Tag: ಅಕ್ರಮ ಮರಳು ದಂಧೆ

  • ಅಕ್ರಮ ಮರಳು ದಂಧೆ ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ – ನದಿಗೆ ಎಸೆಯಲು ಪ್ಲಾನ್

    ಅಕ್ರಮ ಮರಳು ದಂಧೆ ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ – ನದಿಗೆ ಎಸೆಯಲು ಪ್ಲಾನ್

    ಯಾದಗಿರಿ: ಅಕ್ರಮ ಮರಳು ದಂಧೆಯನ್ನು (Illegal Sand Trade) ಪ್ರಶ್ನಿಸಿದ ಇಬ್ಬರು ವ್ಯಕ್ತಿಗಳನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಶಹಾಪುರದ (Shahapur) ವಿಭೂತಳ್ಳಿ ಬಳಿ ನಡೆದಿದೆ.

    ರಾಜು ನಡಿಹಾಳ್ ಹಾಗೂ ಶರಣಗೌಡ ಹಯ್ಯಾಳ ಹಲ್ಲೆಗೊಳಗಾದವರು. ರೌಡಿ ಶೀಟರ್ ವಿಜಯ ರಾಠೋಡ್ ಹಾಗೂ ಇತರರಿಂದ ಅಪಹರಣ ನಡೆದಿದೆ ಎಂದು ಆರೋಪಿಸಲಾಗಿದೆ. ವಿಜಯ ರಾಠೋಡ್ ಗ್ರಾಮ ಪಂಚಾಯ್ತಿ ಸದಸ್ಯನಾಗಿದ್ದು, ಸಚಿವ ಶರಣಬಸಪ್ಪ ದರ್ಶನಾಪೂರ ಬೆಂಬಲಿಗ ಎಂಬ ಮಾತುಗಳು ಕೇಳಿ ಬಂದಿವೆ. ಇದನ್ನೂ ಓದಿ: ಜಿಂಕೆ ತಪ್ಪಿಸಲು ಹೋಗಿ ಕಾರು ಅಪಘಾತ: ಮೂವರು ಗಂಭೀರ

    ಆರೋಪಿಗಳು ಇಬ್ಬರನ್ನೂ ಕಾರಿನಲ್ಲಿ ಅಪಹರಿಸಿ ಡಿಕ್ಕಿಯೊಳಗೆ ಹಾಕಿ, ರಾಡ್‍ನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಇಬ್ಬರನ್ನೂ ಜೀವಂತವಾಗಿ ನದಿಗೆ ಎಸೆಯಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಸ್ಥಳೀಯರು ಗಮನಿಸಿದ್ದರಿಂದ ಇಬ್ಬರನ್ನೂ ಬಿಟ್ಟು ಹೋಗಿದ್ದಾರೆ. ಹಲ್ಲೆಗೊಳಗಾದ ಇಬ್ಬರನ್ನೂ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಪ್ರಕರಣದ ಎ1 ಆರೋಪಿ ಬಸುರೆಡ್ಡಿ ಮಲ್ಲಾಬಾದ್ ಎಂಬಾತ ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ದಂಧೆ ಮಾಡುತ್ತಿದ್ದ. ಇದನ್ನು ರಾಜು ಹಾಗೂ ಶರಣಗೌಡ ಪ್ರಶ್ನಿಸಿದ್ದರು. ಇದೇ ಕಾರಣಕ್ಕೆ ಬಸುರೆಡ್ಡಿಯ ಸ್ನೇಹಿತನಾದ ವಿಜಯ ರಾಠೋಡ್ ಹಾಗೂ ಆತನ ಸಹಚರರು ಅಪಹರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

