Tag: ಅಕ್ರಮ ಸಂಬಂಧ

  • ಅಕ್ರಮ ಸಂಬಂಧ ಹೊಂದಿದ್ದ ಮೂವರ ಜೊತೆ ಸೇರಿ ಪತಿಯನ್ನೇ ಕೊಂದ್ಲು!

    ಅಕ್ರಮ ಸಂಬಂಧ ಹೊಂದಿದ್ದ ಮೂವರ ಜೊತೆ ಸೇರಿ ಪತಿಯನ್ನೇ ಕೊಂದ್ಲು!

    ರಾಜ್‍ಕೋಟ್: ಅಕ್ರಮ ಸಂಬಂಧ ಹೊಂದಿದ್ದ ಮೂವರ ಜೊತೆಗೆ ಸೇರಿ ಪತಿಯನ್ನೇ ಪತ್ನಿಯೊಬ್ಬಳು ಕೊಲೆ ಮಾಡಿದ ಘಟನೆ ಗುಜರಾತ್‍ನಲ್ಲಿ ನಡೆದಿದ್ದು, ಮೂರು ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

    ಗಾಂಧಿದಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಪ್ರಹ್ಲಾದ್ ಕೊಲೆಯಾದ ಪತಿ. ಪ್ರಹ್ಲಾದ್ ಪತ್ನಿ ಧನ್ಬಾಯಿ ಮಹೇಶ್ವರಿ ಆಕೆಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ನರಸಿಂಹ ಕೊಲಿ, ರವಿ ಶಂಕರ್ ಮಹೇಶ್ವರಿ ಮತ್ತು ಮಹೇಶ್ ಮಹೇಶ್ವರಿ ಆರೋಪಿಗಳು.

    ಕೃತ್ಯ ಸೆಪ್ಟೆಂಬರ್ 13ರಂದು ನಡೆದಿದ್ದು, ಆರಂಭದಲ್ಲಿ ಆತ್ಮಹತ್ಯೆ ಎಂದು ಬಿಂಬಿಸಲಾಗಿತ್ತು. ಆದರೆ ಪೊಲೀಸ್ ತನಿಖೆಯಿಂದಾಗಿ ಪತ್ನಿಯ ಅಮಾನವೀಯ ಕೃತ್ಯ ಬಯಲಾಗಿದೆ. ಆರೋಪಿಗಳನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.

    ಏನಿದು ಪ್ರಕರಣ?:
    ಧನ್ಬಾಯಿ ಮಹೇಶ್ವರಿಯು ನರಸಿಂಹ, ರವಿ ಶಂಕರ್, ಹಾಗೂ ಮಹೇಶ್ ಎಂಬವರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಷಯವು ಪ್ರಹ್ಲಾದ್ ಗಮನಕ್ಕೆ ಬಂದಿದ್ದರಿಂದ ಧನ್ಬಾಯಿಯನ್ನು ವಿಚಾರಿಸಿದ್ದಾನೆ. ಎಲ್ಲಿ ಈ ಅಕ್ರಮ ಸಂಬಂಧ ಬಯಲಿಗೆ ಬರುತ್ತದೆ ಅಂತಾ ಅಕ್ರಮ ಸಂಬಂಧ ಹೊಂದಿದ್ದ ಮೂವರ ಜೊತೆಗೆ ಸೇರಿ ಕೊಲೆಗೆ ಹಂಚು ರೂಪಿಸಿದ್ದಾಳೆ. ನಾಲ್ವರು ಸೇರಿ ಪ್ರಹ್ಲಾದ್‍ಗೆ ಕಿರುಕುಳ ನೀಡಿ, ವಿದ್ಯುತ್ ಶಾಕ್ ಕೊಟ್ಟು ಕೊಲೆ ಮಾಡಿದ್ದಾರೆ.

    ಕೊಲೆಯನ್ನು ಮುಚ್ಚಿ ಹಾಕುವ ಉದ್ದೇಶದಿಂದ ಪತಿ ವಿದ್ಯುತ್ ಸ್ಪರ್ಶ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಧನ್ಬಾಯಿ ಹೇಳಿದ್ದಾಳೆ. ಆದರೆ ಪ್ರಹ್ಲಾದ್ ಸಹೋದರಿಯ ಪತಿ ಲಾಲ್‍ಜಿ ಕೊಲೆ ಶಂಕೆ ವ್ಯಕ್ತಪಡಿಸಿ ಗಾಂಧಿದಾಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು. ಧನ್ಬಾಯಿಯನ್ನು ವಿಚಾರಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಆಕೆಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಮೂವರನ್ನು ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • `ಆ’ ದೃಶ್ಯ ನೋಡಿದ್ದಕ್ಕೆ ಬಾಲಕಿಯನ್ನು ಕೊಂದೇ ಬಿಟ್ಟಳು ಚಿಕ್ಕಮ್ಮ!

    `ಆ’ ದೃಶ್ಯ ನೋಡಿದ್ದಕ್ಕೆ ಬಾಲಕಿಯನ್ನು ಕೊಂದೇ ಬಿಟ್ಟಳು ಚಿಕ್ಕಮ್ಮ!

    ಮೈಸೂರು: ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಶಾಲೆಗೆ ಹೋಗಲು ಸಿದ್ಧವಾಗುತ್ತಿದ್ದ ಬಾಲಕಿ ಚಿಕ್ಕಮ್ಮನ ನೀಚಕೃತ್ಯಕ್ಕೆ ಬಲಿಯಾಗಿದ್ದಾಳೆ ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

    ನವೆಂಬರ್ 16 ರಂದು ಜಿಲ್ಲೆಯ ನಂಜನಗೂಡು ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ಬಾಲಕಿ ಐಶ್ವರ್ಯಳನ್ನು ಕೊಲೆ ಮಾಡಲಾಗಿತ್ತು. ಬಾಲಕಿಯ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಐಶ್ವರ್ಯಳ ಚಿಕ್ಕಮ್ಮ ರಾಜಮ್ಮ, ಪ್ರಿಯಕರ ಸಿದ್ದರಾಜುರನ್ನ ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ನವೆಂಬರ್ 16 ರಂದು ಕೊಲೆ ಮಾಡಲಾಗಿತ್ತು. ಬಾಲಕಿಯ ತಂದೆ, ತಾಯಿ ತಳ್ಳು ಗಾಡಿಯಲ್ಲಿ ಹೋಟೆಲ್ ನಡೆಸುತ್ತಿದ್ದರು. ಗುಡಿಸಲಿನಲ್ಲಿ ವಾಸವಿದ್ದ ಕುಟುಂಬದಲ್ಲಿ ಬಾಲಕಿ 8ನೇ ತರಗತಿ ಓದುತ್ತಿದ್ದಳು. ಆದರೆ ಅಂದು ಗುಡಿಸಲಿನಲ್ಲಿ ಒಬ್ಬಳೇ ಇದ್ದ ಬಾಲಕಿಯನ್ನು ಅಂದು ಕೊಲೆ ಮಾಡಲಾಗಿತ್ತು. ಬಾಲಕಿಯ ತಂದೆ ಮಗಳ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು.

    ಕೊಲೆಗೆ ಕಾರಣವೇನು:
    ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಬಾಲಕಿಯೊಂದಿಗೆ ಇದ್ದ ರಾಜಮ್ಮ ಮೇಲೆ ಶಂಕೆ ವ್ಯಕ್ತಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಕೊಲೆ ಹಿಂದಿನ ಕಾರಣ ಬೆಳಕಿಗೆ ಬಂದಿದೆ. ರಾಜಮ್ಮ, ಸಿದ್ದರಾಜು ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಅಂದು ಐಶ್ವರ್ಯ ಕುಟುಂಬ ವಾಸವಿದ್ದ ಗುಡಿಸಲಿನ ಹಿಂಭಾಗದಲ್ಲಿ ಇಬ್ಬರು ದೈಹಿಕ ಸಂಪರ್ಕ ಬೆಳೆಸಿದ್ದರು. ಆದರೆ ಇದನ್ನು ಐಶ್ವರ್ಯ ಆಕಸ್ಮಾತ್ ಆಗಿ ನೋಡಿದ್ದಳು. ಅಕ್ರಮ ಸಂಬಂಧದ ವಿಚಾರವನ್ನು ಐಶ್ವರ್ಯ ಎಲ್ಲರಿಗೂ ಹೇಳಿ ಬಿಡುತ್ತಾಳೆ ಎಂದು ಹೆದರಿದ ರಾಜಮ್ಮ, ಪ್ರೇಮಿ ಸಿದ್ದರಾಜು ಜೊತೆ ಸೇರಿ ಐಶ್ವರ್ಯಳ ಕತ್ತು ಹಿಸುಕಿ ಕೊಲೆ ಮಾಡಿದ್ದರು. ಬಳಿಕ ರಾಜಮ್ಮ ತನಗೆ ಏನು ಗೊತ್ತೇ ಇಲ್ಲದಂತೆ ಐಶ್ವರ್ಯ ಅಂತ್ಯಕ್ರಿಯೆಯಲ್ಲೂ ಭಾಗಿಯಾಗಿದ್ದಳು.

    ಘಟನೆ ಕುರಿತು ಮಾಹಿತಿ ನೀಡಿದ ಪೊಲೀಸರು ಬಾಲಕಿ ಮೇಲೆ ಅತ್ಯಾಚಾರ ಆಗಿದೆಯೋ ಇಲ್ಲವೋ ಎಂಬುದು ವೈದ್ಯಕೀಯ ವರದಿ ಬಂದ ನಂತರ ಸ್ಪಷ್ಟವಾಗಲಿದೆ. ಸದ್ಯಕ್ಕೆ ಆರೋಪಿಗಳನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದೇವೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ತಾಯಿಯನ್ನೇ ಕೊಲೆಗೈದ ಟೆಕ್ಕಿ

    ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ತಾಯಿಯನ್ನೇ ಕೊಲೆಗೈದ ಟೆಕ್ಕಿ

    ಬೆಂಗಳೂರು: ಶೀಲ ಶಂಕಿಸಿ ಸಾಫ್ಟ್‍ವೇರ್ ಎಂಜಿನಿಯರ್ ಪತ್ನಿಯ ಮೇಲೆ ಹಲ್ಲೆ ಮಾಡಿ ಸಂಧಾನಕ್ಕೆ ಬಂದಿದ್ದ ಪತ್ನಿಯ ಪ್ರಿಯಕರನ ತಾಯಿಯನ್ನೇ ಕೊಲೆಗೈದ ಘಟನೆ ನಗರದ ಕೊತ್ತನೂರು ಠಾಣಾ ವ್ಯಾಪ್ತಿಯ ಭೈರತಿಯಲ್ಲಿ ನಡೆದಿದೆ.

    ಭೈರತಿ ನಿವಾಸಿ ಸಾವಿತ್ರಮ್ಮ ಕೊಲೆಯಾದ ಮಹಿಳೆ. ಆನಂದ್ ಕೊಲೆಗೈದ ಸಾಫ್ಟ್‍ವೇರ್ ಎಂಜಿನಿಯರ್ ಪತಿ. ಆರೋಪಿಯನ್ನು ಕೊತ್ತನೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನು ಓದಿ: ವಿವಾಹಿತ ಮಹಿಳೆ ಜೊತೆ ಪಿಎಸ್‍ಐ ಅಕ್ರಮ ಸಂಬಂಧ – ಮನನೊಂದ ಮಹಿಳೆಯ ಪತಿ ಆತ್ಮಹತ್ಯೆಗೆ ಯತ್ನ

    ಏನಿದು ಪ್ರಕರಣ?:
    ಹೆಚ್‍ಪಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಆನಂದ್ ಕೆಲಸ ಮಾಡುತ್ತಿದ್ದ. ಆತನ ಪತ್ನಿ ಸ್ನೇಹಾ, ಭರತ್ ಎಂಬವನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಚಾರವಾಗಿ ದಂಪತಿ ನಡುವೆ ಜಗಳವಾಗಿತ್ತು. ಇದರಿಂದಾಗಿ ಮನನೊಂದಿದ್ದ ಆನಂದ್, ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಪತ್ನಿ ಸ್ನೇಹಾ ಜೊತೆಗೆ ಜಗಳಕ್ಕೆ ಇಳಿದಿದ್ದ.

    ಜಗಳದ ವಿಚಾರ ತಿಳಿದ ಸ್ನೇಹಾ ಪ್ರಿಯಕರ ಭರತ್, ಆತನ ತಂದೆ ಸಂಗಣ್ಣ ಮತ್ತು ತಾಯಿ ಸಾವಿತ್ರಮ್ಮ ಆನಂದ್ ಮನೆಗೆ ಬಂದು ಸಂಧಾನಕ್ಕೆ ಯತ್ನಿಸಿದ್ದರು. ಆದರೆ ಆನಂದ್ ಏಕಾಏಕಿ ಭರತ್ ಮೇಲೆ ಬ್ಯಾಟ್ ನಿಂದ ಹಲ್ಲೆ ಮಾಡಿದ್ದಾನೆ. ಇದರಿಂದ ಕೆರಳಿದ ಭರತ್ ಪೋಷಕರು, ಆನಂದ್ ಮೇಲೆ ತಿರುಗಿಬಿದ್ದಿದ್ದಾರೆ.

    ಎರಡೂ ಕುಟುಂಬಗಳ ನಡುವೆ ಮಾರಾಮಾರಿ ಹೊಡೆದಾಟವಾಗಿದ್ದು, ಮನೆಯಲ್ಲಿದ್ದ ಚಾಕು ಹಿಡಿದು ಬಂದ ಆನಂದ್, ಭರತ್ ಹಾಗೂ ಆತನ ಪೋಷಕರ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ಭರತ್ ತಾಯಿ ಸಾವಿತ್ರಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭರತ್ ಮತ್ತು ತಂದೆ ಸಂಗಣ್ಣ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು, ಘಟನೆ ನಡೆದ ಅರ್ಧ ಗಂಟೆಯಲ್ಲಿಯೇ ಆರೋಪಿ ಆನಂದ್‍ನನ್ನು ಬಂಧಿಸಿದ್ದಾರೆ. ಬಳಿಕ ವಿಚಾರಣೆಗೆ ಒಳಪಡಿಸಿದಾಗ, ಸ್ನೇಹಾ ಹಾಗೂ ಭರತ್ ಮಧ್ಯೆ ಅಕ್ರಮ ಸಂಬಂಧವಿತ್ತು. ಇದೇ ಕಾರಣಕ್ಕೆ ಕೃತ್ಯ ಎಸಗಿದ್ದಾನೆ ಹೇಳಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮಗುವಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ ಮಾಡ್ಕೊಂಡ ತಾಯಿ!

    ಮಗುವಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ ಮಾಡ್ಕೊಂಡ ತಾಯಿ!

    ಮೈಸೂರು: ತಾಯಿಯೊಬ್ಬಳು 2 ವರ್ಷದ ಪುಟ್ಟ ಕಂದಮ್ಮನನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಕುನ್ನೇಗಾಲ ಗ್ರಾಮದಲ್ಲಿ ನಡೆದಿದೆ.

    ಪುಟ್ಟ ಕಂದಮ್ಮ ಮಾನ್ವಿತಾಳನ್ನು ಕೊಲೆಗೈದ ಬಳಿಕ 23 ವರ್ಷದ ರಾಜೇಶ್ವರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಜೇಶ್ವರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

    ಕೂಡಗಿ ಗ್ರಾಮದ ಸೋಮಣ್ಣ ಹಾಗೂ ರಾಜೇಶ್ವರಿ ಆರು ವರ್ಷಗಳು ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ಈ ದಂಪತಿಗೆ ಒಂದು ಹೆಣ್ಣು ಹಾಗೂ ಗಂಡು ಮಕ್ಕಳಿದ್ದವು. ಆದ್ರೆ ರಾಜೇಶ್ವರಿ ಅವರು ಕಳೆದ 2 ವರ್ಷದಿಂದ ಕೂಡಗಿ ಗ್ರಾಮದ ವಿನೋದ ಎಂಬಾತನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು ಎಂದು ಪತಿ ಆರೋಪಿಸಿದ್ದಾರೆ.

    ಪತ್ನಿಯ ಅಕ್ರಮ ಸಂಬಂಧವನ್ನು ಪತಿ ಸೋಮಣ್ಣ ಹಲವು ಬಾರಿ ಗಮನಿಸಿದ್ದರು. ಅಲ್ಲದೇ ಆ ಬಳಿಕ ಪತ್ನಿಯನ್ನು ತವರು ಮನೆಗೆ ಬಿಟ್ಟುಬಂದಿದ್ದರು. ಇದರಿಂದ ಮನನೊಂದ ರಾಜೇಶ್ವರಿ ತನ್ನ ಮಗುವಿಗೆ ನೇಣು ಹಾಕಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅನೈತಿಕ ಸಂಬಂಧದ ಶಂಕೆ- ಸಹ ಕಾರ್ಮಿಕರಿಂದಲೇ ವ್ಯಕ್ತಿಯ ಭೀಕರ ಹತ್ಯೆ

    ಅನೈತಿಕ ಸಂಬಂಧದ ಶಂಕೆ- ಸಹ ಕಾರ್ಮಿಕರಿಂದಲೇ ವ್ಯಕ್ತಿಯ ಭೀಕರ ಹತ್ಯೆ

    ಚಿತ್ರದುರ್ಗ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಸಹ ಕಾರ್ಮಿಕರೇ ಕೊಲೆಗೈದಿರುವ ಘಟನೆ ಚಳ್ಳಕೆರೆ ಪಟ್ಟಣದ ನೂತನ ನಗರಸಭೆಯ ಬಳಿ ನಡೆದಿದೆ.

    ಮೇಸ್ತ್ರಿ ಚನ್ನಕೃಷ್ಣ (38) ಮೃತ ದುರ್ದೈವಿ. ನಾಗರಾಜ್ ಹಾಗೂ ಚಂದ್ರು ಕೊಲೆಗೈದ ಆರೋಪಿಗಳು. ಚನ್ನಕೃಷ್ಣ ಮೂಲತಃ ಆಂಧ್ರದ ನೆಲ್ಲೂರು ಜಿಲ್ಲೆಯ ದುರ್ಗಂಪಲ್ಲಿ ಗ್ರಾಮದ ನಿವಾಸಿಯಾಗಿದ್ದಾರೆ.

    ಚಳ್ಳಕೆರೆಯಲ್ಲಿ ನಗರಸಭೆ ಕಟ್ಟಡ ನಿರ್ಮಾಣದಲ್ಲಿ ಮೇಸ್ತ್ರಿಯಾಗಿ ಕೆಲಸ ಮಾಡಲು ಚನ್ನಕೃಷ್ಣ ಚಳ್ಳಕೆರೆಗೆ ಬಂದಿದ್ದರು. ಹೀಗಾಗಿ ಚನ್ನಕೃಷ್ಣ, ನಾಗರಾಜ್ ಹಾಗೂ ಚಂದ್ರು ನಗರಸಭೆ ಕಟ್ಟಡ ನಿರ್ಮಿಸಲು ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಈ ವೇಳೆ ತನ್ನ ಪತ್ನಿ ಜೊತೆ ಮೇಸ್ತ್ರಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ನಾಗರಾಜ್ ಶಂಕಿಸಿದ್ದಾನೆ. ಬಳಿಕ ತನ್ನ ಸ್ನೇಹಿತ ಚಂದ್ರು ಜೊತೆ ಸೇರಿ ನಾಗರಾಜ್, ಮೇಸ್ತ್ರಿಯನ್ನು ಕೊಲೆ ಮಾಡಲು ನಿರ್ಧರಿಸಿದ್ದಾನೆ.

    ರಾತ್ರಿ ಚನ್ನಕೃಷ್ಣ ಮಲಗಿದ್ದ ವೇಳೆ ದೊಣ್ಣೆಯಿಂದ ಆತನ ತಲೆಗೆ ಹೊಡೆದು ಇಬ್ಬರು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಸಿಪಿಐ ತಿಮ್ಮಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ಆರೋಪಿಗಳ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೆ ಆರೋಪಿ ನಾಗರಾಜ್ ಅನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪತಿ ಸಾವಿನ ಬಳಿಕ ಮತ್ತೋರ್ವನ ಜೊತೆ ಸಂಬಂಧ- ಕೊನೆಗೆ ಇನಿಯನಿಂದಲೇ ಕೊಲೆಯಾದ ಮಹಿಳೆ

    ಪತಿ ಸಾವಿನ ಬಳಿಕ ಮತ್ತೋರ್ವನ ಜೊತೆ ಸಂಬಂಧ- ಕೊನೆಗೆ ಇನಿಯನಿಂದಲೇ ಕೊಲೆಯಾದ ಮಹಿಳೆ

    ಹೈದರಾಬಾದ್: ಪತಿ ಸಾವಿನ ಬಳಿಕ ಬೇರೋಬ್ಬನ ಜೊತೆ ಅಕ್ರಮ ಸಂಬಂಧದಲ್ಲಿದ್ದ ಮಹಿಳೆ ಆತನಿಂದಲೇ ಕೊಲೆಯಾಗಿರುವ ಘಟನೆ ಅನಂತಗಿರಿಯ ವಿಕರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    35 ವರ್ಷದ ಮಂಜುಳಾ ಕೊಲೆಯಾದ ಮಹಿಳೆ. ಪತಿ ಚಂದ್ರಯ್ಯ ಮೂರು ವರ್ಷಗಳ ಹಿಂದೆ ಸಾವನ್ನಪ್ಪಿದ್ದ ನಂತರ ಮಂಜುಳಾ, ರಾಜಶೇಖರ್ ಎಂಬಾತನೊಂದಿಗೆ ಸಂಬಂಧದಲ್ಲಿದ್ದಳು. ಮಂಜುಳಾಳನ್ನು ನವೆಂಬರ್ 9ರಂದು ಕೊಲೆ ಮಾಡಿ ರಾಜಶೇಖರ್ ಪರಾರಿಯಾಗಿದ್ದನು. ಸದ್ಯ ಪೊಲೀಸರು ರಾಜಶೇಖರ್ ನನ್ನು ಬಂಧಿಸಿದ್ದಾರೆ.

    ಕೊಲೆ ಮಾಡಿದ್ದು ಏಕೆ?
    ಮಂಜುಳಾ ಕೆಲವು ತಿಂಗಳ ಹಿಂದೆ ರಾಜಶೇಖರ್ ನಿಂದ 80 ಸಾವಿರ ರೂ. ಸಾಲವನ್ನು ಪಡೆದುಕೊಂಡಿದ್ದಳು. ನವೆಂಬರ್ ಮೊದಲ ವಾರದಲ್ಲಿ ಮಂಜುಳಾ ಹಣ ನೀಡದಿದ್ದಾಗ ರಾಜಶೇಖರ್ ಗಲಾಟೆ ಮಾಡುತ್ತಿದ್ದ. ನವೆಂಬರ್ 9ರಂದು ಮಂಜುಳಾ ವಾಸವಾಗಿದ್ದ ತೋಟದ ಮನೆಗೆ ರಾಜಶೇಖರ್ ಹೋಗಿದ್ದಾನೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆ ಮತ್ತೆ ಜಗಳ ನಡೆದಿದೆ. ಪಾನಮತ್ತನಾಗಿದ್ದ ರಾಜಶೇಖರ್ ಕೋಪದಲ್ಲಿ ಮಂಜುಳಾ ಕೊಲೆ ಮಾಡಿದ್ದಾನೆ.

    ನವೆಂಬರ್ 10ರ ಬೆಳಗ್ಗೆ ಮಂಜುಳಾ ತೋಟದ ಬಳಿ ಗ್ರಾಮದ ಕೃಷ್ಣಯ್ಯ ಎಂಬವರು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೃಷ್ಣಯ್ಯ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇತ್ತ ಮಂಜುಳಾ ತಂದೆಯಿಂದ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದರು.

    ತನಿಖೆ ವೇಳೆ ರಾಜಶೇಖರ್ ಮೇಲೆ ಅನುಮಾನಗೊಂಡು ಅತನನ್ನು ಸಂಪರ್ಕಿಸಲು ಪ್ರಯತ್ನಿಸಲಾಗಿತ್ತು. ಆದ್ರೆ ಕೊಲೆಯಾದ ದಿನದಂದಲೇ ರಾಜಶೇಖರ್ ಮೊಬೈಲ್ ಸ್ವಿಚ್ಛ್ ಆಫ್ ಆಗಿದ್ದರಿಂದ ನಮ್ಮ ಅನುಮಾನ ಬಲಗೊಂಡಿತ್ತು. ಕೊನೆಗೂ ಆತನನ್ನು ಬಂಧಿಸಿದಾಗ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ವಿವಾಹಿತ ಮಹಿಳೆ ಜೊತೆ ಪಿಎಸ್‍ಐ ಅಕ್ರಮ ಸಂಬಂಧ – ಮನನೊಂದ ಮಹಿಳೆಯ ಪತಿ ಆತ್ಮಹತ್ಯೆಗೆ ಯತ್ನ

    ವಿವಾಹಿತ ಮಹಿಳೆ ಜೊತೆ ಪಿಎಸ್‍ಐ ಅಕ್ರಮ ಸಂಬಂಧ – ಮನನೊಂದ ಮಹಿಳೆಯ ಪತಿ ಆತ್ಮಹತ್ಯೆಗೆ ಯತ್ನ

    ಬೆಳಗಾವಿ: ವಿವಾಹಿತ ಮಹಿಳೆಯ ಜೊತೆ ಘಟಪ್ರಭ ಪೊಲೀಸ್ ಠಾಣೆಯ ಪಿಎಸ್‍ಐ ಅಕ್ರಮ ಸಂಬಂಧ ನಡೆಸುತ್ತಿದ್ದ. ಈ ವಿಷಯ ತಿಳಿದ ಮಹಿಳೆಯ ಪತಿ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.

    ಲಕ್ಷ್ಮಣ್ ದಳವಾವಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಪಿಎಸ್‍ಐ ದೇವಾನಂದ್ ಹಾಗೂ ಲಕ್ಷ್ಮಣ ಪತ್ನಿ ಮಧ್ಯೆ ಅನೈತಿಕ ಸಂಬಂಧವಿತ್ತು ಎಂಬ ವಿಷಯ ಬಹಿರಂಗವಾದ ಮೇಲೆ ಹಿರಿಯರೆಲ್ಲರು ಸೇರಿ ರಾಜಿ ಪಂಚಾಯಿತಿ ಮಾಡಿದ್ದರು. ಆದರೆ ಪತ್ನಿಯ ಅನೈತಿಕ ಸಂಬಂಧದಿಂದ ಮನನೊಂದಿದ್ದ ಲಕ್ಷ್ಮಣ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅನೈತಿಕ ಸಂಬಂಧದ ವಿಷಯ ಬೆಳಕಿಗೆ ಬಂದಂತೆ ಪಿಎಸ್‍ಐ ದೇವಾನಂದ್ 4 ದಿನಗಳ ರಜೆ ತೆಗೆದುಕೊಂಡು, ಸರ್ಕಾರಿ ಮೊಬೈಲ್ ಠಾಣೆಯಲ್ಲಿ ಸಿಬ್ಬಂದಿಗಳಿಗೆ ನೀಡಿ ಪರಾರಿಯಾಗಿದ್ದಾರೆ. ಪಿಎಸ್‍ಐ ಅಕ್ರಮ ಸಂಬಂಧ ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಸಲು ಎಸ್‍ಪಿ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.

    ಸದ್ಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೀರಜ್ ಖಾಸಗಿ ಆಸ್ಪತ್ರೆಯಲ್ಲಿ ಲಕ್ಷ್ಮಣ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆಯೇ ಗೋಕಾಕ್ ಡಿವೈಎಸ್‍ಪಿ ಡಿ.ಟಿ ಪ್ರಭು ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲಿ ಪ್ರಕರಣದ ವರದಿ ನೀಡುವಂತೆ ಎಸ್‍ಪಿ ಸೂಚನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಯುವಕನ ಮರ್ಮಾಂಗ ಕತ್ತರಿಸಿದ ಮಹಿಳೆ ಪ್ರಕರಣಕ್ಕೆ ಟ್ವಿಸ್ಟ್

    ಯುವಕನ ಮರ್ಮಾಂಗ ಕತ್ತರಿಸಿದ ಮಹಿಳೆ ಪ್ರಕರಣಕ್ಕೆ ಟ್ವಿಸ್ಟ್

    ಭುವನೇಶ್ವರ್: ಒಡಿಶಾದ ಕೆಯೊಂಜ್ಹಾರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಯುವಕನ ಮರ್ಮಾಂಗ ಕತ್ತರಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ.

    ಯುವಕನ ಮರ್ಮಾಂಗ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಡೌಗಾನ್ ಗ್ರಾಮದ 24 ವರ್ಷದ ಕಮಲ ಪತ್ರ ಎಂಬ ಮಹಿಳೆಯನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಆಯುಧವನ್ನು ವಶಪಡಿಸಿಕೊಂಡಿದ್ದೇವು. ಅಲ್ಲದೇ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಘಟನೆಗೆ ಅಕ್ರಮ ಸಂಬಂಧವೇ ಕಾರಣ ಎಂದು ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ಜೇಮ್ಸ್ ಟೊಪ್ಪೊ ಮಾಹಿತಿ ನೀಡಿದ್ದಾರೆ.

    ಏನಿದು ಘಟನೆ?
    24 ವರ್ಷದ ರಾಜೇಂದ್ರ ನಾಯಕ್ ಜರಾಬೆದ ಗ್ರಾಮದ ನಿವಾಸಿ. ಅಲ್ಲದೇ ಬಡೌಗಾನ್ ಗ್ರಾಮದ ಕಮಲ ಪತ್ರ ಎಂಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ರಾಜೇಂದ್ರ ಚೆನ್ನೈ ಮೂಲದ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಅಲ್ಲದೇ ಅಲ್ಲಿಯೂ ಸಹ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದ. ಊರಿಗೆ ಬಂದಾಗಲೆಲ್ಲಾ ಕಮಲಾಳ ಮನೆಗೆ ಭೇಟಿ ನೀಡುತ್ತಿದ್ದ.

    ಕಳೆದ ಮಂಗಳವಾರ ಮತ್ತು ಬುಧವಾರವೂ ಕಮಲಾಳ ಮನೆಗೆ ತೆರಳಿದ್ದ. ಈ ವೇಳೆ ಚೆನ್ನೈ ಮಹಿಳೆಯೊಂದಿಗೆ ಮಾತನಾಡುತ್ತಿರುವಾಗ ಕಮಲಾ ಕೈಗೆ ಸಿಕ್ಕಿಬಿದ್ದಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಿಗೆದ್ದ ಕಮಲ ಮನೆಯಲ್ಲಿ ಮಲಗಿದ್ದ ರಾಜೇಂದ್ರನ ಮರ್ಮಾಂಗವನ್ನು ಕತ್ತರಿಸಿ ಸೇಡು ತೀರಿಸಿಕೊಂಡಿದ್ದಳು.

    ಗಂಭೀರವಾಗಿ ಗಾಯಗೊಂಡಿದ್ದ ರಾಜೇಂದ್ರನನ್ನು ಮೊದಲು ಹರಿಚಂದಾಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ನಂತರ ಕೆಯೊಂಜ್ಹಾರ್ ಜಿಲ್ಲಾಸ್ಪತ್ರೆಗೆ ರವಾನಿಸಿದ್ದರು. ಆದರೆ  ಹೆಚ್ಚಿನ ಚಿಕಿತ್ಸೆಗಾಗಿ ಕಟಕ್‍ನ ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ಯುವಕನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪ್ರೇಮಿ ಜೊತೆ ಸಿಕ್ಕಿಬಿದ್ದ ಪತಿಗೆ ಪತ್ನಿಯಿಂದ ಚಪ್ಪಲಿ ಏಟು

    ಪ್ರೇಮಿ ಜೊತೆ ಸಿಕ್ಕಿಬಿದ್ದ ಪತಿಗೆ ಪತ್ನಿಯಿಂದ ಚಪ್ಪಲಿ ಏಟು

    ಲಕ್ನೋ: ಪತಿಯೊಬ್ಬ ತನ್ನ ಪ್ರೇಮಿ ಜೊತೆ ಏಕಾಂತದಲ್ಲಿದ್ದಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಪತ್ನಿಯಿಂದ ಚಪ್ಪಲಿ ಏಟು ತಿಂದಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರ್ ಜಿಲ್ಲೆಯಲ್ಲಿ ನಡೆದಿದೆ.

    ಆರೋಪಿ ಪತಿ ಜಿಲ್ಲೆಯ ಶಾಹಗಂಜ್ ಪಟ್ಟಣದ ಗಡಿಯ ನಿವಾಸಿಯಾಗಿದ್ದು, ಈತ ಗ್ರಾಮದ ಮುಖ್ಯಸ್ಥನಾಗಿ ಮಹಿಳೆ ಜೊತೆ ಸಂಬಂಧ ಇಟ್ಟುಕೊಂಡಿದ್ದನು. ಅನೇಕ ದಿನಗಳಿಂದ ಇಬ್ಬರ ಮಧ್ಯೆ ಸಂಬಂಧವಿತ್ತು. ಅಷ್ಟೇ ಅಲ್ಲದೇ ಪತಿ ತನ್ನ ಪ್ರೇಮಿಗಾಗಿ ಒಂದು ಮನೆಯನ್ನು ಕೂಡ ನೀಡಿದ್ದನು. ಆದರೆ ಪತಿಯ ಇನ್ನೊಂದು ಸಂಬಂಧದ ಬಗ್ಗೆ ಪತ್ನಿಗೆ ಅನುಮಾನ ಬಂದಿದೆ.

    ಶುಕ್ರವಾರ ರಾತ್ರಿ ಪತಿ ಆಕೆಯ ಮನೆಗೆ ಹೋಗಿದ್ದಾನೆ. ಇದನ್ನು ಗಮಿಸಿದ ಪತ್ನಿ ಕುಟುಂಬಸ್ಥರ ಜೊತೆ ಪತಿಯನ್ನು ಹಿಂಬಾಲಿಸಿದ್ದು, ಏಕಾಏಕಿ ಮನೆಗೆ ನುಗ್ಗಿದ್ದಾರೆ. ಈ ವೇಳೆ ಪತಿ ತನ್ನ ಲವ್ವರ್ ಜೊತೆ ಇದ್ದದ್ದನ್ನು ಕಂಡು ಆಕ್ರೋಶಗೊಂಡ ಪತ್ನಿ ತನ್ನ ಚಪ್ಪಲಿ ತೆಗೆದುಕೊಂಡು ಹಿಗ್ಗಮುಗ್ಗಾ ಥಳಿಸಿದ್ದಾರೆ.

    ಕುಟುಂಬಸ್ಥರು ಕೂಡ ಇಬ್ಬರನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಗಾಯಗೊಂಡ ಪತಿ ಅವರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಇತ್ತ ಪತ್ನಿ ಮತ್ತು ಕುಟುಂಬಸ್ಥರ ಕೈಗೆ ಸಿಕ್ಕಿಬಿದ್ದ ಪ್ರಿಯತಮೆಗೆ ಥಳಿಸಿ ಅವಾಚ್ಯ ಪದಗಳಿಂದ ಬೈದು ಸಾಮಾನುಗಳ ಜೊತೆ ಆಕೆಯನ್ನು ಮನೆಯಿಂದ ಹೊರ ಹಾಕಿ ಮನೆಗೆ ಬೀಗ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಫೈಲ್‍ನಲ್ಲಿ ಮಚ್ಚು ತಂದು ಮಹಿಳಾ ಸಿಬ್ಬಂದಿ ಮೇಲೆ ಬೀಸ್ದ- ಕೆಪಿಎಸ್‍ಸಿಯಲ್ಲಿ ಹರಿಯಿತು ನೆತ್ತರು!

    ಫೈಲ್‍ನಲ್ಲಿ ಮಚ್ಚು ತಂದು ಮಹಿಳಾ ಸಿಬ್ಬಂದಿ ಮೇಲೆ ಬೀಸ್ದ- ಕೆಪಿಎಸ್‍ಸಿಯಲ್ಲಿ ಹರಿಯಿತು ನೆತ್ತರು!

    ಬೆಂಗಳೂರು: ಸಿಲಿಕಾನ್ ಸಿಟಿಯ ಉದ್ಯೋಗ ಸೌಧವಾದ ಕೆಪಿಎಸ್‍ಸಿ ಕಚೇರಿಯಲ್ಲಿ ಸೈಕೊ ನೌಕರನೊಬ್ಬ ಮಹಿಳಾ ಸಿಬ್ಬಂದಿಗೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟೆನ ನಡೆದಿದೆ.

    ನಟರಾಜ್, ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಕ್ಲರ್ಕ್. ಜಯಲಕ್ಷ್ಮಿ ಕ್ಲರ್ಕ್ ನಿಂತ ಹಲ್ಲೆ ಒಳಗಾದ ಮಹಿಳಾ ಸಿಬ್ಬಂದಿ. ಸೋಮವಾರ ಕೆಪಿಎಸ್‍ಸಿ ಕಚೇರಿಯಲ್ಲಿ ಮಧ್ಯಾಹ್ನ ಸುಮಾರು 12 ಘಂಟೆ ವೇಳೆಗೆ ಮಹಿಳಾ ಸಿಬ್ಬಂದಿ ಮೇಲೆಯೇ ಕ್ಲರ್ಕ್ ಮಚ್ಚು ಬೀಸಿದ್ದಾನೆ. ಪರಿಣಾಮ ಇಡೀ ಉದ್ಯೋಗಸೌಧ ಬೆಚ್ಚಿಬಿದ್ದಿತ್ತು.

    ಜಯಲಕ್ಷ್ಮಿ ಅವರು ಕೆಪಿಎಸ್‍ಸಿಯಲ್ಲಿ ಸೀನಿಯರ್ ಅಸಿಸ್ಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದರು. ಇಲ್ಲೇ ಕೆಲಸ ಮಾಡುತ್ತಿದ್ದ ಕ್ಲರ್ಕ್ ನಟರಾಜ್, ಈಕೆಯ ಜೊತೆ ಲವ್ವಿಡವ್ವಿ ಶುರು ಮಾಡಿದ್ದಾನೆ. ಇದೇ ವಿಚಾರವಾಗಿ ಜಗಳವಾಗಿ ಜಯಲಕ್ಷ್ಮಿ ಮೇಲೆ ನಟರಾಜ್ ಮಚ್ಚು ಬೀಸಿದ್ದಾನೆ. ಸದ್ಯಕ್ಕೆ ಮಚ್ಚಿನಿಂದ ಹಲ್ಲೆಗೊಳಗಾದ ಜಯಲಕ್ಷ್ಮಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಘಟನೆಯಲ್ಲಿ ಮತ್ತೊಬ್ಬ ಸಿಬ್ಬಂದಿ ರಾಮು ಮೇಲೂ ನಟರಾಜ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಪಕ್ಕದ ರೂಮ್‍ ನಲ್ಲಿದ್ದ ಜಯಲಕ್ಷ್ಮಿ ರಕ್ಷಣೆಗೆ ಬಂದಾಗ ಅವರಿಗೆ ಮಚ್ಚಿನೇಟು ಬಿದ್ದಿದೆ ಎಂದು ರಾಮು ಹೇಳುತ್ತಿದ್ದಾರೆ. ಆದರೆ ಇದು ಪ್ರಕರಣವನ್ನು ತಿರುಚುವ ಕೆಲಸ ಅನ್ನೋ ಮಾತುಗಳು ಕೇಳಿಬರುತ್ತಿದ್ದು, ಅಲ್ಲಿ ನಡೆದಿದ್ದೆ ಬೇರೆಯ ವಿಚಾರವಾಗಿದೆ ಎಂದು ಮೂಲಗಳು ತಿಳಿಸಿವೆ.

    ಮದುವೆಯಾಗಿ ಡಿವೋರ್ಸ್ ಆಗಿದ್ದ ನಟರಾಜ್ ಜಯಲಕ್ಷ್ಮಿ ಜೊತೆ ಸಂಬಂಧ ಇಟ್ಟುಕೊಂಡಿದ್ದನು. ಈ ವಿಚಾರ ಜಯಲಕ್ಷ್ಮಿ ಮನೆಯವರಿಗೆ ಗೊತ್ತಾಗಿ ವಾರ್ನ್ ಮಾಡಿದ್ದರು ಎನ್ನಲಾಗಿದೆ. ಆದ್ದರಿಂದ ನಟರಾಜ್‍ನನ್ನ ಜಯಲಕ್ಷ್ಮಿ ದೂರ ಮಾಡುವುದಕ್ಕೆ ಶುರು ಮಾಡಿದ ಹಿನ್ನೆಲೆಯಲ್ಲಿ ಮಚ್ಚು ಬೀಸಿದ್ದಾನೆ ಎನ್ನಲಾಗಿದೆ. ಸದ್ಯಕ್ಕೆ ಆರೋಪಿ ನಟರಾಜನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv