Tag: ಅಕ್ರಮ ಮದ್ಯ ನೀತಿ

  • ರಾಜಕೀಯ ಪ್ರೇರಿತವಾಗಿ ನೀಡಿರುವ ನೋಟಿಸ್‌ ಹಿಂಪಡೆಯಿರಿ: EDಗೆ ಕೇಜ್ರಿವಾಲ್‌ ಪ್ರತಿಕ್ರಿಯೆ

    ರಾಜಕೀಯ ಪ್ರೇರಿತವಾಗಿ ನೀಡಿರುವ ನೋಟಿಸ್‌ ಹಿಂಪಡೆಯಿರಿ: EDಗೆ ಕೇಜ್ರಿವಾಲ್‌ ಪ್ರತಿಕ್ರಿಯೆ

    ನವದೆಹಲಿ: ನನಗೆ ನೀಡಿರುವ ನೋಟಿಸ್‌ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ. ಇ.ಡಿ (Enforcement Directorate) ಕೂಡಲೇ ಸಮನ್ಸ್‌ ಹಿಂಪಡೆಯಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಹೇಳಿದ್ದಾರೆ.

    ಸಮನ್ಸ್‌ ಕುರಿತು ಪ್ರತಿಕ್ರಿಯಿಸಿರುವ ಕೇಜ್ರಿವಾಲ್‌, ಬಿಜೆಪಿಯ ಒತ್ತಾಯದ ಮೇರೆಗೆ ನೋಟಿಸ್ ಕಳುಹಿಸಲಾಗಿದೆ. ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ಖಚಿತಪಡಿಸಿಕೊಳ್ಳಲು ನೋಟಿಸ್ ಕಳುಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಐಬ್ರೋಸ್ ಮಾಡಿಸಿದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

    ಕೇಜ್ರಿವಾಲ್ ಅವರು ಬೆಳಿಗ್ಗೆ 11 ಗಂಟೆಗೆ ಕೇಂದ್ರ ತನಿಖಾ ಸಂಸ್ಥೆಯ ದೆಹಲಿ ಕಚೇರಿಯ ಮುಂದೆ ಹಾಜರಾಗಬೇಕಿತ್ತು. ಆದರೆ ಅವರು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಪತ್ರ ಬರೆದು ಸಮನ್ಸ್ ಅನ್ನು ಹಿಂಪಡೆಯುವಂತೆ ಕೇಳಿಕೊಂಡಿದ್ದಾರೆ.

    ಯಾರೇ ಆದರೂ ಇ.ಡಿ ಸಮನ್ಸ್‌ಗಳನ್ನು ಗರಿಷ್ಠ ಮೂರು ಬಾರಿ ತಿರಸ್ಕರಿಸಬಹುದು. ಬಳಿಕ ಇ.ಡಿ ಜಾಮೀನು ರಹಿತ ವಾರಂಟ್ ನೀಡಬಹುದು. ಇ.ಡಿ ಕಟ್ಟುನಿಟ್ಟಾದ ಅಕ್ರಮ ಹಣ ವರ್ಗಾವಣೆ ಆಕ್ಟ್ ಅಥವಾ PMLA ಅಡಿಯಲ್ಲಿ ಸಮನ್ಸ್ ನೀಡಬಹುದು. ಇದನ್ನೂ ಓದಿ: ತಲೈವಾಗೆ ದೇವಸ್ಥಾನ ಕಟ್ಟಿಸಿದ ಅಭಿಮಾನಿ ದೇವ್ರು – 250Kg ತೂಕದ ರಜನಿಕಾಂತ್‌ ವಿಗ್ರಹ ಸ್ಥಾಪನೆ

    ದೆಹಲಿ ಉಪ ಮುಖ್ಯಮಂತ್ರಿ ಆಗಿದ್ದ ಮನೀಸ್‌ ಸಿಸೋಡಿಯಾ ಅವರನ್ನು ಬಂಧಿಸಿದೆ. ಈಗ ಬಿಜೆಪಿ ಆಜ್ಞೆಯ ಮೇರೆಗೆ ನನಗೆ ನೋಟಿಸ್‌ ನೀಡಿದೆ. ಇದು ಅಕ್ರಮ ಮತ್ತು ರಾಜಕೀಯ ಪ್ರೇರಿತ. ನೋಟಿಸ್‌ ಹಿಂಪಡೆಯಬೇಕು ಎಂದು ಕೇಜ್ರಿವಾಲ್‌ ಒತ್ತಾಯಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇಜ್ರಿವಾಲ್ ಅವರೇ ದೆಹಲಿ ಮದ್ಯ ಅಕ್ರಮದ ಕಿಂಗ್‌ಪಿನ್, ಬಂಧನ ಹತ್ತಿರದಲ್ಲೇ ಇದೆ: ಬಿಜೆಪಿ

