Tag: ಅಖಿಲ ಗೋವಾ ಕನ್ನಡ ಮಹಾಸಂಘ

  • ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಬಿಡುಗಡೆ

    ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಬಿಡುಗಡೆ

    ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಮಂಜೂರು ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

    ಗೃಹ ಕಚೇರಿ ಕೃಷ್ಣಾದಲ್ಲಿ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳು ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು. ಈ ವೇಳೆ ಬೊಮ್ಮಾಯಿ ಅವರು ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡವುದಾಗಿ ಭರವಸೆ ನೀಡಿದರು. ಇದನ್ನೂ ಓದಿ: ಭಾರತ ಆಯೋಜಿಸಿದ್ದ, ಅಫ್ಘಾನಿಸ್ತಾನದ ಸಭೆಯಿಂದ ಹೊರಗುಳಿದ ಪಾಕಿಸ್ತಾನ, ಚೀನಾ 

    ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ ಅವರು, ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಅವರು ಕನ್ನಡ ಸಂಸ್ಕøತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ. ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಬೊಮ್ಮಾಯಿ ಅವರ ಈ ನಿರ್ಧಾರಕ್ಕೆ ಗೋವಾ ಕನ್ನಡ ಮಹಾಸಂಘದ ಗೌರವ ಅಧ್ಯಕ್ಷ ಸಿದ್ದಣ್ಣ ಮೇಟಿ ಹಾಗೂ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದರು. ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬಾದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ನನ್ನ ಬಳಿ ಇರುವ ಮಾಹಿತಿಯನ್ನು ಅಗತ್ಯವಿದ್ದರೆ ಕೋರ್ಟ್‍ಗೆ ಕೊಡುತ್ತೇನೆ: ಸಿದ್ದರಾಮಯ್ಯ

  • ಗೋವಾ ಕನ್ನಡಿಗರ ನೆರವಿಗೆ ಬಂದ ಕನ್ನಡ ಸಂಘ – ಅಗತ್ಯವಸ್ತುಗಳ ವಿತರಣೆ

    ಗೋವಾ ಕನ್ನಡಿಗರ ನೆರವಿಗೆ ಬಂದ ಕನ್ನಡ ಸಂಘ – ಅಗತ್ಯವಸ್ತುಗಳ ವಿತರಣೆ

    ಕಾರವಾರ: ಗೋವಾ ಸರ್ಕಾರದ ಕಾರ್ಮಿಕ ಆಯೋಗದ ವತಿಯಿಂದ ಅಖಿಲ ಗೋವಾ ಕನ್ನಡ ಮಹಾಸಂಘದ ಗೌರವಧ್ಯಕ್ಷ ಸಿದ್ಧಣ್ಣ ಮೇಟಿ ನೇತೃತ್ವದ ಕನ್ನಡ ಸಂಘಟನೆಗಳು 8 ಸಾವಿರ ಕನ್ನಡಿಗ ಕುಟುಂಬಗಳಿಗೆ ಒಂದು ತಿಂಗಳ ಉಚಿತ ಅಕ್ಕಿ ಮತ್ತು ಇತರ ಆಹಾರ ಧಾನ್ಯ ವಿತರಿಸಿದ್ದಾರೆ.

    ಪಣಜಿಯ ಮಾಪ್ಸಾ, ಕಲಂಗುಟ್, ವಾಗಾತೋರ್ನಲ್ಲಿರುವ ಕನ್ನಡಿಗ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ವಿತರಿಸಲಾಯಿತು. ಇದರಿಂದಾಗಿ ಗೋವಾದಲ್ಲಿರುವ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಪ್ರಸಕ್ತ ತಿಂಗಳ ಆಹಾರ ಧಾನ್ಯಗಳು ಉಚಿತವಾಗಿ ಲಭಿಸಿದಂತಾಗಿದೆ. ಭಾರತ ಲಾಕ್‍ಡೌನ್‍ನಿಂದಾಗಿ ಕರ್ನಾಟಕದ ಕೂಲಿ ಕಾರ್ಮಿಕರು ಕರ್ನಾಟಕ ಸರ್ಕಾರದ ಸಹಾಯದ ನಿರೀಕ್ಷೆಯಲ್ಲಿದ್ದರು.

    ಗೋವಾದಲ್ಲಿನ ಕನ್ನಡಿಗ ಕೂಲಿ ಕಾರ್ಮಿಕರು ಸದ್ಯದ ಲಾಕ್‍ಡೌನ್‍ನಿಂದ ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ಸದ್ಯ ಕೆಲಸವಿಲ್ಲದ ಕಾರಣ ಅವರಿಗೆ ಒಂದು ಹೊತ್ತಿನ ಊಟಕ್ಕೂ ತೊಂದರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಗೋವಾ ಸರ್ಕಾರದ ಕಾರ್ಮಿಕ ಆಯೋಗದ ವತಿಯಿಂದ ನಮ್ಮ ಎಲ್ಲ ಕೂಲಿ ಕಾರ್ಮಿಕ ಕನ್ನಡಿಗರಿಗೆ ಪ್ರಸಕ್ತ ತಿಂಗಳು ಸಾಕಾಗುಷ್ಟು ಆಹಾರ ಧಾನ್ಯ ಮಂಜೂರು ಮಾಡಿಸಿಕೊಳ್ಳುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಈ ಆಹಾರ ಧಾನ್ಯವನ್ನು ನಾವು ಎಲ್ಲ ಕುಟುಂಬಗಳಿಗೂ ವಿತರಣೆ ಮಾಡುತ್ತಿದ್ದೇವೆ ಎಂದು ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಸಿದ್ಧಣ್ಣ ಮೇಟಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.