    ಇದರಲ್ಲಿ ಶರಣಗೌಡ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ರಾಜುವಿನ ಎರಡೂ ಕಾಲುಗಳಿಗೆ ಬಲವಾದ ಪೆಟ್ಟು ಬಿದ್ದಿದೆ. ಘಟನೆ ನಡೆದು ನಾಲ್ಕು ದಿನಗಳ ನಂತರ ರಾಜುವಿನ ತಂದೆ ಬಸಯ್ಯ ಗುತ್ತೇದಾರ ನೀಡಿರುವ ದೂರಿನ ಮೇಲೆ ಶಹಾಪುರ ಪೊಲೀಸ್ ಠಾಣೆಯಲ್ಲಿ ವಿಜಯ ರಾಠೋಡ್, ಬಸುರೆಡ್ಡಿ, ಮಲ್ಲಿಕಾರ್ಜುನ, ಸೇರಿದಂತೆ ಏಳು ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಮಾಸ್ ಉಗ್ರರ ಕಾರ್ಯತಂತ್ರವನ್ನೇ ಅನುಸರಿಸಿದ ಇಸ್ರೇಲ್ – ಇಂದು ಇಬ್ಬರು ಒತ್ತೆಯಾಳುಗಳ ರಿಲೀಸ್‌ಗೆ ಸಿದ್ಧತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಾಕ್‍ಡೌನ್ ಮಧ್ಯೆ ಯಾದಗಿರಿಯಲ್ಲಿ ಅಕ್ರಮ ಮರಳು ದಂಧೆ ಬಲು ಜೋರು

    ಲಾಕ್‍ಡೌನ್ ಮಧ್ಯೆ ಯಾದಗಿರಿಯಲ್ಲಿ ಅಕ್ರಮ ಮರಳು ದಂಧೆ ಬಲು ಜೋರು

    ಯಾದಗಿರಿ: ಇಡೀ ಜಗತ್ತಿಗೆ ಒಂದು ಚಿಂತೆಯಾದ್ರೆ ಯಾದಗಿರಿ ಅಕ್ರಮ ದಂಧೆಕೋರರಿಗೆ ಒಂದು ಚಿಂತೆಯಾಗಿದೆ. ಯಾಕೆಂದರೆ ಇಡೀ ವಿಶ್ವವೇ ಕೊರೊನಾ ವೈರಸ್ ಹಾವಳಿಗೆ ತತ್ತರಿಸುತ್ತಿದೆ. ಮನುಷ್ಯ ಹಣಕ್ಕಿಂತ ಆರೋಗ್ಯ ಮುಖ್ಯ ಅಂತ ನಂಬುವಂತಾಗಿದೆ. ಆದರೆ ಯಾದಗಿರಿಯಲ್ಲಿ ಅಕ್ರಮವಾಗಿ ದುಡ್ಡು ಮಾಡುವ ನೀಚ ಮನಸ್ಸುಗಳು ಮಾತ್ರ ಕಡಿಮೆಯಾಗಿಲ್ಲ.

    ಕೊರೊನಾ ಲಾಕ್‍ಡೌನ್ ಮಧ್ಯೆಯೂ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಜೋರಾಗಿ ನಡೆಯುತ್ತಿದೆ. ಇದನ್ನು ತಡೆಯಬೇಕಿದ್ದ ಪೊಲೀಸ್ ಇಲಾಖೆ ಮತ್ತು ತಹಶೀಲ್ದಾರ್ ಈ ಬಗ್ಗೆ ತಿಳಿದಿದ್ದರೂ, ಕಂಡು ಕಾಣದಂತೆ ಇರುವುದು ಜಿಲ್ಲೆಯ ಜನರ ಪಿತ್ತ ನೆತ್ತಿಗೇರುವಂತೆ ಮಾಡಿದೆ.

    ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿಹಳ್ಳ, ಸೂಗುರು ಸೇರಿದಂತೆ ಕೃಷ್ಣನದಿ ದಡದಿಂದ ರಾತ್ರೋರಾತ್ರಿ ಅಕ್ರಮವಾಗಿ ಮರಳು ತುಂಬಿಸಿಕೊಳ್ಳುವ ಟ್ರ್ಯಾಕ್ಟರ್ ಮತ್ತು ಟಿಪ್ಪರ್ ಗಳು ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಕಡೆ ಸಂಚಾರ ಮಾಡುತ್ತಿವೆ. ಲಾಕ್‍ಡೌನ್‍ನಲ್ಲಿ ಜನ ಸಾಮಾನ್ಯರನ್ನು ರಸ್ತೆಗಿಳಿಯಲು ಜಿಲ್ಲಾಡಳಿತ ಅವಕಾಶ ನೀಡುತ್ತಿಲ್ಲ. ಇಂತಹ ಹೊತ್ತಿನಲ್ಲಿ ತಾಲೂಕು ಕೇಂದ್ರವನ್ನು, ವಿವಿಧ ಚೆಕ್‍ಪೋಸ್ಟ್ ಗಳನ್ನು ದಾಟಿ ಈ ಮರಳು ವಾಹನಗಳು ಹೇಗೆ ತಿರುಗಾಡುತ್ತಿವೆ ಎನ್ನುವುದು ತಿಳಿಯದ ಯಕ್ಷ ಪ್ರಶ್ನೆಯಾಗಿದೆ.

