Tag: ಅಕ್ರಮ ಸಂಬಂಧ

  • ಅಕ್ರಮ ಸಂಬಂಧ ಇಟ್ಕೊಂಡವಳೊಂದಿಗೆ ಮಲಗಿರೋ ವಿಡಿಯೋ ತೋರಿಸಿ ಕಿರುಕುಳ- ಪತ್ನಿಯಿಂದ ದೂರು ದಾಖಲು

    ಅಕ್ರಮ ಸಂಬಂಧ ಇಟ್ಕೊಂಡವಳೊಂದಿಗೆ ಮಲಗಿರೋ ವಿಡಿಯೋ ತೋರಿಸಿ ಕಿರುಕುಳ- ಪತ್ನಿಯಿಂದ ದೂರು ದಾಖಲು

    ಕೊಪ್ಪಳ: ಇಲ್ಲೊಬ್ಬ ಪತಿ ಮಹಾಶಯ ಅಕ್ರಮ ಸಂಬಂಧ ಇಟ್ಟುಕೊಂಡ ಮಹಿಳೆಯೊಂದಿಗಿನ ವಿಡಿಯೋ ತೋರಿಸಿ ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ. ಪತಿಯ ವಿಚಿತ್ರ ನಡವಳಿಕೆಯಿಂದ ಬೇಸತ್ತ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ಈ ಫೊಟೋದಲ್ಲಿರೋ ಭೂಪನ ಹೆಸರು ವೀರಭದ್ರಗೌಡ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ನಿವಾಸಿ. ಈತನಿಗೆ ಕಟ್ಟಿಕೊಟ್ಟ ಹೆಂಡತಿಗಿಂತ ಇಟ್ಕೊಂಡವಳೊಂದಿಗೆ ಜಾಸ್ತಿ ಸರಸವಂತೆ. ಈತ ಅಕ್ರಮ ಸಂಬಂಧ ಹೊಂದಿದ ಮಹಿಳೆಯೊಂದಿಗೆ ಮಲಗಿರೋ ವಿಡಿಯೋ, ಅವಳೊಂದಿಗೆ ಅಸಹ್ಯವಾಗಿ ಮಾತನಾಡುವ ಆಡಿಯೋವನ್ನ ತಂದು ತೋರಿಸಿ ಕಿರುಕುಳ ಕೊಡುತ್ತಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾರೆ.

    2011ರಲ್ಲಿ ವೀರಭದ್ರಗೌಡ ತನ್ನ ಅಕ್ಕನ ಮಗಳಾದ ವಿಶಾಲಾಕ್ಷಿಯನ್ನ ಮದುವೆಯಾಗಿದ್ದ. ಮದುವೆ ಆದ ಕೆಲವು ದಿನಗಳು ಮಾತ್ರ ಪತ್ನಿಯೊಂದಿಗೆ ಚೆನ್ನಾಗಿ ಸಂಸಾರ ಮಾಡಿದ್ದಾನೆ. ಆ ಬಳಿಕ ಈತನ ವಿಚಿತ್ರ ವರಸೆ ಶುರುವಾಗಿದೆ.

    ವೀರಭದ್ರಗೌಡ ಅಕ್ರಮ ಸಂಬಂಧ ಇಟ್ಟುಕೊಂಡವಳೊಂದಿಗೆ ಇರೋದಕ್ಕಾಗಿ ಮೊದಲ ಪತ್ನಿಗೆ ಕಿರುಕುಳ ಕೊಡ್ತಿದ್ದಾನೆ. ಪತ್ನಿಗೆ ಕಿರುಕುಳ ಕೊಟ್ಟರೆ ತನಗೆ ವಿಚ್ಛೇದನ ಕೊಡಬಹುದು ಎಂದು ಈ ರೀತಿ ಮಾಡುತ್ತಿದ್ದಾನೆ ಎನ್ನಲಾಗಿದೆ. ಪತ್ನಿಗೆ ನೀನು ಚೆಂದವಿಲ್ಲ, ಮುದುಕಿ ತರಹ ಇದ್ದೀಯಾ. ನೀನು ನನಗೆ ಡೈವೋರ್ಸ ಕೊಡು ಎಂದು ಹೊಡೆಯೋದು ಬಡಿಯೋದು ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾನೆ ಎಂದು ಆರೋಪಿಸಲಾಗಿದೆ.

    ಇನ್ನು ಒಂದು ತಿಂಗಳಿಂದಲ್ಲೂ ಈತ ಮನೆಗೆ ಬಂದಿಲ್ಲ. ಐದು ವರ್ಷದ ಗಂಡು ಮಗನಿಗೆ ಬೈಯುತ್ತಾನೆ. ಈಚೆಗೆ ಈತನ ತಂದೆಗೆ ಆರಾಮವಿಲ್ಲವೆಂದು ವಿಶಾಲಾಕ್ಷಿ ತಂದೆ ತಾಯಿ ಬಂದರೆ ಅವರನ್ನ ನಿಂಸಿದಿ ಹಲ್ಲೆ ಮಾಡಿದ್ದಾನೆ. ಆಗ ಬಿಡಿಸೋಕೆ ಹೋದ ವಿಶಾಲಾಕ್ಷಿ ಅಕ್ಕ ಶಶಿಕಲಾ ಮೇಲೂ ಹಲ್ಲೆ ಮಾಡಿ, ಅವಳನ್ನ ಹಿಡಿದು ಎಳದಾಡಿದ್ದಾನೆ. ಇದರಿಂದ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ಕೊಡುತ್ತಿರೋ ಪತಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೊಂದ ಮಹಿಳೆ ದೂರು ನೀಡಿದ್ದಾರೆ.