    ಕೇಜ್ರಿವಾಲ್ ಅವರೇ ದೆಹಲಿ ಮದ್ಯ ಅಕ್ರಮದ ಕಿಂಗ್‌ಪಿನ್, ಬಂಧನ ಹತ್ತಿರದಲ್ಲೇ ಇದೆ: ಬಿಜೆಪಿ

    ನವದೆಹಲಿ: ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೇ ದೆಹಲಿ ಮದ್ಯ ನೀತಿ ಹಗರಣದ ಕಿಂಗ್‌ಪಿನ್. ಅವರ ಭ್ರಷ್ಟಾಚಾರದ ಹುನ್ನಾರಗಳು ಬಯಲಾಗುತ್ತಿದ್ದು, ಅವರಿಗೆ ಕೈಕೊಳ ಹತ್ತಿರವಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿಕೆ ನೀಡಿದ್ದಾರೆ.

    ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೌರವ್ ಭಾಟಿಯಾ, ಜನರು ಕೋವಿಡ್-19 ನಿಂದ ಬಳಲಿ, ಸಹಾಯಕ್ಕಾಗಿ ಹಾತೊರೆಯುತ್ತಿದ್ದಾಗ ಕೇಜ್ರಿವಾಲ್ ಅವರು ಮಾತ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದರು. ಅಬಕಾರಿ ನೀತಿ ಹಗರಣದ ಬೇರುಗಳು ಭ್ರಷ್ಟ ಕೇಜ್ರಿವಾಲ್ ಮನೆ ಬಾಗಿಲಿನಲ್ಲಿದೆ. ಕಾನೂನಿಗಿಂತ ಯಾರೂ ಕೂಡಾ ಮೇಲಲ್ಲ, ಯಾವುದೇ ಭ್ರಷ್ಟರನ್ನೂ ಸುಮ್ಮನೆ ಬಿಡಲಾಗುವುದಿಲ್ಲ ಎಂದು ಟಾಂಗ್ ನೀಡಿದರು.

     

    2024ರ ಲೋಕಸಭೆ ಚುನಾವಣೆಯಲ್ಲಿ ಕೇಜ್ರಿವಾಲ್ ಹಾಗೂ ಪ್ರಧಾನಿ ನರೇಂದ್ರ ಮೋದಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿಕೆಗೆ ಪ್ರತಿಕ್ರಿಯಿಸಿದ ವಕ್ತಾರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಗೋವಾ ಚುನಾವಣೆಗಳಲ್ಲಿ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ಇದಕ್ಕೆ ಸಾರ್ವಜನಿಕರೇ ಎಎಪಿಗೆ ಉತ್ತರ ನೀಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: Liquor Policy Scam – ಸಿಸೋಡಿಯಾ ಮೇಲೆ ಸಿಬಿಐ ದಾಳಿ ಮಾಡಿದ್ದು ಯಾಕೆ?

    ಏನಿದು ಮದ್ಯ ಹಗರಣ?
    ಪ್ರಕರಣದ ಆರೋಪಿಯಾಗಿರುವ ಮನೀಶ್ ಸಿಸೋಡಿಯಾ ಹಾಗೂ ಇತರರು 2021-22 ರ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಪ್ರಾಧಿಕಾರದ ಅನುಮೋದನೆಯಿಲ್ಲದೇ ಪರವಾನಗಿದಾರರಿಗೆ ಅನುಕೂಲವಾಗುವಂತಹ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿ ಸಿಬಿಐನ ಎಫ್‌ಐಆರ್ ದಾಖಲಾಗಿದೆ.

    ಈ ನೀತಿಯಿಂದ ಲಾಭ ಪಡೆದ ಮದ್ಯ ವ್ಯಾಪಾರಿ, ಇಂಡೋಸ್ಪಿರಿಟ್ ಮಾಲೀಕ ಸಮೀರ್ ಮಹೇಂದ್ರು ಅವರು ಸಿಸೋಡಿಯಾ ಆಪ್ತ, ಸಹಚರರಿಗೆ 2 ಕೋಟಿ ರೂ. ಪಾವತಿ ಮಾಡಿರುವುದಾಗಿ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಅಜಾದ್‌ ಬೆನ್ನಲ್ಲೇ ಕಾಂಗ್ರೆಸ್‌ನ ಮಹತ್ವದ ಹುದ್ದೆಗೆ ಆನಂದ್‌ ಶರ್ಮಾ ರಾಜೀನಾಮೆ

    Live Tv
    [brid partner=56869869 player=32851 video=960834 autoplay=true]