    ಇದನ್ನು ತಡೆಬೇಕಾದ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯ ತಹಶೀಲ್ದಾರ್ ಕಣ್ಮುಚ್ಚಿ ಕುಳಿತಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

  • ಅಕ್ರಮ ಮರಳು ದಂಧೆ- ಕಾರು, ಬೈಕ್‍ಗಳಲ್ಲಿ ಹಿಂಬಾಲಿಸಿ ಅಧಿಕಾರಿಗಳ ಮೇಲೆ ದಾಳಿಗೆ ಯತ್ನ

    ಅಕ್ರಮ ಮರಳು ದಂಧೆ- ಕಾರು, ಬೈಕ್‍ಗಳಲ್ಲಿ ಹಿಂಬಾಲಿಸಿ ಅಧಿಕಾರಿಗಳ ಮೇಲೆ ದಾಳಿಗೆ ಯತ್ನ

    – ರಾಯಚೂರಿನಲ್ಲಿ ಮತ್ತೋರ್ವನ ಬಂಧನ

    ಚಿಕ್ಕಬಳ್ಳಾಪುರ/ರಾಯಚೂರು: ಅಕ್ರಮ ಮರಳು ದಂಧೆ ಪ್ರಶ್ನಿಸಿದ್ದಕ್ಕೆ ರಾಯಚೂರಿನಲ್ಲಿ ಗ್ರಾಮಲೆಕ್ಕಾಧಿಕಾರಿ ಮೇಲೆ ಲಾರಿ ಹರಿಸಿ ಹತ್ಯೆ ಮಾಡಲಾಯ್ತು. ಈ ಸುದ್ದಿ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

    ಚಿಕ್ಕಬಳ್ಳಾಪುರದಲ್ಲಿ ರಾತ್ರೋರಾತ್ರಿ ಜಲ್ಲಿ ಕಲ್ಲು, ಗ್ರಾನೈಟ್ ದಿಮ್ಮಿಗಳು, ಕಲ್ಲಿನ ಬೋಲ್ಡರ್ಸ್‍ಗಳ ಅಕ್ರಮ ಸಾಗಾಟ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾದ ರಾನ್ ಜಿ ನಾಯಕ್ ಹಾಗೂ ಸಂದೀಪ್ ದಾಳಿ ನಡೆಸಿದ್ರು. ಅಲ್ಲದೇ ಯಲಗಲಹಳ್ಳಿ, ಚಿಕ್ಕನಾಗವಲ್ಲಿ ಗ್ರಾಮದ ಸುತ್ತಮುತ್ತ ಕಲ್ಲುಕ್ವಾರಿಗಳಲ್ಲಿನ 8 ಟಿಪ್ಪರ್ ಲಾರಿಗಳನ್ನು ವಶ ಪಡಿಸಿಕೊಂಡ್ರು.

    ಇದೇ ಸಿಟ್ಟಿಗೆ ದಂಧೆಕೋರರು ಅಧಿಕಾರಿಗಳ ಮೇಲೆ ಸಿನಿಮೀಯ ರೀತಿಯಲ್ಲಿ ಕಾರು, ಬೈಕ್‍ ಗಳಲ್ಲಿ ಹಿಂಬಾಲಿಸಿ ದಾಳಿ ಮಾಡಲು ಯತ್ನಿಸಿ ವಿಫಲರಾಗಿದ್ದಾರೆ. ಆದ್ರೆ ಧೃತಿಗೆಡದ ಅಧಿಕಾರಿಗಳು ತಮ್ಮ ಕರ್ತವ್ಯ ನಿಭಾಯಿಸಿದ್ದಾರೆ. ಜೊತೆಗೆ ದಂಧೆಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‍ ಗೆ ಮನವಿ ಮಾಡಿದ್ದಾರೆ.

    ಮತ್ತೋರ್ವನ ಬಂಧನ:
    ಇತ್ತ ರಾಯಚೂರಿನಲ್ಲಿ ಮರಳು ಲಾರಿ ಅಧಿಕಾರಿ ಮೇಲೆ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ವಿ ಪೊಲೀಸರು ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅವಧಿ ಮೀರಿದ ರಾಯಲ್ಟಿ ನೀಡಿದ್ದ ಪ್ರದೀಪ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತ ಚೀಕಲಪರ್ವಿ ಮರಳು ಸಂಗ್ರಹ ಕೇಂದ್ರ ಸಿಬ್ಬಂದಿಯಾಗಿದ್ದು, ಮರಳು ಸಾಗಣೆಗೆ ಹಿಂದಿನ ಸಮಯದ ರಾಯಲ್ಟಿ ನೀಡಿದ್ದನು.

    ಸಂಜೆ ವೇಳೆ ಮರಳು ಸಾಗಿಸುವಾಗ ಅಧಿಕಾರಿ ಮೇಲೆ ಲಾರಿ ಹರಿದಿದ್ದರಿಂದ ಚೀಕಲಪರ್ವಿ ವಿಎ ಸಾಹೇಬ್ ಪಟೇಲ್ ಸಾವನ್ನಪ್ಪಿದ್ದರು. ಘಟನೆಯ ಬಳಿಕ ಲಾರಿ ಚಾಲಕ ರಂಗಪ್ಪನನ್ನ ಭಾನುವಾರ ಬಂಧಿಸಲಾಗಿತ್ತು. ರಾಯಲ್ಟಿ ಪಡೆದ ಸಮಯ ವ್ಯತ್ಯಾಸ ಹಿನ್ನೆಲೆಯಲ್ಲಿ ಚಾಲಕ ವೇಗವಾಗಿ ಲಾರಿ ಚಲಾಯಿಸಿರುವುದಾಗಿ ಚಾಲಕ ತಪ್ಪೊಪ್ಪಿಕೊಂಡಿದ್ದು, ಮಾನ್ವಿ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಕ್ರಮ ಮರಳು ದಂಧೆ ಬಗ್ಗೆ ತನಿಖೆ ಮಾಡ್ತಿದ್ದ ಪತ್ರಕರ್ತನ ಮೇಲೆ ಲಾರಿ ಹರಿದು ಸಾವು

    ಅಕ್ರಮ ಮರಳು ದಂಧೆ ಬಗ್ಗೆ ತನಿಖೆ ಮಾಡ್ತಿದ್ದ ಪತ್ರಕರ್ತನ ಮೇಲೆ ಲಾರಿ ಹರಿದು ಸಾವು

    ಭೋಪಾಲ್: ಅಕ್ರಮ ಮರಳು ದಂಧೆ ಬಗ್ಗೆ ತನಿಖೆ ಮಾಡುತ್ತಿದ್ದ ಪತ್ರಕರ್ತರೊಬ್ಬರ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಪ್ರದೇಶದಲ್ಲಿ ನಡೆದಿದೆ.

    35 ವರ್ಷದ ಸಂದೀಪ್ ಶರ್ಮಾ ಮೃತ ಪತ್ರಕರ್ತ. ಸಂದೀಪ್ ಅವರು ಬೈಕ್‍ನಲ್ಲಿ ಹೋಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸಂದೀಪ್ ಮೃತಪಟ್ಟಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

    ಪೊಲೀಸ್ ಠಾಣೆಯ ಬಳಿಯೇ ಅಪಘಾತ ಸಂಭವಿಸಿದ್ದು, ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಸಂದೀಪ್ ಅವರನ್ನು ಆಸ್ಪತ್ರೆಗೆ ರವಾನಿಸಿದರು ಎಂದು ವರದಿಯಾಗಿದೆ. ಆದ್ರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಸಂದೀಪ್ ಸಾವನ್ನಪ್ಪಿದ್ದಾರೆಂದು ವೈದ್ಯರು ಹೇಳಿದ್ದಾರೆ. ಅಪಘಾತದ ದೃಶ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋವನ್ನ ಸುದ್ದಿಸಂಸ್ಥೆ ಹಂಚಿಕೊಂಡಿದೆ.

