Tag: ಅಕ್ರಮ ಧ್ವನಿವರ್ಧಕ

  • 10,900 ಅಕ್ರಮ ಧ್ವನಿವರ್ಧಕಗಳ ತೆರವು

    10,900 ಅಕ್ರಮ ಧ್ವನಿವರ್ಧಕಗಳ ತೆರವು

    ಲಕ್ನೋ: ಧಾರ್ಮಿಕ ಕ್ಷೇತ್ರಗಳಲ್ಲಿ ಧ್ವನಿವರ್ಧಕಗಳನ್ನು ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಹೈಡ್ರಾಮಾವೇ ನಡೆಯುತ್ತಿರುವ ಹೊತ್ತಲ್ಲಿ ಉತ್ತರ ಪ್ರದೇಶದಲ್ಲಿ ತೆರವು ಕಾರ್ಯಚರಣೆ ಆರಂಭಗೊಂಡಿದೆ. ಇತ್ತೀಚೆನ ವರದಿ ಬಳಿಕ ಉತ್ತರಪ್ರದೇಶದಲ್ಲಿ ಈವರೆಗೂ 10,900 ಅಕ್ರಮ ಮತ್ತು ಅನಧಿಕೃತ ಧ್ವನಿವರ್ಧಕಗಳನ್ನು ತೆರವು ಮಾಡಲಾಗಿದೆ.

    mosque-loudspeakers

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ಬಳಿಕ ಕಾರ್ಯಚರಣೆ ಆರಂಭಿಸಿರುವ ಪೊಲೀಸರು ಅಕ್ರಮ ಮತ್ತು ಅನಧಿಕೃತ ಧ್ವನಿವರ್ಧಕಗಳನ್ನು ತೆರವು ಮಾಡುತ್ತಿದ್ದಾರೆ. ಅಲ್ಲದೇ 3,5000ಕ್ಕೂ ಹೆಚ್ಚು ಧ್ವನಿವರ್ಧಕಗಳನ್ನು ನಿಗದಿತ ಡೆಸಿಬಲ್ ಮಿತಿಯೊಳಗೆ ತರಲಾಗಿದೆ. ಇದನ್ನೂ ಓದಿ: ಹಲಾಲ್‌ ಮಾಂಸ, ಮಸೀದಿಗಳಲ್ಲಿ ಧ್ವನಿವರ್ಧಕ ಏಕೆ ನಿಷೇಧಿಸಬೇಕು: ಒಮರ್‌ ಅಬ್ದುಲ್ಲಾ ಪ್ರಶ್ನೆ

    Yogi Adityanath

    ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅವರ ಪ್ರಕಾರ, ಲಕ್ನೋದಲ್ಲಿ 2,395, ಗೋರಖಪುರ್‍ದಲ್ಲಿ 1,788 ಧ್ವನಿವರ್ಧಕಗಳ ತೆರವು ಮಾಡಲಾಗಿದೆ. 2018ರ ನ್ಯಾಯಾಲಯದ ಆದೇಶ ಪ್ರಕಾರ ಅಕ್ರಮ, ಅನಧಿಕೃತ ಧ್ವನಿವರ್ಧಕಗಳ ತೆರವು ನಡೆಯುತ್ತಿದ್ದು, ಧ್ವನಿವರ್ಧಕಗಳಿಂದ ಶಬ್ದ ಮಾಲಿನ್ಯವಾಗದಂತೆ ನಿಗದಿತ ಡೆಸಿಬಲ್ ಫಿಕ್ಸ್ ಮಾಡಲಾಗುತ್ತಿದೆ. ಇದನ್ನೂ ಓದಿ: ಕೊರೊನಾ ಇನ್ನೂ ಮುಗಿದಿಲ್ಲ, ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಿ: ಉದ್ಧವ್ ಠಾಕ್ರೆ

