Tag: ಅಖಂಡ ಶ್ರೀನಿವಾಸ ಮೂರ್ತಿ

  • ಗೋಲಿಬಾರ್‌ಗೆ ಮೂವರು ಬಲಿ – ಮೃತಪಟ್ಟವರು ಯಾರು? ಉದ್ಯೋಗ ಏನು?

    ಗೋಲಿಬಾರ್‌ಗೆ ಮೂವರು ಬಲಿ – ಮೃತಪಟ್ಟವರು ಯಾರು? ಉದ್ಯೋಗ ಏನು?

    ಬೆಂಗಳೂರು: ಮಧ್ಯರಾತ್ರಿ ಗಲಭೆ ನಿಯಂತ್ರಣಕ್ಕೆ ತರುವ ಸಲುವಾಗಿ ಪೊಲೀಸರು ನಡೆಸಿದ ಗೋಲಿಬಾರಿಗೆ ಮೂವರು ಬಲಿಯಾಗಿದ್ದಾರೆ. ಮೃತರನ್ನು ವಾಜಿದ್ ಖಾನ್, ಯಾಸೀನ್ ಖುರೇಷಿ  ಮತ್ತು ಮೊಹ್ಮದ್ ಖಾನ್ ಎಂದು ಗುರುತಿಸಲಾಗಿದೆ.

    ಮೃತರ ಕುಟುಂಬದವರು ಹೇಳುವ ಪ್ರಕಾರ, ಗಲಭೆಯಲ್ಲಿ ಪೊಲೀಸ್ ಗುಂಡಿಗೆ ಬಲಿಯಾದವರು ಅಮಾಯಕರು. ಎಸಿ ಫಿಟ್ಟಿಂಗ್ ಮಾಡ್ತಿದ್ದ ವಾಜೀದ್ ಖಾನ್, ಕೆಲಸ ಮುಗಿಸಿ ಮನೆಗೆ ಮರಳುವಾಗ ಪೊಲೀಸರು ಗುಂಡು ಹಾರಿಸಿದ್ದಾರೆ.

    ಯಾಸಿನ್ ಪಾಶಾ ಮಟನ್ ಅಂಗಡಿ ಬಾಗಿಲು ಹಾಕಿಕೊಂಡು ಮರಳುವಾಗ ಪೊಲೀಸ್ ಗುಂಡಿಗೆ ಬಲಿ ಆಗಿದ್ದಾನೆ. ತಮ್ಮವರಿಗೂ ಗಲಭೆಗೂ ಸಂಬಂಧ ಇಲ್ಲ. ತಮ್ಮವರ ಸಾವಿಗೆ ನ್ಯಾಯ ಕೊಡಿಸಿ ಎಂದು ಮೃತರ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

    ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಸಂಬಂಧಿಕರಿಗೆ ಶವ ಹಸ್ತಾಂತರ ಮಾಡಲಾಯಿತು. ಬಿಗಿ ಭದ್ರತೆ ನಡುವೆ ನಂದಿದುರ್ಗ ಬಳಿಯ ಖಬರಸ್ತಾನದಲ್ಲಿ ಅಂತ್ಯಕ್ರಿಯೆ ನಡೆಯಿತು. ಈ ಮಧ್ಯೆ, ಮೃತ ವಾಜಿದ್‍ಗೆ ಕೊರೋನಾ ಇದ್ದ ವಿಚಾರ ದೃಢವಾಗಿದ್ದು, ಆತನ ಕುಟುಂಬಸ್ಥರನ್ನು ಕ್ವಾರಂಟೈನ್‌ ಮಾಡಲಾಗಿದೆ.

    ಯಾಸಿನ್ ಖುರೇಶಿ:
    * ವಯಸ್ಸು – 19 ವರ್ಷ, ಡಿಜಿ ಹಳ್ಳಿ ನಿವಾಸಿ
    * ಮಟನ್ ಅಂಗಡಿ ಮಾಲಿಕ
    * ಗಲಭೆ ವೇಳೆ ಅಕ್ಕನ ಮನೆಗೆ ಊಟಕ್ಕೆ ಹೋಗ್ತಿದ್ದ ಎಂಬುದು ಕುಟುಂಬದವರ ಹೇಳಿಕೆ
    * ಉದ್ರಿಕ್ತ ಗುಂಪಿನ ಮೇಲೆ ಗುಂಡು ಹಾರಿಸಿದಾಗ ಸಾವು

    ವಾಜಿದ್ ಖಾನ್ :
    * ವಯಸ್ಸು – 20 ವರ್ಷ, ಡಿಜಿ ಹಳ್ಳಿ ನಿವಾಸಿ
    * ವೃತ್ತಿ – ಎಸಿ ರಿಪೇರಿ ಕೆಲಸ
    * ಕುಟುಂಬದವರ ಪ್ರಕಾರ ಗಲಭೆ ವೇಳೆ ಶಿವಾಜಿನಗರದಿಂದ ಕೆಲಸ ಮುಗಿಸಿ ವಾಪಸ್ ಆಗುತ್ತಿದ್ದ
    * ಗಲಭೆಕೋರರ ಮೇಲೆ ಗುಂಡು ಹಾರಿಸಿದಾಗ ಸಾವು

    ಮೊಹ್ಮದ್ ಖಾನ್ :
    * ವಯಸ್ಸು – 23 ವರ್ಷ, ಕೆಜಿ ಹಳ್ಳಿ ನಿವಾಸಿ
    * ಪ್ಲಾಸ್ಟಿಕ್ ಆಯುವ ಕೆಲಸ ಮಾಡ್ತಿದ್ದ
    * ಗಲಭೆ ವೇಳೆ ಕೆಜಿ ಹಳ್ಳಿ ಸ್ಟೇಷನ್ ಮುಂದಿದ್ದ

  • ಒಂದು ರಾತ್ರಿಯ ಬೆಂಗಳೂರು ದಂಗೆ – ಎಷ್ಟು ಕೋಟಿ ನಷ್ಟ?

    ಒಂದು ರಾತ್ರಿಯ ಬೆಂಗಳೂರು ದಂಗೆ – ಎಷ್ಟು ಕೋಟಿ ನಷ್ಟ?