    ರಾಷ್ಟ್ರೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂದೀಪ್ ಶರ್ಮಾ ಈ ಹಿಂದೆ ನಡೆಸಿದ ಕುಟುಕು ಕಾರ್ಯಾಚರಣೆಯಿಂದಾಗಿ ತನಗೆ ಜೀವ ಬೆದರಿಕೆ ಇದೆ ಎಂದು ಪೊಲೀಸರಿಗೆ ದೂರು ನೀಡಿದ್ದರು ಎಂದು ವರದಿಯಾಗಿದೆ. ಸಂದೀಪ್ ಅವರು ಮಾಡಿದ್ದ ಕುಟುಕು ಕಾರ್ಯಾಚರಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಾಫಿಯಾದವರಿಂದ ಲಂಚ ಪಡೆಯುತ್ತಿರುವುದನ್ನು ತೋರಿಸಲಾಗಿತ್ತು.

    ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾ ಎಸ್‍ಪಿ ವಿಶೇಷ ತನಿಖಾ ತಂಡವನ್ನ ರಚಿಸಿದ್ದಾರೆ.

  • ವಿಚಾರಣಾಧೀನ ಕೈದಿ ಅನುಮಾನಾಸ್ಪದ ಸಾವು: ಪೊಲೀಸ್ ಠಾಣೆಗೆ ಬೆಂಕಿ, ವಾಹನ ಭಸ್ಮ!

    ಗದಗ: ಶಿರಹಟ್ಟಿ ತಾಲೂಕಿನ ಬಟ್ಟೂರು ಗ್ರಾಮದ ಶಿವಾನಂದ ಗಾಣಗೇರ ಪೊಲೀಸ್ ಠಾಣೆಯಲ್ಲಿಯೇ ವಿಚಾರಣಾಧೀನ ಕೈದಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ, ಠಾಣೆಗೆ ಬೆಂಕಿಯಿಟ್ಟು ಸಂಬಂಧಿಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಏನಿದು ಪ್ರಕರಣ?: ಅಕ್ರಮ ಮರಳುದಂಧೆ ಆರೋಪದ ಮೇಲೆ ಶಿವಾನಂದ ಗಾಣಿಗೇರ ಪೊಲೀಸರ ವಶದಲ್ಲಿದ್ದರು. ತೀವ್ರ ವಿಚಾರಣೆಯಲ್ಲಿದ್ದ ಶಿವಾನಂದ ಠಾಣೆಯಲ್ಲೇ ಮೃತಪಟ್ಟಿದ್ದಾರೆ. ಇದರಿಂದ ಆಕ್ರೋಶಗೊಂಡ ಶಿವಾನಂದ ಸಂಬಧಿಕರು, ಪೊಲಿಸರು ಲಾಕಪ್ ಡೆತ್ ಮಾಡಿರುವುದಾಗಿ ಆರೋಪ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೇ ಠಾಣೆಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಠಾಣೆಯೊಳಗೆ ಎಸ್‍ಐ ಶಿವಾನಂದ್ ಹಾಗೂ ಸಿಬ್ಬಂದಿಯಿದ್ದು, ತಮ್ಮ ಪ್ರಾಣ ರಕ್ಷಿಸಿಕೊಳ್ಳುವ ಸಲುವಾಗಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಮೃತನ ಸಂಬಂಧಿಕರು ಏಕಾಏಕಿ ಠಾನೆಯ ಒಳನುಗಿ, ಅಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಇನ್ನು ಪೊಲಿಸ್ ಜೀಪ್‍ಗೂ ಬೆಂಕಿ ಹಚ್ಚಿದ್ದು, ಸಂಪೂರ್ಣವಾಗಿ ಭಸ್ಮವಾಗಿದೆ.

    ಸದ್ಯ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸುತ್ತಿದ್ದು, ಕಿಡಿಗೇಡಿಗಳು ಕೂಡ ಅಲ್ಲಿಂದ ಪರಾರಿಯಾಗಿದ್ದಾರೆ. ಹಾಗೆಯೇ ಅಗ್ನಿಶಾಮಕ ದಳದವರು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

    https://www.youtube.com/watch?v=eWXUA96hMlw&feature=youtu.be