    &

    ಸರ್ಕಾರದ ಈ ಕಾರ್ಯಚರಣೆ ಆರಂಭಗೊಳ್ಳುತ್ತಿದ್ದಂತೆ ಮಥುರಾದ ಶ್ರೀಕೃಷ್ಣ ದೇವಸ್ಥಾನವೂ ಸೇರಿ ಹಲವು ಮಂದಿರ ಮಸೀದಿಗಳು ತಮ್ಮ ಧ್ವನಿವರ್ಧಕಗಳ ಡೆಸಿಬಲ್ ಅನ್ನು ಇಳಿಕೆ ಮಾಡಿಕೊಂಡರೇ ಮತ್ತಷ್ಟು ಧಾರ್ಮಿಕ ಕ್ಷೇತ್ರಗಳು ಅಕ್ರಮ ಧ್ವನಿವರ್ಧಕಗಳನ್ನು ಖುದ್ದು ತೆರವು ಮಾಡುತ್ತಿದ್ದಾರೆ. ಏಪ್ರಿಲ್ 30 ರೊಳಗೆ ಅಕ್ರಮ ಧ್ವನಿವರ್ಧಕಗಳ ತೆರವು ಆಗಬೇಕು ಎಂದು ಯೋಗಿ ಆದಿತ್ಯನಾಥ್ ಸೂಚಿಸಿದ್ದರು.

  • ಅಕ್ರಮ ಧ್ವನಿವರ್ಧಕಗಳನ್ನು ತೆಗೆದು ಹಾಕಿ : ಯುಪಿ ಸರ್ಕಾರ ಆದೇಶ

    ಅಕ್ರಮ ಧ್ವನಿವರ್ಧಕಗಳನ್ನು ತೆಗೆದು ಹಾಕಿ : ಯುಪಿ ಸರ್ಕಾರ ಆದೇಶ

    ಲಕ್ನೋ: ರಾಜ್ಯಾದ್ಯಂತ ಧಾರ್ಮಿಕ ಸ್ಥಳಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗುವುದು ಎಂದು ಉತ್ತರ ಪ್ರದೇಶ ಗೃಹ ಇಲಾಖೆ ಆದೇಶ ಹೊರಡಿಸಿದೆ. ಶಬ್ದ ಮಿತಿಯ ಮಾನದಂಡಗಳನ್ನು ಉಲ್ಲಂಘಿಸುವ ಧ್ವನಿವರ್ಧಕಗಳನ್ನು ತೆಗೆದುಹಾಕಲಾಗುವುದು ಎಂದು ತಿಳಿಸಿದೆ.

    mosque-loudspeakers
    ಸಾಂದರ್ಭಿಕ ಚಿತ್ರ

    ಏಪ್ರಿಲ್ 30ರೊಳಗೆ ಅಕ್ರಮವಾಗಿ ಧ್ವನಿವರ್ಧಕಗಳನ್ನು ಅಳವಡಿಸಲಾಗಿರುವಂತಹ ಎಲ್ಲಾ ಸ್ಥಳಗಳ ಪಟ್ಟಿಯನ್ನು ಮಾಡಿ ಗೃಹ ಇಲಾಖೆಗೆ ವರದಿಯನ್ನು ಕಳುಹಿಸುವಂತೆ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಲಾಗಿದ್ದು, ಪ್ರತಿ ಜಿಲ್ಲೆಯ ವಿಭಾಗೀಯ ಆಯುಕ್ತರು ವರದಿಗಳನ್ನು ಕಳುಹಿಸುತ್ತಾರೆ. ಧಾರ್ಮಿಕ ಮುಖಂಡರೊಂದಿಗೆ ಚರ್ಚಿಸಿದ ನಂತರ ಎಲ್ಲಾ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕಲಾಗುವುದು. ಇದನ್ನೂ ಓದಿ:  ಪೊಲೀಸ್ರು ಸಮನ್ಸ್ ನೀಡಿದ್ದಕ್ಕೆ ಪ್ರಿಯಕರನೊಂದಿಗೆ ಬಾಲಕಿ ಆತ್ಮಹತ್ಯೆ

    ಅನುಮತಿಯೊಂದಿಗೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸಬಹುದು. ಆದರೆ ಆವರಣದಿಂದ ಧ್ವನಿ ಹೊರಬರಬಾರದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ ಐದು ದಿನಗಳ ನಂತರ ಈ ಆದೇಶ ಬಂದಿದೆ. ಧ್ವನಿವರ್ಧಕಗಳಿಗೆ ಹೊಸ ಪರವಾನಗಿ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ – ಜಿಗ್ನೇಶ್ ಮೇವಾನಿ ವಿರುದ್ಧ ಮತ್ತೊಂದು ಕೇಸ್

    ಈ ಮುನ್ನ ಸುಪ್ರೀಂಕೋರ್ಟ್‍ನ ಆದೇಶದಂತೆ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್‍ಗೆ ಪೊಲೀಸ್ ಮಹಾನಿರೀಕ್ಷಕ ಪ್ರಯಾಗ್‍ರಾಜ್ ಸೂಚಿಸಿದರು.