    ಬೆಂಗಳೂರು: ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದೇ ಮೊದಲ ಬಾರಿಗೆ ಸಾರ್ವಜನಿಕ ಆಸ್ತಿಪಾಸ್ತಿಗೆ ಮಾಡಿರುವ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ತೀರ್ಮಾನ ತೆಗೆದುಕೊಂಡಿದೆ.

    ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಈ ಸಂಬಂಧ ಪ್ರತಿಕ್ರಿಯೆ ನೀಡಿದ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಈ ರೀತಿಯ ದಂಗೆಗಳಾದಾಗ ಆಗಿರುವ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಖಂಡ ಶ್ರೀನಿವಾಸ ಮೂರ್ತಿ ಬದುಕು ಅಕ್ಷರಶಃ ಬೀದಿಗೆ

    ಈ ಕೂಡಲೇ ಪ್ರಕ್ರಿಯೆ ಆರಂಭಿಸುವಂತೆ ಆದೇಶ ನೀಡಲಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿವಶಂಕರ ಮೂರ್ತಿ ಮೂಲಕ ತನಿಖೆ ಮಾಡಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಬೊಮ್ಮಾಯಿ ಹೇಳಿದರು. ಇಂದು ಸಂಜೆ ಡಿಜೆ ಹಳ್ಳಿ ಠಾಣೆಗೆ ಗೃಹಮಂತ್ರಿ ಭೇಟಿ ಕೊಟ್ಟು, ಪರಿಶೀಲಿಸಿದರು. ಗಲಭೆಯಿಂದ ಅಂದಾಜು 50 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ. ಇದನ್ನೂ ಓದಿ: ಕಾರ್ ಜಖಂಗೊಳಿಸಿ ಪುಂಡಾಟ, ಇಡೀ ಮನೆ ಧ್ವಂಸಗೈದ್ರು

    ಎಷ್ಟು ನಷ್ಟ?
    * ಪೊಲೀಸ್ ವಾಹನ, ಸಾರ್ವಜನಿಕರ ವಾಹನ ಸೇರಿ ಒಟ್ಟು 52 ವಾಹನಗಳಿಗೆ ಹಾನಿ
    * 2 ಇನ್ನೋವಾ, 2 ಕೆಎಸ್‍ಆರ್‌ಪಿ ವ್ಯಾನ್, 1 ಸಿಎಆರ್ ವ್ಯಾನ್
    * 6 ಪೊಲೀಸ್ ಜೀಪ್, ಒಂದು ಚೀತಾ ಬೈಕ್, ಸ್ಟೇಷನ್ ಮುಂದೆ ಜಪ್ತಿ ಮಾಡಿ ನಿಲ್ಲಿಸಿದ್ದ 30 ಇತರೆ ಬೈಕ್
    * ಒಂದು ಆಟೋ, 2 ಕಾರು, 1 ಬೈಕ್ ಭಸ್ಮ
    * ಶಾಸಕರ ಮೂರಂತಸ್ತಿನ ಮನೆ, ಕಚೇರಿಗೆ ಬೆಂಕಿ
    * ಡಿಜೆ ಹಳ್ಳಿ ಠಾಣೆಗೆ ಬೆಂಕಿ, ಕೆಜಿ ಹಳ್ಳಿ ಠಾಣೆ ಧ್ವಂಸ
    * ಹತ್ತಕ್ಕೂ ಹೆಚ್ಚು ಅಂಗಡಿಗಳು ಧಗಧಗ

  • ಮನೆಗೆ ಪೆಟ್ರೋಲ್ ಬಾಂಬ್ ಹಚ್ಚಿದ್ರು, ನಾನು ಬದುಕಿರೋದೆ ಹೆಚ್ಚು- ಶಾಸಕ ಶ್ರೀನಿವಾಸ ಕಣ್ಣೀರು

    ಮನೆಗೆ ಪೆಟ್ರೋಲ್ ಬಾಂಬ್ ಹಚ್ಚಿದ್ರು, ನಾನು ಬದುಕಿರೋದೆ ಹೆಚ್ಚು- ಶಾಸಕ ಶ್ರೀನಿವಾಸ ಕಣ್ಣೀರು

    – 10 ವರ್ಷದಿಂದ ನನಗೂ ನವೀನ್‍ಗೂ ಸಂಬಂಧವಿಲ್ಲ
    – ಗ್ಯಾಸ್ ಆನ್ ಮಾಡುವಷ್ಟರಲ್ಲಿ ಪೊಲೀಸರು ಬಂದರು

    ಬೆಂಗಳೂರು: ನಾನು ಬದುಕಿರೋದೆ ಹೆಚ್ಚು. ಶಾಸಕನಾಗಿ ನನ್ನ ಮನೆಗೆ ಬೆಂಕಿ ಹೆಚ್ಚಿದರೆ ಹೇಗೆ ಎಂದು ಪ್ರಶ್ನಿಸಿ ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಣ್ಣೀರಿಟ್ಟಿದ್ದಾರೆ.

    ಘಟನೆಯ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲ ಕಿಡಿಗೇಡಿಗಳು ಬಂದು ಏಕಾಏಕಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದರು. ಅವರು ಲಾಂಗ್, ಮಚ್ಚು, ಪೆಟ್ರೋಲ್ ಬಾಂಬ್ ಹಾಕಿದ್ದಾರೆ. ಬೇಕು ಅಂತ ಈ ಕೆಲಸ ಮಾಡಿದ್ದಾರೆ. ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. 50 ವರ್ಷಗಳಿಂದ ನಾವು ಇಲ್ಲೇ ಇದ್ದೇವೆ. ಹಿಂದೂ, ಮುಸ್ಲಿಮರು ನಾವೆಲ್ಲ ಚೆನ್ನಾಗಿದ್ದೇವೆ. ಆದರೆ ಈಗ ನನ್ನ ಮನೆ, ತಮ್ಮನ ಮನೆಯನ್ನು ಸುಟ್ಟು ಹಾಕಿದ್ದಾರೆ. ಶಾಸಕನಾಗಿ ನಮ್ಮ ಸ್ಥಿತಿ ಹೀಗೆ ಆದರೆ ಹೇಗೆ. ನನಗೆ ಜೀವ ರಕ್ಷಣೆ ಕೊಡಿ ಎಂದು ಸಿಎಂ ಯಡಿಯೂರಪ್ಪ, ಆರ್.ಅಶೋಕ್, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಲ್ಲಿ ಮನವಿ ಮಾಡಿದರು.

    ನವೀನ್ ನಮ್ಮ ಅಕ್ಕನ ಮಗ, 10 ವರ್ಷದಿಂದ ನಾವು ಅವರಿಂದ ದೂರ ಇದ್ದೇವೆ. ಹೀಗಾಗಿ ನಮಗೂ ಅವನಿಗೂ ಸಂಬಂಧ ಇಲ್ಲ ಎಂದು ಶ್ರೀನಿವಾಸ ಮೂರ್ತಿ ಘಟನೆಯ ಬಗ್ಗೆ ಸ್ಪಷ್ಟನೆ ಕೊಟ್ಟರು.

    ಈ ರೀತಿ ಮಾಡಿದವರಿಗೆ ಕಾನೂನು ರೀತಿ ಶಿಕ್ಷೆ ಆಗಲಿ. 25 ವರ್ಷದಿಂದ ಇಂತಹ ಘಟನೆ ಆಗಿರಲಿಲ್ಲ. ಯಾರೇ ಇದ್ದರೂ ಅವರನ್ನು ಬಂಧಿಸಿ. ಈಗ ಸರ್ಕಾರ ನಮ್ಮ ರಕ್ಷಣೆಗೆ ಬರಬೇಕು. ಮನೆಯನ್ನು ಸುಟ್ಟಿದ್ದಲ್ಲದೇ ಲೂಟಿ ಕೂಡ ಮಾಡಿದ್ದಾರೆ. ಹಣ, ಒಡವೆ, ಸೀರೆ ಎಲ್ಲವನ್ನು ದೋಚಿಕೊಂಡು ಹೀಗಿದ್ದಾರೆ. ಗ್ಯಾಸ್ ಕೂಡ ಆನ್ ಮಾಡುವುದಕ್ಕೆ ಹೋಗಿದ್ದರು. ನಾನು ಮನೆಯ ಸಮೀಪ ಹೋಗುತ್ತಿದ್ದೆ ಅಷ್ಟರಲ್ಲಿ ಸ್ಥಳೀಯರು ಫೋನ್ ಮಾಡಿ ಮಾಹಿತಿ ನೀಡಿದರು. ತಕ್ಷಣ ನಾನು ವಾಪಸ್ಸಾದೆ. ಹೀಗಾಗಿ ನಾನು ಬದುಕಿರುವುದೇ ಹೆಚ್ಚು ಎಂದು ಶ್ರೀನಿವಾಸ ಮೂರ್ತಿ ಕಣ್ಣೀರು ಹಾಕಿದರು.

    ದುಷ್ಕರ್ಮಿಗಳು ಗ್ಯಾಸ್ ಆನ್ ಮಾಡಿ ಬೆಂಕಿ ಹಚ್ಚುವಷ್ಟರಲ್ಲಿ ಪೊಲೀಸರು ಬಂದರು. ಆದ್ದರಿಂದ ಈ ಪ್ರಕರಣದ ಸಂಪೂರ್ಣ ತನಿಖೆ ಆಗಬೇಕು. ಸಿಬಿಐ, ಸಿಸಿಬಿ, ಸಿಐಡಿ ಯಾವುದಾದರೂ ತನಿಖೆ ಮಾಡಿಸಿ. ನಮ್ಮ ಪರಿಸ್ಥಿತಿ ಹೀಗೆ ಆದರೆ ಇನ್ನೂ ಸಾರ್ವಜನಿಕರ ಪರಿಸ್ಥಿತಿ ಹೇಗೆ ಎಂದು ಪ್ರಶ್ನೆ ಮಾಡಿದರು. ಹೆಚ್ಚು ಮತದಲ್ಲಿ ಗೆದ್ದವನು ನಾನು. ನನಗೆ ಹೀಗೆ ಆಗಿದೆ. ಆದ್ದರಿಂದ ಈಗ ನನಗೆ ಸರ್ಕಾರ ರಕ್ಷಣೆ ಕೊಡಬೇಕು. ನಾವೆಲ್ಲರು ಒಟ್ಟಾಗಿ ಹೋಗೋಣ ಎಂದರು.

    ನವೀನ್ ನಮ್ಮ ಅಕ್ಕನ ಮಗ, 10 ವರ್ಷದಿಂದ ನಾವು ಅವರಿಂದ ದೂರ ಇದ್ದೇವೆ. ನಮಗೂ ಅವನಿಗೂ ಸಂಬಂಧ ಇಲ್ಲ. ಯಾರೇ ಇದ್ದರೂ ತನಿಖೆ ಆಗಲಿ, ನನಗೂ ಅವನಿಗೂ ಸಂಬಂಧ ಇಲ್ಲ. ನಮ್ಮ ಹೆಸರು ಕೆಡಿಸಲು ಹೀಗೆ ಮಾಡಿದ್ದಾರೆ. ನಾನು 24 ಗಂಟೆ ಜನರ ಮಧ್ಯೆ ಇದ್ದೋನು. ಹೀಗಾಗಿ ಹೆಸರು ಕೆಡಿಸಲು ಮಾಡಿದ್ದಾರೆ. ಪ್ರಕರಣದ ತನಿಖೆ ಆಗಲಿ, ಪೊಲೀಸ್ ಸಾರಥಿ ಇದಕ್ಕೂ ಸಂಬಂಧವಿಲ್ಲ. ಘಟನೆಯನ್ನು ನಾನು ಖಂಡಿಸುತ್ತೇನೆ, ಯಾರೇ ಆದರೂ ಶಿಕ್ಷೆ ಆಗಲಿ ಎಂದು ಹೇಳಿದರು.

    ನವೀನ್ ಬಿಜೆಪಿ ಅಭಿಮಾನಿ ಅನ್ನೋದನ್ನ ಅವನನ್ನ ಕೇಳಿ. ನಮಗೂ ಅವನಿಗೂ ಸಂಬಂಧ ಇಲ್ಲ. ಸಿಎಂಗೂ ರಕ್ಷಣೆ ಕೊಡಲು ಮನವಿ ಮಾಡಿದ್ದೇನೆ. ರಕ್ಷಣೆ ಕೊಡೋದಾಗಿ ಸಿಎಂ ಕೂಡ ಹೇಳಿದ್ದಾರೆ. ಸಿಬಿಐ, ಸಿಸಿಬಿ, ಸಿಐಡಿ ಯಾವುದಾದರೂ ಮಾಡಲಿ, ಘಟನೆ ಆದ ಮೇಲೂ ನಾನು ನವೀನ್ ಹತ್ತಿರ ಮಾತಾಡಿಲ್ಲ ಎಂದು ಅಖಂಡ ಶ್ರೀನಿವಾಸ ಮೂರ್ತಿ ಘಟನೆಯ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ.

     

  • ಗಲಭೆಗೆ ಪ್ರಚೋದಿಸಿದ್ದ ನವೀನ್‍ಗೆ ಹಿಂದೂ ಹಿರಿಯರೇ ಬುದ್ಧಿ ಹೇಳಬೇಕಲ್ಲಾ?-ಸಿದ್ದರಾಮಯ್ಯ

    ಗಲಭೆಗೆ ಪ್ರಚೋದಿಸಿದ್ದ ನವೀನ್‍ಗೆ ಹಿಂದೂ ಹಿರಿಯರೇ ಬುದ್ಧಿ ಹೇಳಬೇಕಲ್ಲಾ?-ಸಿದ್ದರಾಮಯ್ಯ

    -ನನ್ನ ಹೇಳಿಕೆಯಲ್ಲಿ ತಪ್ಪೇನಿದೆ?
    -ದೇಗುಲ ರಕ್ಷಿಸಿದ ಮುಸ್ಲಿಂ ಯುವಕರಿಗೆ ಯತೀಂದ್ರ ಸಿದ್ದರಾಮಯ್ಯ ಧನ್ಯವಾದ

    ಬೆಂಗಳೂರು: ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‍ಗೆ ಹಿಂದೂ ಹಿರಿಯರೇ ಬುದ್ಧಿ ಹೇಳಬೇಕಲ್ವಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

    ಹಿಂದು-ಮುಸ್ಲಿಮರು ಕೂಡಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂಬ ನನ್ನ ಹೇಳಿಕೆಯನ್ನು ಹಿಂದೂ ವಿರೋಧಿ ಎನ್ನುವಂತೆ ತಿರುಚಲಾಗುತ್ತಿದೆ. ಮುಸ್ಲಿಮ್ ಗಲಭೆಕೋರರಿಗೆ ಮುಸ್ಲಿಮ್ ಹಿರಿಯರು, ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‍ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ? ಕಾವಲಭೈರಸಂದ್ರದಲ್ಲಿ ಗಲಭೆ ವರದಿ ಮಾಡಲು ಹೋಗಿರುವ ಮಾಧ್ಯಮ ಮಿತ್ರರ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ. ಪೊಲೀಸರು ತಕ್ಷಣ ಆರೋಪಿಗಳನ್ನು ಬಂಧಿಸಿ, ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಸಿದ್ದರಾಮಯ್ಯನವರು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

    ಸಿದ್ದರಾಮಯ್ಯ ಹೇಳಿದ್ದೇನು?: ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಂ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ. ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್‍ಗೆ ತಿಳಿಸಿದ್ದೇನೆ ಎಂದಿದ್ದಾರೆ.

    ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ. ಇಂತಹ ಕೋಮು ಗಲಭೆಗಳಲ್ಲಿ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ ಎಂದಿದ್ದರು. ಇದನ್ನೂ ಓದಿ: ಮತಾಂಧ ಮುಸ್ಲಿಮರಿಗೆ ಡಿಕೆಶಿ ಬೆಂಬಲ ಇದೆ ಅನ್ನಿಸುತ್ತೆ: ಸಚಿವ ಕೆ.ಎಸ್.ಈಶ್ವರಪ್ಪ

    ಯಾರು ಈ ನವೀನ್?: ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತ ಈ ನವೀನ್. ಫೇಸ್‍ಬುಕ್ ಪೋಸ್ಟ್ ನಲ್ಲಿ ಒಂದು ಸಮುದಾಯದ ಬಗ್ಗೆ ನವೀನ್ ಅವಹೇಳನಕಾರಿಯಾಗಿ ಬರೆದುಕೊಂಡಿದ್ದರಿಂದ ಉದ್ರಿಕ್ತಗೊಂಡ ಗುಂಪು ಕಾವಲಬೈರಸಂದ್ರದಲ್ಲಿರುವ ಶಾಸಕರ ಮನೆಯ ಮೇಲೆ ದಾಳಿ ನಡೆಸಿತ್ತು. ಇದೀಗ ಸಿದ್ದರಾಮಯ್ಯ ಗಲಭೆಗೆ ಪ್ರಚೋದನೆ ನೀಡಿದ್ದು ನವೀನ್ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ. ಇದನ್ನೂ ಓದಿ: ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು: ಹೆಚ್‍ಡಿಕೆ

    ಯತೀಂದ್ರ ಸಿದ್ದರಾಮಯ್ಯ ಟ್ವೀಟ್: ಒಂದು ಗುಂಪು ಉದ್ರಿಕ್ತರಾಗಿ ಗಲಭೆ ಮಾಡಿದರೆ, ಮತ್ತೊಂದು ಮುಸ್ಲಿಂ ಯುವಕರ ಗುಂಪು ಮಾನವ ಸರಪಳಿ ನಿರ್ಮಿಸಿ ದೇಗುಲವನ್ನು ಗಲಭೆಕೋರರಿಂದ ರಕ್ಷಿಸಿದೆ. ಇಂತಹ ವಿವೇಚನೆಯನ್ನು ಮಾನವೀಯತೆಯನ್ನು ಮೆರೆದ ಯುವಕರಿಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ.

  • ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡ್ಬಾರ್ದು- ಗಲಭೆಗೆ ಡಿಕೆಶಿ ಖಂಡನೆ

    ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡ್ಬಾರ್ದು- ಗಲಭೆಗೆ ಡಿಕೆಶಿ ಖಂಡನೆ

    ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಕೃತ್ಯವನ್ನು ಖಂಡಿಸುತ್ತೇನೆ. ಯಾರೂ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

    ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಕೂಡ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಬಾರದು. ನಿನ್ನೆ ನಡೆದ ಘಟನೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ. ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡಬಾರದು. ಪೊಲೀಸ್ ಠಾಣೆಯ ಆಸ್ತಿ- ಪಾಸ್ತಿಗೆ ಮಾಡಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ದುಷ್ಕರ್ಮಿಗಳ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆ – ಭಯದಿಂದ ಬಾತ್‍ರೂಮಿನಲ್ಲಿ 3 ಗಂಟೆ ಬಚ್ಚಿಟ್ಟುಕೊಂಡಿದ್ದ ಕುಟುಂಬ

    ಪ್ರಚೋದನಕಾರಿ ಪೋಸ್ಟ್ ಕೂಡ ಸರಿಯಲ್ಲ. ಅದು ಕೂಡ ತಪ್ಪು. ಈ ಸಂಬಂಧ ಇಂದು ಬೆಂಗಳೂರು ಶಾಸಕರ ಸಭೆ ಕರೆದಿದ್ದೇನೆ. ಅಲ್ಲಿ ಚರ್ಚೆ ಮಾಡುತ್ತೇವೆ. ನಮ್ಮ ಶಾಸಕರು ಕೂಡ ಸ್ಥಳಕ್ಕೆ ಹೋಗಿ ಶಾಂತಿ ನೆಲಸುವಂತೆ ಪ್ರಯತ್ನ ಮಾಡಿದ್ದಾರೆ. ಆದರೆ ಯಾರೂ ಕಂಟ್ರೋಲ್‍ಗೆ ಸಿಕ್ಕಿಲ್ಲ. ಬಹಳ ವ್ಯವಸ್ಥಿತವಾದ ಸಂಚು ಇದೆ ಎಂಬುದನ್ನು ಮಾಧ್ಯಮದಲ್ಲಿ ನೋಡಿದ್ದೇನೆ ಎಂದರು.  ಇದನ್ನೂ ಓದಿ: ಕೆ.ಜಿ.ಹಳ್ಳಿ ಗಲಭೆ ಪ್ರಕರಣ – ಪೊಲೀಸರ ಗೋಲಿಬಾರ್‌ಗೆ ಮೂವರು ಬಲಿ, 110 ಮಂದಿ ಅರೆಸ್ಟ್

    ಘಟನೆಯನ್ನು ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಖಂಡಿಸುತ್ತದೆ. ಈ ಸಂಬಂಧ ಸರ್ಕಾರ ಕಾನೂನು ಕ್ರಮಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳಲಿ. ನಮ್ಮದು ಯಾವುದೇ ರೀತಿಯ ಅಭ್ಯಂತರವಿಲ್ಲ. ಸಂಪೂರ್ಣ ಸಹಕಾರವನ್ನು ಸರ್ಕಾರಕ್ಕೆ ಕೊಡುವುದಾಗಿ ತಿಳಿಸಿದರು. ಇದನ್ನೂ ಓದಿ: ಕೆಜಿ ಹಳ್ಳಿ ಗಲಭೆ ಪ್ರಕರಣ – ಎಸ್‍ಡಿಪಿಐ ಮುಖಂಡ ಅರೆಸ್ಟ್

    ಬಿ ಎಲ್ ಸಂತೋಷ ಏನ್ ರಾಜಕಾರಣ ಮಾಡ್ತಾರೆ ಮಾಡಲಿ. ರಾತ್ರಿಯಿಂದ ನಾನು ಮಾಹಿತಿ ಪಡೆದಿದ್ದೇನೆ. ಸಿಟಿ ರವಿ ಅಥವಾ ಇನ್ಯಾರದ್ದೋ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಗರಂ ಆದರು. ಇದನ್ನೂ ಓದಿ:  ಬೆಂಕಿ ಹಚ್ಚೋದು ನಮ್ಮ ಸಂಸ್ಕೃತಿಯಲ್ಲ, ನೆಲದ ಕಾನೂನೇ ಅಂತಿಮ: ಖಾದರ್

  • ಬೆಂಕಿ ಹಚ್ಚೋದು ನಮ್ಮ ಸಂಸ್ಕೃತಿಯಲ್ಲ, ನೆಲದ ಕಾನೂನೇ ಅಂತಿಮ: ಖಾದರ್

    ಬೆಂಕಿ ಹಚ್ಚೋದು ನಮ್ಮ ಸಂಸ್ಕೃತಿಯಲ್ಲ, ನೆಲದ ಕಾನೂನೇ ಅಂತಿಮ: ಖಾದರ್

    ಬೆಂಗಳೂರು: ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ. ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ, ಶಾಂತಿ ಕಾಪಾಡಿ ಎಂದು ಮಾಜಿ ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ.

    ಕೆ.ಜಿ ಹಳ್ಳಿಯಲ್ಲಿ ಗಲಭೆಕೋರರ ದಾಂಧಲೆ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಶಾಂತಿ ಕಾಪಾಡಿಕೊಂಡು ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಟ್ವೀಟ್‍ನಲ್ಲೇನಿದೆ?
    ಲೋಕಕ್ಕೆ ಸೌಹಾರ್ದತೆ, ಸಮಾನತೆ ಹಾಗೂ ಮಾನವೀಯತೆ ಸಾರಿದ ವಿಶ್ವ ಪ್ರವಾದಿ ಮೊಹಮ್ಮದ್ (ಸ.ಅ) ರವರನ್ನು ನಿಂದನೆ ಮಾಡಿದವರ ವಿರುದ್ಧ ಗರಿಷ್ಠ ಕ್ರಮ ಕೈಗೊಳ್ಳಲೇಬೇಕು. ಆದರೆ ಇದೇ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿಪಾಸ್ತಿ ನಷ್ಟಮಾಡುವುದನ್ನ ಒಪ್ಪುವುದು ಸಾಧ್ಯವೇ ಇಲ್ಲ.  ಇದನ್ನೂ ಓದಿ: ದುಷ್ಕರ್ಮಿಗಳ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆ – ಭಯದಿಂದ ಬಾತ್‍ರೂಮಿನಲ್ಲಿ 3 ಗಂಟೆ ಬಚ್ಚಿಟ್ಟುಕೊಂಡಿದ್ದ ಕುಟುಂಬ

    ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ. ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ. ಎಲ್ಲರೂ ಶಾಂತಿ ಕಾಪಾಡಿ, ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು.

    ಪೊಲೀಸ್ ಇಲಾಖೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ, ಪರಿಸ್ಥಿತಿ ಕೈ ಮೀರಿ ಹೋಗುವುದಿಲ್ಲ. ಎಲ್ಲರೂ ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕೆ.ಜಿ.ಹಳ್ಳಿ ಗಲಭೆ ಪ್ರಕರಣ – ಪೊಲೀಸರ ಗೋಲಿಬಾರ್‌ಗೆ ಮೂವರು ಬಲಿ, 110 ಮಂದಿ ಅರೆಸ್ಟ್

    ನಡೆದಿದ್ದೇನು?
    ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ. 100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು ಕಚೇರಿಯನ್ನು ಒಡೆದು ಹಾಕಲು ಯತ್ನಿಸಿದ್ದರು. ಈ ವೇಳೆ ವಿಡಿಯೋ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದರು. ಘಟನೆಯಲ್ಲಿ ಶಾಸಕರ ಮನೆ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದ್ದು, ಆಫೀಸ್ ಬಳಿ ನಿಂತಿದ್ದ ಕಾರುಗಳ ಮೇಲೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯನ್ನು ನೋಡಿ ಅಲ್ಲಿದ್ದ ಜನ ಓಡಿ ಹೋಗಿ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಇತ್ತ ಗಲಭೆಗೂ ಮುನ್ನ ಶಾಸಕರು ಮನೆ ಖಾಲಿ ಮಾಡಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಇದನ್ನೂ ಓದಿ: ಕೆಜಿ ಹಳ್ಳಿ ಗಲಭೆ ಪ್ರಕರಣ – ಎಸ್‍ಡಿಪಿಐ ಮುಖಂಡ ಅರೆಸ್ಟ್

  • ಕಾಂಗ್ರೆಸ್ ಶಾಸಕರ ಮನೆ ಧ್ವಂಸ- ಘಟನೆ ಖಂಡಿಸದೆ ಮೌನ ತಾಳಿದ ಕೈ ನಾಯಕರು

    ಕಾಂಗ್ರೆಸ್ ಶಾಸಕರ ಮನೆ ಧ್ವಂಸ- ಘಟನೆ ಖಂಡಿಸದೆ ಮೌನ ತಾಳಿದ ಕೈ ನಾಯಕರು

    ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಮನೆ ಧ್ವಂಸಗೊಂಡರೂ ಕೈ ನಾಯಕರು ಮೌನ ವಹಿಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

    ಹೌದು. ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ವಿರುದ್ಧ ಒಂದು ಸಮುದಾಯದ ಜನ ದಾಂಧಲೆ ನಡೆಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಮೌನವಾಗಿದ್ದು, ಈ ಮೂಲಕ ಧರ್ಮ ಸೂಕ್ಷ್ಮ ವಿಚಾರದಲ್ಲಿ ಮಧ್ಯಪ್ರವೇಶ ಮಾಡದೇ ಸುಮ್ಮನಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಕೆ.ಜಿ.ಹಳ್ಳಿ ಗಲಭೆ ಪ್ರಕರಣ – ಪೊಲೀಸರ ಗೋಲಿಬಾರ್‌ಗೆ ಮೂವರು ಬಲಿ, 110 ಮಂದಿ ಅರೆಸ್ಟ್

    ದುರ್ಘಟನೆ ಬಗ್ಗೆ ಇದೂವರೆಗೆ ಕೈ ನಾಯಕರು ಚಕಾರ ಎತ್ತಿಲ್ಲ. ಟ್ವೀಟ್ ಮೂಲಕ ಪ್ರತಿಯೊಂದು ವಿಷಯದ ಬಗ್ಗೆಯೂ ಪ್ರಶ್ನೆ ಮಾಡ್ತಿದ್ದ ಕೈ ನಾಯಕರು ಇದೀಗ ಮೌನವಹಿಸಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ದಿನೇಶ್ ಗುಂಡೂರಾವ್ ಒಬ್ಬರು ಟ್ವೀಟ್ ಮಾಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದು ಬಿಟ್ಟರೆ ಉಳಿದವರು ಘಟನೆ ಖಂಡಿಸದೇ ಮೌನ ತಾಳಿರುವುದು ಅಚ್ಚರಿಗೆ ಕಾರಣವಾಗಿದೆ. ಇದನ್ನೂ ಓದಿ: ಕೆಜಿ ಹಳ್ಳಿ ಗಲಭೆ ಪ್ರಕರಣ – ಎಸ್‍ಡಿಪಿಐ ಮುಖಂಡ ಅರೆಸ್ಟ್

    ನಿನ್ನೆ ರಾತ್ರಿ ಗುಂಪೊಂದು ಶಾಸಕರ ಮನೆಗೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ. ಘಟನೆಯಿಂದ ಶಾಸಕರ ಮೂರು ಅಂತಸ್ತಿನ ಮನೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಆದರೆ ಈ ವೇಳೆ ಸಾಸಕರು ಮನೆಯಲ್ಲಿ ಇರಲಿಲ್ಲ. ಗಲಭೆಗೂ ಮುನ್ನ ಶಾಸಕರು ತಮ್ಮ ಪುಲಿಕೇಶಿ ನಗರದ ಮನೆ ಖಾಲಿ ಮಾಡಿದ್ದರು. ಹೀಗಾಗಿ ಶಾಸಕಹಾಗೂ ಕುಟುಂಬ ಭಾರೀ ಅನಾಹುತದಿಂದ ಪಾರಾಗಿದೆ. ಇದನ್ನೂ ಓದಿ: ಕಾವಲ್‌ ಭೈರಸಂದ್ರ ಉದ್ವಿಗ್ನ – ಪಕ್ಕಾ ಪ್ಲಾನ್ ಮಾಡಿ ವಿಕೃತಿ ಮೆರೆದ ಪುಂಡರು

  • ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸಲ್ಲ: ಸಿಎಂ ಬಿಎಸ್‍ವೈ

    ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸಲ್ಲ: ಸಿಎಂ ಬಿಎಸ್‍ವೈ

    ಬೆಂಗಳೂರು: ಡಿ.ಜಿ.ಹಳ್ಳಿಯ ಗಲಾಟೆಗೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

    ಪ್ರಕರಣ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗೂ ಪೊಲೀಸ್ ಠಾಣೆ ಮೇಲೆ ದಾಳಿ, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ಇದನ್ನೂ ಓದಿ:   ಕಾವಲ್‌ ಭೈರಸಂದ್ರ ಉದ್ವಿಗ್ನ – ಪಕ್ಕಾ ಪ್ಲಾನ್ ಮಾಡಿ ವಿಕೃತಿ ಮೆರೆದ ಪುಂಡರು

    ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬಹುತೇಕ ಪೊಲೀಸ್ ಅಧಿಕಾರಿಗಳ ಗಾಡಿಗಳು ಪುಡಿ ಪುಡಿ

    ಗಲಭೆ ಪ್ರಕರಣದಿಂದ ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಕಾವಲ್ ಭೈರಸಂದ್ರದಲ್ಲಿರುವ ಮೂರು ಅಂತಸ್ತಿನ ಮನೆ ಬೆಂಕಿಗಾಹುತಿಯಾಗಿದೆ. ಶಾಸಕರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಾಳು ಮನೆಯಂತೆ ಭಾಸವಾಗುತ್ತಿದೆ. ಪರಿಣಾಮ ಅಕ್ಕಪಕ್ಕದ ರಸ್ತೆ, ಮನೆಗಳಲ್ಲಿ ನೀರವ ಮೌನ ಆವರಿಸಿದೆ. ಸದ್ಯಕ್ಕೆ ಪೊಲೀಸರು ಕೆಜಿ ಹಳ್ಳಿಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನ ಬಂದ್ ಮಾಡಿದ್ದಾರೆ. ಇದನ್ನೂ ಓದಿ: ಕೆಜಿ ಹಳ್ಳಿ ಗಲಭೆ ಪ್ರಕರಣ – ಎಸ್‍ಡಿಪಿಐ ಮುಖಂಡ ಅರೆಸ್ಟ್

    ಕಿಡಿಗೇಡಿಗಳು ಸ್ಥಳಕ್ಕೆ ಬಂದ ಪೊಲೀಸರು ಮೇಲೂ ದಾಳಿ ಮಾಡಿದ್ದು, ಸಿಕ್ಕ ಸಿಕ್ಕ ವಸ್ತುಗಳಿಗೆಲ್ಲಾ ಬೆಂಕಿ ಹಚ್ಚಿದ್ದರು. ಕೊನೆಗೆ ರಾತ್ರಿಯೆಲ್ಲಾ ಫೀಲ್ಡ್‍ಗೆ ಇಳಿದಿದ್ದ ಪೊಲೀಸರು 110 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ 100ಕ್ಕೂ ಹೆಚ್ಚು ಪೊಲೀಸರಿಗೆ ಗಾಯವಾಗಿದ್ದು, ಗಾಯಗೊಂಡ ಪೊಲೀಸರಿಗೆ ನಗರದ ಹಲವು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಲೆ, ಬೆನ್ನು, ಮುಖಕ್ಕೆ ಸೇರಿದಂತೆ ಹಲವು ಕಡೆ ಗಂಭೀರ ಗಾಯಗಳಾಗಿವೆ.

  • ಗಲಭೆಕೋರರಿಂದ ಬಚಾವಾದ ಕುಟುಂಬ- ಗಲಾಟೆಗೂ ಮುನ್ನ ಮನೆ ಖಾಲಿ ಮಾಡಿದ್ದ ಶಾಸಕರು

    ಗಲಭೆಕೋರರಿಂದ ಬಚಾವಾದ ಕುಟುಂಬ- ಗಲಾಟೆಗೂ ಮುನ್ನ ಮನೆ ಖಾಲಿ ಮಾಡಿದ್ದ ಶಾಸಕರು

    – ಪೊಲೀಸ್ ಇಲಾಖೆ ವಿರುದ್ಧ ಸಿಎಂ ಗರಂ

    ಬೆಂಗಳೂರು: ಗಲಾಟೆ ಆಗೋದಕ್ಕೂ ಮೊದಲೇ ಪುಲಿಕೇಶಿನಗರದ ಮನೆ ಖಾಲಿ ಮಾಡಿರುವುದರಿಂದ ಶಾಸಕರು ಅಖಂಡ ಶ್ರೀನಿವಾಸ ಮೂರ್ತಿ ಭಾರೀ ಅನಾಹುತದಿಂದ ಪಾರಾಗಿದ್ದಾರೆ.

    ನಿನ್ನೆ ರಾತ್ರಿ ಪೊಲಿಕೇಶಿನಗರದಲ್ಲಿರುವ ಶಾಸಕರ ಮನೆ ಮತ್ತು ಕಚೇರಿಗೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ. ಪರಿಣಾಮ ಶಾಸಕರ 3 ಅಂತಸ್ತಿನ ಮನೆ ಸಮಪೂರ್ಣ ಸುಟ್ಟು ಕರಕಲಾಗಿದೆ. ಆದರೆ ಗಲಾಟೆ ಆರಂಭಕ್ಕೂ ಮೊದಲೇ ಶಾಸಕರ ಕುಟುಂಬ ಏರಿಯಾ ಬಿಟ್ಟಿತ್ತು. ಇಲ್ಲವಾದಲ್ಲಿ ಮನೆಯಲ್ಲಿ ಬೆಂಕಿಯ ಜ್ವಾಲೆಗೆ ಸಿಲುಕಿ ಗಲಭರಕೋರರ ಕ್ರೋಧಾಗ್ನಿಗೆ ಬಲಿಯಾಗಬೇಕಿತ್ತು. ಇದನ್ನೂ ಓದಿ: ಕೆ.ಜಿ.ಹಳ್ಳಿ ಗಲಭೆ ಪ್ರಕರಣ – ಪೊಲೀಸರ ಗೋಲಿಬಾರ್‌ಗೆ ಮೂವರು ಬಲಿ, 110 ಮಂದಿ ಅರೆಸ್ಟ್

    ಇತ್ತ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯ ಗಲಭೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಮುಖ್ಯಮಂತ್ರಿಗಳು ಗಲಭೆ ಕುರಿತ ವರದಿ ತರಿಸಿಕೊಂಡಿದ್ದಾರೆ. ಗಲಭೆಗೆ ಕಾರಣ, ಕಾರಣಕರ್ತರು, ಕೈಗೊಂಡ ಭದ್ರತೆ, ಕಾನೂನು ಸುವ್ಯವಸ್ಥೆ ಬಗ್ಗೆ ವರದಿ ನೀಡಿ ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಕಾವಲ್‌ ಭೈರಸಂದ್ರ ಉದ್ವಿಗ್ನ – ಪಕ್ಕಾ ಪ್ಲಾನ್ ಮಾಡಿ ವಿಕೃತಿ ಮೆರೆದ ಪುಂಡರು

    ಪೊಲೀಸರು ತಕ್ಷಣ ಗಲಭೆ ನಿಯಂತ್ರಣ ಮಾಡದ ಹಿನ್ನೆಲೆಯಲ್ಲಿ ಇಲಾಖೆ ವಿರುದ್ಧ ಸಿಎಂ ಆಗಿದ್ದಾರೆ. ಗಲಭೆ ತುಂಬಾ ಹೊತ್ತು ನಡೆಯಲು ಬಿಟ್ಟು ಏನ್ಮಾಡ್ತಿದ್ರಿ?. ಸಾರ್ವಜನಿಕರ ವಾಹನಗಳು, ಮನೆಗಳಿಗೆ ಸಾಕಷ್ಟು ಹಾನಿಯಾಗಿದೆ. ಕಿಡಿಗೇಡಿಗಳ ದಾಂಧಲೆಯನ್ನು ಆರಂಭದಲ್ಲೇ ತಡೆಯಲಿಲ್ಲ ಯಾಕೆಂದು ಪೊಲೀಸರನ್ನು ಸಿಎಂ ತರಾಟೆ ತೆಗೆದುಕೊಂಡಿದ್ದಾರೆ.

    ಇದು ಪೂರ್ವನಿಯೋಜಿತ ಕೃತ್ಯವಾದರೂ ಮೋದಲೇ ಯಾಕೆ ಪೊಲೀಸ್ ಇಲಾಖೆಗೆ ಗೊತ್ತಾಗಲಿಲ್ಲ ಎಂದು ಸಿಟ್ಟು ಮಾಡಿಕೊಂಡಿರುವ ಸಿಎಂ, ಕಿಡಿಗೇಡಿಗಳ ಶೀಘ್ರ ಪತ್ತೆ ಮತ್ತು ಕಾನೂನು ಕ್ರಮಕ್ಕೆ ಖಡಕ್ ಸೂಚನೆ ನೀಡಿದ್ದಾರೆ.

  • ಕೆ.ಜಿ.ಹಳ್ಳಿ ಗಲಭೆ ಪ್ರಕರಣ – ಪೊಲೀಸರ ಗೋಲಿಬಾರ್‌ಗೆ ಮೂವರು ಬಲಿ, 110 ಮಂದಿ ಅರೆಸ್ಟ್

    ಕೆ.ಜಿ.ಹಳ್ಳಿ ಗಲಭೆ ಪ್ರಕರಣ – ಪೊಲೀಸರ ಗೋಲಿಬಾರ್‌ಗೆ ಮೂವರು ಬಲಿ, 110 ಮಂದಿ ಅರೆಸ್ಟ್

    – ಸುಟ್ಟು ಕರಕಲಾದ ಮೂರು ಅಂತಸ್ತಿನ ಮನೆ

    ಬೆಂಗಳೂರು: ಕೆ.ಜಿ.ಹಳ್ಳಿ ಗಲಭೆ ಪ್ರಕರಣದಿಂದ ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಕಾವಲ್‌ ಭೈರಸಂದ್ರ ಉದ್ವಿಗ್ನ – ಪಕ್ಕಾ ಪ್ಲಾನ್ ಮಾಡಿ ವಿಕೃತಿ ಮೆರೆದ ಪುಂಡರು

    ಕಾವಲ್ ಭೈರಸಂದ್ರದಲ್ಲಿರುವ ಮೂರು ಅಂತಸ್ತಿನ ಮನೆ ಬೆಂಕಿಗಾಹುತಿಯಾಗಿದೆ. ಶಾಸಕರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಾಳು ಮನೆಯಂತೆ ಭಾಸವಾಗುತ್ತಿದೆ. ಪರಿಣಾಮ ಅಕ್ಕಪಕ್ಕದ ರಸ್ತೆ, ಮನೆಗಳಲ್ಲಿ ನೀರವ ಮೌನ ಆವರಿಸಿದೆ. ಸದ್ಯಕ್ಕೆ ಪೊಲೀಸರು ಕೆಜಿ ಹಳ್ಳಿಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನ ಬಂದ್ ಮಾಡಿದ್ದಾರೆ.

    ಕಿಡಿಗೇಡಿಗಳು ಸ್ಥಳಕ್ಕೆ ಬಂದ ಪೊಲೀಸರು ಮೇಲೂ ದಾಳಿ ಮಾಡಿದ್ದು, ಸಿಕ್ಕ ಸಿಕ್ಕ ವಸ್ತುಗಳಿಗೆಲ್ಲಾ ಬೆಂಕಿ ಹಚ್ಚಿದ್ದರು. ಕೊನೆಗೆ ರಾತ್ರಿಯೆಲ್ಲಾ ಫೀಲ್ಡ್‌ಗೆ ಇಳಿದಿದ್ದ ಪೊಲೀಸರು 110 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ 100ಕ್ಕೂ ಹೆಚ್ಚು ಪೊಲೀಸರಿಗೆ ಗಾಯವಾಗಿದ್ದು, ಗಾಯಗೊಂಡ ಪೊಲೀಸರಿಗೆ ನಗರದ ಹಲವು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಲೆ, ಬೆನ್ನು, ಮುಖಕ್ಕೆ ಸೇರಿದಂತೆ ಹಲವು ಕಡೆ ಗಂಭೀರ ಗಾಯಗಳಾಗಿವೆ.

    ಅಲ್ಲದೇ ಈ ಪ್ರಕರಣದಲ್ಲಿ 10ಕ್ಕೂ ಹೆಚ್ಚು ಆರೋಪಿಗಳಿಗೆ ಗಾಯವಾಗಿದ್ದು, 10 ಜನರಲ್ಲಿ 6 ಜನ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆರು ಜನ ಪರಾರಿಯಾಗಿದ್ದಾರೆ. ಈಗಾಗಲೇ ಪೊಲೀಸರ ಗೋಲಿಬಾರ್‌ಗೆ ಮೂರು ಬಲಿಯಾಗಿದ್ದಾರೆ.

    ಇಡೀ ಗಲಭೆಗೆ ಕಾರಣವಾಗಿದ್ದ ಆರೋಪಿ ನವೀನ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸಿಕ್ಕಿದರೆ ಹಲ್ಲೆ ಮಾಡುತ್ತಾರೆ ಎಂದು ಪೊಲೀಸರು ಬುರ್ಖಾ ಹಾಕಿ ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ.