ ಆದ ಬೆಂಗಳೂರು ಪೊಲೀಸರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರೆಡ್ಡಿ, ಪತ್ನಿ ಅರುಣಾಗೆ ಶಾಕ್‌ – 100ಕ್ಕೂ ಹೆಚ್ಚು ಆಸ್ತಿ ಜಪ್ತಿಗೆ ಆದೇಶ

    ರೆಡ್ಡಿ, ಪತ್ನಿ ಅರುಣಾಗೆ ಶಾಕ್‌ – 100ಕ್ಕೂ ಹೆಚ್ಚು ಆಸ್ತಿ ಜಪ್ತಿಗೆ ಆದೇಶ

    ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಂಗಾವತಿ ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan Reddy) ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿ (Lakshmi Aruna Reddy) ಅವರ ಆಸ್ತಿ ಜಪ್ತಿ ಮಾಡುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ.

    ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 100ಕ್ಕೂ ಹೆಚ್ಚು ಆಸ್ತಿಗಳನ್ನು ಜಪ್ತಿ ಮಾಡುವಂತೆ ವಿಶೇಷ ಕೋರ್ಟ್ ಆದೇಶ ಪ್ರಕಟಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ತನಿಖೆ ವೇಳೆ ಸೈಟ್, ಕಟ್ಟಡ, ಖಾಲಿ ಜಮೀನು ಸೇರಿದಂತೆ ನೂರಕ್ಕೂ ಅಧಿಕ ಆಸ್ತಿಗಳನ್ನು ಸಿಬಿಐ ಪತ್ತೆ ಮಾಡಿತ್ತು.

    ಹಿಂದೆ ಏನಾಗಿತ್ತು?
    ಅಕ್ರಮ ಗಣಿಗಾರಿಕೆ (Illegal Mining) ಹಣದಿಂದ ರೆಡ್ಡಿ ಹೊಸದಾಗಿ ತೆಲಂಗಾಣ ರಾಜ್ಯಗಳಲ್ಲಿ 219 ಕಡೆ ಆಸ್ತಿಗಳನ್ನು ಖರೀದಿ ಮಾಡಿದ್ದಾರೆ. ಈ ಆಸ್ತಿಗಳನ್ನು ಜಪ್ತಿ ಮಾಡಲು ಅನುಮತಿ ನೀಡಬೇಕೆಂದು ಸರ್ಕಾರಕ್ಕೆ 2022ರ ಆಗಸ್ಟ್‌ 30 ರಂದು ಸಿಬಿಐ (CBI) ಮನವಿ ಮಾಡಿತ್ತು. ಇದನ್ನೂ ಓದಿ: ಟ್ವಿಟ್ಟರ್ ಕಂಪನಿ ಮುಚ್ಚುತ್ತೇವೆ, ಉದ್ಯೋಗಿಗಳ ಮೇಲೆ ದಾಳಿ: ಭಾರತದಿಂದ ಬೆದರಿಕೆ ಬಂದಿತ್ತು ಎಂದ ಡಾರ್ಸಿ

    ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸಿಬಿಐ ಅರ್ಜಿಗೆ ಸರ್ಕಾರ ಯಾವುದೇ ಉತ್ತರ ನೀಡಿರಲಿಲ್ಲ.

    ಆಸ್ತಿ ಜಪ್ತಿ ಅರ್ಜಿ ವಿಚಾರ ತಿಳಿದ ರೆಡ್ಡಿ ಕರ್ನೂಲ್, ರಂಗಾರೆಡ್ಡಿ ಜಿಲ್ಲೆಗಳಲ್ಲಿ ಆಸ್ತಿ ಮಾರಾಟಕ್ಕೆ ಯತ್ನಿಸಿದ್ದರು.  ಈ ವಿಚಾರ ತಿಳಿಯುತ್ತಿದ್ದಂತೆ ಆಸ್ತಿ ಜಪ್ತಿಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು ಅಂತಾ ಸಿಬಿಐ ಹೈಕೋರ್ಟ್‌ನಲ್ಲಿ ವಾದ ಮಂಡಿಸಿತ್ತು.

    ನಿಮ್ಮ ಕಾರ್ಯವೈಖರಿ ಇದೇನಾ? ಐದು ತಿಂಗಳಾದರೂ ಯಾಕೆ ಕ್ರಮ ಕೈಗೊಂಡಿಲ್ಲ? ನಿಮ್ಮ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳದೇ ಇರುವುದು ಒಂದು ಕ್ರಮವಿರಬಹುದು. ಈ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ ಬೀಸಿ ನೋಟಿಸ್ ಜಾರಿ ಮಾಡಿತ್ತು. ಹೈಕೋರ್ಟ್‌ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಅಂದಿನ ಬೊಮ್ಮಾಯಿ ಸರ್ಕಾರ ಈ ವರ್ಷದ ಜನವರಿಯಲ್ಲಿ ರೆಡ್ಡಿಯ ಆಸ್ತಿ ಜಪ್ತಿಗೆ ಅನುಮತಿ ನೀಡಿತ್ತು.