Tag: ಅಕ್ರಮ ದಾಸ್ತಾನು

  • ಅಕ್ರಮವಾಗಿ ರಸಗೊಬ್ಬರ ಮಾರಾಟ- 97 ಯೂರಿಯಾ ಚೀಲ ವಶಕ್ಕೆ

    ಅಕ್ರಮವಾಗಿ ರಸಗೊಬ್ಬರ ಮಾರಾಟ- 97 ಯೂರಿಯಾ ಚೀಲ ವಶಕ್ಕೆ

    ಹಾಸನ: ಅಕ್ರಮವಾಗಿ ಯೂರಿಯಾ ರಸಗೊಬ್ಬರ ದಾಸ್ತಾನು ಮಾಡಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ ರಸಗೊಬ್ಬರ ಚೀಲ ವಶಪಡಿಸಿಕೊಂಡಿದ್ದಾರೆ.

    ಜಿಲ್ಲೆಯ ಅರಸೀಕೆರೆ ತಾಲೂಕಿನ ಅಣ್ಣಾಯಕನಹಳ್ಳಿ, ಕೆಳಗಲಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಜಯಶಂಕರ್ ಅವರ ಮನೆಯ ಮುಂಭಾಗ ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ರೈತರಿಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ ಅಶೋಕ್, ರಸಗೊಬ್ಬರ ನಿರೀಕ್ಷಕ ಪ್ರಭಾವತಿ ಮತ್ತು ಪೊಲೀಸರ ತಂಡ ದಾಳಿ ನಡೆಸಿ, 47 ಕೆ.ಜಿ. ತೂಕದ 97 ಯೂರಿಯಾ ಗೊಬ್ಬರದ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಚಿರು, ಮೇಘನಾ ಪುತ್ರ ಈಗ ‘ರಾಯನ್ ರಾಜ್ ಸರ್ಜಾ

    ಘಟನೆಗೆ ಸಂಬಂಧಿಸಿದಂತೆ ಅಗತ್ಯ ವಸ್ತು ಕಾಯ್ದೆ 1955ರ ರಿತ್ಯ ಪ್ರಕರಣ ದಾಖಲಿಸಿ, ಆರೋಪಿ ಜಯಶಂಕರ್‍ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಳೆಗಾಲವಾದ್ದರಿಂದ ರೈತರಿಗೆ ಸಹಜವಾಗಿ ಗೊಬ್ಬರದ ಅವಶ್ಯಕತೆಯಿದೆ. ಹೀಗಾಗಿ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಜಾಲ ಸದ್ದಿಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಆಗಾಗ ಆರೋಪಗಳು ಕೇಳಿ ಬರುತ್ತಿವೆ. ಘಟನೆ ಸಂಬಂಧ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಕ್ರಮವಾಗಿ ಈರುಳ್ಳಿ ದಾಸ್ತಾನು ಮಾಡಿದ್ರೆ ಹುಷಾರ್!

    ಅಕ್ರಮವಾಗಿ ಈರುಳ್ಳಿ ದಾಸ್ತಾನು ಮಾಡಿದ್ರೆ ಹುಷಾರ್!

    ಮೈಸೂರು: ಈರುಳ್ಳಿ ಬೆಲೆ ದುಬಾರಿ ಆಗಿರುವ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಈರುಳ್ಳಿ ಮಾರಾಟಕ್ಕೆ ಲೈಸನ್ಸ್ ಪಡೆಯುವುದು ಕಡ್ಡಾಯವಾಗಿದ್ದು, ಅಕ್ರಮವಾಗಿ ಈರುಳ್ಳಿ ದಾಸ್ತಾನು ಮಾಡುವವರ ವಿರುದ್ಧ ಕ್ರಮ ತೆಗದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    ಮೈಸೂರು ಜಿಲ್ಲಾಧಿಕಾರಿಗಳು ಈರುಳ್ಳಿ ಮಾರಾಟಕ್ಕೆ ಲೈಸನ್ಸ್ ಪಡೆಯುವುದು ಕಡ್ಡಾಯ ಎಂದು ಆದೇಶ ಹೊರಡಿಸಿದ್ದಾರೆ. ಅಗತ್ಯ ವಸ್ತುಗಳ ಪರವಾನಗಿಗೆ ಆದೇಶ 1986ರ(ತಿದ್ದುಪಡಿ 2019) ಪ್ರಕಾರ, ನಗರದಲ್ಲಿ ಈರುಳ್ಳಿ ವ್ಯಾಪಾರಿಗಳು ಜಿಲ್ಲಾಧಿಕಾರಿಯಿಂದ ಲೈಸೆನ್ಸ್ ಪಡೆಯುವುದು ಕಡ್ಡಾಯ. ತಾಲೂಕಿನಲ್ಲಿನ ಮಾರಾಟಗಾರರು ಆಯಾ ತಾಲೂಕಿನ ತಹಶಿಲ್ದಾರರ್‍ರಿಂದ ಲೈಸೆನ್ಸ್ ಪಡೆದು ಈರುಳ್ಳಿ ಮಾರಾಟ ಮಾಡಬೇಕು ಎಂದು ಆದೇಶಿಸಲಾಗಿದೆ.

    ಸರ್ಕಾರದ ಆದೇಶದಂತೆ ಈರುಳ್ಳಿ ಸಗಟು ವ್ಯಾಪಾರಿಗಳು 250 ಕ್ವಿಂಟಾಲ್ ದಾಸ್ತಾನು ಮಾಡಬೇಕು. ಚಿಲ್ಲರೆ ವ್ಯಾಪಾರಿಗಳು 50 ಕ್ವಿಂಟಾಲ್ ದಾಸ್ತಾನು ಮಾಡಬೇಕು. ಲೈಸೆನ್ಸ್ ಇಲ್ಲದೆ ಅದಕ್ಕಿಂತ ಹೆಚ್ಚಿನ ಈರುಳ್ಳಿ ದಾಸ್ತಾನು ಮಾಡಿದರೆ, ನಿಯಮ ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

    ಜಿಲ್ಲಾಧಿಕಾರಿಗಳ ಈ ಆದೇಶದಿಂದ ಈರುಳ್ಳಿಗೆ ಅಕ್ರಮ ದಾಸ್ತಾನು ಮಾಡಿಕೊಂಡವರಲ್ಲಿ ಆತಂಕ ಸೃಷ್ಟಿಯಾಗಿದೆ. ಇಂದಿನಿಂದ ಈರುಳ್ಳಿ ಅಂಗಡಿಗಳ ಮೇಲೂ ಆಹಾರ ಇಲಾಖೆ ಪರಿಶೀಲನೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.