Tag: ಅಕ್ರಮ ಮರಳುಗಾರಿಕೆ

  • ಅಕ್ರಮ ಮರಳುಗಾರಿಕೆಗೆ ಎಸ್.ಪಿ, ಡಿ.ಸಿಗಳೇ ಹೊಣೆ: ಸಚಿವ ಸಿಸಿ ಪಾಟೀಲ್

    ಅಕ್ರಮ ಮರಳುಗಾರಿಕೆಗೆ ಎಸ್.ಪಿ, ಡಿ.ಸಿಗಳೇ ಹೊಣೆ: ಸಚಿವ ಸಿಸಿ ಪಾಟೀಲ್

    ರಾಯಚೂರು: ರಾಜ್ಯದಲ್ಲಿ ಮರಳಿನ ಸಮಸ್ಯೆ ಕಾಡುತ್ತಿದೆ. ಎಲ್ಲರಿಗೂ ಮರಳು ಸಿಗುವಂತೆ ಮರಳು ನೀತಿ ಜಾರಿಗೆ ತರಲಾಗುವುದು ಅಂತ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ ಸಿ ಪಾಟೀಲ್ ಹೇಳಿದ್ದಾರೆ.

    ರಾಯಚೂರಿನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಬಂದಿದ್ದ ವೇಳೆ ಮಾತನಾಡಿದ ಸಿಸಿ ಪಾಟೀಲ್, ಗಣಿ ಇಲಾಖೆಗೆ ಮರಳಿನ ಸಮಸ್ಯೆ ಕಾಡುತ್ತಿದೆ. ಅಕ್ರಮ ಮರಳುಗಾರಿಕೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ಯತ್ನಿಸುತ್ತಿದ್ದು, ಇದಕ್ಕೆ ಇಲ್ಲಿನ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಅಕ್ರಮ ತಡೆಗೆ ವಿಶೇಷ ತಂಡ ರಚಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮರಳುಗಾರಿಕೆ ಬಗ್ಗೆ ಅಧ್ಯಯನಕ್ಕೆ ಅಧಿಕಾರಿಗಳ ತಂಡವನ್ನ ತೆಲಂಗಾಣಕ್ಕೆ ಕಳುಹಿಸಲಾಗುವುದು ಎಂದರು.

    ಮಾನ್ವಿಯಲ್ಲಿ ಮರಳು ಲಾರಿ ತಡೆಯಲು ಹೋದ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಸಾವು ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ. ಜಿಲ್ಲಾಧಿಕಾರಿಯಿಂದ ಹೆಚ್ಚಿನ ಮಾಹಿತಿ ಪಡೆದು ಕ್ರಮ ತೆಗೆದುಕೊಳ್ಳುತ್ತೇನೆ. ಹಟ್ಟಿ ಚಿನ್ನದ ಗಣಿ ಹಾಗು ರಾಯಚೂರಿನಲ್ಲಿನ ಮರಳುಗಾರಿಕೆ ಬಗ್ಗೆ ಪ್ರವಾಸ ಮಾಡಲಿದ್ದೇನೆ ಅಂತ ತಿಳಿಸಿದರು.

    ಇನ್ನೂ ರಾಜ್ಯದಲ್ಲಿ ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಮುಖ್ಯಮಂತ್ರಿಗಳು ಹಾಗು ಕೋರ್ ಕಮಿಟಿ ನಿರ್ಧಾರ ಕೈಗೊಳ್ಳುತ್ತೆ. ಸಂಪುಟ ವಿಸ್ತರಣೆ ಬಗ್ಗೆ ನಾನು ಮಾತನಾಡುವುದಿಲ್ಲ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಅಂತ ಕೈ ಮುಗಿದರು.

  • ಅಕ್ರಮ ಮರಳುಗಾರಿಕೆ ಮೇಲೆ ದಾಳಿ- 20 ಕಿ.ಮೀ ಚೇಸ್ ಮಾಡಿ ಟಿಪ್ಪರ್ ವಶಪಡಿಸಿಕೊಂಡ ತಹಶೀಲ್ದಾರ್

    ಅಕ್ರಮ ಮರಳುಗಾರಿಕೆ ಮೇಲೆ ದಾಳಿ- 20 ಕಿ.ಮೀ ಚೇಸ್ ಮಾಡಿ ಟಿಪ್ಪರ್ ವಶಪಡಿಸಿಕೊಂಡ ತಹಶೀಲ್ದಾರ್

    ರಾಯಚೂರು: ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಟಿಪ್ಪರ್‍ನನ್ನ ಸುಮಾರು 20 ಕಿ.ಮೀ ಹಿಂಬಾಲಿಸಿ ರಾಯಚೂರಿನ ದೇವದುರ್ಗ ತಹಶೀಲ್ದಾರ್ ಹಿಡಿದಿದ್ದಾರೆ.

    ದೇವದುರ್ಗದ ಜಾಲಹಳ್ಳಿಯಲ್ಲಿ ಘಟನೆ ನಡೆದಿದ್ದು ತಹಶೀಲ್ದಾರ್ ಕೆ.ಶಿವಶರಣಪ್ಪ ಟಿಪ್ಪರ್ ವಶಕ್ಕೆ ಪಡೆದಿದ್ದಾರೆ. ನಂಬರ್ ಪ್ಲೇಟ್ ಸಹ ಇಲ್ಲದೆ ಅಕ್ರಮ ದಂಧೆಯಲ್ಲಿ ತೊಡಗಿದ್ದ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.

    ಕೃಷ್ಣ ನದಿ ತೀರದ ಬಾಗೂರು, ಹೆರುಂಡಿ, ನಿಲವಂಜಿ, ಲಿಂಗದಹಳ್ಳಿಯಿಂದ ರಾತ್ರಿ-ಹಗಲು ಅಕ್ರಮ ಮರಳುಗಾರಿಕೆ ನಡೆದಿದೆ. ಇಲ್ಲಿಂದ ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿದೆ. ಘಟನೆ ಹಿನ್ನೆಲೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ‘ಫಾರಿನ್ ಮರಳು’ ಭಾಗ್ಯ ಕಲ್ಪಿಸಲು ಮುಂದಾದ ಸಿದ್ದರಾಮಯ್ಯ ಸರ್ಕಾರ

    ‘ಫಾರಿನ್ ಮರಳು’ ಭಾಗ್ಯ ಕಲ್ಪಿಸಲು ಮುಂದಾದ ಸಿದ್ದರಾಮಯ್ಯ ಸರ್ಕಾರ

    ಬೆಂಗಳೂರು: ಅನ್ನಭಾಗ್ಯದಿಂದ ಹಿಡಿದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಈಗ ಫಾರಿನ್ ಮರಳು ಭಾಗ್ಯ ಕಲ್ಪಿಸಲು ಮುಂದಾಗಿದೆ.

    ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿದೇಶಗಳಿಂದ ಮರಳು ಆಮದು ಮಾಡಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಮಂದಿನ ತಿಂಗಳಿಂದ ಮಯನ್ಮಾರ್, ಮಲೇಷಿಯಾ, ಥೈಲ್ಯಾಂಡ್ ಸೇರಿ ಇನ್ನಿತರೆ ದೇಶಗಳಿಂದ 25 ಕೆಜಿ ತೂಕದ ಬ್ಯಾಗ್‍ಗಳಲ್ಲಿ ಮರಳು ಆಮದು ಮಾಡಿಕೊಳ್ಳಲಾಗುತ್ತದೆ.

    ಮರಳು ಆಮದು ಮಾಡಿಕೊಳ್ಳಲು 6 ಕಂಪೆನಿಗಳಿಗೆ ಭೂ ವಿಜ್ಞಾನ ಇಲಾಖೆಯಿಂದ ಅನುಮತಿ ನೀಡಿದೆ. ರಾಜ್ಯದ ಜನತೆಗೆ ಕಡಿಮೆ ದರದಲ್ಲಿ ಮರಳು ಪೂರೈಸುವಂತೆ ಕಂಪೆನಿಗಳ ಜೊತೆ ಸರ್ಕಾರ ಮಾತುಕತೆ ನಡೆಸಿದ್ದು, ನೈಸರ್ಗಿಕ ಸಂಪತ್ತು, ಜಲಮೂಲಗಳಿಗೆ ಆಗುತ್ತಿರುವ ಹಾನಿ ತಪ್ಪಿಸಲು ಈ ಪ್ಲಾನ್ ಮಾಡಲಾಗಿದೆ ಎಂದು ಸಚಿವ ವಿನಯ್ ಕುಲಕರ್ಣಿ ತಿಳಿಸಿದ್ದಾರೆ.