     

  • ಬಹಿರ್ದೆಸೆಗೆಂದು ಕರೆದುಕೊಂಡು ಹೋಗಿ 5ರ ಬಾಲಕಿಯನ್ನ ಸಜೀವವಾಗಿ ದಹಿಸಿದ್ಳು!

    ಬಹಿರ್ದೆಸೆಗೆಂದು ಕರೆದುಕೊಂಡು ಹೋಗಿ 5ರ ಬಾಲಕಿಯನ್ನ ಸಜೀವವಾಗಿ ದಹಿಸಿದ್ಳು!

    ಬೆಳಗಾವಿ: ಐದು ವರ್ಷದ ಪುಟ್ಟ ಬಾಲಕಿಯನ್ನು ಸಂಬಂಧಿ ಮಹಿಳೆಯೇ ಸಜೀವವಾಗಿ ದಹಿಸಿದ ಆಘಾತಕಾರಿ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಬೆಳಗಾವಿ ಜಿಲ್ಲೆಯ ಹಿರೇಬೆಳಕಟ್ಟಿ ಗ್ರಾಮದಲ್ಲಿ ಈ ಹೀನ ಕೃತ್ಯ ನಡೆದಿದೆ. ಮೃತ ದುರ್ದೈವಿ ಬಾಲಕಿಯನ್ನು ರಾಜೇಶ್ವರಿ(5) ಎಂದು ಗುರುತಿಸಲಾಗಿದೆ.

    ಬಹಿರ್ದೆಸೆಗೆ ಹೋಗಿ ಬರೋಣ ಅಂತಾ ಬಾಲಕಿಯ ಸಂಬಂಧಿ ನಿರ್ಮಲಾ(32) ಹತ್ತಿ ಹೊಲಕ್ಕೆ ಕರೆದೊಯ್ದಿದ್ದಳು. ಅಲ್ಲಿ ಬಾಲಕಿ ಕುಳಿತಿದ್ದ ವೇಳೆ ತಲೆ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ.

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಬಾಲಕಿಯನ್ನು ಸಜೀವವಾಗಿ ದಹಿಸಿದ್ದಾಳೆ ಅಂತ ತಿಳಿದುಬಂದಿದೆ. ಸದ್ಯ ಆರೋಪಿ ನಿರ್ಮಲಾಳನ್ನು ದೊಡ್ಡವಾಡ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.

  • ಪಿಎಸ್‍ಐ ವಿರುದ್ಧ ಅಕ್ರಮ ಸಂಬಂಧದ ಆರೋಪ- ಮೊದಲ ಪತ್ನಿಯಿಂದ ಮನೆ ಮುಂದೆ ಧರಣಿ

    ಪಿಎಸ್‍ಐ ವಿರುದ್ಧ ಅಕ್ರಮ ಸಂಬಂಧದ ಆರೋಪ- ಮೊದಲ ಪತ್ನಿಯಿಂದ ಮನೆ ಮುಂದೆ ಧರಣಿ

    ಹಾವೇರಿ: ಪಿಎಸ್‍ಐ ವಿರುದ್ಧ ಅಕ್ರಮ ಸಂಬಂಧದ ಆರೋಪ ಮಾಡಿ ಮೊದಲ ಪತ್ನಿ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಮೃತ್ಯುಂಜಯ ನಗರದಲ್ಲಿ ನಡೆದಿದೆ.

    ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ಪಿಎಸ್‍ಐ ಟಿ.ಮಂಜಣ್ಣ ವಿರುದ್ಧ ಅಕ್ರಮ ಸಂಬಂಧದ ಆರೋಪ ಮಾಡಲಾಗಿದೆ. ಮಂಜಣ್ಣ ಅವರ ಮೊದಲ ಪತ್ನಿ ಸ್ವಪ್ನಾ ಈ ಆರೋಪ ಮಾಡಿದ್ದು, ಮಕ್ಕಳು ಮತ್ತು ಸಂಬಂಧಿಕರ ಸಮೇತ ತನ್ನ ಗಂಡನ ಮನೆ ಮುಂದೆ ಧರಣಿ ಕುಳಿತಿದ್ದಾರೆ.

    ಪಿಎಸ್‍ಐ ಮಂಜಣ್ಣ ಸ್ವಪ್ನಾ ಅವರ ಆರೋಪ ಅಲ್ಲಗಳೆದಿದ್ದಾರೆ. ಮನೆಗೆ ಸಂಬಂಧಿಕರು ಬಂದಿದ್ದರೂ ಅಕ್ರಮ ಸಂಬಂಧದ ಪಟ್ಟವನ್ನು ಸ್ವಪ್ನಾ ಕಟ್ಟುತ್ತಿದ್ದಾಳೆ. ಕೋರ್ಟಿನಲ್ಲಿ ವಿಚ್ಛೇದನ ಆಗಿದೆ ಹಾಗೂ ಕೆವಿಟ್ ಕೂಡ ಸಲ್ಲಿಸಿದ್ದೇನೆ. ಆದರೂ ಪದೇ ಪದೇ ಸ್ವಪ್ನಾ ಗಲಾಟೆ ಮಾಡುತ್ತಿದ್ದಾಳೆ ಎಂದು ಪಿಎಸ್‍ಐ ತಿಳಿಸಿದ್ದಾರೆ.

    ರಾಣೇಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಸಿಪಿಐ ಮಂಜುನಾಥ ನಲವಾಗಿಲ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

     

     

  • ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ

    ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ

    ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಬೆಂಗಳೂರಿನ ಎಚ್‍ಎಎಲ್ ಬಳಿಯಲ್ಲಿ ಈ ಘಟನೆ ನಡೆದಿದ್ದು, ಅಂಥೋಣಿ ಆತ್ಮಹತ್ಯೆ ಮಾಡಿಕೊಂಡ ಪತಿ.

    ಪತ್ನಿ ಪ್ರಭಾ ಅನೈತಿಕ ಸಂಬಂಧ ಹೊಂದಿದ್ದಳು. ಪತಿ ಅಂಥೋಣಿ ಕೆಲಸಕ್ಕೆಂದು ಹೊರಗಡೆ ಹೋದಾಗ ಪಕ್ಕದ ಮನೆಯವನ ಜೊತೆ ಸಂಬಂಧ ಬೆಳೆಸುತ್ತಿದ್ದಳು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ಬರೆದಿಟ್ಟಿದ್ದಾನೆ.

    ಒಂದು ದಿನ ಇದ್ದಕ್ಕಿದ್ದಂತೆ ಗಂಡ ಮನೆಗೆ ಬಂದಾಗ ರೆಡ್ ಹ್ಯಾಂಡ್ ಆಗಿ ಪ್ರಭಾ ಸಿಕ್ಕಿಬಿದ್ದಿದ್ದಳು. ಹೀಗೆ ಸಿಕ್ಕಿಬಿದ್ದ ಬಳಿಕ ಪತಿ ಅಂಥೋಣಿ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ನಂತ್ರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಎಚ್‍ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಟ್ಟಿಕೊಂಡವನು 4 ವರ್ಷದಿಂದ ಮಲಗದ್ದಕ್ಕೆ ಕೊಲೆ ಮಾಡ್ಸಿದ್ಳು!

    ಕಟ್ಟಿಕೊಂಡವನು 4 ವರ್ಷದಿಂದ ಮಲಗದ್ದಕ್ಕೆ ಕೊಲೆ ಮಾಡ್ಸಿದ್ಳು!

    ಬೆಂಗಳೂರು: ಮದುವೆಯಾದ ಗಂಡ ತನ್ನ ಜೊತೆಗೆ 4 ವರ್ಷದಿಂದ ಮಲಗದೇ ಇದ್ದಿದ್ದಕ್ಕೆ ಆತನನ್ನೇ ಕೊಲೆ ಮಾಡಿದ್ದ ಪತ್ನಿ ಈಗ ಅರೆಸ್ಟ್ ಆಗಿದ್ದಾಳೆ.

    ಪತಿ ಮಧುಸೂಧನ್ ಕೊಲೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಪತ್ನಿ ನೀಲಾಳನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಈ ಕೃತ್ಯಕ್ಕೆ ಸಹಕಾರ ನೀಡಿದ ಆರೋಪದಡಿ ಪ್ರದೀಪ್, ರಂಜಿತ್, ಹರಿಪ್ರಸಾದ್ ರನ್ನು ಪೊಲೀಸರು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ನೀಲಾಳಿಗೆ ಪ್ರದೀಪ್ ಎಂಬಾತನ ಜೊತೆ ಅಕ್ರಮ ಸಂಬಂಧವಿತ್ತು. ಹೀಗಾಗಿ ಗಂಡ ಮಧುಸೂಧನ್ ಮುಗಿಸಿಲು ಪ್ಲಾನ್ ಮಾಡಿದ್ದಳು. ಅದರಂತೆ ಅಕ್ಟೋಬರ್ 12 ರ ರಾತ್ರಿ ಮಧುಸೂಧನ್ ನನ್ನ ಕ್ಯಾಂಟರ್ ನಲ್ಲಿ ಪ್ರದೀಪ್ ಕರೆದೊಯ್ದಿದ್ದ. ದಾರಿ ಮಧ್ಯೆ ಸ್ನೇಹಿತರಾದ ರಂಜಿತ್ ಮತ್ತು ಹರಿಪ್ರಸಾದನನ್ನು ಕ್ಯಾಂಟರ್ ಗೆ ಹತ್ತಿಸಿಕೊಂಡಿದ್ದ ಪ್ರದೀಪ್ ಮಧುಸೂಧನ್ ಗೆ ಚೆನ್ನಾಗಿ ಮದ್ಯ ಕುಡಿಸಿದ್ದ.

    ರಾಜ್ ಕುಮಾರ್ ಸಮಾಧಿ ಬಳಿ ಕ್ಯಾಂಟರ್ ನಿಲ್ಲಿಸಿ ಪ್ರದೀಪ್ ಎಲ್ಲರ ಜೊತೆ ಮಲಗೋಣ ಎಂದು ಹೇಳಿದ್ದಾನೆ. ಮಧುಸೂಧನ್ ಮಲಗುತ್ತಿದ್ದ ಹಾಗೆ ಆರೋಪಿಗಳು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಬಳಿಕ ಕೆಂಗೇರಿ ಬಳಿಯ ರಾಜಕಾಲುವೆಗೆ ಶವ ಎಸೆದು ಪರಾರಿಯಾಗಿದ್ದರು.

    ಪ್ರಿಯತಮೆ ನೀಲಾಳಿಗೆ ಪ್ರದೀಪ್ ನಿನ್ನ ಗಂಡನನ್ನು ಕೊಲೆ ಮಾಡಿದ್ದೇವೆ ಎಂದು ಕರೆ ಮಾಡಿ ವಿಚಾರ ತಿಳಿಸಿದ್ದ. ಮರುದಿನ ರಾಜಗೋಪಾಲನಗರ ಪೊಲೀಸ್ ಠಾಣೆಗೆ ಹೋಗಿದ್ದ ನೀಲಾ ಗಂಡ ಕಾಣಿಸುತ್ತಿಲ್ಲ ಎಂದು ನಾಪತ್ತೆ ದೂರು ನೀಡಿದ್ದಳು. ಆರೋಪಿಗಳ ಜಾಡು ಹಿಡಿದ ಪೊಲೀಸರು ಈಗ ನಾಲ್ವರನ್ನು ಬಂಧಿಸಿದ್ದಾರೆ.

    ವಿಚಾರಣೆ ವೇಳೆ ನನ್ನ ಗಂಡ ನಾಲ್ಕು ವರ್ಷದಿಂದ ಜೊತೆಯಲ್ಲಿ ಮಲಗುತ್ತಿರಲಿಲ್ಲ. ಹೀಗಾಗಿ ಕೊಲೆ ಮಾಡಿಸಿದ್ದೇನೆ ಎಂದು ನೀಲಾ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ.

  • ಅನೈತಿಕ ಸಂಬಂಧಕ್ಕೆ ಕೊಲೆ: ಅಂಬಾಜಿ ದುರ್ಗ ಬೆಟ್ಟದಲ್ಲಿ ಪತ್ತೆಯಾದ ಶವದ ಡಿಎನ್‍ಎ ಪರೀಕ್ಷೆಗೆ ಮುಂದಾದ ಪೊಲೀಸ್ರು!

    ಅನೈತಿಕ ಸಂಬಂಧಕ್ಕೆ ಕೊಲೆ: ಅಂಬಾಜಿ ದುರ್ಗ ಬೆಟ್ಟದಲ್ಲಿ ಪತ್ತೆಯಾದ ಶವದ ಡಿಎನ್‍ಎ ಪರೀಕ್ಷೆಗೆ ಮುಂದಾದ ಪೊಲೀಸ್ರು!

    ಚಿಕ್ಕಬಳ್ಳಾಪುರ: ಪತ್ನಿ, ಪ್ರಿಯಕರ ಮತ್ತು ಪ್ರಿಯಕರನ ತಾಯಿಯನ್ನು ಪತಿಯೇ ಹತ್ಯೆ ಮಾಡಿದ್ದಾನೆ ಎನ್ನುವ ಸಂಶಯಾಸ್ಪದ ಪ್ರಕರಣದಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಈ ಶವ ನಾಪತ್ತೆಯಾಗಿರುವ ಶ್ರೀನಾಥ್‍ ನದ್ದಾ ಎನ್ನುವ ಪ್ರಶ್ನೆ ಎದ್ದಿದೆ.

    ಹೌದು. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಉಪ್ಪಾರಪೇಟೆ ಬಳಿಯ ಅಂಬಾಜಿ ದುರ್ಗ ಬೆಟ್ಟದಲ್ಲಿ ಜುಲೈ 26 ರಂದು ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಅಪರಿಚಿತ ವ್ಯಕ್ತಿಯನ್ನ ಕೊಲೆ ಮಾಡಿ ಗೋಣಿ ಚೀಲದಲ್ಲಿ ಹಾಕಿ ಅಂಬಾಜಿದುರ್ಗ ಬೆಟ್ಟದಲ್ಲಿ ಎಸೆಯಲಾಗಿತ್ತು. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಇದೀಗ ಹತ್ಯಾ ಪ್ರಕರಣ ಬಯಲಾದ ಬೆನ್ನಲ್ಲೇ, ಸಿಕ್ಕಿರುವ ಅಪರಿಚಿತ ಶವ ಈ ಪ್ರಕರಣದಲ್ಲಿ ನಾಪತ್ತೆಯಾಗಿರುವ ಶ್ರೀನಾಥ್ ನದ್ದೇನಾ ಅನ್ನೋ ಅನುಮಾನಗಳು ದಟ್ಟವಾಗಿ ಮೂಡಿವೆ. ಕಾರಣ ಜುಲೈ 17 ರಂದು ಶ್ರೀನಾಥ್ ತಾಯಿ ತೀರಿಕೊಂಡ 3 ದಿನ ಅಂದರೆ ಜುಲೈ 20 ರಂದು, ಮೂರು ದಿನದ ಹಾಲೆರೆಯುವ ಕಾರ್ಯ ಮುಗಿಸಿಕೊಂಡು ಹೋಗಿದ್ದ ಶ್ರೀನಾಥ್ ಅಂದಿನಿಂದ ನಾಪತ್ತೆಯಾಗಿದ್ದ.

    ಇದನ್ನೂ ಓದಿ: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮೂವರನ್ನ ಕೊಂದನಾ ಪತಿ? – ಪೊಲೀಸರಿಗೆ ಇನ್ನೂ ಸಿಕ್ತಿಲ್ಲ ಸ್ಪಷ್ಟ ಮಾಹಿತಿ

    ಇನ್ನೂ ಜುಲೈ 26 ರಂದು ಪತ್ತೆಯಾದ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿ, ಕೊಲೆಯಾಗಿ 5-6 ದಿನಗಳು ಆಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿತ್ತು. ಈಗ ಈ ಹತ್ಯೆ ಪ್ರಕರಣದ ಬಯಲಾದ ಬೆನ್ನಲ್ಲೇ, ದಿನಾಂಕಗಳ ನಡುವಿನ ಅಂತರ ಹೋಲಿಕೆ ಆಗುತ್ತಿರುವ ಕಾರಣ ಪೊಲೀಸರಿಗೆ ಕೂಡ ಈ ಬಗ್ಗೆ ಅನುಮಾನ ಮೂಡಿದ್ದು, ಈ ಬಗ್ಗೆ ಮೃತದೇಹದ ಡಿಎನ್‍ಎ ಪರೀಕ್ಷೆಗೆ ಮುಂದಾಗಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕಾಡುಗೋಡಿ ಪೊಲೀಸರು ಈ ದಿಕ್ಕಿನಲ್ಲೂ ಪ್ರಕರಣದ ತನಿಖೆಯನ್ನ ಚುರುಕುಗೊಳಿಸಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅಂದಹಾಗೆ ಪತಿ ವೆಂಕಟರೆಡ್ಡಿ ಎಂಬಾತ ತನ್ನ ಪತ್ನಿ ಪ್ರೇಮಾ ಶ್ರೀನಾಥ್ ಜೊತೆ ಪರಾರಿಯಾಗಿದ್ದಕ್ಕೆ ಪತ್ನಿ ಪ್ರೇಮಾ, ಪ್ರಿಯಕರ ಶ್ರೀನಾಥ್ ಹಾಗೂ ಆತನ ತಾಯಿ ಭಾಗ್ಯಮ್ಮಳಿಗೆ ಕಿರುಕುಳ ಕೊಟ್ಟು ಹತ್ಯೆ ಮಾಡಿದ್ದಾನೆ ಎಂಬ ಆರೋಪಕ್ಕೆ ಗುರಿಯಾಗಿದ್ದಾನೆ. ಈ ಸಂಬಂಧ ಆರೋಪಿ ವೆಂಕಟರೆಡ್ಡಿಯನ್ನು ಕಾಡುಗೋಡಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

  • ವಧುವಿನ ಅಕ್ರಮ ಸಂಬಂಧದ ವಿಡಿಯೋವನ್ನ ಮದುವೆ ಅತಿಥಿಗಳ ಮುಂದೆ ಪ್ಲೇ ಮಾಡಿದ ವರ

    ವಧುವಿನ ಅಕ್ರಮ ಸಂಬಂಧದ ವಿಡಿಯೋವನ್ನ ಮದುವೆ ಅತಿಥಿಗಳ ಮುಂದೆ ಪ್ಲೇ ಮಾಡಿದ ವರ

    ಸಿಂಗಪೂರ: ವರನೊಬ್ಬ ತಾನು ಮದುವೆ ಆಗಬೇಕಿದ್ದ ಹುಡುಗಿಯ ಅಕ್ರಮ ಸಂಬಂಧದ ವಿಡಿಯೋವನ್ನ ಮದುವೆಗೆ ಬಂದಿದ್ದ ಅತಿಥಿಗಳ ಮುಂದೆ ಪ್ಲೇ ಮಾಡಿ ಸೇಡು ತೀರಿಸಿಕೊಂಡಿದ್ದಾನೆ.

    ಹೌದು. ಸಿಂಗಪೂರ್‍ನಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಬೇರೊಬ್ಬ ವ್ಯಕ್ತಿಯ ಜೊತೆ ವಧು ಖಾಸಗಿ ಸಮಯವನ್ನು ಕಳೆಯುತ್ತಿದ್ದ ದೃಶ್ಯಗಳನ್ನ ನೋಡಿ ಅತಿಥಿಗಳು ದಂಗಾಗಿದ್ರು. ಮೊದಲಿಗೆ ವಧು ಹಾಗೂ ವರನ ಈವರೆಗಿನ ರಿಲೇಷನ್‍ಶಿಪ್ ಬಗ್ಗೆ ವಿಡಿಯೋ ಪ್ಲೇ ಆಗುತ್ತಿತ್ತು. ಇದ್ದಕ್ಕಿದ್ದಂತೆ ಆ ದೃಶ್ಯಗಳು ನಿಂತು, ಮಹಿಳೆ ತನ್ನ ಬೇರೊಬ್ಬ ಲವರ್ ಜೊತೆ ಹೋಟೆಲ್ ರೂಮಿಗೆ ಹೋಗುವ ದೃಶ್ಯ ಪ್ಲೇ ಆಗಿದೆ. ನಂತರ ಆ ಇಬ್ಬರೂ ಸಲಿಗೆಯಿಂದ ಸಮಯ ಕಳೆದಿದ್ದಾರೆ ಎಂದು ಇಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

    ಈ ವಿಡಿಯೋ ಮದುವೆ ಸಮಾರಂಭದ ವೇಳೆ ಪ್ಲೇ ಆಗುತ್ತಿದ್ದಂತೆ ಅವಮಾನದಿಂದ ವಧು ರೂಮಿನಿಂದ ಪರಾರಿಯಾಗಿದ್ದಾಳೆ ಎಂದು ವರದಿಯಾಗಿದೆ.

    ಶ್ರೀಮಂತ ಉದ್ಯಮಿಯಾಗಿದ್ದ ವರ ತಾನು ಮದುವೆಯಾಗೋ ಯುವತಿ ಬಗ್ಗೆ ತಿಳಿದುಕೊಳ್ಳಲು ಖಾಸಗಿ ಡಿಟೆಕ್ಟೀವ್‍ವೊಬ್ಬರನ್ನ ನೇಮಿಸಿಕೊಂಡಿದ್ದ. ಯಾಕಂದ್ರೆ ಆಕೆ ತನಗೆ ಮೋಸ ಮಾಡುತ್ತಿದ್ದಾಳೆ ಎಂದು ಆತ ಅನುಮಾನಗೊಂಡಿದ್ದ.

    ಅಜಾಕ್ಸ್ ಇನ್ವೆಸ್ಟಿಗೇಷನ್ ಅಂಡ್ ಸೆಕ್ಯೂರಿಟಿ ಸರ್ವೀಸಸ್‍ನ ಡೆಟೆಕ್ಟೀವ್ ಝುವೋ ಈ ಬಗ್ಗೆ ಮಾತನಾಡಿ, ಆ ಯುವತಿ ಬೇರೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿರಬಹುದು ಎಂಬ ಬಗ್ಗೆ ನಾನು ನೀಡಿದ ಮಾಹಿತಿಯನ್ನ ಗ್ರಾಹಕ ಮದುವೆ ಕ್ಯಾನ್ಸಲ್ ಮಾಡಲು ಬಳಸಿಕೊಳ್ತಾರೆ ಎಂದುಕೊಂಡಿದ್ದೆ. ಆದ್ರೆ ನನಗೆ ಮದುವೆಗೆ ಆಹ್ವಾನ ನೀಡಿದಾಗ ಶಾಕ್ ಆಗಿತ್ತು ಎಂದಿದ್ದಾರೆ.

    ನಾನು 6 ವಾರಗಳವರೆಗೆ ಯುವತಿಯ ಮೇಲೆ ಕಣ್ಣಿಟ್ಟು ನಂತರ ಈ ವಿಷಯವನ್ನ ಗ್ರಾಹಕನಿಗೆ ತಿಳಿಸಿದ್ದೆ. ಮದುವೆ ಸಮಾರಂಭದಲ್ಲಿ ವಿಡಿಯೋ ನೋಡಿದಾಗ ವರನ ಉದ್ದೇಶದ ಬಗ್ಗೆ ಗೊತ್ತಾಯ್ತು. ಸಾಕಷ್ಟು ಅತಿಥಿಗಳ ಎದುರಲ್ಲಿ ವಿಡಿಯೋ ಪ್ಲೇ ಮಾಡಲಾಯ್ತು ಎಂದು ಝುವೋ ಹೇಳಿದ್ದಾರೆ.

  • ಪ್ರಿಯಕರನನ್ನು ಹತ್ಯೆ ಮಾಡಿ ಫ್ರಿಡ್ಜ್ ನಲ್ಲಿ ಬಚ್ಚಿಟ್ಟ ವಿವಾಹಿತ ಮಹಿಳೆ ಅರೆಸ್ಟ್

    ಪ್ರಿಯಕರನನ್ನು ಹತ್ಯೆ ಮಾಡಿ ಫ್ರಿಡ್ಜ್ ನಲ್ಲಿ ಬಚ್ಚಿಟ್ಟ ವಿವಾಹಿತ ಮಹಿಳೆ ಅರೆಸ್ಟ್

    ಲಕ್ನೋ: ಸಹೋದರನ ಜೊತೆಗೂಡಿ ಪ್ರಿಯಕರನನ್ನು ಹತ್ಯೆ ಮಾಡಿ ಮನೆಯ ಫ್ರಿಡ್ಜ್ ನಲ್ಲಿ ಬಚ್ಚಿಟ್ಟು ನಂತರ ಹತ್ತಿರದ ರೈಲ್ವೇ ಹಳಿಯಲ್ಲಿ ಎಸೆದ ವಿವಾಹಿತ ಮಹಿಳೆಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

    ಸಹರಾನ್ಪೂರದ ಇಂದಿರಾನಗರದ ನಿವಾಸಿ ಅತೀಶ್ ಕೊಲೆಯಾದ ವ್ಯಕ್ತಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇರಣಾ ಮತ್ತು ಆಕೆಯ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಸೆ.24ರಂದು ಈ ಹತ್ಯೆ ನಡೆದಿದ್ದು ಸೆ.26ರಂದು ಮೃತ ದೇಹ ದೊರೆತಿತ್ತು ಎಂದು ಸಹರಾನ್ಪೂರ್ ಜಿಲ್ಲಾ ಪೊಲೀಸ್ ಅಧಿಕಾರಿ ಪ್ರತಾಪ್ ಸಿಂಗ್ ಹೇಳಿದ್ದಾರೆ.

    ಏನಿದು ಪ್ರಕರಣ?
    ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಸಹರಾನ್ಪೂರ್‍ದ ಶಿವಪುರಿ ಶಂಶಾನ್‍ಘಾಟ್ ಬಳಿಯ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು. ಹಳಿಯಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಆರಂಭದಲ್ಲಿ ಪೊಲೀಸರು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯ ಫಲಿತಾಂಶ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಎಂದು ವರದಿ ನೀಡಿತ್ತು. ಕೊಲೆಯಾದ ವ್ಯಕ್ತಿ ಅತೀಶ್ ಬೆಳಕಿಗೆ ಬಂದ ನಂತರ ಪ್ರೇರಣಾ ಎಸ್‍ಎಸ್‍ಪಿ ಕಚೇರಿಗೆ ನೇರವಾಗಿ ತೆರಳಿ ಈ ಕೊಲೆಯನ್ನು ನಾನೇ ಮಾಡಿದ್ದೇನೆ ಎಂದು ತಿಳಿಸಿದ್ದಳು.

    ಪ್ರೇರಣಾ ಹೇಳಿದ್ದು ಏನು?
    ನಾನು ವಿವಾಹಿತ ಮಹಿಳೆಯಾಗಿದ್ದು, 6 ತಿಂಗಳ ಹಿಂದೆ ಗಂಡನ ಮನೆಯನ್ನು ಬಿಟ್ಟು ತವರು ಮನೆ ಸೇರಿದ್ದೆ. ಮದುವೆಯಾಗುವ ಮೊದಲು ನನಗೆ ಮತ್ತು ಅತೀಶ್ ನಡುವೆ ಅಕ್ರಮ ಸಂಬಂಧ ಇತ್ತು. ಸಮೀಪದ ಮನೆಯಲ್ಲಿ ವಾಸವಾಗಿದ್ದ ಈತ ನಾನು ತವರು ಮನೆಗೆ ಬಂದ ಬಳಿಕವೂ ಸೆಕ್ಸ್ ಗೆ ಒತ್ತಾಯಿಸುತ್ತಿದ್ದ. ನಾವಿಬ್ಬರೂ ಕೆಲವೊಮ್ಮೆ ರೆಡ್‍ಹ್ಯಾಂಡ್ ಗೆ ಸಿಕ್ಕಿಬಿದ್ದಿದ್ವಿ. ಇಷ್ಟಾಗ್ಯೂ ಆತ ಪ್ರತಿ ದಿನ ನೀನು ನನಗೆ ಸುಖ ಕೊಡಬೇಕು ಎಂದು ಒತ್ತಾಯಿಸುತ್ತಿದ್ದ.

    ಈತನ ಈ ವಿಚಿತ್ರ ಬೇಡಿಕೆಯಿಂದ ನಾನು ರೋಸಿ ಹೋಗಿದ್ದೆ. ನಮ್ಮಿಬ್ಬರ ಸಂಬಂಧವನ್ನು ಮುಕ್ತಾಯಗೊಳಿಸುವ ಸಲುವಾಗಿ ಸೆ.24 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತನನ್ನು ಕರೆದು, ಇಲ್ಲಿಯವರೆಗೆ ನಡೆದಿದ್ದನ್ನು ಮರೆತು ಬಿಡು ಎಂದು ನಾನು ಮನವಿ ಮಾಡಿ ಬೇಡಿಕೊಂಡೆ. ಈ ವೇಳೆ ನನ್ನ ಸಹೋದರ ಬಂದ. ಈ ವೇಳೆ ಇವರಿಬ್ಬರ ಮಧ್ಯೆ ಜಗಳ ಪ್ರಾರಂಭವಾಯಿತು.

    ಗಲಾಟೆ ಜೋರಾಗಿ ನನ್ನ ಸಹೋದರ ದುಪ್ಪಟ್ಟದಿಂದ ಆತನನ್ನು ಕೊಲೆ ಮಾಡಿದ. ಬಳಿಕ ಆತನ ದೇಹವನ್ನು ಯಾರಿಗೆ ತಿಳಿಯದೇ ಇರಲಿ ಎಂದು ಫ್ರಿಡ್ಜ್ ಒಳಗಡೆ ಇಟ್ಟೆವು. ಮನೆಯಲ್ಲಿ ಶವ ಇದ್ದರೆ ನಾವೇ ಕೊಲೆ ಮಾಡಿದ್ದೇವೆ ಎಂದು ತಿಳಿಯುವ ಕಾರಣ ಫ್ರಿಡ್ಜ್ ಮಾರಾಟ ಮಾಡಲು ತೀರ್ಮಾನಿಸಿದೆವು. ಮಾರಾಟ ಮಾಡುವ ನೆಪದಲ್ಲಿ ಫ್ರಿಡ್ಜ್ ಮನೆಯಿಂದ ವಾಹನಕ್ಕೆ ತುಂಬಿಸಿದೆವು. ದಾರಿ ಮಧ್ಯೆ ಶವವನ್ನು ರೈಲ್ವೇ ಟ್ರಾಕ್ ನಲ್ಲಿ ಎಸೆದು ನಂತರ ಫ್ರಿಡ್ಜ್ ಮಾರಾಟ ಮಾಡಿದೆವು ಎಂದು ಪ್ರೇರಣಾ ವಿಚಾರಣೆ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.

  • ನಟನಿಗಾಗಿ ಪತಿಯನ್ನೇ ಕೊಂದ ಪತ್ನಿ

    ನಟನಿಗಾಗಿ ಪತಿಯನ್ನೇ ಕೊಂದ ಪತ್ನಿ

    ಬೆಂಗಳೂರು: ನಟನ ಜೊತೆಗಿನ ಅನೈತಿಕ ಸಂಬಂಧಕ್ಕಾಗಿ ಪತ್ನಿಯೊಬ್ಬಳು ಪತಿಯನ್ನೇ ಕೊಂದಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    36 ವರ್ಷದ ಸತೀಶ್ ಕೊಲೆಯಾದ ಪತಿ. ಮೂಲತಃ ತುಮಕೂರಿನವನಾದ ಸತೀಶ್ ಬೆಂಗಳೂರಲ್ಲಿ ಸೆಕ್ಯುರಿಟಿ ಸೂಪರ್ವೈಸರ್ ಆಗಿ ಕೆಲಸ ಮಾಡ್ತಿದ್ದರು. ಕಲ್ಪನಾ ಜೊತೆ ಮದುವೆಯಾಗಿ ಎರಡು ಮಕ್ಕಳೂ ಕೂಡ ಇವೆ. ಆದ್ರೆ ಚಿತ್ರನಟನೊಬ್ಬನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತ್ನಿ ಕಲ್ಪನಾ ತನ್ನ ಪತಿಗೆ ಪರಲೋಕದ ದಾರಿ ತೋರಿಸಿದ್ದಾಳೆ. ಯಶವಂತಪುರದ ಸುಬೇದಾರ್ ಪಾಳ್ಯದಲ್ಲಿ ಮೂರ್ನಾಕು ದಿನಗಳ ಹಿಂದೆ ಈ ಕೊಲೆ ನಡೆದಿದೆ.

    ಕಲ್ಪನಾ ಕುಂಬಳಕಾಯಿ ಸಾರು ಹಾಗೂ ಪಲ್ಯಕ್ಕೆ ನಿದ್ರೆ ಮಾತ್ರೆ ಹಾಕಿ ನಂತರ ಕಲ್ಲಿನಿಂದ ಪತಿ ಸತೀಶ್ ಮುಖವನ್ನು ಜಜ್ಜಿ ಕೊಲೆ ಮಾಡಿದ್ದಳು. ಪತ್ನಿ ಕಲ್ಪನಾಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಪ್ರಕರಣ ಬಯಲಾಗಿದೆ. ನಟ ಕೂಡ ಮಾರುವೇಶಗಳಲ್ಲಿ ಈ ಹಿಂದೆ ಸಾಕಷ್ಟು ಪ್ರಕರಣಗಳಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದಾನೆ ಎಂದು ಹೇಳಲಾಗಿದೆ. ಇದೀಗ ಕಲ್ಪನಾ ಹಾಗೂ ನಟ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

    ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.